Author: kannadanewsnow09

ನವದೆಹಲಿ: ಇಸ್ರೇಲ್ ರಾಜಧಾನಿಯ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆದ ಕಾರಣ ದೆಹಲಿಯಿಂದ ಟೆಲ್ ಅವೀವ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ಅಬುಧಾಬಿಗೆ ತಿರುಗಿಸಲಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಎಎಫ್‌ಪಿ ಪ್ರಕಾರ, ಟೆಲ್ ಅವೀವ್‌ನ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ವಿಮಾನದ ಮಾರ್ಗ ಬದಲಾವಣೆಯನ್ನು ದೃಢಪಡಿಸಿದ್ದಾರೆ. ವಿಮಾನವು ಟೆಲ್ ಅವೀವ್‌ನಲ್ಲಿ ಇಳಿಯುವ ಒಂದು ಗಂಟೆಗಿಂತ ಕಡಿಮೆ ಸಮಯ ಮೊದಲು ದಾಳಿ ನಡೆದಿದೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ವಿಮಾನ AI139 ದೆಹಲಿಗೆ ಹಿಂತಿರುಗಲಿದೆ ಎಂದು ಮೂಲಗಳು ತಿಳಿಸಿವೆ. ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ Flightradar24.com ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಧಿಕಾರಿಗಳು ಅಬುಧಾಬಿಗೆ ತಿರುಗಿಸಲು ನಿರ್ಧರಿಸಿದಾಗ  ಏರ್ ಇಂಡಿಯಾ ವಿಮಾನವು ಜೋರ್ಡಾನ್ ವಾಯುಪ್ರದೇಶದಲ್ಲಿತ್ತು. ಟೆಲ್ ಅವೀವ್‌ನಿಂದ ದೆಹಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ರದ್ದುಗೊಳಿಸಲಾಗಿದೆ. ಏರ್ ಇಂಡಿಯಾದಿಂದ ಹೇಳಿಕೆಗಾಗಿ ಕಾಯಲಾಗುತ್ತಿತ್ತು. ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿ ಟೆಲ್ ಅವೀವ್ ವಿಮಾನ…

Read More

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದು, ಅವರು ತಮ್ಮ ಮಾತನ್ನು ಸಾಬೀತುಪಡಿಸಿದರೆ ನಾನು ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವುದಲ್ಲದೆ, ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಯರಾಮ್ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ ಅವರು, ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿಲ್ಲ. ಬಾಬಾಸಾಹೇಬರನ್ನು ಸೋಲಿಸಿದ್ದು ಕಮ್ಯುನಿಸ್ಟ್ ಪಕ್ಷದ ಡಾಂಗೆ ಮತ್ತು ಆರ್‍ಎಸ್‍ಎಸ್‍ನ ಸಾವರ್ಕರ್ ಎಂದು ಹೇಳಿದ್ದಾರೆ. ಈ ನಾಲ್ವರು ಮುಖಂಡರು ತಮ್ಮ ಮಾತನ್ನು ಸಾಬೀತುಪಡಿಸಿದರೆ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಘೋಷಿಸಲು ಸಿದ್ಧ ಎಂದು ಪ್ರಕಟಿಸಿದರು. ಕಾಂಗ್ರೆಸ್ ನಾಯಕರು ಬಾಬಾಸಾಹೇಬ್ ಅಂಬೇಡ್ಕರ್ ರವರ ಸೋಲಿನ ಸಂಬಂಧ ತಮ್ಮ ಮಾತನ್ನು ಸಾಬೀತುಪಡಿಸಿದರೆ ನನ್ನ ಸ್ವಂತ ವೇತನದಲ್ಲಿ ಒಂದು ಲಕ್ಷದ ಒಂದು ರೂಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ. ಒಂದು ವೇಳೆ…

Read More

ಮೈಸೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವಂತ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಬೇಕು. ಕನ್ನಡ ಪ್ರತಿಭೆಗಳಿಗೆ ಚಿತ್ರ ಗಾಯನದಲ್ಲಿ ಅವಕಾಶ ಕೊಡಬೇಕು. ಅನ್ಯ ಭಾಷೆಯ ಗಾಯಕರನ್ನು ಹಾಡಿಸುವುದನ್ನು ನಿಲ್ಲಿಸಬೇಕು. ನಿರ್ಮಾಪಕರು ಸೋನು ನಿಗಮ್ ಗೆ ಅವಕಾಶ ನೀಡಬಾರದು ಎಂಬುದಾಗಿ ಒತ್ತಾಯಿಸಿದರು. ಕನ್ನಡ ಚಿತ್ರರಂಗದ ನಟರು ಸೋನು ಹಾಡಿಗೆ ಬಾಯಾಡಿಸುವುದನ್ನು ನಿಲ್ಲಿಸಬೇಕು. ಕೂಡಲೇ ಸೋನು ನಿಗಮ್ ಕನ್ನಡಿಗರ ಕ್ಷಮೆಯಾಚಿಸಬೇಕು. ಪೊಲೀಸರು ಸೋನು ನಿಗಮ್ ಬಂಧಿಸಿ ಜೈಲಿಗೆ ಕಳುಬಿಸಬೇಕು ಎಂಬುದಾಗಿ ವಾಟಾಲ್ ನಾಗರಾಜ್ ಆಗ್ರಹಿಸದರು.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಸಿದ್ಧರಾಮಯ್ಯನವರು ಎಂದರೇ ಹಾಗೆಯೇ, ದೇಹವೂಂದು, ನಾಲಿಗೆ ಎರಡು ಎಂಬುದಾಗಿ ಕಿಡಿಕಾರಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಗರಡಿಯಲ್ಲೇ ಬೆಳೆದು ರಾಜಕೀಯ ಬದುಕು ಕಟ್ಟಿಕೊಂಡ ಸಿದ್ಧರಾಮಯ್ಯನವರು ಇಬ್ಬಗೆಯ ನೀತಿ ಬಗ್ಗೆ ಆಣಿಮುತ್ತು ಉದುರಿಸಿದ್ದಾರೆ. ಆಣಿಮುತ್ತು ಉದುರಿಸುವ ಭರದಲ್ಲಿ ತಾವೇನು? ತಮ್ಮ ನಿಜಬಣ್ಣವೇನು ಎಂಬುದನ್ನು ಮತ್ತೊಮ್ಮೆ ಲೋಕಾರ್ಪಿತ ಮಾಡಿದ್ದಾರೆ.  ಸಿದ್ದರಾಮಯ್ಯನವರು ಎಂದರೆ ಹಾಗೆಯೇ.. ದೇಹವೊಂದು, ನಾಲಿಗೆ ಎರಡು ಎಂಬುದಾಗಿ ಹೇಳಿದೆ. ದೇವೇಗೌಡರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಬಗ್ಗೆ ಸಿದ್ದರಾಮಯ್ಯನವರು ಸಹಜ, ಸಕಾರಾತ್ಮಕ ಟೀಕೆ ಮಾಡಲಿ. ಬೇಡ ಎಂದವರು ಯಾರು? ಆದರೆ, ಅದೇ ನಿತ್ಯಕೃಷಿ ಎಂಬಂತೆ ನಿರಂತರವಾಗಿ ರಾಜಕೀಯ ಜನ್ಮಕೊಟ್ಟ ಮೇರು ನಾಯಕನ ಬಗ್ಗೆಯೇ ವಿಷಕಾರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದೆ. ಸಿದ್ದರಾಮಯ್ಯನವರು ಜನತಾ ಪರಿವಾರದಲ್ಲಿದ್ದಾಗ ಇಂದಿರಾ ಗಾಂಧಿ ಅವರ ಬಗ್ಗೆ ಉದುರಿಸಿದ್ದ ಭಾರೀ ಭಾರೀ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಂದ ಸಾಧ್ಯವಿದೆಯಾ? ಎಂದು…

Read More

ನವದೆಹಲಿ: ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಭಾರತ ಸ್ಥಗಿತಗೊಳಿಸಿದೆ ಮತ್ತು ಝೀಲಂ ನದಿಯ ಕಿಶನ್ಗಂಗಾ ಅಣೆಕಟ್ಟಿನಲ್ಲಿ ಇದೇ ರೀತಿಯ ಕ್ರಮಗಳನ್ನು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಪಹಲ್ಗಾಮ್ ದಾಳಿಗೆ ಕುಮ್ಮಕ್ಕು ನೀಡಿದಂತ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಶಾಕ್ ನೀಡಿದ್ದಾರೆ. ಈ ಜಲವಿದ್ಯುತ್ ಅಣೆಕಟ್ಟುಗಳು – ಜಮ್ಮುವಿನ ರಂಬನ್ನ ಬಾಗ್ಲಿಹಾರ್ ಮತ್ತು ಉತ್ತರ ಕಾಶ್ಮೀರದ ಕಿಶನ್ಗಂಗಾ – ನೀರು ಬಿಡುಗಡೆಯ ಸಮಯವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಭಾರತಕ್ಕೆ ನೀಡುತ್ತವೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ದಶಕಗಳಷ್ಟು ಹಳೆಯ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರ ಮಾಡಿತ್ತು. ವಿಶ್ವ ಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ಜಲ ಒಪ್ಪಂದವು 1960 ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ಬಳಕೆಯನ್ನು ನಿಯಂತ್ರಿಸುತ್ತಿದೆ. ಬಾಗ್ಲಿಹಾರ್ ಅಣೆಕಟ್ಟು ಉಭಯ ನೆರೆಹೊರೆಯವರ ನಡುವಿನ ದೀರ್ಘಕಾಲದ…

Read More

ಕಲಬುರ್ಗಿ: ಸಿಇಟಿ ಪರೀಕ್ಷೆಯ ವೇಳೆಯಲ್ಲಿ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೆ ನೇಮಕಾತಿ ಪರೀಕ್ಷೆ ಮಾರ್ಗಸೂಚಿಯಲ್ಲೂ ಜನಿವಾರ, ತಾಳಿ, ಬಳೆ ತೆಗೆಸುವಂತೆ ಮಾಡಿದ್ದಂತ ಆದೇಶ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಜನಿವಾರವನ್ನು ಅಧಿಕಾರಿಗಳು ತೆಗೆಸಿರೋದಾಗಿ ತಿಳಿದು ಬಂದಿದೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ನೀಟ್ ಪರೀಕ್ಷೆಗೆ ತೆರಳಿದ್ದಂತ ಶ್ರೀಪಾದ್ ಪಾಟೀಲ್ ಎಂಬುವರ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದಾಗಿ ಆರೋಪ ಕೇಳಿ ಬಂದಿದೆ. ನೀಟ್ ಅಭ್ಯರ್ಥಿ ಶ್ರೀಪಾದ್ ಪಾಟೀಲ್ ಅವರಿಗೆ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ಶ್ರೀಪಾದ್ ಪಾಟೀಲ್ ತೆರೆಳಿದ್ದಾರೆ. ಈ ಮೂಲಕ ಜನಿವಾರ ತೆಗೆದು ನೀಟ್ ಪರೀಕ್ಷೆಯನ್ನು ಅಭ್ಯರ್ಥಿ ಶ್ರೀಪಾದ್ ಪಾಟೀಲ್ ಬರೆದಿರುವುದಾಗಿ ತಿಳಿದು ಬಂದಿದೆ.

Read More

ಸಿಂಗಾಪುರ: ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ನೇತೃತ್ವದ ಆಡಳಿತಾರೂಢ ಪೀಪಲ್ಸ್ ಆಕ್ಷನ್ ಪಾರ್ಟಿ (ಪಿಎಪಿ) ಶನಿವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 97 ಸ್ಥಾನಗಳಲ್ಲಿ 87 ಸ್ಥಾನಗಳನ್ನು ಗೆದ್ದಿದೆ ಮತ್ತು ಸರ್ಕಾರದ ಮುಖ್ಯಸ್ಥರಾಗಿ ತಮ್ಮ ಮೊದಲ ರಾಷ್ಟ್ರೀಯ ಪರೀಕ್ಷೆಯಲ್ಲಿ 65.6% ಮತಗಳನ್ನು ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾಂಗ್ ಅವರನ್ನು ಅಭಿನಂದಿಸಿದ ಮೊದಲ ವಿಶ್ವ ನಾಯಕರಲ್ಲಿ ಒಬ್ಬರು. ಸಾರ್ವತ್ರಿಕ ಚುನಾವಣೆಯಲ್ಲಿ ನಿಮ್ಮ ಅದ್ಭುತ ವಿಜಯಕ್ಕಾಗಿ ಲಾರೆನ್ಸ್ ವಾಂಗ್ ಎಸ್ ಟಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತ ಮತ್ತು ಸಿಂಗಾಪುರ್ ಬಲವಾದ ಮತ್ತು ಬಹುಮುಖಿ ಪಾಲುದಾರಿಕೆಯನ್ನು ಹಂಚಿಕೊಂಡಿವೆ. ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಮೇ 2024 ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ವಾಂಗ್, ಫಲಿತಾಂಶಗಳು “ವಿಶ್ವಾಸ ಸ್ಥಿರತೆ ಮತ್ತು ವಿಶ್ವಾಸದ ಸ್ಪಷ್ಟ ಸಂಕೇತವಾಗಿದೆ” ಎಂದು ಹೇಳಿದರು. ಎಲ್ಲಾ ಸಿಂಗಾಪುರದವರಿಗೆ, ಫಲಿತಾಂಶಗಳು ನಿಮಗಾಗಿ ಇನ್ನೂ ಹೆಚ್ಚು ಶ್ರಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು…

Read More

ಹಾನಗಲ್ : ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಹಾವೇರಿ ಜಿಲ್ಲೆಯಲ್ಲಿ 650 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಜನಾರ್ಪಣೆಗೊಳಿಸಿ, ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ ಎಂದು ಸಿ.ಎಂಚುನಾವಣೆಗಳ ಭರವಸೆ ವ್ಯಕ್ತಪಡಿಸಿದರು. ನೀವು ಕಾಂಗ್ರೆಸ್ ಪಕ್ಷಕ್ಕೆ, ಈ ಸರ್ಕಾರಕ್ಕೆ ಕೊಟ್ಟ ಮತಗಳಿಗೆ ನಾವು ಘನತೆಯಿಂದ ಗೌರವಿಸಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ ಎಂದರು. ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿದೆ ಎಂದು ಬಿಜೆಪಿ, ಜೆಡಿಎಸ್…

Read More

ಬೆಂಗಳೂರು: ಬಸವಾದಿ ಶರಣರು, ಬುದ್ಧ ಮತ್ತು ಅಂಬೇಡ್ಕರ್ ಅವರು ಹೇಳಿದ ಸಮ- ಸಮಾಜ ನಿರ್ಮಾಣಬಾಗಬೇಕಾದರೆ ಪ್ರತಿಯೊಂದು ಸಮುದಾಯಗಳಿಗೆ ಆದ್ಯತೆ ನೀಡಬೇಕು. ಆಗ ಮಾತ್ರ ಸಮ- ಸಮಾಜದ ಕನಸು ಸಾಕಾರಗೊಳ್ಳಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ಸಾನಿಧ್ಯದಲ್ಲಿ‌ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಭಗೀರಥ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಸಮಾನತೆ ಇರಬಾರದು. ಎಲ್ಲ ಸಮುದಾಯವರಿಗೂ ಸಮವಾಗಿ ಸವಲತ್ತುಗಳು ದೊರೆಯುವಂತೆ ಆಗಬೇಕು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ವಿಚಾರದಲ್ಲಿ ಬದ್ಧತೆಯನ್ನು ಇಟ್ಟುಕೊಂಡಿದೆ. ಸಮಾಜದ ಒಳಿತಿಗೆ, ಸಮಾಜದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಉಪ್ಪಾರ ನಿಗಮಕ್ಕೆ‌ ಪ್ರಸ್ತುತ ನಾನೇ ಅಧ್ಯಕ್ಷನಿದ್ದೇನೆ. ಎರಡು ತಿಂಗಳಲ್ಲಿ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ನೂತನ ಅಧ್ಯಕ್ಷರನ್ನು ನೇಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಉಪ್ಪಾರ…

Read More

ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧದ ದಂಡನಾತ್ಮಕ ಕ್ರಮವಾಗಿ ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿದ ಕೆಲವು ದಿನಗಳ ನಂತರ, ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರಿನ ಹರಿವನ್ನು ನಿಲ್ಲಿಸಿದೆ ಮತ್ತು ಝೀಲಂ ನದಿಯ ಕಿಶನ್ಗಂಗಾ ಅಣೆಕಟ್ಟಿನಲ್ಲಿ ಇದೇ ರೀತಿಯ ಕ್ರಮಗಳನ್ನು ಸಿದ್ಧಪಡಿಸುತ್ತಿದೆ ಎಂದು ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ಜಲವಿದ್ಯುತ್ ಅಣೆಕಟ್ಟುಗಳು – ಜಮ್ಮುವಿನ ರಂಬನ್ನ ಬಾಗ್ಲಿಹಾರ್ ಮತ್ತು ಉತ್ತರ ಕಾಶ್ಮೀರದ ಕಿಶನ್ಗಂಗಾ – ನೀರು ಬಿಡುಗಡೆಯ ಸಮಯವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಭಾರತಕ್ಕೆ ನೀಡುತ್ತವೆ ಎಂದು ಮೂಲಗಳು ತಿಳಿಸಿವೆ. ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ದಶಕಗಳಷ್ಟು ಹಳೆಯ ಒಪ್ಪಂದವನ್ನು ಅಮಾನತುಗೊಳಿಸಿತು, ಇದರಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ವಿಶ್ವ ಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ಜಲ ಒಪ್ಪಂದವು 1960 ರಿಂದ…

Read More