Author: kannadanewsnow09

ಬೆಂಗಳೂರು: ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಲಿದೆ. ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ನಿಯೋಗ ಹರಿದ್ವಾರ ಮತ್ತು ವಾರಣಾಸಿಗೆ ನಾಳೆ ಬೆಳಿಗ್ಗೆ ಹಾಗೂ ಸೆ.21ರಂದು ಎರಡು ದಿನಗಳ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಲಿ ಎಂಬ ಆಶಯಕ್ಕಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮಬಾರಿಗೆ ಕಾವೇರಿ ನದಿಗೆ ಗಂಗಾ ಆರತಿ ಮಾದರಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸುವುದಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಘೋಷಣೆ ಮಾಡಿದ್ದರು. ಹರಿದ್ವಾರ ಮತ್ತು ಮತ್ತು ವಾರಣಾಸಿಯಲ್ಲಿ ಗಂಗಾ ನದಿಗೆ ಆರತಿ ಮಾಡುವದನ್ನು ವೀಕ್ಷಿಸಿ ಸಮಗ್ರವಾಗಿ…

Read More

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಸಾವಿರಾರು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ ನಿಮಗೆ ಸಿಗುವಂತ ರಜಾ ಸೌಲಭ್ಯಗಳು ಯಾವುವು ಅನ್ನುವ ಬಗ್ಗೆ ಮುಂದೆ ಸಂಪೂರ್ಣ ಮಾಹಿತಿ ಇದೆ ಓದಿ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮುಖ್ಯ ಆಡಳಿತಾಧಿಕಾರಿಗಳು ದಿನಾಂಕ 10-02-2023ರಲ್ಲೇ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅದರಲ್ಲಿ  ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ, ಸಮಾಲೋಚಕರು, ವ್ಯವಸ್ಥಾಪಕರು ಮತ್ತು ಇತರ ಎಲ್ಲಾ ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ರಜಾ ಸೌಲಭ್ಯವನ್ನು ನೀಡಲಾಗುತ್ತಿರುತ್ತದೆ ಎಂದಿದ್ದಾರೆ. 1. ನೇರಗುತ್ತಿಗೆ ಹಾಗೂ ಮಾನವ ಸಂಪನ್ಮೂಲ ಸಂಸ್ಥೆಯಿಂದ ಒದಗಿಸುವ ಸಿಬ್ಬಂದಿಗಳಿಗೆ ವಾರ್ಷಿಕ 10 ದಿನಗಳ ಸಾಂದರ್ಭಿಕ ರಜಾ ಸೌಲಭ್ಯ ಒದಗಿಸಲಾಗಿದೆ. 2. ನೇರಗುತ್ತಿಗೆ ಹಾಗೂ ಮಾನವ ಸಂಪನ್ಮೂಲ ಸಂಸ್ಥೆಯಿಂದ ಒದಗಿಸುವ ಸಿಬ್ಬಂದಿಗಳಿಗೆ ವಾರ್ಷಿಕ 10 ದಿನಗಳ ವೈದ್ಯಕೀಯ ರಜಾ ಸೌಲಭ್ಯ ಒದಗಿಸಲಾಗಿದೆ (ನೋಂದಣಿ ಹೊಂದಿರುವ ವೈದ್ಯರಿಂದ…

Read More

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 21-09-2024ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ “66/11ಕೆವಿ ಬಿ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಹೇಳಿದೆ. ಈ ಪ್ರದೇಶಗಳಲ್ಲಿ ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಎಂ.ಜಿ. ರಸ್ತೆ, ರ‍್ಚ್ ಸ್ಟ್ರೀಟ್, ಸೇಂಟ್ ಮರ‍್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತರ‍್ಬಾ ರಸ್ತೆ, ವಾಲ್ಟನ್ ರಸ್ತೆ, ಡಿಕನ್ಸನ್ ರಸ್ತೆ, ಅಶೋಕ್ ನಗರ, ಪ್ರೈಮ್ ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರಿನಿಟಿ ರ‍್ಕಲ್, ಹಲಸೂರು ರಸ್ತೆ, ರ‍್ಫಿ ಟೌನ್ , ಹಲಸೂರು, ಕಸ್ತರ‍್ಬಾ ರಸ್ತೆ, ಲ್ಯಾವೆಲ್ಲೆ ರಸ್ತೆ 7ನೇ ಕ್ರಾಸ್, ಐಟಿಸಿ ಗರ‍್ಡನೇಯ ಹೋಟೆಲ್,…

Read More

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸೆ.22ರಂದು ಶಿವಮೊಗ್ಗ ನಗರದಲ್ಲಿ ಮೆರವಣಿಗೆಯನ್ನು ಮಾಡುವುದರಿಂದ ನಗರದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳ ಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಸೆ. 22 ರಂದು ಈದ್ ಮಿಲಾದ್ ಮೆರವಣಿಗೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್ 2ನೇ ಕ್ರಾಸ್, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆಯ ಓಲ್ಡ್ಬಾರ್ ಲೈನ್ ರಸ್ತೆ -ಪೆನ್ಷನ್ ಮೊಹಲ್ಲಾ-ಬಾಲ್‌ರಾಜ್ ಅರಸ್ ರಸ್ತೆ-ಮಹಾವೀರ ಸರ್ಕಲ್-ಗೋಪಿ ಸರ್ಕಲ್- ನೆಹರು ರಸ್ತೆ- ಅಮೀರ್ ಅಹ್ಮದ್ ಸರ್ಕಲ್ ಮಾರ್ಗವಾಗಿ ಬಿಹೆಚ್ ರಸ್ತೆ -ಅಶೋಕ ಸರ್ಕಲ್-ಎನ್ ಟಿ ರಸ್ತೆ -ಗುರುದೇವ ರಸ್ತೆ -ರ್ಕ್ಲಾಕ್ ಪೇಟೆ, ನೂರಾನಿ ಮಸೀದಿ ಕೆಆರ್ ಪುರಂ ರಸ್ತೆ ಮಾರ್ಗವಾಗಿ ಆಮೀರ್ ಅಹಮ್ಮದ್ ಸರ್ಕಲ್ ತಲುಪುತ್ತದೆ. ಭದ್ರಾವತಿ, ಬೆಂಗಳೂರು, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು…

Read More

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದ್ದಂತ ಗಲಭೆ ಘಟನೆ ಸಂಬಂಧಿಸಿದಂತ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ನಾಗಮಂಗಲ ಠಾಣೆಯ ಇನ್ಸ್ ಪೆಕ್ಟರ್ ಬಳಿಕ ನಾಗಮಂಗಲದ ಡಿವೈಎಸ್ಪಿಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಉಂಟಾಗಿದ್ದಂತ ಗಲಾಟೆ ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ನಾಗಮಂಗಲ ಡಿವೈಎಸ್ಪಿ ಡಾ.ಸುಮೀತ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ನಾಗಮಂಗಲ ಗಲಬೆ ಸಂಬಂಧ ಕರ್ತವ್ಯ ಲೋಪದ ಆರೋಪದಡಿ ಡಿವೈಎಸ್ಪಿ ಡಾ.ಸುಮೀತ್ ಅಮಾನತುಗೊಳಿಸುತ್ತಿರುವುದಾಗಿ ತಿಳಿಸಿ, ಆದೇಶಿಸಿದ್ದಾರೆ. https://kannadanewsnow.com/kannada/bjp-mla-munirathna-granted-conditional-bail-in-atrocity-case/ https://kannadanewsnow.com/kannada/cisco-cuts-thousands-of-jobs-in-second-biggest-layoff-of-2024-report/

Read More

ಬೆಂಗಳೂರು: ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ, ಬಿಗ್ ರಿಲೀಫ್ ನೀಡಿದೆ. ಇಂದು ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ನಡೆಸಿತು. 2 ಲಕ್ಷ ಬಾಂಡ್ ಹಾಗೂ ಇಬ್ಬರ ಶೂರಿಟಿಯೊಂದಿಗೆ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ನೀಡಿದೆ. ಅಂದಹಾಗೇ ಗುತ್ತಿಗೆದಾರನಿಗೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಬಂಧಿಸಲಾಗಿತ್ತು. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಈಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/big-shock-for-accenture-employees-6-month-promotion-delayed-no-pay-hike-in-india/ https://kannadanewsnow.com/kannada/cisco-cuts-thousands-of-jobs-in-second-biggest-layoff-of-2024-report/

Read More

ಬೆಂಗಳೂರು: ಅಭಿವೃದ್ಧಿ ವಿಚಾರವನ್ನು ಸಂಪೂರ್ಣ ಕಡೆಗಣಿಸಿದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರನ್ನೂ ವಂಚಿಸಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ; ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣವಾಗಿ ಸೋತಿದೆ ಎಂದು ಟೀಕಿಸಿದರು. ಕೇವಲ 5 ಗ್ಯಾರಂಟಿಗಳು ಎಂದು ಹೇಳಿಕೊಂಡು, ಅದನ್ನೂ ಸರಿಯಾಗಿ ಜನರಿಗೆ ತಲುಪಿಸದೆ ವಂಚನೆ ಮಾಡಿದೆ. ಪರಿಶಿಷ್ಟ ಜಾತಿ- ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ 25 ಸಾವಿರ ಕೋಟಿ ಹಣವನ್ನು ಈಗಾಗಲೇ ಅವರು ಬೇರೆಬೇರೆ ಕಾರ್ಯಗಳಿಗೆ ಉಪಯೋಗ ಮಾಡಿದ್ದಾರೆ. ಈ ಮೂಲಕ ದಲಿತರನ್ನೂ ವಂಚನೆ ಮಾಡಿದ್ದಾರೆ. ಅವರಿಗೆ ಮೋಸ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಇದರ ವಿರುದ್ಧ ಯಶಸ್ವಿ ಹೋರಾಟ ಮಾಡಿದ್ದೇವೆ. ಪರಿಶಿಷ್ಟ ಜಾತಿ- ವರ್ಗಗಳ ಶ್ರೇಯೋಭಿವೃದ್ಧಿಗೆ ಇಟ್ಟಿರುವ ಹಣವನ್ನು ಬೇರೆ ವಿಚಾರಗಳಿಗೆ ಪೋಲು ಮಾಡಬಾರದೆಂಬುದು ನಮ್ಮ ಉದ್ದೇಶವಾಗಿತ್ತು. ಆದರೆ, ಖಜಾನೆಯಲ್ಲಿ ಹಣ ಖಾಲಿ…

Read More

ಬೆಂಗಳೂರು: ಜನರ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡಿ ಎಂದು ಜನರು ಮತ ನೀಡಿ ಗೆಲ್ಲಿಸಿ ಕಳುಹಿಸಿದರೆ, ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಯಾಗಲು ಅನರ್ಹರು ಎಂಬುದಾಗಿ ಕೆಪಿಸಿಸಿ ಕಾರ್ಯಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ಕಿಡಿಕಾರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನರ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡಿ ಎಂದು ಜನರು ಮತ ನೀಡಿ ಗೆಲ್ಲಿಸಿ ಕಳುಹಿಸಿದರೆ, ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಯಾಗಲು ಅನರ್ಹರು ಎಂಬುದಾಗಿ ಹೇಳಿದರು. ಬಿಜೆಪಿಯ ಆಂತರ್ಯದ ಮಾತುಗಳನ್ನು ಮುನಿರತ್ನ ಹೊರಗೆ ಹಾಕಿದ್ದಾರೆ. ಪರಿಶಿಷ್ಟರು ಒಕ್ಕಲಿಗರು ಅದರಲ್ಲೂ ಮಹಿಳೆಯರ ಬಗ್ಗೆ ಅತ್ಯಂತ ಹೀನವಾಗಿ ಮಾತನಾಡಿರುವ ಅವರ ನಡೆ ಖಂಡನೀಯ. ಮುನಿರತ್ನ ಅವರ ಕೆಟ್ಟ ಮಾತುಗಳನ್ನು ಯಾರು ಕೂಡ ಸಹಿಸಲಾಗುವುದಿಲ್ಲ ಎಂದರು. ಹೆಚ್ಐವಿ ಸೋಂಕಿತರ ರಕ್ತವನ್ನು ತೆಗೆದುಕೊಂಡು ರಾಜಕಾರಣಿಗಳಿಗೆ ನೀಡಿ ಸೋಂಕನ್ನು ಹರಡುವಂತಹ ಹೀನ ಕೃತ್ಯವನ್ನು ಆ ವ್ಯಕ್ತಿ ಮಾಡಲು ತೊಡಗುತ್ತಾನೆ ಎಂದರೆ ಪ್ರಪಂಚದಲ್ಲಿ ಯಾರೂ ಸಹ ಇಂತಹ ಕೀಳು ಮಟ್ಟಕ್ಕೆ ಇಳಿದಿರುವ ಉದಾಹರಣೆ ನಮ್ಮ ಮುಂದಿಲ್ಲ. ಹೆಣ್ಣು ಮಕ್ಕಳನ್ನು ಮಂಚಕ್ಕೆ…

Read More

ಬೆಂಗಳೂರು: ರಾಜ್ಯದ ಒಂದು ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಮತದಾನ ನಡೆದು, ಅಂದೇ ಮತ ಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ. ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಉಪ ಚುನಾವಣೆ ನಿಗದಿ ಪಡಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸುವುದಾಗಿ ತಿಳಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿದೆ. ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗುತ್ತಿದೆ. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಇನ್ನೂ ಅಕ್ಟೋಬರ್.21ರಂದು ಬೆಳಿಗ್ಗೆ 8 ರಿಂದ ಸಂಜೆ 4…

Read More

ಶಿವಮೊಗ್ಗ : ಮಕ್ಕಳಿಗೆ ಶಿಕ್ಷಣ, ಪೋಷಣೆ ನೀಡುವ ಅಂಗನವಾಡಿ ಕಾರ್ಯಕರ್ತೆಯರು ಒಂದು ರೀತಿಯಲ್ಲಿ ದೇಶ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ. ಶಿವಮಗ್ಗ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಆಲ್ಕೊಳದ ಚೈತನ್ಯ ಸಭಾಂಗಣದಲ್ಲಿ ಪೋಷಣ್ ಮಾಸಾಚರಣೆ ಆಯೋಜಿಸಲಾಗಿದ್ದ ಅನೀಮಿಯ ಮುಕ್ತ ಭಾರತ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರ ಮತ್ತು ಗ್ರೋಥ್ ಮಾನಿಟರಿಂಗ್ ಕುರಿತು ತರಬೇತುದಾರರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಕಲಿಸುವ, ಪೋಷಣೆ ಮಾಡುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸೂಪರ್‌ವೈಸರ್‌ಗಳು ಒಂದು ರೀತಿಯಲ್ಲಿ ತಳಮಟ್ಟದಲ್ಲಿ ದೇಶ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದು ತಮಗೆ ನೀಡಿದ ಯಾವುದೇ ಕೆಲಸವನ್ನು ಸಮರ್ಪಕವಾಗಿ ಯೋಜನೆ…

Read More