Author: kannadanewsnow09

ಮೈಸೂರು: ರಾಜ್ಯದ ಉಪ್ಪಾರ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಉಪ್ಪಾರ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಘೋಷಿಸಿದ್ದಾರೆ. ಮೈಸೂರಿನ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಆವರಣದಲ್ಲಿ ಭಗೀರಥ ಜಯಂತೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಉಪ್ಪಾರ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ವರದಿಯು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ವರದಿಯ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು. ಉಪ್ಪಾರ ಸಮುದಾಯವು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದೆ. ಸಾಮಾಜಿಯ ನ್ಯಾಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಉಪ್ಪಾರ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು. ಅಪೂರ್ಣಗೊಂಡಿರುವಂತ ಉಪ್ಪಾರ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದರು. https://kannadanewsnow.com/kannada/if-the-central-government-implements-gst-with-two-slabs-karnataka-will-incur-a-loss-of-15000-crores-every-year-cm/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೇವಲ 15 ಸೆಕೆಂಡುಗಳಲ್ಲಿ ಹೃದಯದ ಸಮಸ್ಯೆ ಪತ್ತೆ ಹಚ್ಚುವಂತ AI-ಚಾಲಿತ ಸ್ಟೆತೊಸ್ಕೋಪ್ ಕಂಡು ಹಿಡಿಯಲಾಗಿದೆ.  ದಿ ಗಾರ್ಡಿಯನ್ ಪ್ರಕಾರ, ಲಂಡನ್‌ನ ಇಂಪೀರಿಯಲ್ ಕಾಲೇಜ್ ಮತ್ತು ಇಂಪೀರಿಯಲ್ ಕಾಲೇಜ್ ಹೆಲ್ತ್‌ಕೇರ್ NHS ಟ್ರಸ್ಟ್‌ನ ಸಂಶೋಧಕರ ತಂಡವು ಕೇವಲ 15 ಸೆಕೆಂಡುಗಳಲ್ಲಿ ಮೂರು ಗಂಭೀರ ಹೃದಯ ಸ್ಥಿತಿಗಳನ್ನು ಪತ್ತೆಹಚ್ಚುವ AI-ಚಾಲಿತ ಸ್ಟೆತೊಸ್ಕೋಪ್ ಅನ್ನು ಅಭಿವೃದ್ಧಿಪಡಿಸಿದೆ. ಈ ಆವಿಷ್ಕಾರವು ಹೃದಯ ವೈಫಲ್ಯ, ಹೃದಯ ಕವಾಟದ ಕಾಯಿಲೆ ಮತ್ತು ಅಸಹಜ ಹೃದಯ ಲಯಗಳನ್ನು ತ್ವರಿತವಾಗಿ, ಮೊದಲೇ ಪತ್ತೆಹಚ್ಚುವ ಮೂಲಕ ಹೃದಯ ಆರೈಕೆಯಲ್ಲಿ ಕ್ರಾಂತಿಯನ್ನುಂಟು ಮಾಡುತ್ತದೆ. ಹೊಸ ಸಾಧನವು ಸಾಂಪ್ರದಾಯಿಕ ಸ್ಟೆತೊಸ್ಕೋಪ್‌ಗೆ ಒಂದು ಪ್ರಮುಖ ಅಪ್‌ಗ್ರೇಡ್ ಆಗಿದೆ, ಇದು ಎರಡು ಶತಮಾನಗಳಿಗೂ ಹೆಚ್ಚು ಕಾಲ ಬಳಕೆಯಲ್ಲಿರುವ ವೈದ್ಯಕೀಯ ಸಾಧನವಾಗಿದೆ. ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು, ಹೈಟೆಕ್ ಸ್ಟೆತೊಸ್ಕೋಪ್ ಹೃದಯ ಬಡಿತ ಮತ್ತು ಮಾನವ ಕಿವಿ ಪತ್ತೆಹಚ್ಚಲು ಸಾಧ್ಯವಾಗದ ರಕ್ತದ ಹರಿವಿನಲ್ಲಿನ ಸಣ್ಣ ವ್ಯತ್ಯಾಸಗಳನ್ನು ವಿಶ್ಲೇಷಿಸಬಹುದು. ಇದು…

Read More

ನವದೆಹಲಿ: ಇಲ್ಲಿನ ರೋಹಿಣಿ ಸೆಕ್ಟರ್ -28 ರ ಕೊಳಚೆ ಪ್ರದೇಶಗಳಲ್ಲಿ ಭಾನುವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 50 ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಐಎಎನ್‌ಎಸ್ ಮತ್ತು ಪಿಟಿಐ ಹಂಚಿಕೊಂಡ ವೀಡಿಯೊಗಳು ಕೊಳೆಗೇರಿ ಸಮೂಹವನ್ನು ಆವರಿಸಿರುವ ಕೆಂಪು ಹೊಳಪನ್ನು ತೋರಿಸಿವೆ, ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳು ಲೇನ್‌ಗಳಲ್ಲಿ ಸಾಲುಗಟ್ಟಿ ನಿಂತಿದ್ದರಿಂದ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ. https://TWITTER.com/ians_india/status/1962170597657711019 ಸುದ್ದಿ ಸಂಸ್ಥೆಗಳ ಪ್ರಕಾರ, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಸಂಜೆ 7.01 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿದೆ ಎಂದು ಡಿಎಫ್‌ಎಸ್ ಸುದ್ದಿ ಸಂಸ್ಥೆಗಳಿಗೆ ತಿಳಿಸಿದೆ, ನಂತರ ಆರು ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಬೆಂಕಿಯ ಕಾರಣವನ್ನು ಇನ್ನೂ ಖಚಿತಪಡಿಸಿಕೊಳ್ಳಲಾಗಿಲ್ಲ ಎಂದು ಅದು ಹೇಳಿದೆ. ಜನನಿಬಿಡ ಪ್ರದೇಶದಿಂದ ದೊಡ್ಡ ಹೊಗೆ ಹೊರಹೊಮ್ಮಿದ ನಂತರ ಪೊಲೀಸ್ ಸಿಬ್ಬಂದಿ ಕೂಡ ಪ್ರದೇಶವನ್ನು ತಲುಪಿದರು.

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ದಿಗಟೆಕೊಪ್ಪ ಗ್ರಾಮದಲ್ಲಿ ಶನಿವಾರ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಜನರೇಟರ್ ಸ್ಪೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಇಂತಹ ಗಾಯಾಳು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ, ಗಾಯಾಳುವಿನ ಆರೋಗ್ಯವನ್ನು ವಿಚಾರಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ದಿಗಟೆಕೊಪ್ಪದ ಮಾಸ್ತಿಕಾಂಬಾ ಯುವಕ ಸಂಘದ ಗಣಪತಿ ವಿಸರ್ಜನಾ ಮೆರವಣಿಗೆ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಈ ವಿಸರ್ಜನಾ ಸಂದರ್ಭದಲ್ಲಿ ಬೆಳಕಿನ ವ್ಯವಸ್ಥೆಗಾಗಿ ಅಳವಡಿಸಿಕೊಂಡಿದ್ದ ಜನರೇಟರ್ ಸ್ಪೋಟಗೊಂಡಿತ್ತು. ಈ ವೇಳೆಯಲ್ಲಿ ಸ್ಥಳದಲ್ಲಿದ್ದ ಲೋಕೇಶ್ ಎಂಬುವವರ ಎರಡು ಕಾಲಿಗೆ ಗಾಯವಾಗಿತ್ತು. ತಕ್ಷಣ ಯುವಕ ಸಂಘದ ಸದಸ್ಯರು ಲೋಕೇಶ್ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದರು. ಆ ಬಳಿಕ ಗಾಯಾಳು ಲೋಕೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ತಿಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಶಿವಮೊಗ್ಗದ ಎನ್.ಎಚ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕೇಶ್…

Read More

ಚಿಕ್ಕಬಳ್ಳಾಪುರ: ಬಾಗೇಪಲ್ಲಿ (ಭಾಗ್ಯನಗರ) ಪಟ್ಟಣದಲ್ಲಿ ಸೋಮವಾರ (ಸೆ 1) ಶಾಹ್ ಹ್ಯಾಪಿನೆಸ್ ಅರ್ಜೆಂಟ್ ಕೇರ್ ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಸೆಂಟರ್ ಆರಂಭವಾಗಲಿದೆ. ‘ಒಂದು ಜಗತ್ತು ಒಂದು ಕುಟುಂಬ’ ಪ್ರತಿಷ್ಠಾನವು ಕ್ಯಾಲಿಫೋರ್ನಿಯಾ ಮೂಲದ ದತ್ತಿ ಸಂಸ್ಥೆ ‘ಶಾಹ್ ಹ್ಯಾಪಿನೆಸ್ ಫೌಂಡೇಷನ್’ ಹಾಗೂ ಸರ್ವಮಂಗಳ್ ಕುಟುಂಬ ದತ್ತಿಯ ಸಹಯೋಗದಲ್ಲಿ ಈ ಕೇಂದ್ರವನ್ನು ನಾಡಿಗೆ ಲೋಕಾರ್ಪಣೆ ಮಾಡುತ್ತಿದೆ. ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಈ ಆರೋಗ್ಯ ಕೇಂದ್ರವನ್ನು ನಿರ್ವಹಿಸಲಿದೆ. ಈ ಆರೋಗ್ಯ ಕೇಂದ್ರವು ‘ಒಂದು ಜಗತ್ತು ಒಂದು ಕುಟುಂಬದ ಸಾಯಿ ಸ್ವಾಸ್ಥ್ಯ ಚಿಕಿತ್ಸಾಲಯ’ ಸಮೂಹದ ಭಾಗವಾಗಲಿದೆ. ಹಿಂದುಳಿದ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಗುರಿಯನ್ನು ಈ ಚಿಕಿತ್ಸಾಲಯವು ಹೊಂದಿದೆ. ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಸೆಂಟರ್‍‌ನಲ್ಲಿ ಲಭ್ಯವಿರುವ ಸೌಲಭ್ಯಗಳು * ದಿನ ನಿತ್ಯದ ಅನಾರೋಗ್ಯ ಸಮಸ್ಯೆಗಳಿಗೆ ತುರ್ತು ಸೇವೆಗಳು, ಪ್ರಥಮ ಚಿಕಿತ್ಸೆ ಹಾಗೂ ತುರ್ತು ಸಾಮಾನ್ಯ ವೈದ್ಯಕೀಯ ಸೇವೆಗಳು * ಎಕ್ಸ್-ರೇ, ಪ್ರಯೋಗಾಲಯ ಹಾಗೂ…

Read More

ಬೆಂಗಳೂರು: ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳ ಆಧಾರದಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಹೊಸ 5 ನಗರ ಪಾಲಿಕೆಗಳನ್ನು ಸರ್ಕಾರ ಅಧಿಸೂಚಿಸಿದರೂ, ಹಾಲಿ ಇರುವ ವಾರ್ಡ್‌ಗಳೇ ಮುಂದುವರೆಯಲಿವೆ. ಪ್ರಸ್ತುತ, ಬಿಬಿಎಂಪಿ ಹೊಸ ನಗರ ಪಾಲಿಕೆಗಳ ಕಾರ್ಯಾಚರಣೆಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಆಡಳಿತ ವೆಚ್ಚವನ್ನು ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸ್ಪಷ್ಟ ಪಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆಯಡಿಯಲ್ಲಿ, 5 ನಗರ ಪಾಲಿಕೆಗಳ ಅಧಿಸೂಚನೆಯ ನಂತರ ಸರ್ಕಾರವು ವಾರ್ಡ್ ಮರುವಿಂಗಡನಾ ಆಯೋಗವನ್ನು (Delimitation Commission) ನೇಮಕ ಮಾಡಲಿದೆ. ಆ ಆಯೋಗವು ಪ್ರತಿ ನಗರ ಪಾಲಿಕೆಯ ವಾರ್ಡ್‌ಗಳ ಸಂಖ್ಯೆ, ಗಡಿಗಳು ಹಾಗೂ ಇತರೆ ವಿವರಗಳನ್ನು ನಿರ್ಧರಿಸಲಿದೆ ಎಂದಿದ್ದಾರೆ. ಹೀಗಾಗಿ ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡಬೇಡಿ ಮತ್ತು ಈ ಕುರಿತು ಪ್ರಕಟವಾದ ಯಾವ ಮಾಹಿತಿಯೂ ನಿಜಾಂಶದಿಂದ ಕೂಡಿರುವುದಿಲ್ಲ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. https://kannadanewsnow.com/kannada/ai-powered-stethoscope-detects-heart-conditions-in-just-15-seconds/ https://kannadanewsnow.com/kannada/bmtc-bus-services-start-on-this-new-route-in-bengaluru/

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ: 01.09.2025 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಸುತ್ತುವಳಿ ಸಂಖ್ಯೆ 1 MF-22D ‌ ಬೊಮ್ಮಸಂದ್ರ ಮೆಟ್ರೋ ನಿಲ್ದಾಣ   ಬಿಡುವ ವೇಳೆ: 1005, 1205, 1400, 1550. ಆನೇಕಲ್   ಬಿಡುವ ವೇಳೆ 0855, 1055, 1250, 1445. ಬೊಮ್ಮಸಂದ್ರ, ಚಂದಾಪುರ, ಇಗ್ಗಲೂರು, ಮರಸೂರು ಕ್ರಾಸ್‌, ಕರ್ಪೂರ ಗೇಟ್, ಆನೇಕಲ್‌ 8 https://kannadanewsnow.com/kannada/woman-sexually-harassed-looted-of-cash-by-masked-man-in-bengaluru-pg/ https://kannadanewsnow.com/kannada/good-news-for-the-uppar-community-of-the-state-cm-siddaramaiah-recommends-st-to-the-center/

Read More

ಬೆಂಗಳೂರು: ನಗರದ ಮಹಿಳಾ ಪೇಯಿಂಗ್ ಗೆಸ್ಟ್ ಕೇಂದ್ರವೊಂದರಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ಕೋಣೆಗೆ ನುಗ್ಗಿ 23 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ನಂತರ ಹಣವನ್ನು ದೋಚಿದ್ದಾನೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಗಂಗೋತ್ರಿ ವೃತ್ತದಲ್ಲಿರುವ ಮಹಿಳೆಯರಿಗಾಗಿರುವ ಪಿಜಿ ಕೇಂದ್ರದಿಂದ ಈ ಘಟನೆ ವರದಿಯಾಗಿದೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಮುಖವಾಡ ಧರಿಸಿ ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿಕೊಂಡ ವ್ಯಕ್ತಿ ಮಹಿಳಾ ಪಿಜಿಗೆ ನುಗ್ಗಿದ್ದಾನೆ.  ಪಿಜಿ ಒಳಗೆ ನಗುಗ್ಗುವ ಮೊದಲು ಕಾಮುಕ, ನೆಲ ಮಹಡಿಯಲ್ಲಿನ ಎಲ್ಲಾ ಕೊಠಡಿಗಳನ್ನು ಹೊರಗಿನಿಂದ ಲಾಕ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಬಳಿಕ ಪಿಜಿಯೊಂದರ ಕೊಠಡಿಯಲ್ಲಿ ಮಲಗಿದ್ದಂತ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆ ವಿರೋಧಿಸಿದಾಗ, ಚಾಕುವಿನಿಂದ ಬೆದರಿಸಿ, ಉಗುರುಗಳಿಂದ ಆಕೆಯ ಕಾಲುಗಳನ್ನು ಕೆರೆದು, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆಕೆಯ ಕಪಾಟಿನಿಂದ 2,500 ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದಾನೆ. ಮಹಿಳೆ ತಕ್ಷಣ ಸುದ್ದಗುಂಟೆಪಾಳ್ಯ…

Read More

ಮೈಸೂರು: ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ ಆದರೆ ಹಣಕಾಸಿನ(Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗುವುದು ದೊಡ್ಡ ಮೊತ್ತ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 2017 ರಲ್ಲಿ ಜಿಎಸ್ ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು 12% ತೆರಿಗೆ ಬೆಳವಣಿಗೆಯಾಗಿದೆ. ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ…

Read More

ಬೆಂಗಳೂರು: ವಾಹನ ಸವಾರರಿಗೆ ಬಿಗ್ ಶಾಕ್ ಎನ್ನುವಂತೆ ಇಂದು ಮಧ್ಯರಾತ್ರಿಯಿಂದ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೋಲ್ ದರ ಏರಿಕೆಯಾಗಲಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್.1, 2025ರ ನಾಳೆಯಿಂದ ಜಾರಿಗೆ ಬರುವಂತೆ ಟೋಲ್ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿತ್ತು. ಅದರಂತೆ ನಾಳೆಯಿಂದ ಟೋಲ್ ದರ ಏರಿಕೆಯಾಗಲಿದೆ. ಇಂದು ಮಧ್ಯರಾತ್ರಿಯಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್-75ರಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದೆ. ಹೀಗಾಗಿ ಲಘು ವಾಹನಗಳಿಗೆ ರೂ.10 ರಿಂದ 15ರಷ್ಟು, ಭಾರೀ ವಾಹನಗಳಿಗೆ ರೂ.50 ರಿಂದ 100 ರೂಪಾಯಿಯಷ್ಟು ಟೋರ್ ದರ ಏರಿಕೆಯ ಬಿಸಿ ತಟ್ಟಲಿದೆ. https://kannadanewsnow.com/kannada/dk-shivakumar-was-moving-forward-to-form-a-government-in-alliance-with-bjp-yatnals-new-bomb/ https://kannadanewsnow.com/kannada/take-precautions-to-prevent-unfortunate-incidents-in-mandya-minister-chaluwarayaswamy-directs-police/

Read More