Author: kannadanewsnow09

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಅಂಗಾಂಗ ಮರುಪಡೆಯುವಿಕೆಯ ಕೇಂದ್ರವನ್ನು ಜಿಲ್ಲಾಸ್ಪತ್ರೆಗಳಲ್ಲೂ ಪ್ರಾರಂಭ ಮಾಡಲಾಗಿದೆ. ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಲು ಕ್ರಮವಹಿಸಲಾಗಿದೆ. ಕಳೆದ ವಾರ ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಂಗಾಂಗ ದಾನ ಹೆಚ್ಚಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1929514320679027079

Read More

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ತಮ್ಮ ಹೇಳಿಕೆಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಕರ್ನಾಟಕದಲ್ಲಿ ಸುಗಮ ಬಿಡುಗಡೆಗೆ ರಕ್ಷಣೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ‘ಕನ್ನಡ ತಮಿಳಿನಿಂದ ಹುಟ್ಟಿತು’ ಎಂಬ ಹಾಸನ್ ಹೇಳಿಕೆಗೆ ಔಪಚಾರಿಕ ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆಯನ್ನು ನಿಷೇಧಿಸಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಎಚ್ಚರಿಕೆ ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಜೂನ್ 5 ರಂದು ತೆರೆಗೆ ಬರಲಿರುವ ‘ಥಗ್ ಲೈಫ್’, ಮೇ 24 ರಂದು ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಹಾಸನ್ ಅವರ ಹೇಳಿಕೆಗಳ ನಂತರ ವಿವಾದಕ್ಕೆ ಸಿಲುಕಿದೆ. ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹಾಸನ್, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷಮೆಯಾಚಿಸುವಂತೆ ಒತ್ತಾಯಿಸಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಮತ್ತು ಮೈಸೂರು ಸೇರಿದಂತೆ ನಗರಗಳಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. 70 ವರ್ಷದ…

Read More

ಬೆಂಗಳೂರು: ರೈಲು ಪ್ರಯಾಣಿಕರು ಇನ್ನುಮುಂದೆ ಸೀಟ್‌ ಲಭ್ಯತೆ ಬಗ್ಗೆ ಖಾತರಿ ಮಾಡಿಕೊಳ್ಳುವುದು ಹೆಚ್ಚು ಸುಲಭ. ಮೇಕ್‌ ಮೈ ಟ್ರಿಪ್‌ ರೈಲು ಪ್ರಯಾಣಿಕರಿಗಾಗಿ “ಸೀಟು ಲಭ್ಯತೆ ಮುನ್ಸೂಚನೆ ಹಾಗೂ ಟಿಕೆಟ್‌ ಬಿಕರಿ ಆಗಿರುವ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಪಡೆಯುವ ಆಯ್ಕೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪರಿಚಯಿಸಿದೆ. ರೈಲು ಟಿಕೆಟ್‌ ಕಾಯ್ದಿರಿಸಲು ೬೦ ದಿನಗಳ ಮುಂಚಿತವಾಗಿಯೇ ತೆರೆದಿರುತ್ತದೆ. ಆದರೆ, ಸಾಕಷ್ಟು ಜನರು ಕೊನೆಯ ಕ್ಷಣದಲ್ಲಿ ಟಿಕೆಟ್‌ ಕಾಯ್ದಿರಿಸಲು ಆತುರಪಡುತ್ತಾರೆ. ಇನ್ನೂ ಸಾಕಷ್ಟು ಜನರು, ಟಿಕೆಟ್‌ ಬುಕ್‌ ಮಾಡದೇ, ಕೇವಲ ಸೀಟ್‌ ಬ್ಲಾಕಿಂಗ್‌ ಮಾಡಿರುತ್ತಾರೆ. ಇದರಿಂದ ನಿಖರವಾಗಿ ಎಷ್ಟು ಸೀಟು ಲಭ್ಯವಿದೆ, ಎಷ್ಟು ಬಿಕರಿಯಾಗಿದೆ ಎಂಬುದು ತಿಳಿಯುವುದು ಕಷ್ಟ. ವರದಿಗಳ ಪ್ರಕಾರ, ಶೇ. 40 ರಷ್ಟು ಜನರು, ತೀರಾ ಮುಂಚಿತವಾಗಿ ಟಿಕೆಟ್‌ ಕಾಯ್ದಿರಿಸುತ್ತಾರೆ. ಇನ್ನು ಶೇ. 70ರಷ್ಟು ಜನರು, ವೇಟಿಂಗ್‌ಲಿಸ್ಟ್‌ನಲ್ಲಿಯೇ ಈ ಸೀಟ್‌ಗಳನ್ನು ಬ್ಲಾಕ್‌ ಮಾಡುತ್ತಾರೆ, ಆದರೆ, ಟಿಕೆಟ್‌ ಬುಕ್‌ ಮಾಡುವುದಿಲ್ಲ. ಇದು ನಿಜವಾಗಿಯೂ ಟಿಕೆಟ್‌ ಬುಕ್‌ ಮಾಡುವವರಿಗೆ ಸೀಟು ಲಭ್ಯತೆ ಬಗ್ಗೆ ಮಾಹಿಯನ್ನೂ ನೀಡುವುದಿಲ್ಲ. ಸಾಕಷ್ಟು…

Read More

ಬೆಂಗಳೂರು: ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ಹಾನಿಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಜ್ಜಿವಾನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ದೇಶಾದ್ಯಂತ ತಂಬಾಕು ವಿರೋಧಿ ಅಭಿಯಾನ ಪ್ರಾರಂಭಿಸಿದೆ. ಆರೋಗ್ಯಕರ ಜೀವನಶೈಲಿ ಆಯ್ಕೆ ಮಾಡಿಕೊಳ್ಳುವುದರಿಂದ “ಉತ್ತಮ ಜೀವನ ನಿರ್ಮಿಸಿ” ಎಂಬ ಘೋಷಾ ವಾಕ್ಯದಡಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ಈ ಕುರಿತು ಮಾತನಾಡಿದ ಉಜ್ಜಿವಾನ್ ಸ್ಮಾಲ್ ಫೈನಾನ್ಸ್ ಬ್ಯಾಂಕಿನ ಮುಖ್ಯ ಮಾರ್ಕೆಟಿಂಗ್‌ ಅಧಿಕಾರಿ ಲಕ್ಷ್ಮಣ್ ವೇಲಾಯುಥಮ್, ಇಂದು ಪ್ರತಿನಿತ್ಯ ತಂಬಾಕು ಸೇವನೆಯಿಂದ ಆರೋಗ್ಯ ಹಾಳು ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಿ, ಇಂದಿನ ಯುವಪೀಳಿಗೆಯನ್ನು ಈ ಅಪಾಯದಿಂದ ದೂರ ಇರಿಸಬೇಕು. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ರಸ್ತೆ ಬದಿ, ಬಸ್‌ನಿಲ್ದಾಣ, ಸಾರ್ವಜನಿಕ ಸ್ಥಳಗಳನ್ನು ಬಿತ್ತಿಚಿತ್ರ, ಡಿಜಿಟಲ್ ಹೋರ್ಡಿಂಗ್‌ಗಳ ಮೂಲಕ ತಂಬಾಕು ಸೇವನೆಯಿಂದ ಆಗುವ ಅನಾಹುತದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಬೆಂಗಳೂರಿನ ರಾಜಾ ರಾಮ್ ಮೋಹನ್ ರಾಯ್ ರಸ್ತೆಯ ಕಾಂತೀರವಾರ ಕ್ರೀಡಾಂಗಣದಲ್ಲಿ ಈಗಾಗಲೇ ದೊಡ್ಡ ಡಿಜಿಟಲ್‌ ಹೋರ್ಡಿಂಗ್‌ನಲ್ಲಿ ಬಿತ್ತರಿಸಲಾಗಿದೆ. ಜನಸಾಮಾನ್ಯರು ಈ…

Read More

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ ಮನವರಿಕೆ ಮಾಡುವ ಬದಲು ಬೆದರಿಕೆ ಹಾಕುವುದು ಒಳ್ಳೆಯದಲ್ಲ. ಎಲ್ಲ ರೈತರನ್ನು ಸಮಭಾವದಿಂದ ನೋಡಬೇಕೆ ಹೊರತು, ಮಠಾಧೀಶರ ಮೇಲೆ, ಜನಪ್ರತಿನಿಧಿಗಳ ಮೇಲೆ ಕೇಸು ಹಾಕಬಾರದು. ಕಾಂಗ್ರೆಸ್‌ನ ಶಾಸಕರೇ ಆದ ಗುಬ್ಬಿ ಶ್ರೀನಿವಾಸ್‌ ಕೂಡ ಇದರ ವಿರುದ್ಧ ನಿಂತಿದ್ದಾರೆ ಎಂದರು. ರೈತರ ವಿರುದ್ಧ ಪ್ರಕರಣ ದಾಖಲಿಸುವುದು ಅಕ್ಷಮ್ಯ ಅಪರಾಧ. ರೈತರ ಜೊತೆಗೆ ಚರ್ಚಿಸಿ ಸಮನ್ವಯ ಸಾಧಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕುರ್ಚಿ ಹೋದರೆ ಅಧಿಕಾರವೇ ಇರುವುದಿಲ್ಲ. ರಾಜ್ಯ ಸರ್ಕಾರ…

Read More

ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 32 ವರ್ಷದ ಅವರು ಇನ್‌ಸ್ಟಾಗ್ರಾಮ್ ಮೂಲಕ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. ಅವರು ಇನ್ನು ಮುಂದೆ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರೋಟಿಯಸ್ ಅನ್ನು ಪ್ರತಿನಿಧಿಸುವುದಿಲ್ಲ ಎಂದು ದೃಢಪಡಿಸಿದ್ದಾರೆ. ನಾನು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯಲು ನಿರ್ಧರಿಸಿದ್ದೇನೆ ಎಂದು ಘೋಷಿಸುವುದರಿಂದ ಇದು ನನಗೆ ದುಃಖದ ದಿನವಾಗಿದೆ ಎಂದು ಕ್ಲಾಸೆನ್ ಬರೆದಿದ್ದಾರೆ. ಭವಿಷ್ಯದಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಯಾವುದು ಉತ್ತಮ ಎಂದು ನಿರ್ಧರಿಸಲು ನನಗೆ ಬಹಳ ಸಮಯ ಹಿಡಿಯಿತು. ಇದು ನಿಜವಾಗಿಯೂ ತುಂಬಾ ಕಷ್ಟಕರವಾದ ನಿರ್ಧಾರವಾಗಿತ್ತು. ಆದರೆ ನಾನು ಸಂಪೂರ್ಣ ಶಾಂತಿಯನ್ನು ಹೊಂದಿದ್ದೇನೆ ಎಂದಿದ್ದಾರೆ. ದಕ್ಷಿಣ ಆಫ್ರಿಕಾವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದಕ್ಕಾಗಿ ಕ್ಲಾಸೆನ್ ಕೃತಜ್ಞತೆ ಸಲ್ಲಿಸಿದರು. ಇದನ್ನು ಅವರ ಬಾಲ್ಯದ ಕನಸು ಮತ್ತು ಅವರ ವೃತ್ತಿಜೀವನದ ಅತಿದೊಡ್ಡ ಸವಲತ್ತು ಎಂದು ಕರೆದರು. ತಮ್ಮ ಪ್ರಯಾಣದುದ್ದಕ್ಕೂ ಬೆಂಬಲ ನೀಡಿದ್ದಕ್ಕಾಗಿ ಅವರು ತರಬೇತುದಾರರು, ತಂಡದ ಸದಸ್ಯರು ಮತ್ತು ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು…

Read More

ನವದೆಹಲಿ: ಜೂನ್ 2, 2025 ರ ಸೋಮವಾರದಂದು ಭಾರತದ ಬಹು ಸರಕು ವಿನಿಮಯ ಕೇಂದ್ರದಲ್ಲಿ (Multi Commodity Exchange-MCX) ಚಿನ್ನದ ಬೆಲೆಗಳು ಸುಮಾರು ಶೇಕಡಾ 2 ರಷ್ಟು ಏರಿಕೆಯಾಗಿದೆ. ಇಂದು ಚಿನ್ನದ ದರ 10 ಗ್ರಾಂಗೆ 1630 ಏರಿಕೆಯಾಗಿ 97,505ಕ್ಕೆ ತಲುಪಿದೆ.  ಚಿನ್ನದ ಭವಿಷ್ಯವು ಸೋಮವಾರದ ಸರಕು ಮಾರುಕಟ್ಟೆ ಅಧಿವೇಶನದಲ್ಲಿ ಶೇಕಡಾ 1.7 ರಷ್ಟು ಅಥವಾ 10 ಗ್ರಾಂಗೆ ₹1,630 ರಷ್ಟು ಏರಿಕೆಯಾಗಿ 10 ಗ್ರಾಂಗೆ ₹97,505 ರ ಇಂಟ್ರಾಡೇ ಗರಿಷ್ಠ ಮಟ್ಟವನ್ನು ತಲುಪಿತು, ಕಳೆದ ವಾರ ಹಿಂದಿನ ಮಾರುಕಟ್ಟೆ ಮುಕ್ತಾಯದಲ್ಲಿ 10 ಗ್ರಾಂಗೆ ₹95,875 ಕ್ಕೆ ಹೋಲಿಸಿದರೆ. ಜಾಗತಿಕ ಮಾರುಕಟ್ಟೆಯಲ್ಲಿ ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಂದರ್ಭದಲ್ಲಿ ಹೂಡಿಕೆದಾರರು ಈಕ್ವಿಟಿ ಮಾರುಕಟ್ಟೆಗಳಂತಹ ಹೆಚ್ಚಿನ ಅಪಾಯದ ಹೂಡಿಕೆಗಳಿಂದ ತಮ್ಮ ಹಣವನ್ನು ಹಿಂತೆಗೆದುಕೊಳ್ಳುತ್ತಾರೆ. ಚಿನ್ನ ಮತ್ತು ಸರ್ಕಾರಿ ಖಜಾನೆಗಳಂತಹ ಸುರಕ್ಷಿತ ಸ್ವತ್ತುಗಳು ಜಾಗತಿಕ ಮಾರುಕಟ್ಟೆ ಹೂಡಿಕೆದಾರರ ಗಮನ ಸೆಳೆಯುತ್ತವೆ. https://kannadanewsnow.com/kannada/banu-mushtaq-deepa-bhasti-global-kannada-ambassadors-dcm-d-k-shivakumar/ https://kannadanewsnow.com/kannada/breaking-actor-kamal-haasan-has-filed-a-petition-in-the-high-court-to-prevent-the-ban-on-the-movie-thug-life-in-the-state/

Read More

ಬೆಂಗಳೂರು: “ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರು ವಿಶ್ವಮಟ್ಟದಲ್ಲಿ ಕನ್ನಡದ ರಾಯಭಾರಿಗಳಾಗಿ ಬೆಳಗಿದ್ದಾರೆ. ಬೂಕರ್ ಪ್ರಶಸ್ತಿ ಗೆದ್ದು ಕನ್ನಡದ ಜ್ಯೋತಿಯನ್ನು ಬೆಳಗಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬೂಕರ್ ಪ್ರಶಸ್ತಿ ಗಳಿಸಿದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. “ಕನ್ನಡ ಭಾರತಿ ಈಗ ದೇಶಕ್ಕೆ ಆರತಿ. ಸಪ್ತ ಸಾಗರದ ಆಚೇ ಕನ್ನಡ ಡಿಂಡಿಮ ಕೇಳಿಸುತ್ತಿದೆ. ಕನ್ನಡದ ಹಿರಿಮೆಯನ್ನು ಹೆಚ್ಚಿಸಿದ ಇಬ್ಬರು ಮಹಿಳೆಯರಿಗೆ ಸರ್ಕಾರದ ಕಡೆಯಿಂದ ತುಂಬು ಹೃದಯದ ಕೃತಜ್ಞತೆಗಳು” ಎಂದರು. “ನಮ್ಮ ದೇಶದಲ್ಲಿ 780 ಕ್ಕೂ ಹೆಚ್ಚು ಪ್ರಮುಖ ಭಾಷೆಗಳಿವೆ. 19,500 ಉಪ ಭಾಷೆಗಳಿವೆ. ಇಡೀ ಪ್ರಪಂಚದಲ್ಲಿ 7,800 ಕ್ಕೂ ಹೆಚ್ಚು ಭಾಷೆಗಳಿವೆ. ನಾವು ಅರ್ಜಿಯಲ್ಲಿ ಬರೆಯುವಾಗ ಪಿತೃಭಾಷೆ ಯಾವುದು ಎಂದು ಬರೆಯುವುದಿಲ್ಲ‌. ಮಾತೃಭಾಷೆ ಎಂದು ಬರೆಯುತ್ತೇವೆ. ಭಾಷೆಗೆ ತಾಯಿಯ ಸ್ಥಾನ ನೀಡಿದ್ದೇವೆ” ಎಂದು ಹೇಳಿದರು. https://kannadanewsnow.com/kannada/in-bangalore-eve-hub-inauguration-how-to-charge-do-you-know-the-price/ https://kannadanewsnow.com/kannada/breaking-bjp-leader-arun-kumar-puthil-receives-a-big-shock-border-crossing-notice-issued/

Read More

ಬೆಂಗಳೂರು : ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ ಬಳಿ ಬೆಸ್ಕಾಂ ಸ್ಥಾಪಿಸಿರುವ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. “ರಾಜ್ಯದಲ್ಲಿ ಹೆಚ್ಚುತ್ತಿರುವ ಇವಿ ಬೇಡಿಕೆಗೆ ಅನುಕೂಲವಾಗುವಂತೆ ಚಾರ್ಜಿಂಗ್ ಕೇಂದ್ರಗಳು ಹಾಗೂ ಮೂಲ ಸೌಕರ್ಯ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಬದ್ಧವಾಗಿದೆ. ಅಲ್ಲದೇ, ಇದಕ್ಕೆ ನಮ್ಮ ರಾಜ್ಯದ ‘ಇವಿ ನೀತಿ’ ಹೆಚ್ಚಿನ ಬಲ ತುಂಬಿದೆ. ಇದೀಗ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಲಾಗಿದ್ದು, ಇದರಿಂದ ಕ್ಯಾಬ್‌ ಚಾಲಕರು, ಇವಿ ಬಳಕೆ ಮಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ,”ಎಂದರು. “ಬೆಸ್ಕಾಂ, ಜರ್ಮನ್ ಕಾರ್ಪೊರೇಷನ್ ಫಾರ್ ಇಂಟರ್‌ನ್ಯಾಷನಲ್ ಕೋ ಆಪರೇಷನ್ (ಜಿ.ಐ.ಝಡ್.) ಸಹಭಾಗಿತ್ವದಲ್ಲಿ…

Read More

ಬೆಂಗಳೂರು: ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಸಚಿವರು ಮಾತನಾಡುತ್ತಿದ್ದರು. ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಈ ಕಾರ್ಯವನ್ನ ಸರ್ಕಾರವೇ ಮಾಡಬೇಕು ಹೊರತಾಗಿ ಬೇರೆ ಯಾರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವತ್ತ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನ ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನ ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು. ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು.…

Read More