Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಉತ್ತರ ಪ್ರದೇಶ; ರಾಜಧಾನಿಯಲ್ಲಿ ದಾಖಲಾದ ಅತಿದೊಡ್ಡ ಮೆಥಾಂಫೆಟಮೈನ್ ವಶಪಡಿಸಿಕೊಳ್ಳುವಿಕೆಗಳಲ್ಲಿ ಒಂದಾದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಮತ್ತು ದೆಹಲಿ ಪೊಲೀಸರ ಜಂಟಿ ತಂಡವು ಒಂದು ಅಂತರರಾಷ್ಟ್ರೀಯ ಮಾದಕವಸ್ತು ಸಿಂಡಿಕೇಟ್ ಅನ್ನು ಭೇದಿಸಿದೆ. ದೆಹಲಿಯ ತೋಟದ ಮನೆಯ ಮೇಲೆ ದಾಳಿ ಮಾಡಿ ಛತ್ತರ್‌ಪುರದಲ್ಲಿ ಕೊನೆಗೊಂಡ ಮೂರು ದಿನಗಳ ಕಾರ್ಯಾಚರಣೆಯ ನಂತರ 262 ಕೋಟಿ ರೂ. ಮೌಲ್ಯದ 328.54 ಕೆಜಿ ಮೆಥ್ ಅನ್ನು ವಶಪಡಿಸಿಕೊಂಡಿದೆ. ನಾಗಾಲ್ಯಾಂಡ್‌ನ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಮ್ರೋಹಾದ ಮಂಗ್ರೌಲಿ ಗ್ರಾಮದ 25 ವರ್ಷದ ನೋಯ್ಡಾ ಸೆಕ್ಟರ್ -5 ರ ನಿವಾಸಿ ಶೇನ್ ವಾರಿಸ್ ಅವರನ್ನು ತನಿಖಾಧಿಕಾರಿಗಳು ಬಂಧಿಸಿದ ನಂತರ ಕಾರ್ಯಾಚರಣೆ ವೇಗ ಪಡೆದುಕೊಂಡಿತು. ಮಾರಾಟ ವ್ಯವಸ್ಥಾಪಕರಾಗಿ ನಟಿಸಿದ ವಾರಿಸ್, ವಿದೇಶಿ ನಿರ್ವಾಹಕರಿಂದ ಸೂಚನೆಗಳನ್ನು ಪಡೆದು ನಕಲಿ ಸಿಮ್ ಕಾರ್ಡ್‌ಗಳು ಮತ್ತು ವಾಟ್ಸಾಪ್ ಮತ್ತು ಝಂಗಿಯಂತಹ ಎನ್‌ಕ್ರಿಪ್ಟ್ ಮಾಡಿದ ಪ್ಲಾಟ್‌ಫಾರ್ಮ್‌ಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ನವೆಂಬರ್ 20 ರಂದು ಆತನನ್ನು ಬಂಧಿಸಲಾಯಿತು ಮತ್ತು ವಿಚಾರಣೆಯ ಸಮಯದಲ್ಲಿ,…

Read More

ಜೋಹಾನ್ಸ್‌ಬರ್ಗ್: ಜಿ20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಮೈಕಾ ಮತ್ತು ನೆದರ್‌ಲ್ಯಾಂಡ್ಸ್‌ನ ತಮ್ಮ ಸಹವರ್ತಿಗಳು ಸೇರಿದಂತೆ ಹಲವಾರು ವಿಶ್ವ ನಾಯಕರನ್ನು ಭೇಟಿಯಾಗಿ ಹಲವಾರು ದ್ವಿಪಕ್ಷೀಯ ವಿಷಯಗಳ ಕುರಿತು ಚರ್ಚಿಸಿದರು. ಪ್ರಧಾನಿಯವರು ಸಾಮಾಜಿಕ ಮಾಧ್ಯಮದಲ್ಲಿ ಸರಣಿ ಪೋಸ್ಟ್‌ಗಳಲ್ಲಿ ತಮ್ಮ ಭೇಟಿಯ ವಿವರಗಳನ್ನು ಹಂಚಿಕೊಂಡರು. ಜಮೈಕಾದ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಅವರೊಂದಿಗಿನ ಸಂವಾದದ ನಂತರ, ಭಾರತ ಮತ್ತು ಜಮೈಕಾ “ಇತಿಹಾಸದಿಂದ ರೂಪುಗೊಂಡ ಮತ್ತು ಸಾಂಸ್ಕೃತಿಕ ಸಂಪರ್ಕಗಳಿಂದ ಸಮೃದ್ಧವಾಗಿರುವ ಸ್ನೇಹ” ದಿಂದ ಬದ್ಧವಾಗಿವೆ ಎಂದು ಮೋದಿ ಹೇಳಿದರು. “ಸಾಮೂಹಿಕ ಪ್ರಗತಿಗೆ ಆಳವಾದ ಬದ್ಧತೆಯೊಂದಿಗೆ ನಮ್ಮ ಪಾಲುದಾರಿಕೆ ಬೆಳೆಯುತ್ತಲೇ ಇದೆ” ಎಂದು ಅವರು ಹೇಳಿದರು. ನೆದರ್‌ಲ್ಯಾಂಡ್ಸ್ ಪ್ರಧಾನಿ ಡಿಕ್ ಸ್ಕೂಫ್ ಅವರೊಂದಿಗಿನ ಸಂವಾದದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಜಲ ಸಂಪನ್ಮೂಲಗಳು, ನಾವೀನ್ಯತೆ, ತಂತ್ರಜ್ಞಾನ ಮತ್ತು ಇಂಧನದಂತಹ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚಿಸಿದರು. “ನಮ್ಮ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಪಾಲುದಾರಿಕೆ ಜಲ ಸಂಪನ್ಮೂಲಗಳು, ನಾವೀನ್ಯತೆ, ತಂತ್ರಜ್ಞಾನ ಮತ್ತು ಇಂಧನದಂತಹ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಮುಂಬರುವ…

Read More

ಗ್ಯಾಂಗ್ಟಾಕ್: ಸಿಕ್ಕಿಂನ ರಾಷ್ಟ್ರೀಯ ಹೆದ್ದಾರಿ 10 ರಲ್ಲಿ ಟ್ಯಾಕ್ಸಿಯೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 22 ಮತ್ತು 23 ರ ಮಧ್ಯರಾತ್ರಿ ಸಿಕ್ಕಿಂ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ಪಕ್ಕದ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. 11 ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಉಳಿದವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. https://kannadanewsnow.com/kannada/gundurao-foundation-distributes-free-notebooks-and-stationery-to-school-children/ https://kannadanewsnow.com/kannada/what-are-the-rules-for-appointing-legislative-pas-here-is-the-information/

Read More

ಬೆಂಗಳೂರು:  ಗಾಂಧಿನಗರ ಕ್ಷೇತ್ರದ ಕೆ.ಪಿ ಅಗ್ರಹಾರ, ನಾಗಮ್ಮ ನಗರ, ಕೇಶವ ನಗರ, ಅಶ್ವಥ ನಗರ ಹಾಗೂ ನೇತಾಜಿ ನಗರಗಳಲ್ಲಿ ವಾಸಿಸುತ್ತಿರುವ ಕುಟುಂಬಗಳ ಮಕ್ಕಳಿಗೆ ಶೈಕ್ಷಣಿಕ ಉಪಯೋಗಕ್ಕಾಗಿ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗುವ ನಿಟ್ಟಿನಲ್ಲಿ ನಮ್ಮ ಫೌಂಡೇಶನ್ ವತಿಯಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಈ ವೇಳೆ, ವಿದ್ಯಾರ್ಥಿ- ಪೋಷಕರೊಂದಿಗೆ ಶಾಲಾ ವಾತಾವರಣ, ಮಕ್ಕಳ ಶೈಕ್ಷಣಿಕ ಸ್ಥಿತಿಗತಿ ಕುರಿತು ಚರ್ಚಿಸಲಾಯಿತು. ಇನ್ನೂ ಇದೇ ಸಂಧರ್ಭದಲ್ಲಿ ಮನೆ-ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಈ ವೇಳೆ ಮಾತನಾಡಿದಂತ ಅವರು, ಕಳೆದೆರಡು ವರ್ಷಗಳಿಂದ ಸರ್ಕಾರದಿಂದ ರಾಜ್ಯದ ಜನರಿಗೆ ನೀಡಲಾಗಿರುವ ಸವಲತ್ತುಗಳ ಕುರಿತು ಜನರೊಂದಿಗೆ ಸಮಲೋಚನೆ ನಡೆಸಿದಲ್ಲದೆ, ನಮ್ಮ ಸರ್ಕಾರದ ಜನಪರ ಯೋಜನೆಗಳಿಂದ ಸಾವಿರಾರು ಕುಟುಂಬಗಳ ಜೀವನ ಮಟ್ಟ ಸುಧಾರಿಸಿರುವುದನ್ನು ಕಂಡು ಸಂತೋಷವಾಯಿತು ಎಂದರು. ಜನಪರ ಯೋಜನೆಗಳು ಜನರ ಜೀವನಮಟ್ಟ ಸುಧಾರಿಸಿದೆ ಅಂದ್ರೆ ಆ ಯೋಜನೆ…

Read More

ದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಜೀ ಅವರನ್ನು ಇಂದು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಗೌರವಪೂರ್ವಕವಾಗಿ ಅಭಿನಂದಿಸಿದರು. ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಎನ್‍ಡಿಎ ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ರಾಜ್ಯ ಬಿಜೆಪಿ ಪ್ರಕಟಣೆ ತಿಳಿಸಿದೆ. https://kannadanewsnow.com/kannada/what-are-the-documents-that-need-to-be-submitted-for-land-conversion-of-agricultural-land-to-non-agricultural-purposes-here-is-the-list/ https://kannadanewsnow.com/kannada/what-are-the-rules-for-appointing-legislative-pas-here-is-the-information/

Read More

ಬಿಹಾರ: ನೇಚರ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, 40 ಹಾಲುಣಿಸುವ ತಾಯಂದಿರ ಎದೆಹಾಲಿನ ಮಾದರಿಗಳು ಯುರೇನಿಯಂನಿಂದ ಹೆಚ್ಚು ಕಲುಷಿತಗೊಂಡಿವೆ ಎಂದು ಕಂಡುಬಂದಿದೆ. ಆದಾಗ್ಯೂ, ಮಾಲಿನ್ಯವು “ತಾಯಿ ಮತ್ತು ಶಿಶುಗಳ ಆರೋಗ್ಯದ ಮೇಲೆ ಅತ್ಯಂತ ಕಡಿಮೆ ಪರಿಣಾಮ ಬೀರುತ್ತದೆ” ಎಂದು ಅದು ಗಮನಿಸಿದೆ. 17 ರಿಂದ 35 ವರ್ಷ ವಯಸ್ಸಿನ 40 ತಾಯಂದಿರು ಸಂಶೋಧನೆಯಲ್ಲಿ ಭಾಗವಹಿಸಿದ್ದರು. ಈ ಅಧ್ಯಯನವನ್ನು ಬಿಹಾರದ ಆಯ್ದ ಜಿಲ್ಲೆಗಳಲ್ಲಿ ನಡೆಸಲಾಯಿತು. ಇದರಲ್ಲಿ ಭೋಜ್‌ಪುರ, ಸಮಸ್ತಿಪುರ, ಬೇಗುಸರಾಯ್, ಖಗಾರಿಯಾ, ಕತಿಹಾರ್ ಮತ್ತು ನಳಂದ ಸೇರಿವೆ. ಈ ಅಧ್ಯಯನವನ್ನು ಅಕ್ಟೋಬರ್ 2021 ರಿಂದ ಜುಲೈ 2024 ರ ನಡುವೆ ನಡೆಸಲಾಯಿತು. ಅಧ್ಯಯನವು ಏನು ಬಹಿರಂಗಪಡಿಸಿದೆ ಬಿಹಾರದ ಆರು ಜಿಲ್ಲೆಗಳಾದ್ಯಂತ ಮಹಿಳೆಯರ ಎದೆಹಾಲಿನ ಮಾದರಿಗಳನ್ನು ವಿಶ್ಲೇಷಿಸಲಾಗಿದೆ. ಈ ಜಿಲ್ಲೆಗಳು ಭೋಜ್‌ಪುರ, ಸಮಸ್ತಿಪುರ, ಬೇಗುಸರಾಯ್, ಖಗಾರಿಯಾ, ಕತಿಹಾರ್ ಮತ್ತು ನಳಂದ. ಎಲ್ಲಾ ಮಾದರಿಗಳು ಯುರೇನಿಯಂ ಅಂಶವನ್ನು ಹೊಂದಿದ್ದವು” ಎಂದು ಅಧ್ಯಯನವು ಬಹಿರಂಗಪಡಿಸಿದೆ. ಪ್ರಸ್ತುತ ಅಧ್ಯಯನವು 100% ಹಾಲುಣಿಸುವ ತಾಯಂದಿರು ತಮ್ಮ ಎದೆಹಾಲು ಯುರೇನಿಯಂನಿಂದ ಹೆಚ್ಚು…

Read More

ಬೆಂಗಳೂರು: ನಗರದಲ್ಲಿ ಎಟಿಎಂಗೆ ತುಂಬಲು ಕೊಂಡೊಯ್ಯುತ್ತಿದ್ದಂತ ವಾಹನ ತಡೆದು ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿಕೊಂಡು ಹಾಡ ಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಲಾಗಿತ್ತು. ಈ ಕೃತ್ಯದ ಕಿಂಗ್ ಪಿನ್ ಕಾನ್ಸ್ ಟೇಬಲ್ ಒಪ್ಪರಾಗಿದ್ದರು. ಅವರನ್ನು ಅಮಾನತುಗೊಳಿಸಿ ಡಿಸಿಪಿ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಆದೇಶ ಮಾಡಿದ್ದಾರೆ. ಅಮಾನತುಗೊಂಡ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಗೋವಿಂದಪುರ ಠಾಣೆಯ ಪೇದೆಯಾಗಿದ್ದಾರೆ. ಇಂತಹ ಇವರು ಬೆಂಗಳೂರಿನ ಹಾಡ ಹಗಲೇ ನಡೆದಿದ್ದಂತ ದರೋಡೆ ಕೃತ್ಯದ ಪ್ರಮುಖ ಆರೋಪಿಯಾಗಿದ್ದರು. https://kannadanewsnow.com/kannada/high-court-stays-election-of-sagars-marikamba-devi-trust-scheduled-for-november-30/ https://kannadanewsnow.com/kannada/follow-these-steps-to-link-your-pan-number-with-your-bank-account/ https://kannadanewsnow.com/kannada/alert-parents-beware-childrens-hearts-are-becoming-weak-due-to-excessive-mobile-phone-use/

Read More

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನವೆಂಬರ್ 30ರಂದು ಚುನಾವಣೆ ನಿಗದಿಯಾಗಿತ್ತು. ಆದರೇ ಈ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ವಿಧಿಸಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ನವೆಂಬರ್.30ರಂದು ನಡೆಯಬೇಕಿದ್ದಂತ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆ ಮುಂದೂಡಿಕೆಯಾದಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೂಡ ಆರಂಭಗೊಂಡು ಸುಮಾರು 60ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಿಗದಿಯಂತೆ ನಡೆದಿದ್ದರೇ ನವೆಂಬರ್.30ರಂದು ಮತದಾನ ನಡೆದು, ಅಂದೇ ಫಲಿತಾಂಶ ಘೋಷಣೆಯಾಗಬೇಕಿತ್ತು. ಆದರೇ ಈ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ತಡೆಯಾಜ್ಞೆ ಏಕೆ? ಕರ್ನಾಟಕ ಹೈಕೋರ್ಟ್ ಗೆ ಕೊರಚ-ಕೊರಮ ಸಮಾಜದ ಮುಖಂಡರಾದಂತ ಬಸವರಾಜು ಎಂಬುವರು ತಮ್ಮ ಸಮುದಾಯದಕ್ಕೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಲ್ಲಿ ಸ್ಥಾನ ಮಾನ ನೀಡಿಲ್ಲ. ಹಲವು ವರ್ಷಗಳಿಂದ ನಾವು ದೇವಿಯ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಹೀಗಾಗಿ ನಮ್ಮ ಸಮುದಾಯಕ್ಕೆ ಸ್ಥಾನ ಮಾನ ನೀಡುವವರೆಗೂ ಘೋಷಣೆಯಾಗಿರುವಂತ…

Read More

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನೊಳಗೊಂಡ ತಂಡಕ್ಕೆ ಕೆಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದ್ದು, ರವೀಂದ್ರ ಜಡೇಜಾ ಕೂಡ ತಂಡಕ್ಕೆ ಮರಳಿದ್ದಾರೆ. https://twitter.com/BCCI/status/1992561040559894534 ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ, ಜಡೇಜಾ ತಂಡಕ್ಕೆ ಆಯ್ಕೆ ಏತನ್ಮಧ್ಯೆ, ವೇಗಿ ಜಸ್ಪ್ರೀತ್ ಬುಮ್ರಾ ಅವರ ಕಾರ್ಯನಿರತ ಅಂತರರಾಷ್ಟ್ರೀಯ ವೇಳಾಪಟ್ಟಿಯ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರು ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದ್ದಾರೆ. ಬುಮ್ರಾ 2025 ರ ಏಷ್ಯಾ ಕಪ್‌ನ ಭಾಗವಾಗಿದ್ದರು, ಮೊದಲು ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿಯೂ ಆಡಿದ್ದರು. ತರುವಾಯ, ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಯಲ್ಲೂ ಆಡಿದರು, ಆದರೆ ಅವರು ಏಕದಿನ ಪಂದ್ಯಗಳನ್ನು ತಪ್ಪಿಸಿಕೊಂಡರು. ಭಾರತದ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್…

Read More

ಬೆಂಗಳೂರು: ಯಕ್ಷಗಾನ ಕಲಾವಿದರಲ್ಲಿ ಕೆಲವರು ಸಲಿಂಗಕಾಮಿಗಳು ಎನ್ನುವಂತ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಹೇಳಿದ್ದೇನು ಅಂತ ಮುಂದೆ ಓದಿ. ಈ ಬಗ್ಗೆ ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಬರೆದುಕೊಂಡಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆಯವರು, ಯಕ್ಷಗಾನ ಕಲಾವಿದರ ಸಂಕಟಗಳನ್ನು ಕುರಿತು ಮಂಡಿಸಿರುವ ವಿಚಾರಗಳಲ್ಲಿ ‘ಸಲಿಂಗಕಾಮ’ ಕುರಿತಾದ ಹೇಳಿಕೆಯೊಂದು ವಿವಾದವನ್ನು ಸೃಷ್ಟಿಸಿದೆ. ಪ್ರೊ.ಬಿಳಿಮಲೆಯವರು ತಮ್ಮ ಬಾಲ್ಯಕಾಲದಿಂದ ಮತ್ತು ಈಗಲೂ ಯಕ್ಷಗಾನದ ನಂಟನ್ನು ಉಳಿಸಿಕೊಂಡು ಬಂದಿದ್ದಾರೆ. ಪ್ರೊ.ಬಿಳಿಮಲೆ ಅವರು, ಯಕ್ಷಗಾನ ಕಲಾವಿದರ ಆತ್ಮಗೌರವ ಮತ್ತು ಸಾಮಾಜಿಕ ಘನತೆಯ ಸದಾಶಯ ಇರಿಸಿಕೊಂಡು ಆಡಿರುವ ಮಾತಿನ ಸಾಂದರ್ಭಿಕ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದ ಕೆಲವರು ವಿವಾದಕ್ಕೆ ಗುರಿಪಡಿಸಿರುವುದು ಆಶ್ಚರ್ಯದ ಸಂಗತಿ ಎಂದಿದ್ದಾರೆ. ಪ್ರೊ.ಪುರುಷೋತ್ತಮ ಬಿಳಿಮಲೆಯವರು ಯಕ್ಷಗಾನದಲ್ಲಿ ಪಾತ್ರದಾರಿಯಾಗಿ ವೇಷ ಕಟ್ಟಿಕೊಂಡು ಕುಣಿದು, ಅರ್ಥದಾರಿಯಾಗಿ ವ್ಯಾಖ್ಯಾನ ಮಾಡುತ್ತಾ ಹಾಗೂ ಸಂಶೋಧಕನಾಗಿ ಯಕ್ಷಗಾನ ಕಲೆಯನ್ನು ಕುರಿತು ಬರೆಯುತ್ತಾ ರಂಗಭೂಮಿ ಮತ್ತು…

Read More