Author: kannadanewsnow09

ಬೆಂಗಳೂರು: ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರ ಸಭೆ ನಡೆಸಿ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ದಿಸೆಯಲ್ಲಿ ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತಮ್ಮ ತೋಟದಲ್ಲಿ ಶುಕ್ರವಾರದಂದು ರಾಜ್ಯಾಧ್ಯಕ್ಷರು ಕರೆದಿದ್ದ ಈ ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಮಂತ್ರಿಗಳಾದ ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ. ಅನ್ನದಾನಿ, ಶಾಸಕ ಮಂಜುನಾಥ್, ಜಿಲ್ಲಾಧ್ಯಕ್ಷ ರಮೇಶ್, ಮುಖಂಡ ರಾಮಚಂದ್ರ ಪಾಲ್ಗೊಂಡಿದ್ದರು. ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮುಖಂಡರ ಜತೆ ಕೂಲಂಕಷವಾಗಿ ಚರ್ಚೆ ನಡೆಸಿದ ಸಚಿವರು, ಪಕ್ಷ ಸಂಘಟನೆಯಲ್ಲಿ ಎಲ್ಲರೂ ಗಂಭೀರವಾಗಿ ತೊಡಗಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಅಲ್ಲದೆ, ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪಕ್ಷದ ಸಂಘಟನೆ ಬಗ್ಗೆ ಅಲಕ್ಷ್ಯ ಬೇಡ. ಕಳೆದ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ಬಹುಮತದಲ್ಲಿ ಜಿಲ್ಲೆಯ ಜನತೆ ನಮ್ಮನ್ನು ಆಶೀರ್ವಾದ…

Read More

ನವದೆಹಲಿ: ಚಿನಿವಾರ ಪೇಟೆಯಲ್ಲಿ ಇಂದು ಮತ್ತೆ ಚಿನ್ನದ ದರ ಏರಿಕೆ ಕಂಡು, ಆಭರಣ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ಚಿನ್ನದ ದರವು 10 ಗ್ರಾಂಗೆ ರೂ.2,200 ಏರಿಕೆಯಾಗಿ ಬರೋಬ್ಬರಿ 1,25,600ಕ್ಕೆ ಏರಿಕೆಯಾಗಿದೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ಮಾಹಿತಿ ನೀಡಿದ್ದು, ಶೇ.99.9ರಷ್ಟು ಪರಿಶುದ್ಧ 10 ಗ್ರಾಂ ಚಿನ್ನದ ದರವು 2,200 ಏರಿಕೆಯಾಗುವ ಮೂಲಕ 1,25,600ಕ್ಕೆ ಏರಿಕೆಯಾಗಿದೆ. ಇದು ನಿನ್ನೆಯ ಗುರುವಾರದಂದು 10 ಗ್ರಾಂಗೆ ರೂ.1,23,400 ಇತ್ತು ಎಂಬುದಾಗಿ ತಿಳಿಸಿದೆ. ಆಭರಣ ಚಿನ್ನದ ದರ ಅಂದರೆ ಶೇ.99.5ರಷ್ಟು ಪರಿಶುದ್ಧತೆ ಹೊಂದಿರೋದು ರೂ.2,200 ಏರಿಕೆಯಾಗುವ ಮೂಲಕ 10 ಗ್ರಾಂಗೆ ರೂ.1,25,000ಕ್ಕೆ ಮಾರಾಟವಾಗಿದೆ. ಗುರುವಾರದಂದು ಆಭರಣ ಚಿನ್ನವು 10 ಗ್ರಾಂಗೆ ರೂ.1,22,800 ಇತ್ತು ಎಂದಿದೆ. ಇನ್ನೂ ಬೆಳ್ಳಿಯ ಬೆಲೆ ಕೊಂಚ ಇಳಿಕೆಯಾಗಿದೆ. ಇಂದು ಕೆಜಿ ಬೆಳ್ಳಿಗೆ 2000 ರೂಪಾಯಿ ಇಳಿಕೆಯಾಗಿದೆ. ಹೀಗಾಗಿ ಒಂದು ಕೆಜಿ ಬೆಳ್ಳಿಗೆ 1,53,000 ರೂ ತಲುಪಿದೆ. ಇಂದು ಗುರುವಾರದ ನಿನ್ನೆಯಂದು 1,55,000 ಇತ್ತು. https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/ https://kannadanewsnow.com/kannada/these-are-the-necessary-documents-to-be-submitted-along-with-the-nomination-paper-for-the-gram-panchayat-elections/

Read More

ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…

Read More

ಮೈಸೂರು: ಇಂದು ಭಾರತದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಪ್ರಥಮ ಉಪಪ್ರಧಾನಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ನೈರುತ್ಯ ರೈಲ್ವೆ, ಮೈಸೂರು ವಿಭಾಗದ ವತಿಯಿಂದ ಏಕತಾ ಪಾದಯಾತ್ರೆ ಆಯೋಜಿಸಲಾಯಿತು. ಈ ಪಾದಯಾತ್ರೆ ಚಾಮುಂಡಿ ಕ್ಲಬ್ ನಿಂದ ಪ್ರಾರಂಭವಾಗಿ ಮೈಸೂರು ರೈಲು ನಿಲ್ದಾಣದ ಬಳಿ ಸಮಾಪ್ತಿಯಾಯಿತು. ಈ ಪಾದಯಾತ್ರೆಯು ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಏಕತೆ ಮತ್ತು ಅಖಂಡತೆಯ ಸಂದೇಶವನ್ನು ಸಾರಿತು. ಮುದಿತ್ ಮಿತ್ತಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಮೈಸೂರು ಮತ್ತು ಶ್ರೀ ಶಮ್ಮಾಸ್ ಹಮೀದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಪಾದಯಾತ್ರೆಯನ್ನು ಮುನ್ನಡೆಸಿದರು. ಎಲ್ಲಾ ಶಾಖಾ ಅಧಿಕಾರಿಗಳು, ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಹಾಗೂ ವಿವಿಧ ವಿಭಾಗಗಳ ನೌಕರರು ಉತ್ಸಾಹಪೂರ್ಣವಾಗಿ ಪಾಲ್ಗೊಂಡರು. ಈ ಪಾದಯಾತ್ರೆಯನ್ನು ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಯಿತು. ಭಾರತದ ಏಕತೆಯ ಸಂಕೇತವಾದ “ಭಾರತದ ಉಕ್ಕಿನ ಮನುಷ್ಯ” ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೃಷ್ಟಿ ಮತ್ತು ದೇಶದ ಏಕೀಕರಣದ…

Read More

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಸರ್ದಾರ್ ವಲ್ಲಭಭಾಯ್ ಪಟೇಲ್ರವರ ಜನ್ಮದಿನದ ಅಂಗವಾಗಿ ಇಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿಯಲ್ಲಿ ʼಏಕತೆಗಾಗಿ ಓಟʼ ವನ್ನು ಆಯೋಜಿಸಲಾಗಿತ್ತು. ಮೊದಲಿಗೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ರವರು ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ನಂತರ ಆಶುತೋಷ್ ಕುಮಾರ್ ಸಿಂಗ್ ರವರ ನೇತೃತ್ವದಲ್ಲಿ ರೈಲ್ವೆ ಕ್ರೀಡಾ ಮೈದಾನದಿಂದ ಆರಂಭಗೊಂಡ ಏಕತೆಗಾಗಿ ಓಟವು ಎಂ.ಜಿ. ರೈಲ್ವೆ ಕಾಲೋನಿಯ ಮೂಲಕ ಸಾಗಿ ಮತ್ತೆ ರೈಲ್ವೆ ಕ್ರೀಡಾ ಮೈದಾನದಲ್ಲಿ ಮುಕ್ತಾಯಗೊಳಿಸಲಾಯಿತು. ಈ ವೇಳೆ ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ಪರೀಕ್ಷಿತ್ ಮೋಹನ್ಪೂರಿಯಾ ಮತ್ತು ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತ (ಆರ್.ಪಿ.ಎಫ್.) ಡಾ. ಶ್ರೇಯಾನ್ಸ್ ಚಿಂಚವಾಡೆ, ಇತರ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ, ಪಿ.ಎಂ. ಕೇಂದ್ರೀಯ ವಿದ್ಯಾಲಯ ಮತ್ತು ಶಾಮ ವಿದ್ಯಾ ಶಾಲಾ…

Read More

ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಮುಂದಿವೆ ಓದಿ. ಸಾಮಾನ್ಯ ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು. 2. ನಾಮಪತ್ರ ನಮೂನೆ –5ರಲ್ಲಿ ನೀಡಬೇಕು. 3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಠೇವಣಿ ಹಣ 100/- ರೂಗಳನ್ನು ನೀಡುವುದು. 4. ಇಸ್ತಿ ಬಿವಧಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು. 5. ಅಭ್ಯರ್ಥಿಯಿಂದ ಘೋಷಣೆ ಪತ್ರ 6. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ ‘ಬೇ-ಬಾಕಿಪತ್ರ’ ಅನುಸೂಚಿತ ಜಾತಿ/ಅ.ಪಂಗಡ ಮೀಸಲು ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು. 2. ತಹಶಿಲ್ದಾ‌ರವರಿಂದ ಜಾತಿ ಪ್ರಮಾಣ ಪತ್ರ ಪಡೆದು…

Read More

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಕುರ್ಣೇಗಾಲ ಬಳಿ ಹುಲಿ ದಾಳಿಯಿಂದ ನಿಂಗಯ್ಯ(65) ಎಂಬುವರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕುರ್ಣೆಗಾಲ ಗ್ರಾಮದಲ್ಲಿ ಹುಲಿದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಹುಲಿ ದಾಳಿಯಿಂದಾಗಿ ಕುರ್ಣೇಗಾಲ ಬಳಿ ಹುಲಿ ದಾಳಿಯಿಂದ ನಿಂಗಯ್ಯ(65) ಎಂಬುವರು ಸಾವನ್ನಪ್ಪಿದ್ದಾರೆ. https://kannadanewsnow.com/kannada/power-outage-in-these-areas-of-ulavi-soraba-taluk-on-november-2nd/ https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ದಿನಾಂಕ 02-11-2025ರಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತಂತೆ ಸೊರಬ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:02.11.2025 ರಂದು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕೆವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ದಿನಾಂಕ:02.11.2025 ರಂದು ಉಳವಿ ಟೌನ್‌ನಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ಉಳವಿ ವಿದ್ಯುತ್‌ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್1 ಬರಗಿ ಎನ್‌ಜೆನ್ನೈ, ಎಫ್2 ಕಾನಳ್ಳಿ, ಎಫ್-3 ಉಳವಿ, ಎಫ್4 ಹೊಸಬಾಳೆ ಮತ್ತು ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ..,…

Read More

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ) 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಅವರು ವಿವರಿಸಿದ್ದಾರೆ. ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆಯಲಿವೆ. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ ಎರಡೂ…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಈ ನೂತನ ಮಾರ್ಗದಲ್ಲಿ ಹೊಸದಾಗಿ ಹವಾನಿಯಂತ್ರಿತ ಎಲೆಕ್ಟ್ರಿಕ್‌ ವಜ್ರ ವೇಗದೂತ (Express Service) ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ಕೆಂಪೇಗೌಡ ಬಸ್‌ ನಿಲ್ದಾಣದಿಂದ ಸೆಂಟ್ರಲ್‌ ಟಾಕೀಸ್‌, ಮಲ್ಲೇಶ್ವರ್ಂ 8ನೇ ಕ್ರಾಸ್‌, ಗೋವರ್ಧನ ಟಾಕೀಸ್‌, ಗೊರಗುಂಟೆಪಾಳ್ಯ, ಅರಶಿನಕುಂಟೆ ಮಾರ್ಗವಾಗಿ ನೆಲಮಂಗಲ ಬಸ್‌ ನಿಲ್ದಾಣಕ್ಕೆ Express (Limited Stop) ಸೇವೆಗಳನ್ನು ದಿನಾಂಕ 03.11.2025 ರಿಂದ ಜಾರಿಗೆ ಬರುವಂತೆ ಮಾರ್ಗಸಂಖ್ಯೆ ವಿ-258ಸಿ ರಲ್ಲಿ 06 ಹವಾನಿಯಂತ್ರಿತ ಎಲೆಕ್ಟ್ರಿಕ್‌ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ. ಹೀಗಿದೆ ಮಾರ್ಗದ ವೇಳಾ ಪಟ್ಟಿ ವಿವರಗಳು ಮಾರ್ಗಸಂಖ್ಯೆ ವಿ-258ಸಿ ವೇಳಾಪಟ್ಟಿ (ನಿರ್ಗಮನ ಸಮಯ) ಕೆಂಪೇಗೌಡ ಬಸ್‌ ನಿಲ್ದಾಣ ಮಾರ್ಗ ನೆಲಮಂಗಲ ಬಸ್‌ ನಿಲ್ದಾಣ 0600, 0640, 0710, 0740, 0820, 0850, 0930, 1005, 1035, 1105, 1205, 1305,…

Read More