Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಜುಲೈ 1ರ ಇಂದಿನಿಂದ ಹಲವು ಹಣಕಾಸು ಸೇವೆಗಳಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ. ಹೊಸ ಪಾನ್ ಕಾರ್ಡ್ ಪಡೆಯಲು ಆಧಾರ್ ದೃಢೀಕರಣದಿಂದ ಹಿಡಿದು ಕ್ರೆಡಿಟ್ ಕಾರ್ಡ್ ಸೇವಾ ಶುಲ್ಕದವರೆಗೆ ಹಲವು ಬದಲಾವಣೆಗಳು ಆಗಲಿವೆ. ಹೀಗಾಗಿ ಜುಲೈ.1ರ ಇಂದಿನ ಎಲ್ಲೆಲ್ಲೂ ಆಧಾರ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿ ಬಳಕೆಯಾಗಲಿದೆ. ಅಲ್ಲದೇ ಹಲವು ನಿಯಮಗಳಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಆ ಬಗ್ಗೆ ಮುಂದೆ ಓದಿ. ಪಾನ್ಗೆ ಆಧಾರ್ ಕಡ್ಡಾಯ ಹೊಸ ಪಾನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಲು ಆಧಾರ್ ಕಡ್ಡಾಯ. ಈವರೆಗೆ ಜನ್ಮದಿನಾಂಕ ದೃಢೀಕರಣಕ್ಕೆ ಜನನ ಪ್ರಮಾಣಪತ್ರ ಅಥವಾ ಜನ್ಮದಿನಾಂಕ ನಮೂದಾಗಿರುವ ಯಾವುದೇ ಗುರುತಿನ ಚೀಟಿ ನೀಡಿದ್ದರೆ ಸಾಕಿತ್ತು . ಈಗಾಗಲೇ ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಜೋಡಣೆ ಪ್ರಕ್ರಿಯೆ ಮುಗಿಸದಿದ್ದರೆ, ಆಧಾರ್-ಪಾನ್ ಜೋಡಣೆಗೆ ಡಿ.31ರ ಗಡುವು ನಿಗದಿಯಾಗಿದೆ. ಆಧಾರ್ ನಂಬರ್ ಕೊಟ್ರೆ ಮಾತ್ರ ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಸಾಧ್ಯ ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕಿಂಗ್ಗೆ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲಾಗಿದೆ. ಐಆರ್ಸಿಟಿಸಿ ವೆಬ್ ಸೈಟ್…
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವವರ ಸಂಖ್ಯೆ 22ಕ್ಕೆ ಇಂದು ಏರಿಕೆಯಾಗಿದೆ. ಈ ಘಟನೆಗಳ ಸಂಬಂಧ 10 ದಿನಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಜ್ಞರ ಸಮಿತಿಗರ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸುಮಾರು 18 ಜನರು ಹೃದಯಘಾತಕ್ಕೆ ಒಳಗಾಗಿ ಸಾವನಪ್ಪಿದ್ದರರೆ ಎಂಬುದಾಗಿ ಸಮೂಹ ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಯಲ್ಲಿ ಪ್ರಕಟಣೆಗೊಂಡಿರುತ್ತದೆ ಎಂದಿದ್ದಾರೆ. ಸದರಿ ವಿಷಯದ ಬಗ್ಗೆ ಈಗಾಗಲೇ ಸರ್ಕಾರದಿಂದ ಸುತ್ತೋಲೆ ಸಂಖ್ಯೆ: ಆಕುಕ 66 ಸಿಜಿಎಂ 2025, ದಿ:05.05.2025ರ ಅನ್ವಯ, ನಿರ್ದೇಶಕರು, ಶ್ರೀ ಜಯದೇವ ಹೃದ್ರೋಗ ಸಂಸ್ಥೆ ಬೆಂಗಳೂರು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು ಸದರಿ ವಿಷಯವನ್ನು ಸಹ Hassan Institute of Medical Science ಇವರ ಸಹಯೋಗದೊಂದಿಗೆ ಪರಿಶೀಲಿಸಿ, 10 ದಿನಗಳೊಳಗಾಗಿ ವರದಿಯನ್ನು ನೀಡಲು ಸೂಚಿಸಿದ್ದಾರೆ.
ಬೆಂಗಳೂರು: ಇ-ಖಾತಾ ಪಡೆಯೋದು ಇನ್ನಷ್ಟು ಸರಳೀಕರಣಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆಸ್ತಿ ಮಾಲೀಕರು ಆನ್ ಲೈನ್ ಮೂಲಕ ಇ-ಖಾತಾಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆ ಬಳಿಕ ನಿಮ್ಮ ಅಂತಿಮ ಇ-ಖಾತಾ ಮನೆಯ ಬಾಗಿಲಿಗೆ ಬರುವಂತ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರ ಆಸ್ತಿಗಳಿಗೆ ರಕ್ಷಣೆ ಹಾಗೂ ದಾಖಲೆಗಳ ಸುರಕ್ಷತೆಯ ಗ್ಯಾರಂಟಿಗಾಗಿ ʼಮನೆ ಬಾಗಿಲಿಗೆ ಇ – ಖಾತಾʼ ವಿತರಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 25 ಲಕ್ಷ ಆಸ್ತಿದಾರರಿಗೆ ಈ ಸೌಲಭ್ಯ ಸಿಗಲಿದ್ದು, ಈಗಾಗಲೇ 5.51 ಲಕ್ಷ ಆಸ್ತಿದಾರರಿಗೆ ಅಂತಿಮ ಇ-ಖಾತಾ ವಿತರಿಸಲಾಗಿದೆ. ಉಳಿದವರಿಗೂ ಅವರ ಮನೆಗಳಿಗೆ ಕರಡು ಇ – ಖಾತಾವನ್ನು 100 ದಿನಗಳಲ್ಲಿ ತಲುಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. https://twitter.com/KarnatakaVarthe/status/1939642391667040432 ಬೆಂಗಳೂರಿನ ಆಸ್ತಿ ಮಾಲೀಕರು ಈಗ ಪುರಸಭೆಯ ಕಚೇರಿಗೆ ಕಾಲಿಡದೆ ತಮ್ಮ ಅಂತಿಮ ಇ-ಖಾತಾವನ್ನು ಪಡೆಯಬಹುದು. ಈ ಸುವ್ಯವಸ್ಥಿತ ಆನ್ಲೈನ್ ಪ್ರಕ್ರಿಯೆಯು ನಿಮ್ಮ ಮನೆಯಿಂದಲೇ ನಿಮ್ಮ ಅಂತಿಮ ಇ-ಖಾತಾ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಲು ಮತ್ತು ಡೌನ್ಲೋಡ್ ಮಾಡಲು ಸುಲಭಗೊಳಿಸುತ್ತದೆ.…
ಬೆಂಗಳೂರು: ರಾಜ್ಯದ ಪತ್ರಕರ್ತರಿಗೂ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಇಂತಹ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರು ಮಾಹಿತಿ ಹಂಚಿಕೊಂಡಿದ್ದು, ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1939658980105887853 ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿತ್ತಿರುವಂತ ಮಾಧ್ಯಮ ಸಂಜೀವಿನಿ ಯೋಜನೆಯಿಂದಾಗಿ ಪತ್ರಕರ್ತರಿಗೆ 5 ಲಕ್ಷದವರೆಗೆ ಉಚಿತವಾಗಿ ಆರೋಗ್ಯ ಸೇವೆಯು ದೊರೆಯುವಂತೆ ಆಗಲಿದೆ. ಇದಲ್ಲದೇ ಗ್ರಾಮೀಣ ಪತ್ರಕರ್ತರಿಗೂ ಜಿಲ್ಲೆಯಾಧ್ಯಂತ ಸಂಚರಿಸೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಪಾಸ್ ವಿತರಣೆಗೂ ಚಾಲನೆ ನೀಡಲಿದ್ದಾರೆ. https://kannadanewsnow.com/kannada/attention-sslc-students-you-are-allowed-to-travel-free-of-charge-on-the-bmtc-bus-for-exam-3/
ಪುನರಾವರ್ತಿತ ಭುಜದ ನೋವು ವ್ಯಕ್ತಿಯ ಜೀವನದ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಗಂಭೀರ ಸ್ಥಿತಿಯಾಗಿದೆ. ಚಿಕಿತ್ಸೆ ನೀಡದಿದ್ದರೆ ಅಥವಾ ನಿರ್ಲಕ್ಷಿಸಿದರೆ, ಇದು ದೀರ್ಘಕಾಲದ ನೋವು, ಸೀಮಿತ ಚಲನಶೀಲತೆ ಮತ್ತು ಸುತ್ತಮುತ್ತಲಿನ ಅಂಗಾಂಶಗಳು ಮತ್ತು ಮೂಳೆಗಳಿಗೆ ಶಾಶ್ವತ ಹಾನಿ ಸೇರಿದಂತೆ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು. ಈ ತೊಡಕುಗಳನ್ನು ತಡೆಗಟ್ಟಲು ಮತ್ತು ಸರಿಯಾದ ಗುಣಪಡಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಅತ್ಯಗತ್ಯ. ಪುನರಾವರ್ತಿತ ಭುಜದ ನೋವನ್ನು ಅರ್ಥಮಾಡಿಕೊಳ್ಳುವುದು ಭುಜದ ಕೀಲು ಪದೇ ಪದೇ ಸ್ಥಳಾಂತರಗೊಂಡಾಗ ಪುನರಾವರ್ತಿತ ಭುಜದ ನೋವು ಸಂಭವಿಸುತ್ತದೆ, ಇದರಿಂದಾಗಿ ಹ್ಯೂಮರಸ್ (ಮೇಲಿನ ತೋಳಿನ ಮೂಳೆ) ಗ್ಲೆನಾಯ್ಡ್ (ಭುಜದ ಸಾಕೆಟ್) ನಿಂದ ಹೊರಬರುತ್ತದೆ. ಇದು ಆಘಾತಕಾರಿ ಗಾಯಗಳು, ಕ್ರೀಡೆಗಳಿಗೆ ಸಂಬಂಧಿಸಿದ ಅಪಘಾತಗಳು ಅಥವಾ ಅಸ್ಥಿರಜ್ಜು ಸಡಿಲತೆ ಅಥವಾ ಮೂಳೆ ವಿರೂಪಗಳಂತಹ ಆಧಾರವಾಗಿರುವ ಪರಿಸ್ಥಿತಿಗಳು ಸೇರಿದಂತೆ ವಿವಿಧ ಅಂಶಗಳಿಂದಾಗಿರಬಹುದು. ಚಿಕಿತ್ಸೆ ನೀಡದಿದ್ದರೆ, ಪುನರಾವರ್ತಿತ ಸ್ಥಳಾಂತರಗಳು ಸುತ್ತಮುತ್ತಲಿನ ಅಂಗಾಂಶಗಳನ್ನು ಹಿಗ್ಗಿಸಲು ಅಥವಾ ಹರಿದು ಹಾಕಲು ಕಾರಣವಾಗಬಹುದು, ಇದು ದೀರ್ಘಕಾಲದ ಅಸ್ಥಿರತೆಗೆ ಮತ್ತು ಮತ್ತಷ್ಟು…
ನಾವು ವಯಸ್ಸಾದಂತೆ, ನಮ್ಮ ದೇಹ, ಮೊಣಕಾಲುಗಳು ಸೇರಿದಂತೆ ನಮ್ಮ ಕೀಲುಗಳ ಮೇಲೆ ಪರಿಣಾಮ ಬೀರುವ ಹಲವಾರು ಬದಲಾವಣೆಗಳಿಗೆ ಒಳಗಾಗುತ್ತೇವೆ, ಈ ನೋವಿಗೆ ಕಾರಣವೇನು ಎಂಬುದರ ಕುರಿತು ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ.ಮಂಜುನಾಥ್ ಕೋಡಿಹಳ್ಳಿ ವಿವರಿಸಿದ್ದಾರೆ. ಬೆಳಿಗ್ಗೆ ಮೊಣಕಾಲು ನೋವು ಠೀವಿ ಮತ್ತು ನೋವಿನಿಂದ ತೀಕ್ಷ್ಣವಾದ ನೋವು ವಿಭಿನ್ನ ರೀತಿಯಲ್ಲಿ ಪ್ರಕಟವಾಗಬಹುದು. ಕೆಲವರಿಗೆ, ಹಾಸಿಗೆಯಿಂದ ಹೊರಬಂದ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ, ಇತರರಿಗೆ, ಇದು ದಿನವಿಡೀ ಮುಂದುವರಿಯುತ್ತದೆ. ವಯಸ್ಸಿಗೆ ಸಂಬಂಧಿಸಿದ ಉಡುಗೆ ಮತ್ತು ಕೀಲುಗಳ ಮೇಲೆ ಕಣ್ಣೀರು ಬೆಳಿಗ್ಗೆ ಮೊಣಕಾಲು ನೋವಿಗೆ ಕಾರಣವಾಗಬಹುದು, ವಿಶೇಷವಾಗಿ ಅಸ್ಥಿಸಂಧಿವಾತದ ರೂಪದಲ್ಲಿ. ಕಾರ್ಟಿಲೆಜ್ ಹದಗೆಡುತ್ತಿದ್ದಂತೆ, ಮೂಳೆಗಳು ಪರಸ್ಪರ ವಿರುದ್ಧವಾಗಿ ಉಜ್ಜುತ್ತವೆ, ಇದು ನೋವು ಮತ್ತು ಠೀವಿಗಳಿಗೆ ಕಾರಣವಾಗುತ್ತದೆ. ಆದಾಗ್ಯೂ, ಬೆಳಿಗ್ಗೆ ಮೊಣಕಾಲು ನೋವು ಅತಿಯಾದ ಬಳಕೆ ಅಥವಾ ಪುನರಾವರ್ತಿತ ಒತ್ತಡದ ಗಾಯಗಳಂತಹ ಇತರ ಅಂಶಗಳಿಂದ ಉಂಟಾಗುತ್ತದೆ. ಹೆಚ್ಚಿನ ಪ್ರಭಾವದ ಚಟುವಟಿಕೆಗಳಲ್ಲಿ ತೊಡಗಿರುವ ಅಥವಾ ಹಸ್ತಚಾಲಿತ ಶ್ರಮವನ್ನು ಒಳಗೊಂಡಿರುವ ಉದ್ಯೋಗಗಳನ್ನು ಹೊಂದಿರುವ ವಯಸ್ಸಾದ ವಯಸ್ಕರು…
ಕೆಎನ್ಎನ್ ಡಿಜಿಟಲ್ ಡೆಸ್ಕ್: ತೋಳು ಅಥವಾ ಮೊಣಕೈ ನೋವು ಗಂಭೀರ ಹೃದಯ ಸಮಸ್ಯೆಯ ಸಂಕೇತವಾಗಿರಬಹುದು. ತಕ್ಷಣವೇ ಆರೋಗ್ಯ ತಪಾಸಣೆಗೆ ಒಳಗಾಗಿ ಎಂದು ಹೃದ್ರೋಗ ತಜ್ಞರು ಎಚ್ಚರಿಸಿದ್ದಾರೆ. ಈ ಬಗ್ಗೆ ಅಮೆರಿಕ ಮೂಲದ ಡಾ.ಎಮ್ಯಾನುಯೆಲ್ ಇಸಾಂಗ್ ಮಾಹಿತಿ ಹಂಚಿಕೊಂಡಿದ್ದು, ಇದು ವಿಶೇಷವಾಗಿ ಮಹಿಳೆಯರಲ್ಲಿ ಮುಂಬರುವ ಹೃದಯಾಘಾತದ ಲಕ್ಷಣವಾಗಿರಬಹುದು. ಎಲ್ಲಾ ಎದೆ ನೋವುಗಳು ಒಂದೇ ರೀತಿ ಕಾಣಿಸಿಕೊಳ್ಳುವುದಿಲ್ಲ ಎಂದು ನಾನು ಭಾವಿಸುವ ಒಂದು ವಿಷಯವೆಂದರೆ, ವಿಶೇಷವಾಗಿ ಮಹಿಳೆಯರಿಗೆ, ಅನೇಕ ಬಾರಿ, ಅವುಗಳನ್ನು ತಪ್ಪಾಗಿ ಪ್ರತಿನಿಧಿಸಲಾಗುತ್ತದೆ ಅಥವಾ ಎದೆಯ ಅಸ್ವಸ್ಥತೆಗೆ ಬಂದಾಗ ಕಡಿಮೆ ಪ್ರತಿನಿಧಿಸಲಾಗುತ್ತದೆ ಎಂದು ತಿಳಿಸಿದರು. ವಾಸ್ತವವೆಂದರೆ ಅವರು ನಿಜವಾಗಿಯೂ ಹೃದಯಾಘಾತವನ್ನು ಹೊಂದಿರುವಾಗ ಅಥವಾ ಅವರು ನಿಜವಾಗಿಯೂ ಅಡಚಣೆಯೊಂದಿಗೆ ಗಮನಾರ್ಹ ಸಮಸ್ಯೆಗಳನ್ನು ಹೊಂದಿರುವಾಗ ಅವರು ವಿಭಿನ್ನ ಲಕ್ಷಣಗಳನ್ನು ಹೊಂದಿರಬಹುದು. ಡಾ. ಇಸಾಂಗ್ ಪ್ರಕಾರ, ಹೆಚ್ಚಿನ ಜನರು ಹೃದಯಾಘಾತಕ್ಕೆ ಕಾರಣವಾಗುವ ಹೃದಯಾಘಾತದ ಬಗ್ಗೆ ಸಾಂಪ್ರದಾಯಿಕ ನಂಬಿಕೆಗಳನ್ನು ಹೊಂದಿದ್ದಾರೆ. ಸಾಮಾನ್ಯವಾಗಿ ಎದೆ ಅಥವಾ ಭುಜದಲ್ಲಿ ನೋವು ಕೂಡ ಹೃದಯ ಸಂಬಂಧಿ ಸಮಸ್ಯೆಯ ಲಕ್ಷಣವಾಗಿದೆ. ಇದು ಅದನ್ನು ಹೆಚ್ಚು…
ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ ಸಜ್ಜಿಕೆಯ ಮೂಲಕ ನಿರ್ದೇಶಕ ಕಟ್ಟಿಕೊಡುವ ವಾಸ್ತವಿಕ ಜಗತ್ತು. ಈ ನಿಟ್ಟಿನಲ್ಲಿ ಪ್ರೇಕ್ಷಕರ ಅಭಿರುಚಿ ಬೆಳೆಸುವ ಮತ್ತು ಕಲಾತ್ಮಕತೆಯನ್ನು ಅನಾವರಣಗೊಳಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಇಂದಿನ ಅಗತ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿ ಪತ್ರಿಕೋದ್ಯಮ ವಿಭಾಗ ಆಯೋಜಿಸಿರುವ 16ನೇ ವರ್ಷದ “ಸಹ್ಯಾದ್ರಿ ಸಿನಿಮೋತ್ಸವ”ವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಜಗತ್ತಿನ ಅತ್ಯುತ್ತಮ ಚಲನಚಿತ್ರಗಳು ಪೂರ್ವ ಏಷ್ಯಾದ ಜಪಾನ್, ಹಾಂಕಾಂಗ್, ಕೊರಿಯಾ ದೇಶಗಳಲ್ಲಿ ನಿರ್ಮಾಣವಾಗುತ್ತಿವೆ. ಇನ್ನು ಭಾರತೀಯ ಸಿನಿಮಾರಂಗದಲ್ಲಿ ಮಲಯಾಳಂ, ಬೆಂಗಾಲಿ ಮತ್ತು ಸ್ವಲ್ಪಮಟ್ಟಿಗೆ ತಮಿಳು ಚಿತ್ರರಂಗ ಎಲ್ಲಾ ಆಯಾಮಗಳಲ್ಲಿಯೂ ಉತ್ತಮ ಎಂದು ಪರಿಗಣಿಸಬಹುದಾದ ಗುಣಮಟ್ಟದ ಚಲನಚಿತ್ರಗಳನ್ನು ನಿರ್ಮಿಸುತ್ತಿವೆ. ಆದರೆ ಕನ್ನಡ ಚಿತ್ರರಂಗ ದಿನೇ ದಿನೇ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ವಿಭಾಗದ ನಿವೃತ್ತ ಪ್ರಾಧ್ಯಾಪಕ…
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವು ಕುರುತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹಠಾತ್ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇತ್ತಿಚೆಗೆ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರ ಬಗ್ಗೆ ಸಮಗ್ರ ಸಂಶೋಧನೆಯ ಅಗತ್ಯತೆ ಇದೆ. ಬದಲಾದ ಜೀವನ ಶೈಲಿ, ಆಹಾರ, ಅಸಾಂಕ್ರಾಮಿಕ ರೋಗಗಳು ಹೃದಯಾಘಾತಗಳು ಹೆಚ್ಚಾಗಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಹಾಸನದ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ತಂಡದಿಂದ ಅಧ್ಯಯನ ನಡೆಸಿ 10 ದಿನಗಳ ಒಳಗಾಗಿ ವರದಿ ಪಡೆಯಲು ಸೂಚಿಸಲಾಗಿದೆ ಎಂದಿದ್ದಾರೆ. https://kannadanewsnow.com/kannada/in-hassan-the-timing-of-auto-movement-leads-to-a-persons-death-due-to-a-heart-attack-today-alone-four-have-fallen-victim/ https://kannadanewsnow.com/kannada/death-due-to-heart-attack-in-hassan-district-state-government-orders-report-to-be-submitted-within-10-days/
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ನಿನ್ನೆ ಮತ್ತು ಇಂದು 2 ದಿನಗಳ ಕಾಲ ಏರ್ಪಡಿಸಿದ್ದ “ಬೃಹತ್ ಇ-ಖಾತಾ ಮೇಳ” ಕಾರ್ಯಕ್ರಮದಲ್ಲಿ ಸುಮಾರು 4,300 ಜನರು ಪಾಲ್ಗೊಂಡಿದ್ದರು. ಬ್ಯಾಟರಾಯಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 7 ವಾರ್ಡ್ ಗಳ ಜೊತೆಗೆ ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಇತರೆ ವಲಯಗಳಿಂದಲೂ ಖಾತಾ ಮೇಳಕ್ಕೆ ಆಗಮಿಸಿ ಇ-ಖಾತಾಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಎರಡು ದಿನ ನಡೆದ ಇ-ಖಾತಾ ಮೇಳದಲ್ಲಿ ಒಟ್ಟು 4,300 ಜನರಿಗೆ ಟೋಕನ್ ನೀಲಡಾಗಿದೆ. ಈ ಪೈಕಿ 1,694 ಅರ್ಜಿಗಳನ್ನು ಪ್ರಕ್ರಿಯೆಗೊಳಿಸಲಾಗಿದ್ದು, 1,259 ಅರ್ಜಿಗಳನ್ನು ಅನುಮೋದಿಸಿ ಸ್ಥಳದಲ್ಲಿಯೇ ಅಂತಿಮ ಇ-ಖಾತಾ ನೀಡಲಾಗಿದೆ. ಬೃಹತ್ ಇ-ಖಾತಾ ಮೇಳದಲ್ಲಿ ಬಂದಿರುವಂತಹ 1,694 ಅರ್ಜಿಗಳ ಪೈಕಿ 435 ಅರ್ಜಿಗಳು ಬೇರೆ ವಲಯಗಳಿಂದ ಬಂದಿರುವ ಅರ್ಜಿಗಳಾಗಿವೆ. ಸದರಿ ಅರ್ಜಿಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಂಬಂಧಪಟ್ಟ ಆಯಾ ವಲಗಳಿಗೆ ವರ್ಗಾಯಿಸಲಾಗಿರುತ್ತದೆ. ಯಲಹಂಕ ವಲಯ ವ್ಯಾಪ್ತಿಯಲ್ಲಿ ನಾಗರಿಕರು,…













