Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಅಜೆರ್ಬೈಜಾನ್‌ನಿಂದ ಟರ್ಕಿಗೆ ತೆರಳುತ್ತಿದ್ದ ಟರ್ಕಿಶ್ ಸಿ-130 ಮಿಲಿಟರಿ ಸರಕು ವಿಮಾನವು ಮಂಗಳವಾರ ಜಾರ್ಜಿಯಾ-ಅಜೆರ್ಬೈಜಾನ್ ಗಡಿಯಲ್ಲಿ ಅಪಘಾತಕ್ಕೀಡಾಗಿದೆ ಎಂದು ಟರ್ಕಿಶ್ ರಕ್ಷಣಾ ಸಚಿವಾಲಯ ತಿಳಿಸಿದೆ, ಜಂಟಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ. ರಕ್ಷಣಾ ಸಚಿವಾಲಯದ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಹೇಳಿಕೆಯ ಪ್ರಕಾರ, “ನಮ್ಮ ದೇಶಕ್ಕೆ ಬರಲು ಅಜೆರ್ಬೈಜಾನ್‌ನಿಂದ ಹೊರಟ ನಮ್ಮ ಸಿ-130 ಮಿಲಿಟರಿ ಸರಕು ವಿಮಾನಗಳಲ್ಲಿ ಒಂದು ಜಾರ್ಜಿಯಾ-ಅಜೆರ್ಬೈಜಾನ್ ಗಡಿಯಲ್ಲಿ ಅಪಘಾತಕ್ಕೀಡಾಗಿದೆ. ಅಜೆರ್ಬೈಜಾನ್ ಮತ್ತು ಜಾರ್ಜಿಯನ್ ಅಧಿಕಾರಿಗಳ ಸಮನ್ವಯದೊಂದಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿವೆ ಎಂದಿದೆ. ಬಲಿಪಶುಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಹೇಳಿಕೆಯಲ್ಲಿ ಹೀಗೆ ಹೇಳಿದರು: “ಟರ್ಕಿಶ್ ವಾಯುಪಡೆಗೆ ಸೇರಿದ ಮಿಲಿಟರಿ ಸರಕು ವಿಮಾನವು ಗಾಂಜಾದಿಂದ ಹೊರಟು ಜಾರ್ಜಿಯನ್ ಭೂಪ್ರದೇಶಕ್ಕೆ ಪತನಗೊಂಡು ಸೈನಿಕರ ಸಾವಿಗೆ ಕಾರಣವಾದ ಅಪಘಾತದ ಸುದ್ದಿ ನಮ್ಮನ್ನು ತೀವ್ರವಾಗಿ ಬೆಚ್ಚಿಬೀಳಿಸಿದೆ. “ಜೀವ ಕಳೆದುಕೊಂಡವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಕಷ್ಟದ ಕ್ಷಣದಲ್ಲಿ, ಈ ದುರಂತ…

Read More

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಯನ್ನು ವಿವಿಧ ಸಮೀಕ್ಷಾ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಈ ಸಮೀಕ್ಷೆಯಲ್ಲಿ ಎನ್ ಡಿ ಎ ಸ್ಪಷ್ಟ ಬಹುಮತ ಪಡೆಯಲಿದೆ ಎಂಬುದಾಗಿ ಹೇಳಲಾಗಿದೆ. ಮಾಟ್ರಿಜ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ ಎನ್ ಡಿಎ 147ರಿಂದ 167 ಸೀಟನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷದ ಎಂಜಿಪಿ 70 ರಿಂದ 90 ಸೀಟ್, ಜೆಎಸ್ ಪಿ 0, ಇತರೆ 2ರಿಂದ 6 ಸೀಟು ಗೆಲ್ಲುವ ಸಾಧ್ಯತೆಯನ್ನು ತಿಳಿಸಿದೆ. ಪೀಪಲ್ ಇನ್ ಸೈಟ್ ಸಮೀಕ್ಷೆಯ ಪ್ರಕಾರ ಎನ್ ಡಿಎಗೆ ಸ್ಪಷ್ಟ ಬಹುಮತ ಬರಲಿದೆ ಎಂಬುದಾಗಿ ಹೇಳಲಾಗಿದೆ. ಎನ್ ಡಿಎ 133-143, ಮಹಾಘಟಬಂಧನ್ 93-102, ಇತರೆ 2-9 ಸ್ಥಾನವನ್ನು ಗೆಲ್ಲಲಿವೆ ಎಂಬುದಾಗಿ ಹೇಳಲಾಗಿದೆ. https://twitter.com/ANI/status/1988236009977606355 ಡಿವಿ ರಿಸರ್ಚ್ ನಂತೆ ಎನ್ ಡಿಎಗೆ ಸರಳ ಬಹುಮತ ಬರಲಿದೆ. ಎನ್ ಡಿಎ 132 ರಿಂದ 152, ಮಹಾಘಟಬಂಧನ್ ಗೆ 83-98 ಸೀಟ್, ಜೆಎಸ್ ಪಿ 2ರಿಂದ 4, ಇತರೆ 1 ರಿಂದ 8 ಸೀಟ್ ಪಡೆಯುವ ಸಾಧ್ಯತೆ ಇದೆ…

Read More

ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಂಪುಟ ಸಮಿತಿಯ ಸಭೆ ನಡೆಯಲಿದೆ. ನಾಳೆ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಭದ್ರತಾ ಸಂಪುಟ ಸಮಿತಿ ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಂಪುಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸದ್ಯ ಭೂತಾನ್ ಪ್ರವಾಸದಲ್ಲಿರುವಂತ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ಭದ್ರತಾ ಸಂಪುಟ ಸಮಿತಿ ಸಭೆಯನ್ನು ನಡೆಸಲಿದ್ದಾರೆ. ದೆಹಲಿ ಕಾರು ಸ್ಪೋಟ ಕೇಸ್: ಕೇಂದ್ರ ಗೃಹ ಇಲಾಖೆಗೆ ‘ಪ್ರಾಥಮಿಕ ತನಿಖಾ ವರದಿ’ ಸಲ್ಲಿಕೆ ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಗೆ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಈ ಘಟನೆ ಕುರಿತಂತೆ ತಕ್ಷಣವೇ ತನಿಖೆಗೆ ಇಳಿದಂತ ದೆಹಲಿ ಪೊಲೀಸರು ತಮ್ಮ ಪ್ರಾಥಮಿಕ ತನಿಖಾ…

Read More

ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಗೆ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಈ ಘಟನೆ ಕುರಿತಂತೆ ತಕ್ಷಣವೇ ತನಿಖೆಗೆ ಇಳಿದಂತ ದೆಹಲಿ ಪೊಲೀಸರು ತಮ್ಮ ಪ್ರಾಥಮಿಕ ತನಿಖಾ ವರದಿಯನ್ನು ಸಿದ್ಧಪಡಿಸಿದ್ದರು. ಈ ತನಿಖಾ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ದೆಹಲಿ ಸ್ಪೋಟದ ಆರೋಪಿಗಳನ್ನು ಬಿಡಲ್ಲ – ಅಮಿತ್ ಶಾ ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಸಿದಂತ ಆರೋಪಿಗಳನ್ನು ಬಿಡುವುದಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ದೆಹಲಿ ಕಾರು ಸ್ಪೋಟದ ಆರೋಪಿಗಳು ಎಲ್ಲೇ ಇದ್ರೂ ನಾವು ಬಿಡಲ್ಲ. ಪತ್ತೆ ಹಚ್ಚುವಂತ ಕೆಲಸವನ್ನು ತನಿಖಾ ಸಂಸ್ಥೆಗಳು ಕೈಗೊಂಡಿರೋದಾಗಿ ತಿಳಿಸಿದ್ದಾರೆ. https://kannadanewsnow.com/kannada/another-video-of-an-i20-car-goes-viral-2-weeks-before-the-delhi-blasts/ https://kannadanewsnow.com/kannada/money-will-be-deposited-in-the-accounts-of-farmers-who-lost-their-crops-due-to-heavy-rains-cm-siddaramaiah-announces/

Read More

ನವದೆಹಲಿ: ಅಕ್ಟೋಬರ್ 29 ರ ಎಸಿಸಿಟಿವಿ ದೃಶ್ಯಾವಳಿಗಳು, ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಬಿಳಿ ಹುಂಡೈ ಐ20 ಕಾರು ಖರೀದಿಸಿದ ದಿನದಂದು ಹರಿಯಾಣದ ಫರಿದಾಬಾದ್‌ನಲ್ಲಿ ಮೂವರು ಪ್ರಯಾಣಿಕರೊಂದಿಗೆ ಕಾಣಿಸಿಕೊಂಡಿರುವುದನ್ನು ಬಹಿರಂಗಪಡಿಸಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಳೆದ ತಿಂಗಳ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಫರಿದಾಬಾದ್ ಬೀದಿಯಲ್ಲಿರುವ ಬಿಳಿ ಹುಂಡೈ ಐ20 ಕಾರಿನಲ್ಲಿ ಮೂವರು ಪ್ರಯಾಣಿಕರಲ್ಲಿ ಇಬ್ಬರು ಸಂಜೆ 4:20 ರ ಸುಮಾರಿಗೆ ಮಾಲಿನ್ಯ ನಿಯಂತ್ರಣ ತಪಾಸಣಾ ಕೇಂದ್ರದಂತೆ ಕಾಣುವ ಸ್ಥಳದಲ್ಲಿ ವಿವಿಧ ಅಂತರಗಳಲ್ಲಿ ವಾಹನವನ್ನು ಪ್ರವೇಶಿಸುತ್ತಿರುವುದನ್ನು ಕಾಣಬಹುದು. ದೃಶ್ಯಗಳಲ್ಲಿ, ವಾಹನವು ಮುಂಭಾಗದಲ್ಲಿ ಇಬ್ಬರು ಮತ್ತು ಹಿಂಭಾಗದಲ್ಲಿ ಮೂರನೇ ವ್ಯಕ್ತಿಗಳು ಕುಳಿತಿರುವಂತೆ ಕಾಣಬಹುದು. https://twitter.com/htTweets/status/1988183840360460676 ಸೋಮವಾರ ಸಂಜೆ ಐತಿಹಾಸಿಕ ಸ್ಮಾರಕದ ಬಳಿ ಸ್ಫೋಟಗೊಂಡು 13 ಜನರು ಸಾವನ್ನಪ್ಪಿ 21 ಜನರು ಗಾಯಗೊಂಡ ದುರ್ಘಟನೆಗೆ ಕಾರಣವಾದ ಕಾರು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ನಿವಾಸಿ ಡಾ. ಉಮರ್ ಉನ್ ನಬಿ ಅವರದ್ದಾಗಿದ್ದು, ಭಯೋತ್ಪಾದಕ ಸಂಬಂಧಗಳನ್ನು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಎಚ್‌ಟಿ ವರದಿಯ…

Read More

ನವದೆಹಲಿ: ದೆಹಲಿಯಲ್ಲಿ ಕಾರು ಸ್ಪೋಟ ಮಾಡಿ 12 ಮಂದಿ ಸಾವಿಗೆ ಕಾರಣವಾಗಿರುವಂತ ಯಾರನ್ನೂ ಬಿಡುವುದಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. https://twitter.com/ANI/status/1988208654215246201 ಇಂದು ಭದ್ರತಾ ಪಡೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದಂತ ಅವರು, ಮಾತನಾಡಿದಂತ ಅವರು, ದೆಹಲಿ ಕೆಂಪುಕೋಟೆ ಬಳಿಯಲ್ಲಿ ಐ20 ಕಾರು ಸ್ಪೋಟ ಘಟನೆ ಸಂಬಂಧ ತನಿಖೆ ಮುಂದುವರೆದಿದೆ. ಸ್ಪೋಟಕದ ಕಾರಣಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚುವ ಕೆಲಸವನ್ನು ಮಾಡುತ್ತಿರುವುದಾಗಿ ತಿಳಿಸಿದರು. ದೆಹಲಿ ಕಾರು ಸ್ಪೋಟಕದ ಆರೋಪಿಗಳ ಪತ್ತೆಗೆ ಕ್ರಮ ವಹಿಸುವಂತೆ ಸೂಚಿಸಿದಂತ ಅವರು, ಕಾರು ಸ್ಪೋಟ ಮಾಡಿದ ಯಾರನ್ನೂ ಬಿಡುವುದಿಲ್ಲ ಎಂಬುದಾಗಿ ಎಚ್ಚರಿಕೆ ನೀಡಿದರು. ಇದರ ಮಧ್ಯೆ ಕಾರು ಸ್ಪೋಟದಿಂದಾಗಿ 12 ಮಂದಿ ಬಲಿಯಾದ ಘಟನೆ ಸಂಬಂಧ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ಕೂಡ ನಡೆಯಲಿದೆ. https://kannadanewsnow.com/kannada/delhi-car-blast-case-central-government-orders-national-investigation-agency-nia-probe/ https://kannadanewsnow.com/kannada/money-will-be-deposited-in-the-accounts-of-farmers-who-lost-their-crops-due-to-heavy-rains-cm-siddaramaiah-announces/

Read More

ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು. ಉದ್ಘಾಡಿಸಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು’ ಎಂದರು.‌ ಸಚಿವ ಎಂ ಬಿ ಪಾಟೀಲ ಮಾತನಾಡಿ, `ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ…

Read More

ನವದೆಹಲಿ: ದೆಹಲಿ ಕಾರು ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency -NIA)ಗೆ ಹಸ್ತಾಂತರಿಸಿದ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ದೆಹಲಿಯ ಕೆಂಪುಕೋಟೆ ಸಮೀಪದ ಮೆಟ್ರೋ ರೈಲು ಗೇಟ್ ಬಳಿಯಲ್ಲಿ ಕಾರು ಸ್ಪೋಟಗೊಂಡು 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಘಟನೆ ನಿನ್ನೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವಂತ ಕೇಂದ್ರ ಸರ್ಕಾರವು ರಾಷ್ಟ್ರೀ ತನಿಖಾ ದಳದಿಂದ (NIA) ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ. https://twitter.com/ANI/status/1988175311662706725 ನಿನ್ನೆ ದೆಹಲಿಯ ಕೆಂಪುಕೋಟೆ ಬಳಿಯಲ್ಲಿನ ಮೆಟ್ರೋ ನಿಲ್ದಾಣದ ಗೇಟ್ ಬಳಿಯಲ್ಲೇ ಎರಡು ಕಾರುಗಳು ಸ್ಪೋಟಗೊಂಡಿದ್ದವು. ಈ ಸ್ಪೋಟದಿಂದಾಗಿ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಅಲ್ಲದೇ ಹಲವರು ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಮಾಹಿತಿ ಪಡೆದಿದ್ದರು. ಅಲ್ಲದೇ ಮೃತರ ಆತ್ಮಕ್ಕೂ ಶಾಂತಿಯನ್ನು ಕೋರಿದ್ದರು. ಈ ಘಟನೆಯ ಕಾರಣ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭೇಟಿ ನೀಡಿ ಪರಿಶೀಲನೆ…

Read More

ನವದೆಹಲಿ: ದೆಹಲಿಯ ಕೆಂಪುಕೋಟೆ ಸಮೀಪದ ಮೆಟ್ರೋ ರೈಲು ಗೇಟ್ ಬಳಿಯಲ್ಲಿ ಕಾರು ಸ್ಪೋಟಗೊಂಡು 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಘಟನೆ ನಿನ್ನೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವಂತ ಕೇಂದ್ರ ಸರ್ಕಾರವು ರಾಷ್ಟ್ರೀ ತನಿಖಾ ದಳದಿಂದ (NIA) ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ. https://twitter.com/ANI/status/1988175311662706725 ನಿನ್ನೆ ದೆಹಲಿಯ ಕೆಂಪುಕೋಟೆ ಬಳಿಯಲ್ಲಿನ ಮೆಟ್ರೋ ನಿಲ್ದಾಣದ ಗೇಟ್ ಬಳಿಯಲ್ಲೇ ಎರಡು ಕಾರುಗಳು ಸ್ಪೋಟಗೊಂಡಿದ್ದವು. ಈ ಸ್ಪೋಟದಿಂದಾಗಿ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಅಲ್ಲದೇ ಹಲವರು ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಮಾಹಿತಿ ಪಡೆದಿದ್ದರು. ಅಲ್ಲದೇ ಮೃತರ ಆತ್ಮಕ್ಕೂ ಶಾಂತಿಯನ್ನು ಕೋರಿದ್ದರು. ಈ ಘಟನೆಯ ಕಾರಣ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು. ಇದೀಗ ಕೇಂದ್ರ ಸರ್ಕಾರವು, ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ನಡೆದಿದ್ದಂತ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಲ ದಿನಗಳ ಹಿಂದಷ್ಟೇ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸುವುದನ್ನು ನಿಷೇಧಿಸಿ ಆದೇಶಿಸಿದ್ದರು. ಆದರೇ ರಾಜ್ಯ ಸರ್ಕಾರದ ಈ ಆದೇಶಕ್ಕೂ ಡೋಂಟ್ ಕೇರ್ ಎನ್ನುವಂತೆ ಇಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಸಲಾಗಿದೆ. ದಿನಾಂಕ 28-10-2025ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿ, ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚಿಸಿದ್ದರು. ಈ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚಿಸಿದ್ದರು. ಆದರೇ ಇಂದು ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಚೇರಿಯಲ್ಲಿ ನಡೆದಂತ ಗೃಹಲಕ್ಷ್ಮೀ ಸಂಘದ ಪ್ರಮಾಣಪತ್ರ ಹಸ್ತಾಂತರದ ಸಭೆಯಲ್ಲೇ ಸರ್ಕಾರಿ ಆದೇಶವನ್ನು ಗಾಳಿಗೆ ತೂರಲಾಗಿದೆ. ಇಂದಿನ ಸಚಿವ…

Read More