Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: 2025 ರ ಏಷ್ಯಾ ಕಪ್ ಸಮಯದಲ್ಲಿ ಭಾರತ ಯಾವುದೇ ಜೆರ್ಸಿ ಪ್ರಾಯೋಜಕರಿಲ್ಲದೆ ಆಡುವ ಸಾಧ್ಯತೆ ಇದೆ ಎಂದು ಮೂಲಗಳು ದೃಢಪಡಿಸಿವೆ. ಬಿಸಿಸಿಐ 2027 ರ ಏಕದಿನ ವಿಶ್ವಕಪ್ ವರೆಗೆ ಪ್ರಾಯೋಜಕರನ್ನು ನೇಮಿಸಿಕೊಳ್ಳಲು ಯೋಜಿಸುತ್ತಿದೆ ಮತ್ತು ಕಾಂಟಿನೆಂಟಲ್ ಟೂರ್ನಮೆಂಟ್ ಮಾತ್ರವಲ್ಲ, ಇದು ಹೆಚ್ಚು ಸಮಯ ತೆಗೆದುಕೊಳ್ಳುವ ನಿರೀಕ್ಷೆಯಿದೆ ಮತ್ತು ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದೆ. ಇತ್ತೀಚೆಗೆ ಅಂಗೀಕರಿಸಲ್ಪಟ್ಟ ಆನ್ಲೈನ್ ಗೇಮಿಂಗ್ನ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆಯ ನಂತರ, ಡ್ರೀಮ್ 11 ಭಾರತೀಯ ಕ್ರಿಕೆಟ್ ತಂಡದ ಶೀರ್ಷಿಕೆ ಪ್ರಾಯೋಜಕರಾಗಿ ಬಿಸಿಸಿಐ ಜೊತೆಗಿನ ತನ್ನ ಸಂಬಂಧವನ್ನು ಕೊನೆಗೊಳಿಸಿತು. ಗುರುವಾರ, ಆಗಸ್ಟ್ 28 ರಂದು ಬಿಸಿಸಿಐನ ಮಧ್ಯಂತರ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ಅವರ ಅಧ್ಯಕ್ಷತೆಯಲ್ಲಿ ಬಿಸಿಸಿಐ ತುರ್ತು ಅಪೆಕ್ಸ್ ಕೌನ್ಸಿಲ್ ಸಭೆ ನಡೆಯಿತು. ಸಭೆಯಲ್ಲಿ, ಹೊಸ ಪ್ರಾಯೋಜಕರನ್ನು ಹುಡುಕುವ ಬಗ್ಗೆ ಚರ್ಚೆಗಳು ನಡೆದವು ಮತ್ತು ಬಿಸಿಸಿಐ ಇನ್ನೂ ಕಾರ್ಯವನ್ನು ಪೂರ್ಣಗೊಳಿಸುವ ಭರವಸೆಯನ್ನು ಹೊಂದಿದೆ. ಆದರೆ ಪ್ರಕ್ರಿಯೆಯನ್ನು ಜಾಹೀರಾತು ಮಾಡಲು ಮತ್ತು…
ಶಿವಮೊಗ್ಗ : ದೂರುದಾರರಾದ ಶಿವಮೊಗ್ಗ ತಾಲ್ಲೂಕಿನ ಗೊಂದಿಚಟ್ನಹಳ್ಳಿ ನಿವಾಸಿ ನಾಗರಾಜ ಎಂಬುವವರಿಂದ ಎದುರುದಾರರಾದ ಹೆಚ್ಡಿಬಿ ಫೈನಾನ್ಸಿಯಲ್ ಸರ್ವೀಸ್ ಶಿವಮೊಗ್ಗ, ಹೆಚ್ಡಿಬಿ ಫೈನಾನ್ಸಿಯಲ್ ಮುಂಬೈ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಶಿವಮೊಗ್ಗ ಇವರು ಯಾವುದೇ ರೀತಿಯ ನೋಟಿಸ್ ನೀಡದೆ ಕಾನೂನು ಬಾಹಿರವಾಗಿ ಜೆಸಿಬಿ ಯನ್ನು ವಶಕ್ಕೆ ಪಡೆದು ಹರಾಜು ಮೂಲಕ ಮಾರಾಟ ಮಾಡಿದ ಕಾರಣಕ್ಕಾಗಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಗಣಿಸಿ, 1 ಮತ್ತು 2ನೇ ಎದುರುದಾರರು ಸೂಕ್ತ ಪರಿಹಾರ ನೀಡಬೇಕೆಂದು ಆದೇಶಿಸಿದೆ. ದೂರುದಾರರು ತಮ್ಮ ಜೀವನ ನಿರ್ವಹಣೆಗಾಗಿ ಒಂದು ಜೆಸಿಬಿ ಖರೀದಿಸಿದ್ದು, 1 ಮತ್ತು 2 ನೇ ಎದುರುದಾರರಿಂದ ರೂ.31,65,625 ಲಕ್ಷ ಸಾಲವನ್ನು ಪಡೆದು 60 ತಿಂಗಳ ಇಎಂಐ ಅನ್ನು 4/2/2023 ರಿಂದ 4/10/2023 ರವೆಗೆ ಪಾವತಿಸಬೇಕಾಗಿರುತ್ತದೆ. ದೂರುದಾರರು ಮಾಸಿಕ ಎಲ್ಲಾ ಇಎಂಐ ಗಳನ್ನು ಪಾವತಿಸಿಕೊಂಡು ಬರುತ್ತಿದ್ದು ವೈಯಕ್ತಿಕ ಕಾರಣಗಳಿಂದ 2 ಇಎಂಐಗಳನ್ನು ಪಾವತಿಸಲು ಸಾಧ್ಯವಾಗದೇ, ಅಕೋಬ್ಟರ್-2024 ರಂದು ಉಳಿಕೆಯಾದ 2 ಇಎಂಐಗಳನ್ನು ಪಾವತಿಸುವುದಾಗಿ ಭರವಸೆಯನ್ನು…
ಬೆಂಗಳೂರು: ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿತ್ತು. ಮೇ 2025ರಲ್ಲಿ ರಾಜ್ಯದ ವಿವಿದೆಡೆ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಅಂತಿಮವಾಗಿ ಕಿರಿಯ ಸ್ಟೆಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 491 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರೀಶಿಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025 ರಲ್ಲಿ ತನ್ನ…
ಶಿವಮೊಗ್ಗ: ಸಾಗರ ತಾಲ್ಲೂಕನ್ನು ಜಿಲ್ಲೆ ಮಾಡಬೇಕು ಎಂಬುದಾಗಿ ಕಿಚ್ಚು ಹೆಚ್ಚಾಗಿದೆ. ಸಾಗರ ಜಿಲ್ಲಾ ಹೋರಾಟ ಸಮಿತಿಯಿಂದ ದಿನಾಂಕ 05-09-2025ರಂದು ಮಹತ್ವದ ನಾಗರೀಕರ ಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯಿಂದ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ಜನಗಣತಿ 2026 ಏಪ್ರಿಲ್.1ರಿಂದ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಅದಕ್ಕಿಂತ 3 ತಿಂಗಳ ಮೊದಲೇ ಹೊಸ ಜಿಲ್ಲೆ, ತಾಲ್ಲೂಕು ರಚನೆ ಸೇರಿದಂತೆ ಗಡಿಗಳಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಿತ ಬದಲಾವಣೆಗಳಿದ್ದರೇ, 2025ರ ಡಿಸೆಂಬರ್.31ರೊಳಗೆ ಮುಗಿಸಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ ಎಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ಜಿಲ್ಲಾ ಕೇಂದ್ರ ಆಗುವ ಅರ್ಹತೆ ಇರುವುದು ಸಾಗರಕ್ಕೆ ಮಾತ್ರ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ದಿನಾಂಕ 05-09-2025ರ ಶುಕ್ರವಾರ ಮಧ್ಯಾಹ್ನ 4 ಗಂಟೆಗೆ ಸಾಗರದ ನಗರಸಭೆ ರಂಗಮಂದಿರದಲ್ಲಿ ಸಾಗರ ಜಿಲ್ಲೆ ರಚನೆಗೆ ಆಗ್ರಹಿಸುವ ಬಗ್ಗೆ ನಾಗರೀಕರ ಸಭೆ ಕರೆಯಲಾಗಿದೆ. ಈ ನಾಗರೀಕ ಸಭೆಗೆ ಪಕ್ಷಾತೀತ ಹೋರಾಟಕ್ಕೆ ಎಲ್ಲಾ ಸಮಾಜ, ಸಂಘ,…
ಚಿಕ್ಕಬಳ್ಳಾಪುರ: ಜಿಲ್ಲೆಯ ಫಾರ್ಮ್ ಹೌಸ್ ಒಂದರಲ್ಲಿನ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿತ್ತು. ಈ ಜ್ವರದಿಂದಾಗಿ 100ಕ್ಕೂ ಹೆಚ್ಚು ಹಂದಿಗಳು ಸಾವನ್ನಪ್ಪಿದ್ದವು. ಇಂತಹ ರೋಗಗ್ರಸ್ತ ಹಂದಿಗಳನ್ನು ಕೆರೆಗೆ ಬಿಸಾಡಿ ಅಮಾನವೀಯ ಕೃತ್ಯವನ್ನು ಎಸಗಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಬಳಿಯ ಕೆರೆಗೆ ರೋಗಗ್ರಸ್ತ ಹಂದಿಗಳನ್ನು ಎಸೆದು ಅಮಾನವೀಯ ಕೃತ್ಯವನ್ನು ಎಸಗಲಾಗಿದೆ. ಹೆಬ್ಬರಿ ಬಳಿಯಿರುವಂತ ಕೆರೆಗೆ ರೋಗಗ್ರಸ್ತ ಹಂದಿಗಳನ್ನು ಮಾಲೀಕ ಬಿಸಾಡಿದ್ದಾರೆ. ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದರಿಂದ 100 ಹಂದಿಗಳು ಮೃತಪಟ್ಟಿದ್ದವು. ಮೃತಪಟ್ಟ ಹಂದಿಗಳನ್ನು ಕೆರೆಗೆ ಬಿಸಾಕಿ ಮಾಲೀಕ ಅವಿವೇಕತನ ಮೆರೆದಿದ್ದಾನೆ. ಇದರಿಂದಾಗಿ ಜನ, ಜಾನುವಾರ ನೀರು ಬಳಸಿದ್ರೆ ಅಪಾಯ ಎದುರಾಗುವಂತ ಆತಂಕ ಉಂಟಾಗಿದೆ. ಕೆರೆಯಲ್ಲಿ ಹಂದಿಗಳ ಶವ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ಹೆಬ್ಬರಿ ಗ್ರಾಮದ ಕೆರೆ ಬಳಿಗೆ ಕಂದಾಯ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಪಶುಸಂಗೋಪನೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತಂಕ ವ್ಯಕ್ತ ಪಡಿಸಿದ ಸಚಿವ ಎಂ.ಸಿ ಸುಧಾಕರ್…
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (Reliance Industries Ltd – RIL) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಶುಕ್ರವಾರ ಜಿಯೋ ತನ್ನ ಆರಂಭಿಕ ಸಾರ್ವಜನಿಕ ಕೊಡುಗೆ (initial public offering -IPO)ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಮತ್ತು 2026 ರ ಮೊದಲಾರ್ಧದ ವೇಳೆಗೆ ಪಟ್ಟಿ ಮಾಡುವ ಗುರಿ ಹೊಂದಿದೆ ಎಂದು ಘೋಷಿಸಿದರು. ಶುಕ್ರವಾರ ಕಂಪನಿಯ 48 ನೇ ವಾರ್ಷಿಕ ಸಾಮಾನ್ಯ ಸಭೆ (48th annual general meeting -AGM) ಸಂದರ್ಭದಲ್ಲಿ ಅವರು ಆರ್ಐಎಲ್ ಷೇರುದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. “ಇಂದು, ಜಿಯೋ ತನ್ನ ಐಪಿಒಗೆ ಅರ್ಜಿ ಸಲ್ಲಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಘೋಷಿಸಲು ನನಗೆ ಹೆಮ್ಮೆ ಎನಿಸುತ್ತಿದೆ. ಅಗತ್ಯವಿರುವ ಎಲ್ಲಾ ಅನುಮೋದನೆಗಳಿಗೆ ಒಳಪಟ್ಟು 2026 ರ ಮೊದಲಾರ್ಧದ ವೇಳೆಗೆ ಜಿಯೋವನ್ನು ಪಟ್ಟಿ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಅಂಬಾನಿ ಹೇಳಿದರು. ಜಿಯೋದ ಆದಾಯವು 1,28,218 ಕೋಟಿ ರೂ. ($15.0 ಶತಕೋಟಿ), ಇದು FY-25 ರಲ್ಲಿ ವರ್ಷಕ್ಕೆ…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 28-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 73,000 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 9,306 ಪಶ್ಚಿಮ ವಲಯ: 10,568 ದಕ್ಷಿಣ ವಲಯ: 44521 ಬೊಮ್ಮನಹಳ್ಳಿ ವಲಯ: 2,347 ದಾಸರಹಳ್ಳಿ ವಲಯ: 168 ಮಹದೇವಪುರ ವಲಯ: 2,737 ಆರ್.ಆರ್.ನಗರ ವಲಯ: 2,113 ಯಲಹಂಕ ವಲಯ: 2,199 ಒಟ್ಟು: 73,959 https://kannadanewsnow.com/kannada/jio-has-crossed-500-million-customers/ https://kannadanewsnow.com/kannada/good-news-for-state-property-owners-land-records-will-be-available-in-digital-form/
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (Reliance Industries Ltd -RIL) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಶುಕ್ರವಾರ ಜಿಯೋ ಕುಟುಂಬವು 500 ಮಿಲಿಯನ್ ಗ್ರಾಹಕರನ್ನು ದಾಟಿದೆ ಎಂದು ಘೋಷಿಸಿದರು. ಶುಕ್ರವಾರ ಕಂಪನಿಯ 48 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (Annual general meeting -AGM) ಅವರು ಆರ್ಐಎಲ್ ಷೇರುದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. “ಇಂದು, ಜಿಯೋ ಕುಟುಂಬವು 500 ಮಿಲಿಯನ್ ಗ್ರಾಹಕರನ್ನು ದಾಟಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಹೆಮ್ಮೆಯಾಗುತ್ತಿದೆ. 500 ಮಿಲಿಯನ್ ಮೈಲಿಗಲ್ಲು ನಿಮ್ಮ ಅಚಲ ನಂಬಿಕೆ ಮತ್ತು ಬೆಂಬಲದ ಸಂಕೇತವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ” ಎಂದು ಅಂಬಾನಿ ಹೇಳಿದರು. ಜನರು ಹೇಳುವುದನ್ನು ನಾನು ಕೇಳಿದ್ದೇನೆ: ‘ಜಿಯೋ ನನ್ನ ಜೀವನವನ್ನು ಬದಲಾಯಿಸಿತು’ ಮತ್ತು ‘ನಾನು ಜಿಯೋವನ್ನು ಪ್ರೀತಿಸುತ್ತೇನೆ’. ಆದರೆ ನಾನು ನನ್ನ ಹೃದಯದಿಂದ ಹೇಳುತ್ತೇನೆ. ವಾಸ್ತವವಾಗಿ, ಪ್ರತಿಯೊಬ್ಬ ಭಾರತೀಯನು ಜಿಯೋವನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವ ಮೂಲಕ ನಿರ್ಮಿಸಿದನು ಎಂದು ಹೇಳಿದರು. https://kannadanewsnow.com/kannada/abhiman-studio-land-encroachment-issue-balakrishnas-daughter-has-issued-this-warning-to-the-state-government/…
ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ನೆಲಸಮಗೊಳಿಸಿದಂತ ಬಾಲಕೃಷ್ಣ ಪುತ್ರಿ ಗೀತಾ ವಿರುದ್ಧ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಸರ್ಕಾರ ನೀಡಿದಂತ ಅಭಿಮಾನ್ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಒತ್ತಾಯಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಒಂದು ವೇಳೆ ಮುಟ್ಟುಗೋಲು ಹಾಕಿಕೊಂಡರೇ ಹೀಗೆ ಮಾಡುವುದಾಗಿ ಬಾಲಕೃಷ್ಣ ಪುತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಾಲಕೃಷ್ಣ ಅವರ ಪುತ್ರಿ ಗೀತಾ ಅವರು, ಅಭಿಮಾನ್ ಸ್ಟುಡಿಯೋ ಜಾಗವನ್ನು ಸರ್ಕಾರ ಮುಟ್ಟಿಗೋಲು ಹಾಕಿಕೊಂಡರೇ ಕೋರ್ಟ್ ಮೊರೆ ಹೋಗುತ್ತೇನೆ. ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುತ್ತೇನೆ ಎಂಬುದಾಗಿ ಹೇಳಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಎಲ್ಲಾ ದಾಖಲೆ ಇಟ್ಟುಕೊಂಡು ಸುದ್ದಿಗೋಷ್ಠಿ ಮಾಡುತ್ತೇನೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ನೆಲಸಮ ಸಂಬಂಧ ಎಲ್ಲಾ ಮಾಹಿತಿಯನ್ನು ಜನತೆಯ ಮುಂದೆ ಇಡುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-the-sc-community-of-the-state-invitation-to-apply-for-the-police-constable-pre-recruitment-training/ https://kannadanewsnow.com/kannada/good-news-for-state-property-owners-land-records-will-be-available-in-digital-form/
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಮಾಜಿ ಗವರ್ನರ್ ಡಾ. ಉರ್ಜಿತ್ ಪಟೇಲ್ ಅವರನ್ನು ಮೂರು ವರ್ಷಗಳ ಅವಧಿಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ. ಡಾ. ಪಟೇಲ್ ಅವರು ಸೆಪ್ಟೆಂಬರ್ 2016 ರಿಂದ ಡಿಸೆಂಬರ್ 2018 ರವರೆಗೆ RBI ನ 24 ನೇ ಗವರ್ನರ್ ಆಗಿ ಸೇವೆ ಸಲ್ಲಿಸಿದರು. ಅವರ ಗವರ್ನರ್ ಹುದ್ದೆಗೆ ಮುಂಚಿತವಾಗಿ, ಅವರು RBI ನ ಉಪ ಗವರ್ನರ್ ಆಗಿದ್ದರು ಮತ್ತು ಇತರ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. https://twitter.com/ANI/status/1961271706812911671 ಅವರು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (AIIB) ನಲ್ಲಿ ಹೂಡಿಕೆ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿದ್ದರು (ಪ್ರದೇಶ 1), ದಕ್ಷಿಣ ಏಷ್ಯಾ, ಪೆಸಿಫಿಕ್ ದ್ವೀಪಗಳು ಮತ್ತು ಆಗ್ನೇಯ ಏಷ್ಯಾದಾದ್ಯಂತ ಸಾರ್ವಭೌಮ ಮತ್ತು ಸಾರ್ವಭೌಮೇತರ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಿದರು. ಅವರು ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ಕಂಪನಿ ಲಿಮಿಟೆಡ್ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ನಿರ್ವಹಣಾ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.














