Author: kannadanewsnow09

ದಾವಣಗೆರೆ: ರಾಜ್ಯಾಧ್ಯಂತ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸಿಸ್ಟಮ್ ಬಳಕೆ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ನಿಯಮ ಮೀರಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಡಿಜೆ ಬಳಸಿದ್ದಕ್ಕೆ, ಜಪ್ತಿ ಮಾಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಹಿನ್ನಲೆಯಲ್ಲಿ ಡಿಜೆ ಸೌಂಡ್ ಸಿಸ್ಟಮ್ ಜಪ್ತಿ ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನ ಬಸವನಾಳ ಗೊಲ್ಲರಹಟ್ಟಿಯಲ್ಲಿ ಡಿಜೆ ಜಪ್ತಿ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಾಧ್ಯಂತ ಗಣೇಶ ಮೆರವಣಿಗೆ ವೇಳೆ ಜಿಡೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಲಾಗಿತ್ತು. ಡಿಸಿ ಜಿ.ಎಂ ಗಂಗಾಧರಸ್ವಾಮಿ ಆದೇಶಿಸಿದ್ದರು. ಈ ನಿಯಮ ಉಲ್ಲಂಘಿಸಿದ್ದರಿಂದ ಡಿಜೆ ಸಿಸ್ಟಮ್ ಜಪ್ತಿ ಮಾಡಲಾಗಿದೆ. ಇನ್ನೂ ಡಿಜೆಟಿ ಸಿಸ್ಟಂ ಮಾಲೀಕ, ಗಣೇಶ ಉತ್ಸವ ಸಮಿತಿಯವರು ಸೇರಿದಂತೆ ಮೂವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಡಿಜೆ ಸೌಂಡ್ ಸಿಸ್ಟಮ್ ಬಳಸಿ ಗ್ರಾಮಸ್ಥರಿಗೆ ತೊಂದರೆ ನೀಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. https://kannadanewsnow.com/kannada/indian-origin-microsoft-techie-found-dead-at-work-family-warns-against-overwork/ https://kannadanewsnow.com/kannada/controversy-over-banu-mushtaqs-selection-to-inaugurate-mysore-dasara-cm-siddaramaiah-gives-this-clarification/

Read More

ಮೈಕ್ರೋಸಾಫ್ಟ್ ಕಾರ್ಪ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಕ್ಯಾಲಿಫೋರ್ನಿಯಾದ ಕಂಪನಿಯ ಮೌಂಟೇನ್ ವ್ಯೂ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರತದ ಇಂದೋರ್‌ನ 35 ವರ್ಷದ ಪ್ರತೀಕ್ ಪಾಂಡೆ ಎಂದು ಗುರುತಿಸಲಾಗಿದ್ದು, ಆಗಸ್ಟ್ 19 ರ ಸಂಜೆ ಕಚೇರಿಗೆ ಪ್ರವೇಶಿಸಿದಾಗ ಆಗಸ್ಟ್ 20 ರ ಮುಂಜಾನೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದರು. ಅಧಿಕಾರಿಗಳು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿ “ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ನಡವಳಿಕೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ” ಎಂದು ವರದಿ ಮಾಡಿದ್ದಾರೆ.  ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಪ್ರಕರಣವನ್ನು ಕ್ರಿಮಿನಲ್ ತನಿಖೆಯಾಗಿ ಪರಿಗಣಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೆಲಸದ ಒತ್ತಡದ ಬಗ್ಗೆ ಕುಟುಂಬವು ಕಳವಳ ವ್ಯಕ್ತಪಡಿಸುತ್ತದೆ ಸಂಬಂಧಿಗಳು ತಂತ್ರಜ್ಞಾನ ಕಂಪನಿಗಳು ಉದ್ಯೋಗಿಗಳನ್ನು ತೀವ್ರ ಕೆಲಸದ ಬೇಡಿಕೆಗಳಿಂದ ರಕ್ಷಿಸಲು ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಪಾಲೊ ಆಲ್ಟೊ ಡೈಲಿ ಪೋಸ್ಟ್‌ನೊಂದಿಗೆ ಮಾತನಾಡಿದ ಪಾಂಡೆ ಅವರ ಚಿಕ್ಕಪ್ಪ ಮನೋಜ್ ಪಾಂಡೆ, “ಪ್ರತಿಕ್ ತುಂಬಾ ಸಂತೋಷದಾಯಕ, ಕಠಿಣ ಪರಿಶ್ರಮಿ…

Read More

ಮೈಸೂರು : ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇಂದು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ ಎಂದರು. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ…

Read More

ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಜೆಡಿಎಸ್ ನಿಂದ ಧರ್ಮ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ. ಇಂತಹ ಧರ್ಮ ಸತ್ಯ ಯಾತ್ರೆ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳವನ್ನು ತಲುಪಿದೆ. ಶ್ರೀಕ್ಷೇತ್ರ ಧರ್ಮಸ್ಥಳವನ್ನು ಜೆಡಿಎಸ್ ನ ಧರ್ಮ ಸತ್ಯ ಯಾತ್ರೆ ತಲುಪಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಯಾತ್ರೆ ನಡೆಯುತ್ತಿದೆ. ಧರ್ಮಸ್ಥಳದ ಮುಖಮಂಟಪದಿಂದ ಜೆಡಿಎಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಶಾಸಕ ಎ ಮಂಜು, ಹೆಚ್.ಟಿ ಮಂಜು, ಸಿಎಸ್ ಬಾಲಕೃಷ್ಣ, ಸುರೇಶ್ ಗೌಡ, ಪರಿಷತ್ ಸದಸ್ಯ ಭೋಜೇಗೌಡ ಮತ್ತಿತರರು ಈ ಧರ್ಮ ಸತ್ಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. https://kannadanewsnow.com/kannada/the-schedule-for-the-air-show-during-the-world-famous-mysuru-dasara-has-been-fixed/ https://kannadanewsnow.com/kannada/mysore-dasara-is-a-religion-transcending-and-caste-transcending-festival-banu-mushtaq-inaugurated-it-cm-siddaramaiah/

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿತ್ತು. ಈ ಬೆನ್ನಲ್ಲೇ ಯಾವ ದಿನದಂದು ಮೈಸೂರ ದಸರಾ ಸಂದರ್ಭದಲ್ಲಿ ಏರ್ ಶೋ ನಡೆಯಲಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ ಎಂದರು. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ…

Read More

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಒಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ ಸಾಹಿತಿಗಳು…

Read More

ನವದೆಹಲಿ: ಒಡಿಶಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉತ್ತೇಜಿಸುವ ಮಹತ್ವದ ಕ್ರಮವಾಗಿ, ಭಗವಾನ್ ಜಗನ್ನಾಥನ ರಥಯಾತ್ರೆಯ ಮೂರು ಪವಿತ್ರ ಚಕ್ರಗಳನ್ನು ಸಂಸತ್ತಿನ ಸಂಕೀರ್ಣದಲ್ಲಿ ಅಳವಡಿಸಲಾಗುವುದು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅಲ್ಲಿ ದೇವಾಲಯ ಆಡಳಿತವು ಪ್ರಸ್ತಾವನೆಯನ್ನು ಮಂಡಿಸಿತು. ಬಿರ್ಲಾ ಈ ಪ್ರಸ್ತಾವನೆಯನ್ನು ಒಪ್ಪಿಕೊಂಡರು, ಇದು ದೇವಾಲಯ ಮತ್ತು ರಾಷ್ಟ್ರ ಎರಡಕ್ಕೂ ಐತಿಹಾಸಿಕ ಕ್ಷಣವಾಗಿದೆ. ಲೋಕಸಭಾ ಸ್ಪೀಕರ್ ಪುರಿ ದೇವಸ್ಥಾನಕ್ಕೆ ಭೇಟಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪುರಿ ಸಂಸದ ಸಂಬಿತ್ ಪಾತ್ರ ಅವರೊಂದಿಗೆ ಈ ಪ್ರಸ್ತಾವನೆಯನ್ನು ಚರ್ಚಿಸಲಾಯಿತು. ಭೇಟಿಯ ಸಮಯದಲ್ಲಿ, ಶ್ರೀ ಜಗನ್ನಾಥ ದೇವಸ್ಥಾನ ಆಡಳಿತ (SJTA) ಚಕ್ರಗಳನ್ನು ಅಳವಡಿಸುವ ಕಲ್ಪನೆಯನ್ನು ಮಂಡಿಸಿತು, ಅದನ್ನು ಬಿರ್ಲಾ ತಕ್ಷಣ ಒಪ್ಪಿಕೊಂಡರು. SJTA ಯ ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧೀ…

Read More

ಮೈಸೂರು: ಧರ್ಮ, ಪೂಜೆ ಹಾಗೂ ಭಕ್ತಿಗಳು ಪ್ರದರ್ಶನಕ್ಕೆ ಇರುವುದಲ್ಲ. ಇವುಗಳೆಲ್ಲ ಆತ್ಮವಿಶ್ವಾಸಕ್ಕೆ ಹುಟ್ಟಿದಂತ ದಾರಿಗಳು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿರುವಂತ ಅರಸು ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ದೇವರಾಜು ಅರಸು ಅವರಿಗೆ ಸಮಾಜ ಹಾಗೂ ಜಾತಿ ಇತ್ತಾ? ದೇವರಾಜು ಅರಸು ಅವರಿಗೆ ಇದ್ದದ್ದು ನಾಯಕತ್ವದ ಗುಣ ಮಾತ್ರ. ಅವರು ರಾಜ್ಯವನ್ನು ಆಳಿದಾಗ ನಾನು ಹಿಂದುಳಿದವನೆಂದು ಭಾವಿಸಿಲ್ಲ ಎಂದರು. https://kannadanewsnow.com/kannada/useful-information-for-the-farmers-of-the-state-these-are-the-various-loan-facilities-you-can-get-from-cooperative-societies/ https://kannadanewsnow.com/kannada/itr-filing-due-date-extended/

Read More

ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಕೀಚಕ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಅತ್ಯಾಚಾರ ಎಸಗಿದ್ದಾನೆ. ಈ ಪೈಶಾಚಿಕ ಕೃತ್ಯದಿಂದಾಗಿ ಅಪ್ರಾಪ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗುವಂತೆ ಆಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 7ನೇ ತರಗತಿ ಓದುತ್ತಿರುವ ಅಪ್ರಾಪ್ತೆಯ ಮೇಲೆ 8ನೇ ತರಗತಿ ಓದುತ್ತಿರುವಂತ ಅಪ್ರಾಪ್ತ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ. ಅಪ್ರಾಪ್ತ ಬಾಲಕಿ, ಅಪ್ರಾಪ್ತ ಬಾಲಕ ಇಬ್ಬರೂ ವಸತಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಅಪ್ರಾಪ್ತೆಯ ತಂದೆ ಪೊಲೀಸರಿಗೆ ಅಪ್ರಾಪ್ತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಇಳಕಲ್ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. https://kannadanewsnow.com/kannada/the-accused-of-sexual-assault-on-a-minor-girl-has-been-sentenced-to-20-years-in-prison-and-a-fine-of-75000/ https://kannadanewsnow.com/kannada/itr-filing-due-date-extended/

Read More

ಶಿವಮೊಗ್ಗ: ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 75000 ದಂಡವನ್ನು ಶಿವಮೊಗ್ಗ ನ್ಯಾಯಾಲಯದ ವಿಧಿಸಿ ಆದೇಶಿಸಿದೆ. 2022ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ್ದಾನೆಂದು ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಕಲಂ 376(2)(ಎನ್),‌ 366, 363 ಐಪಿಸಿ ಕಾಯ್ದೆ ಹಾಗೂ ಕಲಂ 06 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖಾಧಿಕಾರಿ ಮಾಳೂರು ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ಬಗ್ಗೆ ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದಂತ ಶ್ರೀಧರ್ ಹೆಚ್. ಆರ್ ವಾದ ಮಂಡಿಸಿದ್ದು. ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1  ಪ್ರಕರಣದ ವಿಚಾರಣೆ ನಡೆಸಿ, ಆರೋಪಿಯ ವಿರುದ್ಧ…

Read More