Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಇಂದು 150 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 496 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 150 ಜನರಿಗೆ ಸೋಂಕು ಪಾಸಿಟಿವ್ ಅಂತ ದೃಢಪಟ್ಟಿರುವುದಾಗಿ ತಿಳಿಸಿದೆ. ಇಂದು 150 ಮಂದಿಗೆ ಕೊರೋನಾ ಸೋಂಕು ಪತ್ತೆಯಾದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆಯಾಗಿದೆ. ಇವರಲ್ಲಿ 520 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ. https://kannadanewsnow.com/kannada/a-black-box-found-on-the-roof-of-the-building-where-the-air-india-aircraft-crashed/ https://kannadanewsnow.com/kannada/breaking-a-horrific-accident-in-belagavi-three-dead-including-a-person-who-was-trying-to-rescue-the-injured/

Read More

ಅಹಮದಾಬಾದ್: ವಿಮಾನ ಡಿಕ್ಕಿ ಹೊಡೆದ ಕಟ್ಟಡದ ಮೇಲ್ಛಾವಣಿಯಿಂದ ದುರದೃಷ್ಟಕರ ಏರ್ ಇಂಡಿಯಾ ವಿಮಾನ AI-171 ರ ಕಪ್ಪು ಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ದೃಢಪಡಿಸಿದ್ದಾರೆ. 241 ಜೀವಗಳನ್ನು ಬಲಿ ಪಡೆದ ದುರಂತ ಅಪಘಾತದ ಕಾರಣದ ಬಗ್ಗೆ ನಿರ್ಣಾಯಕ ವಿಮಾನ ದತ್ತಾಂಶ ರೆಕಾರ್ಡರ್ ಪ್ರಮುಖ ಒಳನೋಟಗಳನ್ನು ಒದಗಿಸುವ ನಿರೀಕ್ಷೆಯಿದೆ. ಗುರುವಾರ ಮಧ್ಯಾಹ್ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬೋಯಿಂಗ್ 787-8 ಡ್ರೀಮ್‌ಲೈನರ್ ಹಠಾತ್ ಇಳಿಯುವಿಕೆಗೆ ಕಾರಣವೇನು ಎಂಬುದನ್ನು ನಿರ್ಧರಿಸಲು ಕಪ್ಪು ಪೆಟ್ಟಿಗೆಯ ವಿಶ್ಲೇಷಣೆಯು ನಿರ್ಣಾಯಕ ಪುರಾವೆಗಳನ್ನು ನೀಡುತ್ತದೆ ಎಂದು ತನಿಖಾಧಿಕಾರಿಗಳು ನಂಬಿದ್ದಾರೆ. ಲೋಹದ ಕಟ್ಟರ್‌ಗಳು ಸೇರಿದಂತೆ ಸುಧಾರಿತ ಉಪಕರಣಗಳನ್ನು ಹೊಂದಿದ ಅಹಮದಾಬಾದ್ ಅಗ್ನಿಶಾಮಕ ದಳದ ಸಮರ್ಪಿತ ತಂಡವು ವಿಮಾನ ನಿಲ್ದಾಣದ ಪರಿಧಿಯ ಹೊರಗೆ ಇರುವ ಮೇಘನಿನಗರದಲ್ಲಿ ವಿಮಾನ ಬಹುಮಹಡಿ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿದ ಅವಶೇಷಗಳ ಮೂಲಕ ಶೋಧ ನಡೆಸುತ್ತಿತ್ತು. ಕೇಂದ್ರೀಕೃತ ಕಾರ್ಯಾಚರಣೆಯ ನಂತರ, ಕಟ್ಟಡದ ಮೇಲ್ಛಾವಣಿಯಲ್ಲಿ ಕಪ್ಪು ಪೆಟ್ಟಿಗೆಯನ್ನು…

Read More

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬೆಂಗಳೂರಲ್ಲಿ ಸಿಸಿಬಿ ಹಾಗೂ ಚಿಕ್ಕಜಾಲ ಠಾಣೆಯ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ನೆಸ್ ಬಂಧಿಸಲಾಗಿದೆ. ಬಂಧಿತ ಮಹಿಳೆಯಿಂದ 10 ಕೋಟಿ ಮೌಲ್ಯದ 5.325 ಕೆಜಿ ಎಂಜಿಎಂಎ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ 10 ಕೋಟಿ ರೂಪಾಯಿ ಎಂಬುದಾಗಿ ಅಂದಾಜಿಸಲಾಗಿದೆ. https://kannadanewsnow.com/kannada/hubballi-rameshwaram-extension-of-the-weekly-special-express-train-service-from-hubballi/ https://kannadanewsnow.com/kannada/breaking-a-horrific-accident-in-belagavi-three-dead-including-a-person-who-was-trying-to-rescue-the-injured/

Read More

ಹುಬ್ಬಳ್ಳಿ: ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಮಂಡಳಿಯು 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ. ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ. ಈ ಪರಿಷ್ಕೃತ ಸೇವೆ ಜುಲೈ 5 ರಿಂದ 26, 2025 ರವರೆಗೆ ಜಾರಿಯಲ್ಲಿರುತ್ತದೆ. ಇದರ ಜೋಡಿ ರೈಲು, 07356 ಸಂಖ್ಯೆಯ ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು, ರಾಮೇಶ್ವರಂ ಬದಲಿಗೆ ರಾಮನಾಥಪುರಂನಿಂದ ಜುಲೈ 6 ರಿಂದ 27, 2025 ರವರೆಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 06:50ಕ್ಕೆ ಹೊರಟು, ಮರುದಿನ ಬೆಳಿಗ್ಗೆ 05:00ಕ್ಕೆ ರಾಮನಾಥಪುರಂ ತಲುಪಲಿದೆ. ವಾಪಸಾತಿ…

Read More

ಗುಜರಾತ್: ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯಲ್ಲಿ ಏರ್ ಇಂಡಿಯಾ ವಿಮಾನವು ನಿನ್ನೆ ಪತನಗೊಂಡಿತ್ತು. ವಿಮಾನದಲ್ಲಿದ್ದಂತ 242 ಮಂದಿ ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸಿಬ್ಬಂದಿ ಸೇರಿ 265 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಕಾರಣವಾದಂತ ಮಾಹಿತಿ ನೀಡುವಂತ ವಿಮಾನದಲ್ಲಿದ್ದ ಎಮರ್ಜೆನ್ಸಿ ಲೊಕೇಟರ್ ಟ್ರಾನ್ಸ್ ಮೀಟರ್ ಪತ್ತೆಯಾಗಿದೆ. ಪ್ರತಿಯೊಂದು ವಿಮಾನದಲ್ಲಿ ಒಂದು ನಿರ್ಣಾಯಕ ಸುರಕ್ಷತಾ ಸಾಧನವೆಂದರೇ ಅದು ಎಮರ್ಜೆನ್ಸಿ ಲೊಕೇಟರ್ ಟ್ರಾನ್ಸ್ ಮೀಟರ್ ಆಗಿದೆ. ATS ಎಂಬುದಾಗಿಯೇ ಕರೆಯುವಂತ ಇದು ವಿಮಾನ ದುರಂತದಂತ ಸಂದರ್ಭದಲ್ಲಿ ಒಂದು ನಿರ್ಣಾಯಕ ಸುರಕ್ಷತಾ ಸಾಧನವಾಗಿದೆ. ಎಟಿಎಸ್ ತೊಂದರೆಯ ಸಂಕೇತಗಳನ್ನು ಕಳುಹಿಸಲು ಮತ್ತು ಪತನಗೊಂಡ ವಿಮಾನವನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. https://twitter.com/ANI/status/1933490974061199749

Read More

ನವದೆಹಲಿ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಹಣಕಾಸು ಆಯೋಗಕ್ಕೆ ಪ್ರಸ್ತಾಪಿಸಿದ ರಾಜ್ಯದ ಶಿಫಾರಸ್ಸುಗಳ ಮುಖ್ಯಾಂಶಗಳು ಮುಂದಿದೆ ಓದಿ. ಮುಖ್ಯಮಂತ್ರಿಯವರು 2025ರ ಜೂನ್ 13ರಂದು ಮಧ್ಯಾಹ್ನ 3:00 ಗಂಟೆಗೆ 16ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಅರ್ವಿಂದ್ ಪನಗಾರಿಯ ಮತ್ತು ಆಯೋಗದ ಗೌರವಾನ್ವಿತ ಸದಸ್ಯರೊಂದಿಗೆ ಭೇಟಿ ಮಾಡಿ, ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮತ್ತು ಹಣಕಾಸು ವರ್ಗಾವಣೆಗಳ ಕುರಿತು ರಾಜ್ಯದ ಆಶಯಗಳು, ನಿರೀಕ್ಷೆಗಳು ಮತ್ತು ಪ್ರಸ್ತಾವನೆಗಳನ್ನು ಮಂಡಿಸಿದರು. ಈ ಸಭೆಯಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು, ಮುಖ್ಯ ಕಾರ್ಯದರ್ಶಿರವರು, ಮುಖ್ಯಮಂತ್ರಿ ಕಚೇರಿ ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು. ಮಾನ್ಯ ಮುಖ್ಯಮಂತ್ರಿಗಳು ಹೆಚ್ಚುವರಿ ಜ್ಞಾಪಕ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದರೊಂದಿಗೆ, ಈ ಜ್ಞಾಪಕ ಪತ್ರದಲ್ಲಿ ನ್ಯಾಯಯುತ, ಪಾರದರ್ಶಕ ಮತ್ತು ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ರಾಜ್ಯದ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದರು. ಆಯೋಗವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕರ್ನಾಟಕದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು – ರಾಜ್ಯವು ದೇಶದ…

Read More

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಅಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಹದ್ಮಾರಿ 169ಎ ತೀರ್ಥಹಳ್ಳಿ- ಮಲೆ ರಸ್ತೆಯ ಆಗುಂಬೆ ಘಾಟೆಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ:15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಉಲ್ಲೇಖ(1)ರ ಪತ್ರದಲ್ಲಿ ಕೋರಲಾಗಿದೆ.ಈ ವಿಚಾರದಲ್ಲಿ ಉಲ್ಲೇಖ(2)ರಂತೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯಲಾಗಿರುತ್ತದೆ ಎಂದಿದ್ದಾರೆ. ಸದರಿಯವರ ಕೋರಿಕೆ ಹಾಗೂ ಪೊಲೀಸ್‌ ಇಲಾಖಾ ವರದಿಯನ್ನಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ…

Read More

ಬೆಂಗಳೂರು: ರಾಜ್ಯಪಾಲರಿಗೆ ಸುಳ್ಳು ಆರೋಪ ಮಾಡಿ, ತೇಜೋವಧೆ ಮಾಡಿದಂತ ತೇಜಸ್ ಎ ಗೌಡ ಎಂಬುವರ ವಿರುದ್ಧ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ. ತೇಜಸ್ ಎ ಗೌಡ ಎಂಬ ವ್ಯಕ್ತಿ ಸುಳ್ಳು ಆರೋಪಗಳನ್ನು ಮಾಡಿ ನನ್ನ ತೇಜೋವದೆ ಮಾಡುವ ದುರುದ್ದೇಶದಿಂದ ಮುಕ್ತಾಯಗೊಂಡಿರುವ ಪ್ರಕರಣಗಳ ಉಲ್ಲೇಖ ಮಾಡಿ ಮತ್ತು ನ್ಯಾಯಾಲಗಳ ಆದೇಶಕ್ಕೆ ವಿರುದ್ಧವಾಗಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿರುತ್ತಾರೆ. ಇವರ ಪ್ರಯತ್ನದ ಹಿಂದೆ ಸುಳ್ಳು ದೂರುಗಳ ಮುಖಾಂತರ ಹಣ ಮಾಡುವ ದುರುದ್ದೇಶವೂ ಇರುವಂತಿದೆ. ಇಂತಹ ಸುಳ್ಳು ದೂರುಗಳ ಮೇಲೆ ಅನೇಕ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ ಎಂದಿದ್ದಾರೆ. ಇವರ ದುರುದ್ದೇಶಪೂರಿತ ಮತ್ತು ಸುಳ್ಳು ಸುದ್ದಿಯ ಆರೋಪಗಳ ಮೇಲೆ…

Read More

ಬೆಂಗಳೂರು: ಸರ್ಕಾರವು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಕೇಂದ್ರ ಸರ್ಕಾರವು ವಿಪಕ್ಷ ನಾಯಕರ ಮೇಲೆ ದುರುದ್ದೇಶ ಪೂರ್ವಕವಾಗಿ ಐ.ಟಿ, ಇ.ಡಿ ದಾಳಿ ನಡೆಸಿರುವುದೇ ದೊಡ್ಡ ಸಾಧನೆಯಾಗಿದೆ. ಈ 11 ವರ್ಷದಲ್ಲಿ ಬಿಜೆಪಿ ನೀಡಿದ್ದ ಯಾವುದೇ ಆಶ್ವಾಸನೆ-ಯನ್ನು ಈಡೇರಿಸಲಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಅಕ್ರಮ ಪತ್ತೆ ಮಾಡುತ್ತಿಲ್ಲ. ಈ ಬಗ್ಗೆ ಐ.ಟಿ, ಇ.ಡಿ ಗಮನ ವಹಿಸಬೇಕು ಎಂದರು. ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರಲಿಲ್ಲ. ಉದ್ಯೋಗ ಸೃಷ್ಟಿ ಮಾಡಲಿಲ್ಲ. ಅಗತ್ಯ ವಸ್ತುಗಳ ಬೆಲೆ, ಡಿಸೇಲ್, ಪೆಟ್ರೋಲ್ ಮತ್ತು ಗ್ಯಾಸ್ ಸಿಲಿಂಡ‌ರ್ ಸೇರಿದಂತೆ ಎಲ್ಲಾ ಬೆಲೆಗಳು ಗಗನಕ್ಕೇರಿವೆ. ಗಾಳಿ ಬೆಳಕು ಬಿಟ್ಟು ಉಳಿದ ಎಲ್ಲಾ ಪದಾರ್ಥಗಳಿಗೂ ಜಿಎಸ್‌ಟಿ ಹಾಕಿದ ಕೀರ್ತಿ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಲೇವಡಿ ಮಾಡಿದರು. ಉದ್ಯೋಗ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿಯ ಅವಧಿಯಲ್ಲಿ ನಿರುದ್ಯೋಗ ಸೃಷ್ಟಿದ್ದೇ ಹೆಚ್ಚು. ಜೊತೆಗೆ ಹಲವು ಸಾರ್ವಜನಿಕ ಕ್ಷೇತ್ರಗಳ ಉದ್ಯೋಗಿಗಳು ಕೆಲಸ…

Read More

ಶಿವಮೊಗ್ಗ : ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ, ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದರೇ, ಕೆಲಸ ಮಾಡಲು ಲಂಚ ಕೇಳುತ್ತಿದ್ದರೇ, ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದರೇ, ಕಳಪೆ ಕಾಮಗಾರಿ ನಡೆಯುತ್ತಿದ್ದರೇ ಮತ್ತು ಕಂಡುಬಂದರೇ, ಸರ್ಕಾರಿ ನೌಕರ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದರೇ, ಸರ್ಕಾರಿ ನೌಕರ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೇ, ಈ ಬಗ್ಗೆ ದೂರಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಲಿಖಿತ ಅಹವಾಲು ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/why-do-airplanes-get-into-accidents-during-takeoff-and-landing-here-are-the-details/ https://kannadanewsnow.com/kannada/breaking-a-horrific-accident-in-belagavi-three-dead-including-a-person-who-was-trying-to-rescue-the-injured/

Read More