Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧೆಡೆ ಅಕ್ರಮ ಗಣಿಗಾರಿಕೆ ಕುರಿತಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಲೋಕಾಯುಕ್ತ ಎಸ್ಐಟಿ ನೇಮಿಸಿತ್ತು. ಈ ಎಸ್ಐಟಿ ಅವಧಿಯನ್ನು ರಾಜ್ಯ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಲೋಕಾಯುಕ್ತ ಎಸ್ ಐ ಟಿ ಅವಧಿ ಒಂದು ವರ್ಷ ವಿಸ್ತರಣೆ ಮಾಡಲಾಗಿದೆ. ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ ಆದೇಶಿಸಿದೆ. ಅಂದಹಾಗೇ ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿರುವ ಎಸ್ಐಟಿ ಇದಾಗಿದೆ. ಇನ್ನೂ ತನಿಖೆ ನಡೆಸುವುದು ಬಾಕಿ ಇರುವ ಕಾರಣ ರಾಜ್ಯ ಸರ್ಕಾರವು ಒಂದು ವರ್ಷ ಮತ್ತೆ ವಿಸ್ತರಣೆ ಮಾಡಿ ಆದೇಶಿಸಿದೆ. https://kannadanewsnow.com/kannada/bbmp-suspends-revenue-inspector-for-pasting-stickers-without-conducting-scheduled-caste-survey/ https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/
ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಕಂದಾಯ ಪರಿವೀಕ್ಷಕರಾದ ಕವಿತ ರವರುನ್ನು ಅಮಾನತ್ತುಗೊಳಿಸಲಾಗಿದೆ. ಪೂರ್ವ ವಲಯದ ವಸಂತನಗರ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ಕವಿತ ಅವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಹಿಂದೆ ಕರ್ತವ್ಯ ಲೋಪವೆಸಗಿದ ಮೂವರ ಅಮಾನತ್ತು ಈ ಹಿಂದೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಮೂರು ಜನ ಬಿಬಿಎಂಪಿ ನೌಕರರನ್ನು ಅಮಾನತುಗೊಳಿಸಲಾಗಿತ್ತು. ಹೆಚ್.ಬಿ.ಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ರಮೇಶ್, ಕಂದಾಯ ವಸೂಲಿಗಾರರಾದ ಪೆದ್ದುರಾಜು ಹಾಗೂ ಕೆಂಗೇರಿ ಉಪ ವಿಭಾಗ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ವಸೂಲಿಗಾರರಾದ ಸಿ. ಸಂದಿಲ್ ಕುಮಾರ್ ಅವರನ್ನು ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿತ್ತು https://kannadanewsnow.com/kannada/high-court-gives-big-relief-to-mlc-n-ravikumar-orders-to-refrain-from-taking-coercive-action-until-july-8/ https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/
ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯು ಭಾರತದ ಬೆಟ್ಟ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ ಹಾನಿಯನ್ನುಂಟುಮಾಡಿದೆ. ಜೂನ್ 20 ರಿಂದ ಜುಲೈ 3 ರವರೆಗೆ ಕನಿಷ್ಠ 69 ಜನರು ಪ್ರಾಣ ಕಳೆದುಕೊಂಡಿದ್ದಾರೆ. 400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿ ಹಾನಿಯಾಗಿದೆ. ಬಲವಾದ ಪ್ರವಾಹದಲ್ಲಿ ಹಲವಾರು ಕಟ್ಟಡಗಳು ಕುಸಿದು ವಾಹನಗಳು ಕೊಚ್ಚಿ ಹೋಗಿರುವುದರಿಂದ ಮಂಡಿ ಜಿಲ್ಲೆ ಅತ್ಯಂತ ಹಾನಿಗೊಳಗಾಗಿದೆ. ನಮ್ಮ ವ್ಯವಸ್ಥೆಯಲ್ಲಿ ಪ್ರವೇಶಿಸಿದಂತೆ ಇಲ್ಲಿಯವರೆಗೆ 400 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವನ್ನು ನಾವು ದಾಖಲಿಸಿದ್ದೇವೆ. ಆದರೆ ನಿಜವಾದ ಹಾನಿ ಇನ್ನೂ ಹೆಚ್ಚಾಗಿರಬಹುದು” ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಕಂದಾಯ ಇಲಾಖೆಯ ವಿಶೇಷ ಕಾರ್ಯದರ್ಶಿ ಡಿ.ಸಿ. ರಾಣಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ವಿವರವಾದ ಹಾನಿಯ ಮೌಲ್ಯಮಾಪನಕ್ಕೆ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಮತ್ತಷ್ಟು ಹೇಳಿದರು. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಮೂರು ದಿನಗಳವರೆಗೆ (ಜುಲೈ 7 ರವರೆಗೆ) ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ…
ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಎಂಎಲ್ಸಿ ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ. ಇಂದು ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಪ್ರಕರಣ ಸಂಬಂಧ ಹೈಕೋರ್ಟ್ ಗೆ ಪ್ರಕರಣ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಇನ್ನೂ ಸಿಎಸ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಗೆ ಸೂಚಿಸಿದೆ. ಈ ಮೂಲಕ ಹೈಕೋರ್ಟ್ ರವಿಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/ https://kannadanewsnow.com/kannada/cuet-ug-result-2025-declared/
ಬೆಂಗಳೂರು: ಮಹದೇವಪುರ ವಲಯದ ಎ.ಇ.ಸಿ.ಎಸ್ ಲೇಔಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ವ್ಯತ್ತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಮಹದೇವಪುರ ವಲಯ ಆಯುಕ್ತರಾದ ರಮೇಶ್ ಅವರು ತಿಳಿಸಿದರು. ಮಹದೇವಪುರ ವಲಯ ಎ.ಇ.ಸಿ.ಎಸ್ ಲೇಔಟ್, ಸಿ-ಬ್ಲಾಕ್ 1ನೇ ಮುಖ್ಯ ರಸ್ತೆಯಲ್ಲಿ ಬರುವ ಸೈಟ್ ಸಂ. 735 ರ ಸ್ವತ್ತಿನ ಮಾಲೀಕರಾದ ಭಾಸ್ಕರ್ ಎಂಬುವವರು 38 X 59 ಚ.ಅ (11.80 X 18.10ಮೀ) ಸೈಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನೆಲಮಾಳಿಗೆ + ನೆಲ ಸೇರಿದಂತೆ 6 ಅಂತಸ್ತು ಕಟ್ಟಡ ನಿರ್ಮಾಣ ಮಾಡಿರುತ್ತಾರೆ. ಮುಂದುವರಿದು, ಸ್ವತ್ತಿನ ಮಾಲೀಕರಿಗೆ ಕಟ್ಟಡದ ಮಾಲೀಕರಿಗೆ ಈಗಾಗಲೇ ಬಿಬಿಎಂಪಿ 2020 ಕಾಯ್ದೆಯಡಿ ತಾತ್ಕಾಲಿಕ ಆದೇಶ ಹಾಗೂ ಸ್ಥಿರಿಕರಣ ಆದೇಶದ ನೋಟೀಸ್ಗಳನ್ನು ಜಾರಿ ಮಾಡಲಾಗಿರುತ್ತದೆ. ಆದರೂ ಸಹಾ ಕಟ್ಟಡ ನಿರ್ಮಾಣ ಕಾರ್ಯ ನಿಲ್ಲಿಸದ ಪರಿಣಾಮ, ಇಂದು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಲಾಗಿರುತ್ತದೆ. ಹೆಚ್ಚುವರಿಯಾಗಿ ನಿರ್ಮಿಸಿರುವ 2 ಮಹಡಿಗಳನ್ನು ಮೂರು ಕೊರೆಯುವ ಯಂತ್ರಗಳು ಹಾಗೂ…
ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಸಂವಹನಕ್ಕಾಗಿ ತಾಯ್ನುಡಿಯನ್ನು ಹೊರತಾದ ಯಾವುದೇ ಭಾಷೆಗಳನ್ನು ಕಲಿಯುವುದು ತಪ್ಪಲ್ಲವೆನ್ನುತ್ತಲೇ, ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ ಮೂಲೆಗುಂಪಾಗಿಸುವ ಕಾರ್ಯಕ್ಕೆ ಪ್ರಾಧಿಕಾರ ಸಾಕ್ಷಿಯಾಗಬಯಸುವುದಿಲ್ಲ ಎಂದು ಹೇಳಿದ್ದಾರೆ. ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿಗೆ ಕಲಿಕಾ ವ್ಯವಸ್ಥೆಯೇ ನಿರ್ಣಾಯಕ ಪಾತ್ರವನ್ನು ಹೊಂದಿರುತ್ತದೆ. ವಿಶ್ವದ್ಯಾಂತ ನಡೆಸಿರುವ ಅಧ್ಯಯನಗಳಲ್ಲಿ ಪ್ರಾರಂಭಿಕವಾಗಿ ತಾಯ್ನುಡಿಯನ್ನು ಪ್ರಭುತ್ವದ ಮಟ್ಟಕ್ಕೆ ಕಲಿಸುವುದೇ ಜ್ಞಾನಾರ್ಜನೆಯ ದೃಷ್ಠಿಯಿಂದ ಬುನಾದಿ ಎಂಬುದನ್ನು ನಿರೂಪಿಸಿವೆ ಎಂದಿರುವ ಬಿಳಿಮಲೆ, ತಾಯ್ನುಡಿಯು ಅನನ್ಯತೆ, ಸಾಂಸ್ಕೃತಿಕ ಗುರುತು, ಸ್ವಾಭಿಮಾನ,…
ಬೆಂಗಳೂರು, ಜು3: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ. ವೇತನ ಪಾವತಿಸದಿರುವುದೂ ಕರ್ತವ್ಯಲೋಪ: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ ಹೆಚ್ಚುವರಿ ಹಣವನ್ನು ವಸೂಲಿ ಮಾಡುತ್ತಿರುವಂತ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ನಿಗಮವು ರೌಂಡಪ್ ವ್ಯವಸ್ಥೆಯನ್ನು ರದ್ದುಗೊಳಿಸುವಂತ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆದೇಶ ಹೊರಡಿಸಿದ್ದು, ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ರಲ್ಲಿ ಪ್ರತಿಷ್ಠಿತ ಸಾರಿಗೆಗೆ ಅವತಾರ್ ಕೌಂಟರ್ಗಳಲ್ಲಿ ಮತ್ತು ಇಟಿಎಂ ಯಂತ್ರಗಳಲ್ಲಿ ಚಿಲ್ಲರೆ ಸಮಸ್ಯೆಯಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡಲು ಆದೇಶಿಸಲಾಗಿದೆ ಎಂದಿದೆ. ಪ್ರಸ್ತುತ, ಸಾರ್ವಜನಿಕ ಪ್ರಯಾಣಿಕರು ಟಿಕೇಟ್ ಕಾಯ್ದಿರಿಸಲು ಕೌಂಟರ್ಗಳಲ್ಲಿ POS ಯಂತ್ರಗಳನ್ನು ಹಾಗೂ ಇಟಿಎಂ ಯಂತ್ರಗಳಲ್ಲಿ UPI ವ್ಯವಸ್ಥೆ ಒದಗಿಸಿರುವುದರಿಂದ ಪ್ರಯಾಣದರವನ್ನು ರೌಂಡ್ ಆಫ್ (Round-off) ಮಾಡುವ ಅವಶ್ಯಕತೆಯಿಲ್ಲದಿರುವುದರಿಂದ, ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ನ್ನು ಹಿಂಪಡೆಯಲಾಗಿದೆ ಎಂಬುದಾಗಿ ತಿಳಿಸಿದೆ. ಉಲ್ಲೇಖ-01 ರಲ್ಲಿನ ಸಾಮಾನ್ಯ…
ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಕೆಟ್ ದರದಲ್ಲಿನ ರೌಂಡಪ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಪಡಿಸಲಾಗುತ್ತಿದೆ. ಹೀಗಾಗಿ ಹೆಚ್ಚುವರಿ ರೌಂಡಪ್ ಹಣ ಪ್ರಯಾಣಿಕರಿಗೆ ಉಳಿದಂತೆ ಆಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೌಂಡಪ್ ವ್ಯವಸ್ಥೆಯು ಪ್ರತಿಷ್ಟಿತ ಸಾರಿಗೆಗಳಲ್ಲಿ ( Premium Service buses 400 ಬಸ್ಸುಗಳಲ್ಲಿ ಮಾತ್ರ) ಜಾರಿಯಲ್ಲಿದ್ದು, ಅದರಲ್ಲೂ ETM ಮತ್ತು ಅವತಾರ್ ಕೌಂಟರ್ ಗಳಲ್ಲಿ ಪಡೆಯುವ ಟಿಕೇಟ್ ಗೆ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿತ್ತು. ಅಂದರೆ ಉದಾ: ಪ್ರಯಾಣ ದರ ರೂ.101 ರಿಂದ 105 ರವರೆಗೂ ಇದ್ದಲ್ಲಿ ರೂ.100 ಪ್ರಯಾಣಿಕರಿಂದ ಪಡೆಯಲಾಗುತ್ತದೆ ಅದೇ ರೀತಿ ರೂ.106 ರಿಂದ ರೂ.109 ಇದ್ದಲ್ಲಿ ಪ್ರಯಾಣಿಕರಿಂದ ರೂ.110 ಪಡೆಯಲಾಗುತ್ತಿತ್ತು ಎಂದಿದೆ. ಈಗ ನಿಗಮದಲ್ಲಿ UPI ಯಶಸ್ವಿ ಅನುಷ್ಟಾನವಾಗಿರುವುದರಿಂದ ರೌಡಂಪ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದ್ದು, ತಂತ್ರಾಂಶದಲ್ಲಿ ಈ ಸಂಬಂಧ ಬದಲಾವಣೆ ಮಾಡುವ ಕ್ರಮ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದೆ. ಹೀಗಾಗಿ ಶೀಘ್ರವೇ…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಂದು ಜುಲೈ 4, 2025 ರಂದು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ ಪದವಿಪೂರ್ವ (CUET UG) ಫಲಿತಾಂಶಗಳನ್ನು ಪ್ರಕಟಿಸಿದೆ. ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು ಮತ್ತು ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಅಧಿಕೃತ ವೆಬ್ಸೈಟ್: cuet.nta.nic.in ನಲ್ಲಿ ಅಂಕಪಟ್ಟಿಗಳನ್ನು ಡೌನ್ಲೋಡ್ ಮಾಡಬಹುದು. CUET UG ಫಲಿತಾಂಶ 2025 ಜೊತೆಗೆ, ಸಂಸ್ಥೆಯು ನೋಂದಾಯಿತ ವಿದ್ಯಾರ್ಥಿಗಳ ಸಂಖ್ಯೆ, ಹಾಜರಾದವರು, ಉತ್ತೀರ್ಣರು, ಒಟ್ಟಾರೆ ಉತ್ತೀರ್ಣ ದರ ಮತ್ತು ಟಾಪರ್ಗಳ ಪಟ್ಟಿಯಂತಹ ಪ್ರಮುಖ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ. CUET ಫಲಿತಾಂಶ 2025 ಅನ್ನು ಈ ರೀತಿ ಚೆಕ್ ಮಾಡಿ ಅಭ್ಯರ್ಥಿಗಳು ಅಂಕಪಟ್ಟಿಯನ್ನು ಪ್ರವೇಶಿಸಲು ನೀಡಿರುವ ಸೂಚನೆಗಳನ್ನು ಅನುಸರಿಸಬಹುದು: ಹಂತ 1: ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: cuet.nta.nic.in ಹಂತ 2: ಮುಖಪುಟದಲ್ಲಿ, CUET UG 2025 ಅಂಕಪಟ್ಟಿ ಲಿಂಕ್ ಅನ್ನು ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ ಹಂತ 3: ಅರ್ಜಿ ಸಂಖ್ಯೆ ಮತ್ತು ಪಾಸ್ವರ್ಡ್…













