Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್‌ ಕೋರ್ಸ್‌ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು ಕೊಲ್ಲುವ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಆದಾಗ ಅವರನ್ನು ಬ್ರದರ್‌ ಎಂದರು. ಪಾಕಿಸ್ತಾನ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಕಾಂಗ್ರೆಸ್‌ ಪರೋಕ್ಷವಾಗಿ ಉಗ್ರರಿಗೆ ಬೆಂಬಲ ನೀಡುತ್ತಿದೆ. 5 ಕೋಟಿ ರೂ. ಖರ್ಚು ಮಾಡಿ, ಜೈಲಿನಲ್ಲಿ ನೂರಾರು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದರೂ, ಅವುಗಳನ್ನು ಆಫ್‌ ಮಾಡಲಾಗಿದೆ. ಒಂದೇ ಬಾರಿಗೆ ಎಲ್ಲ ಕ್ಯಾಮರಾಗಳು ಆಫ್‌ ಆಗಿದ್ದು ಹೇಗೆ ಎಂದು ಪ್ರಶ್ನಿಸಿದರು. ಜೈಲಿನೊಳಗೆ ಬಾಂಬ್‌, ಮಾಂಸ, ಗಾಂಜಾ. ಮೊಬೈಲ್‌ ಹೋಗುವುದು ಗೊತ್ತಾಗುವುದಿಲ್ಲ. ಕೈದಿಗಳು ಟಿವಿಯಲ್ಲಿ ಐಟಂ ಸಾಂಗ್‌ ನೋಡುವುದು ತಿಳಿಯುವುದಿಲ್ಲ. ಗುಪ್ತಚರ ತಂಡಕ್ಕೆ ಮಾಹಿತಿ ಸಿಗುವುದಿಲ್ಲ. ಕೈದಿಗಳು ಮೊಬೈಲ್‌ ಬಳಸಿ ಬ್ಲಾಕ್‌ಮೇಲ್‌ ಮಾಡುತ್ತಿದ್ದು, ಅದರಿಂದ ಹಣ ಸಂಪಾದಿಸುತ್ತಿದ್ದಾರೆ. ಪೊಲೀಸರು ಇದಕ್ಕೆ…

Read More

ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುವುದರಿಂದ ಕೆಳಗಿನಂತೆ ರೈಲು ಸೇವೆಗಳು ನಿಯಂತ್ರಣ, ಮರುನಿಗದಿ ಮತ್ತು ಭಾಗಶಃ ರದ್ದುಗೊಳ್ಳಲ್ಲಿದೆ. 1. ರೈಲು ಸಂ. 16552 ಅಶೋಕಪುರಂ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಎಕ್ಸಪ್ರೆಸ್ 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಅಶೋಕಪುರಂ ನಿಂದ 40 ನಿಮಿಷ ತಡವಾಗಿ ಹೊರಡಲಿದೆ. 2. ರೈಲು ಸಂ. 16586 ಮುರ್ಡೇಶ್ವರ – ಕೆ.ಎಸ್.ಆರ್ ಬೆಂಗಳೂರು ಎಕ್ಸಪ್ರೆಸ್ 11, 13 ನವೆಂಬರ್, 2, 4, 9, 11, 30 ಡಿಸೆಂಬರ್ 2025, 1 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಮಾರ್ಗಮಧ್ಯೆ 90 ನಿಮಿಷ ನಿಯಂತ್ರಿಸಲ್ಪಡಲಿದೆ. 3. ರೈಲು ಸಂ. 06270 ಎಸ್ಎಂವಿಟಿ ಬೆಂಗಳೂರು – ಮೈಸೂರು ಪ್ಯಾಸೆಂಜರ್ 11, 13 ನವೆಂಬರ್, 2, 4, 9, 11,…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಭಾರತ ಸರ್ಕಾರ ಕಾನೂನು ಬದ್ದ ದತ್ತು ಯೋಜನೆಯನ್ನು ರೂಪಿಸಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಈ ಯೋಜನೆಯನ್ನು ಜಾರಿಗೊಳಿಸುತ್ತಾ ಬಂದಿದೆ. ಹಾಗಾದ್ರೆ ನೀವು ಮಕ್ಕಳನ್ನು ದತ್ತು ಪಡೆಯುವುದು ಹೇಗೆ? ಅದಕ್ಕೆ ಸಲ್ಲಿಸಬೇಕಾದಂತ ದಾಖಲೆಗಳು ಏನು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಮಕ್ಕಳನ್ನು ದತ್ತು ಪಡೆಯುವ ಭಾಗವಾಗಿ ನವೆಂಬರ್ ಮಾಸ ಪೂರ್ತಿ ದತ್ತು ಮಾಸಾಚರಣೆಯನ್ನು ಆಚರಿಸುವ ಮೂಲಕ ದತ್ತು ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ವಿಶೇಷ ಮಕ್ಕಳು ಸೇರಿದಂತೆ ಮಕ್ಕಳು ಹುಟ್ಟಿದಾಗ ಎಲ್ಲೆಂದರಲ್ಲಿ ಬಿಟ್ಟು ಹೋಗದೆ, ಬಿಸಾಡದೇ ಸರ್ಕಾರಿ ಆಸ್ಪತ್ರೆಗಳು, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ ಸಂಪರ್ಕಿಸಿ ಒಪ್ಪಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮಾಸಾಚರಣೆ ಮಾಡಲಾಗುತ್ತದೆ.  ಈ ವರ್ಷ ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ದತ್ತು ನೀಡುವ ಕುರಿತು ಅರಿವು ಮೂಡಿಸಲಾಗುತ್ತಿದೆ. ವಿಶೇಷ ಅಗತ್ಯವಿರುವ ಮಕ್ಕಳಿಗೆ ಕುಟುಂಬ ಆಧಾರಿತ ಆರೈಕೆ ನೀಡಿ, ಕಾಳಜಿಯಿಂದ ಭವಿಷ್ಯವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ.  ಪ್ರತಿಯೊಂದು ಮಗುವೂ…

Read More

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿರುವ ಲೋಪಗಳ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಸೋಮವಾರ ಘೋಷಿಸಿದ್ದಾರೆ. ಅಲ್ಲದೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ಕಾರಣ ಜೈಲಿನ ಸೂಪರಿಂಟೆಂಡೆಂಟ್ ಹಾಗೂ ಎಎಸ್ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳು ತಮ್ಮ ಬ್ಯಾರಕ್‌ಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ಖಾಸಗಿ ಟೆಲಿವಿಷನ್ ಸೆಟ್‌ಗಳನ್ನು ಪ್ರವೇಶಿಸುವಂತಹ ವಿಶೇಷ ಸವಲತ್ತುಗಳನ್ನು ಅನುಭವಿಸುತ್ತಿರುವುದನ್ನು ತೋರಿಸುವ ವೀಡಿಯೊಗಳು ಕಾಣಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕೈದಿಗಳು ಎಣ್ಣೆ ಪಾರ್ಟಿಯನ್ನು ಆಯೋಜಿಸುತ್ತಿರುವುದನ್ನು ಮತ್ತು ಬ್ಯಾರಕ್‌ಗಳಲ್ಲಿ ಪಾತ್ರೆಗಳನ್ನು ಬಡಿದುಕೊಂಡು ಕೈದಿಗಳು ನೃತ್ಯ ಮಾಡುತ್ತಿರುವುದನ್ನು ಮತ್ತು ತಿಂಡಿಗಳನ್ನು ಆನಂದಿಸುತ್ತಿರುವುದನ್ನು ತೋರಿಸುವ ಮತ್ತೊಂದು ವೀಡಿಯೊ ತುಣುಕುಗಳು ವೈರಲ್ ಆಗಿದ್ದವು. ಈ ಸಮಿತಿಯಲ್ಲಿ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮತ್ತು ಸಿ.ಬಿ. ರಿಷ್ಯಂತ್ ಸದಸ್ಯರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ…

Read More

ಬೆಂಗಳೂರು: ನಗರದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಪತಿಯೊಬ್ಬ ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಗಿರಿನಗರದಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದಲ್ಲಿ ಗಗನ್ ರಾವ್ ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯಾಗಿದ್ದಾರೆ. ಗಗನ್ ರಾವ್ ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 8 ತಿಂಗಳ ಹಿಂದಷ್ಟೇ ಗಗನ್ ರಾವ್ ಹಾಗೂ ಮೇಘನ್ ಜಾಧವ್ ವಿವಾಹವಾಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿದ್ದಂತ ಸಂಸಾರವು, ಪತಿ-ಪತ್ನಿ ನಡುವೆ ಜಗಳಕ್ಕೆ ಆನಂತ್ರ ಕಾರಣವಾಗಿತ್ತು. ಪತಿ ಗಗನ್ ರಾವ್ ಗೆ ಪತ್ನಿ ಮೇಘನ ಜಾಧವ್ ಕಿರುಕುಳ ನೀಡುತ್ತಿದ್ದರಂತೆ. ಈ ಹಿನ್ನಲೆಯಲ್ಲಿ ಪತ್ನಿ ಮೇಘನ ಜಾಧವ್ ಕಿರುಕುಳಕ್ಕೆ ಬೇಸತ್ತು ಪತಿ ಗಗನ್ ರಾವ್ ತಮ್ಮ ಗಿರಿನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಗಿರಿನಗರ ಠಾಣೆಯ ಪೊಲೀಸರು, ಮೃತನ ತಂಗಿಯಿಂದ ದೂರು ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/adoption-under-law-is-a-wealth-of-life-long-happiness-child-welfare-committee-chairman-tajuddin-khan/ https://kannadanewsnow.com/kannada/big-news-good-news-for-caste-census-surveyors-and-supervisors-honorary-allowance-released-by-the-state-government/

Read More

ಶಿವಮೊಗ್ಗ: ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು ಎಂಬುದಾಗಿ ಶಿವಮೊಗ್ಗ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದಂತ ತಾಜುದ್ದೀನ್ ಖಾನ್ ಅವರು ತಿಳಿಸಿದ್ದಾರೆ. ಘಟನೆ 1. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ಘಟನೆ ಕೆಲವು ಗಂಟೆಗಳ ಮುಂದೆ ಜನಿಸಿದ ನವಜಾತ ಹೆಣ್ಣು ಶಿಶುವಿಗೆ ರಸ್ತೆಯ ಬದಿಯಲ್ಲಿ ಗೋಣಿಚೀಲದಲ್ಲಿ ಸುತ್ತಿ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಬಿಸಾಡಿದ್ದರು ನಂತರ ಮಗುವಿನ ಅಳುವ ಶಬ್ದವನ್ನು ಕೇಳಿದ ಸಾರ್ವಜನಿಕರು ಚೀಲ ಬಿಚ್ಚಿ ನೋಡಿದಾಗ ಆಗ ತಾನೆ ಜನಿಸಿದ ಇರುವೆ ಮುತ್ತಿಕೊಂಡ ಮಾಂಸದ ಮುದ್ದೆ. ಮಾಹಿತಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದಾಗ ಮಗುವಿಗೆ ಚಿಕಿತ್ಸೆ ಕೊಡಿಸಲಾಯಿತು ಅದೃಷ್ಟವಶಾತ್ ಮಗು ಬದುಕುಳಿಯಿತು, ಜೈವಿಕ ಪೋಷಕರು ಪತ್ತೆಯಾಗದೆ ಇದ್ದಾಗ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಕಾನೂನಿನ ಪ್ರಕಾರ ಮಗುವನ್ನು ದತ್ತು ಪ್ರಕ್ರಿಯೆಗೆ ಒಳಪಡಿಸಲಾಯಿತು. ಘಟನೆ 2. ಮದುವೆಯಾಗಿ 16 ವರ್ಷಗಳಾಗಿದ್ದು ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ದಂಪತಿಗಳು ದೂರದ ಪರಿಚಯಸ್ತರಿಗೆ ಹುಟ್ಟಿದ ಮಗುವನ್ನು…

Read More

ಶಿವಮೊಗ್ಗ:  ಒಂದು ಮಗುವನ್ನು ದತ್ತು ತೆಗೆದುಕೊಂಡಲ್ಲಿ ಜಗತ್ತು ಬದಲಾಗುವುದಿಲ್ಲ. ಆದರೆ ಆ ಮಗುವಿನ ಜಗತ್ತು ಬದಲಾಗುತ್ತದೆ… ಪ್ರತಿಯೊಂದು ಮಗುವೂ ಕುಟುಂಬ ಹೊಂದಲು ಅರ್ಹ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಕಾನೂನು ಬದ್ದ ದತ್ತು ಯೋಜನೆಯನ್ನು ರೂಪಿಸಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಈ ಯೋಜನೆಯನ್ನು ಜಾರಿಗೊಳಿಸುತ್ತಾ ಬಂದಿದೆ.  ಈ ಯೋಜನೆಯ ಭಾಗವಾಗಿ ನವೆಂಬರ್ ಮಾಸ ಪೂರ್ತಿ ದತ್ತು ಮಾಸಾಚರಣೆಯನ್ನು ಆಚರಿಸುವ ಮೂಲಕ ದತ್ತು ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ವಿಶೇಷ ಮಕ್ಕಳು ಸೇರಿದಂತೆ ಮಕ್ಕಳು ಹುಟ್ಟಿದಾಗ ಎಲ್ಲೆಂದರಲ್ಲಿ ಬಿಟ್ಟು ಹೋಗದೆ, ಬಿಸಾಡದೇ ಸರ್ಕಾರಿ ಆಸ್ಪತ್ರೆಗಳು, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ ಸಂಪರ್ಕಿಸಿ ಒಪ್ಪಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮಾಸಾಚರಣೆ ಮಾಡಲಾಗುತ್ತದೆ.  ಈ ವರ್ಷ ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ದತ್ತು ನೀಡುವ ಕುರಿತು ಅರಿವು ಮೂಡಿಸಲಾಗುತ್ತಿದೆ. ವಿಶೇಷ ಅಗತ್ಯವಿರುವ ಮಕ್ಕಳಿಗೆ ಕುಟುಂಬ ಆಧಾರಿತ ಆರೈಕೆ ನೀಡಿ, ಕಾಳಜಿಯಿಂದ ಭವಿಷ್ಯವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ.  ಪ್ರತಿಯೊಂದು ಮಗುವೂ ಒಂದು ಕುಟುಂಬ…

Read More

ಬೆಂಗಳೂರು: 2025-26ನೇ ಸಾಲಿನಲ್ಲಿ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕ ಪಾವತಿಸುವಂತೆ ಕಾಲೇಜುಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಸೂಚಿಸಿದೆ. ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಅನುಮೋದಿತ ಪಟ್ಟಿ ಹಾಗೂ ವಿಶ್ವವಿದ್ಯಾಲಯದ ಶುಲ್ಕವನ್ನು ಪಾವತಿಸಿದ ರಶೀದಿಯನ್ನು ವಿಟಿಯುಗೆ ಸಲ್ಲಿಸಲು ಸೂಚಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕವನ್ನು ಕೆಇಎ ಆಯಾ ಕಾಲೇಜುಗಳಿಗೆ ಪಾವತಿಸಿರುತ್ತದೆ. ಈ ಮೊತ್ತವನ್ನು ಕಾಲೇಜುಗಳು ವಿಟಿಯು ಖಾತೆಗೆ ಪಾವತಿಸಬೇಕೆಂದು ಕೋರಿದೆ. ಕೆಇಎ ಮತ್ತು ಮ್ಯಾನೇಜ್‌ಮೆಂಟ್ ಮೂಲಕ ಪ್ರವೇಶ ಪಡೆದ ವಿದ್ಯಾರ್ಥಿಗಳ ಮೊತ್ತವನ್ನು ಪಾವತಿಸಲು ಸೂಚಿಸಿದೆ. ವಿಟಿಯು ವಿತ್ತಾಧಿಕಾರಿ ಖಾತೆಗೆ ಆಡಳಿತ ವಿಭಾಗಕ್ಕೆ ಸಂಬಂಧಿತ ಶುಲ್ಕವನ್ನು ಮಾತ್ರ ಪಾವತಿಸಲು ಸೂಚಿಸಿದ್ದು, ಪರೀಕ್ಷಾ ವಿಭಾಗದ ಶುಲ್ಕವನ್ನು ಪಾವತಿಸಲು ಪರೀಕ್ಷಾ ವಿಭಾಗವನ್ನು ಸಂಪರ್ಕಿಸಬೇಕೆಂದು ಕೋರಿದೆ. ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸದೇ ಇದ್ದ ಪಕ್ಷದಲ್ಲಿ ಅಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ಸ್ವೀಕರಿಸಲಾಗುವುದಿಲ್ಲವೆಂದು ವಿಟಿಯು ಸ್ಪಷ್ಟಪಡಿಸಿದೆ. ಹೆಚ್ಚಿನ ಮಾಹಿತಿಗೆ ವಿಟಿಯು ವೆಬ್‌ಸೈಟ್ https://vtu.ac.in/ ನೋಡಬಹುದು. ವಾಸ್ತುಶಿಲ್ಪ ತರಗತಿಗಳು ಜ.1ರಿಂದ…

Read More

ಚೆನ್ನೈ: ತಮ್ಮ ವಿರುದ್ಧ ಬೆಂಗಳೂರಿನ ಫ್ಯಾಶನ್ ಡಿಸೈನರ್ ಪಾರ್ವತಿ ಮಾಡುತ್ತಿರುವಂತ ಲೈಂಗಿಕ ಆರೋಪ ಸುಳ್ಳು. ತಾನು ಅವರ ವಿರುದ್ಧ ನೀಡಿದಂತ ವಂಚನೆ ಕೇಸ್ ಮುಚ್ಚಿ ಹಾಕೋದಕ್ಕೆ ಈ ರೀತಿಯಗಾ ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದಾಗಿ ಬಿಗ್ ಬಾಸ್ ತಮಿಳು ಖ್ಯಾತಿಯ ಇವಿಪಿ ಫಿಲ್ಮ್ ಮಾಲೀಕ ಸಂತೋಷ್ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ತಮ್ಮ ಮೇಲೆ ಬೆಂಗಳೂರಿನ ಇನ್ಸ್ಟಾಗ್ರಾಮ್ ಖ್ಯಾತಿಯ ಫ್ಯಾಶನ್ ಡಿಸೈನರ್​ ಮಹಿಳೆ ಪಾರ್ವತಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವು, ತಾವು ಈ ಹಿಂದೆ ದಾಖಲಿಸಿದ್ದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಿಂದ ಪಾರಾಗಲು ರೂಪಿಸಿದ ಸಂಚು ಎಂದು ಆರೋಪಿಸಿದ್ದಾರೆ. ಪಾರ್ವತಿ ಅವರು ಬೆಂಗಳೂರಿನಲ್ಲಿ ದೂರು ನೀಡುವುದಕ್ಕೂ 8 ದಿನಗಳ ಮೊದಲೇ, ಅಂದರೆ ಸೆಪ್ಟೆಂಬರ್ 17, 2025ರಂದೇ ತಾವು ಚೆನ್ನೈನಲ್ಲಿ ವಂಚನೆ ದೂರು ದಾಖಲಿಸಿದ್ದಾಗಿ ಸಂತೋಷ್ ರೆಡ್ಡಿ ಅಧಿಕೃತ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಪಾರ್ವತಿ ವಿರುದ್ಧ ಮೊದಲೇ ದೂರು ದಾಖಲಿಸಿದ್ದ ಸಂತೋಷ್ ರೆಡ್ಡಿ ನಾನು ಪಾರ್ವತಿ ಮತ್ತು…

Read More

ಚಿತ್ರದುರ್ಗ: ಭಾನುವಾರದಂದು ನಡೆದಂತ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಗೆ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ( ಅಪ್ಪು) ಭರ್ಜರಿ ಗೆಲುವು ಸಾಧಿಸಿ, ಆಯ್ಕೆಯಾಗಿದ್ದಾರೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಣುಖ ಮಾಹಿತಿ ನೀಡಿದ್ದು, ದಿನಾಂಕ 09-11-2025ರಂದು ನಡೆದ 2025-2028ರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆಯಾಗಿದ್ದಾರೆ ಎಂಬುದಾಗಿ ಘೋಷಿಸಿದ್ದಾರೆ. ವೀರೇಶ್ ವಿ ಚಳ್ಳಕೆರೆ ಬಗ್ಗೆ ಮಾಹಿತಿ ಅಂದಹಾಗೇ ವೀರೇಶ್ ವಿ ಚಳ್ಳಕೆರೆ( ಅಪ್ಪು) ಅವರು ಮಾಧ್ಯಮ ವೃತ್ತಿ ಬದುಕಿನ 15 ವರ್ಷದ ಹಾದಿಯಲ್ಲಿ 3 ವರ್ಷಗಳ ಕಾಲ‌ ಬೆಂಗಳೂರಿನಲ್ಲಿ ಜನಶ್ರೀ ಮತ್ತು ಸುವರ್ಣ ನ್ಯೂಸ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಕಳೆದ 12 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಮಯ ನ್ಯೂಸ್, ಟಿವಿ5 ಕನ್ನಡ, ದಿಗ್ವಿಜಯ, ಈಗ R. ಕನ್ನಡ ಸುದ್ದಿ ವಾಹಿನಿ ಜಿಲ್ಲಾ ವರದಿಗಾರರಾಗಿ ಕೆಲಸ…

Read More