Author: kannadanewsnow09

ಬೆಂಗಳೂರು: ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅದೇ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿದೆ. ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರನ್ನು ಸ್ಯಾಂಡಲ್ ವುಡ್ ನಿಂದ ನಿಷೇಧಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆ ಬಳಿಕ ತಮ್ಮ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿದ್ದರು. ಈಗ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. https://kannadanewsnow.com/kannada/reopening-of-schools-across-the-state-on-may-29-celebration-program-for-two-years-in-education/ https://kannadanewsnow.com/kannada/breaking-former-cricketer-anil-kumble-appointed-as-state-forest-department-ambassador-minister-ishwar-khandre-announces/ https://kannadanewsnow.com/kannada/big-news-party-opposition-activities-have-been-expelled-by-vijayendras-first-reaction/

Read More

ಬೆಂಗಳೂರು: ರಾಜ್ಯಾಧ್ಯಂತ ಮೇ.29ರಿಂದ ಶಾಲೆಗಳು ಪುನರಾರಂಭಗೊಳ್ಳಲಿದ್ದಾವೆ. ಈ ಹಿನ್ನಲೆಯಲ್ಲಿ ಎರಡು ವರ್ಷ, ಶಿಕ್ಷಣದಲ್ಲಿ ಹರುಷ ಎನ್ನುವಂತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1926983558821818842 https://kannadanewsnow.com/kannada/bmtc-student-bus-pass-application-invitation/ https://kannadanewsnow.com/kannada/breaking-former-cricketer-anil-kumble-appointed-as-state-forest-department-ambassador-minister-ishwar-khandre-announces/

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ  ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2025-26 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 26.05.2025 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2025 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. 2025-26ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವು ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ಕೆಂಪೇಗೌಡ ಬಸ್ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು. ಮುಂದುವರೆದು, ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ…

Read More

ಬೆಂಗಳೂರು: ನಗರದಲ್ಲಿ ಟೋಯಿಂಗ್ ಹಗಲು ದರೋಡೆಯ ಕಾರಣಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಟೋಯಿಂದ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಧಿಕೃತ ಮಾಹಿತಿ ನೀಡಿದ್ದು, ಬಾಡಿಗೆ ಟೋಯಿಂಗ್ ವಾಹನ ಬಳಸದೇ ಪೊಲೀಸ್ ಇಲಾಖೆಯ ವಾಹನ ಬಳಸಿಕೊಂಡು ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿದು ಬಂದಿದೆ. ಅಂದಹಾಗೇ 2022ರಲ್ಲಿ ಬೆಂಗಳೂರಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಂತ ಬಸವರಾಜ ಬೊಮ್ಮಾಯಿ ಅವರು ಟೋಯಿಂಗ್ ರದ್ದುಗೊಳಿಸಿದ್ದರು. ಪಾರ್ಕಿಂಗ್ ಅಲ್ಲದ ಜಾಗದಲ್ಲಿ ವಾಹನ ನಿಲುಗಡೆ ಮಾಡುತ್ತಿದ್ದದ್ದನ್ನು ಟೋಯಿಂಗ್ ಮಾಡುತ್ತಿದ್ದದ್ದು ನಿಲ್ಲಿಸಲಾಗಿತ್ತು. ಬದಲಾಗಿ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ದರೇ ದಂಡಾಸ್ತ್ರ ಪ್ರಯೋಗದ ಆದೇಶ ಮಾಡಲಾಗಿತ್ತು. ಇದೀಗ ಮತ್ತೆ ಟೋಯಿಂಗ್ ಬೆಂಗಳೂರಲ್ಲಿ ಆರಂಭಗೊಳ್ಳಲಿದೆ. https://kannadanewsnow.com/kannada/good-news-for-airtel-prepaid-users-introduction-of-an-all-in-one-ott-entertainment-pack/ https://kannadanewsnow.com/kannada/breaking-former-cricketer-anil-kumble-appointed-as-state-forest-department-ambassador-minister-ishwar-khandre-announces/

Read More

ಬೆಂಗಳೂರು : ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರತಿ ಏರ್‌ಟೆಲ್ (“ಏರ್‌ಟೆಲ್”) ಇಂದು ಪ್ರಿಪೇಯ್ಡ್ ಗ್ರಾಹಕರಿಗೆ ಹೊಸದಾದ ಹಾಗೂ ಅದಕ್ಕೆ ಸಾಟಿಯಿಲ್ಲದ ಮನರಂಜನಾ ಪ್ಯಾಕ್‌ಗಳನ್ನು ಪ್ರಕಟಿಸಿದೆ. ನೆಟ್‌ಫ್ಲಿಕ್ಸ್, ಜಿಯೋಹಾಟ್‌ಸ್ಟಾರ್, Zee 5 ಮತ್ತು ಸೋನಿಲೈವ್  ಸೇರಿದಂತೆ 25 ಉನ್ನತ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಉದ್ಯಮ-ಪ್ರಮುಖ ಪೋರ್ಟ್ಫೋಲಿಯೊಗೆ ಪ್ರವೇಶವನ್ನು ನೀಡುತ್ತಿದ್ದು  – ಭಾರತದಲ್ಲಿನ ಏರ್‌ಟೆಲ್ ಹಾಗೆ ನೀಡುತ್ತಿರುವ ಏಕೈಕ ಟೆಲ್ಕೊ ಆಗಿದ್ದು, ವ್ಯಾಪಕ ಮನರಂಜನಾ ಅನುಭವವನ್ನು ನೀಡುತ್ತದೆ. 1 ತಿಂಗಳ ಸಿಂಧುತ್ವಕ್ಕೆ ₹ 279 ರ ಆಕರ್ಷಕ ಪರಿಚಯಾತ್ಮಕ ಬೆಲೆಯಲ್ಲಿ ಪ್ರಾರಂಭಿಸಿ, ಗ್ರಾಹಕರು ₹ 750 ಮೌಲ್ಯದ ಮೌಲ್ಯದ ವಿವಿಧ ರೀತಿಯ ಜನಪ್ರಿಯ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ಪಡೆಯುತ್ತಾರೆ, ಒಟಿಟಿ ಸ್ಟ್ರೀಮಿಂಗ್ ಆಯ್ಕೆಗಳ ಅಂತಹ ವಿಶಾಲವಾದ ಪುಷ್ಪಗುಚ್ಛಗಳಿಗೆ ಪ್ರವೇಶವನ್ನು ಸಕ್ರಿಯಗೊಳಿಸುವ ಏಕೈಕ ಟೆಲ್ಕೊ ಆಗಿರುತ್ತದೆ. ಕಂಪನಿಯು ಅನಿಯಮಿತ 5 ಜಿ ಡೇಟಾ ಮತ್ತು ಅನಿಯಮಿತ ಕರೆಗಳೊಂದಿಗೆ ₹ 598 ನಲ್ಲಿ ಅನಿಯಮಿತ ಮನರಂಜನೆಯನ್ನು ಸುಗಮಗೊಳಿಸುತ್ತದೆ. ಪ್ಯಾಕುಗಳು    ಪ್ರಯೋಜನ   ಸಿಂಧೂತ್ವ     ಎಮ್‌ಆರ್‌ಪಿ…

Read More

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆಯ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಘಟಕ ಕೋರಿತ್ತು. ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿದೆ ಎಂದು ವಿವರಿಸಿದರು. ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರು ಏನು ಪಕ್ಷವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಅವರಿಬ್ಬರಿಗೂ ಹಾಗೂ ಕೇಂದ್ರ ನಾಯಕತ್ವಕ್ಕೆ ಗೊತ್ತಿದೆ. ಇದರ ಕುರಿತು ಡಿ.ಕೆ.ಶಿವಕುಮಾರ್ ಅವರು ಇಷ್ಟೊಂದು ನೋವು ಅಥವಾ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ; ಇದು ಪಕ್ಷದ ತೀರ್ಮಾನ ಎಂದು ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ಸರಕಾರ ಬಂದ ನಂತರ ಅವರಿಬ್ಬರಿಗೂ ಉತ್ತಮ ಅವಕಾಶ ಲಭಿಸಿತ್ತು. ಆದರೆ,…

Read More

ಬೆಂಗಳೂರು : ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು. ವಿಕಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬಿಜೆಪಿಯವರೆಗೆ ಬುದ್ದಿ ಭ್ರಮಣೆಯಾಗಿದೆ. ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಷಾದನೀಯ. ಶಾಲಾ ಮಕ್ಕಳು ಕೂಡ ಹೀಗೆ ಮಾತನಾಡಲ್ಲ. ಸಾರ್ವಜನಿಕ ಜೀವನದಲ್ಲಿ ಇರಲು ಇಂಥವರು ಅನರ್ಹ’ ಎಂದು ಕಿಡಿಕಾರಿದರು. ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವದನ್ನು ಐಎಎಸ್‌ ಅಧಿಕಾರಿಗಳ ಒಕ್ಕೂಟ ಈಗಾಗಲೇ ರವಿಕುಮಾರ್‌ ವಿರುದ್ಧ ಪತ್ರ ಬರೆದು, ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್‌ ನಾಯಕರೊಬ್ಬರು ಈ ರೀತಿ ಮಾತನಾಡಿದ್ದು ಅಪ್ರಬುದ್ಧತೆ ತೋರುತ್ತದೆ ಎಂದು ಸಚಿವರು ತಿಳಿಸಿದರು. ಹೇಳಿಕೆ ನೀಡುವಾಗ ಸರಿ, ತಪ್ಪು ಎಂಬುದರ ಬಗ್ಗೆ ಜ್ಞಾನ ಕಳೆದುಕೊಂಡಿದ್ದಾರೆ. ಅಧಿಕಾರ ಕಳೆದುಕೊಂಡು ನೀರಿನಿಂದ‌ ಹೊರಬಿದ್ದ ಮೀನಿನಂತಾಗಿದ್ದಾರೆ ಎಂದು ಶರಣ್‌…

Read More

ಬೆಂಗಳೂರು: ನಗರದ ಹೆಸರಘಟ್ಟದಲ್ಲಿ ಅಪರೂಪದ ಹುಲ್ಲುಗಾವಲಿದೆ. ಇದು ನೂರಾರು ಪ್ರಭೇದದ ಪಕ್ಷಿಗಳ ಸಂತಾನೋತ್ಪತ್ತಿಯ ತಾಣವಾಗದ್ದು, ಇಷ್ಟು ಸುಂದರ ಪರಿಸರ ಉಳಿಸಲು ದಶಕಗಳಿಂದ ಹೋರಾಟ ನಡೆದಿತ್ತು. ತಾವು ಸಚಿವನಾದ ಬಳಿಕ, ಹಲವು ಒತ್ತಡದ ನಡುವೆಯೂ ಹೆಸರುಘಟ್ಟ ಕೆರೆ ಸುತ್ತಮುತ್ತಲ್ಲಿರುವ ಅಪರೂಪದ ಹುಲ್ಲುಗಾವಲು ರಕ್ಷಣೆಗಾಗಿ 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿದ್ದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. 6251.31 ಎಕರೆ ಅರಣ್ಯ ತೆರವು  ಕಳೆದ 2 ವರ್ಷಗಳಲ್ಲಿ 1205 ಒತ್ತುವರಿ ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 6251.31 ಎಕರೆ ಅರಣ್ಯ ತೆರವು ಮಾಡಿಸಲಾಗಿದೆ. ಒತ್ತುವರಿ ತೆರವು ನಿರಂತರ ಪ್ರಕ್ರಿಯೆಯಾಗಿದೆ ಎಂದು ಹೇಳಿದರು. ಚಿರತೆ ಸಫಾರಿಗೆ ಉತ್ತಮ ಸ್ಪಂದನೆ ಬೆಂಗಳೂರಿಗೆ ಸಮೀಪದಲ್ಲೇ ಇರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿ ಆರಂಭಿಸಬೇಕೆಂಬ ಬೇಡಿಕೆ ಇತ್ತು, ತಾವು ಸಚಿವನಾದ ತರುವಾಯ ಇದಕ್ಕೆ ಚಾಲನೆ ನೀಡಿದ್ದು, ಇದು ಜನಾಕರ್ಷಣೆಯ ಕೇಂದ್ರವಾಗಿದೆ. ಉದ್ಯಾನಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.…

Read More

ಬೆಂಗಳೂರು : ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಯಾವುದೇ ಸಂಭಾವನೆ ಇಲ್ಲ: ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ: ಮಾನವ…

Read More

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ತಾವು ಸಚಿವನಾದ ತರುವಾಯ 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಿಸಿರುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ತನ್ನ ವಶದಲ್ಲಿರುವ ಸುಮಾರು 14,300 ಕೋಟಿ ರೂ. ಮೌಲ್ಯದ 444 ಎಕರೆ ಅರಣ್ಯ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಅರಣ್ಯ ಜಮೀನು ಹಿಂಪಡೆದು, ಉದ್ಯಾನವಾಗಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕಾನೂನು ಹೋರಾಟ ನಡೆದಿದೆ ಎಂದು ಅರಣ್ಯ ಸಚಿವರು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿ ಬ್ರಿಟಿಷರ ಕಾಲದಲ್ಲಿ ವಿವಿಧ ವ್ಯಕ್ತಿ, ಸಂಸ್ಥೆಗಳಿಗೆ ಸುಮಾರು 5050 ಎಕರೆ ಅರಣ್ಯ ಭೂಮಿಯನ್ನು ದೀರ್ಘಕಾಲದ (999 ವರ್ಷ) ಗುತ್ತಿಗೆ ನೀಡಲಾಗಿತ್ತು. ಈ 999 ವರ್ಷದ ಗುತ್ತಿಗೆ ಅವಧಿಯನ್ನು ಸರ್ಕಾರ…

Read More