Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ದುಬೈ: ದುಬೈ ವಾಯು ಪ್ರದರ್ಶನದಲ್ಲಿ ನಡೆದ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನಗೊಂಡಿತು. ಈ ಘಟನೆ ಕ್ಯಾಮೆರಾದಲ್ಲಿಯೂ ಸೆರೆಯಾಗಿದ್ದು, ಇದೀಗ ವಿಡಿಯೋ ವೈರಲ್ ಆಗುತ್ತಿದೆ. ವಿಮಾನವು ಇದ್ದಕ್ಕಿದ್ದಂತೆ ಗಾಳಿಯಲ್ಲಿ ಅಲುಗಾಡುತ್ತಾ, ತೀವ್ರವಾಗಿ ಪಲ್ಟಿಯಾಗಿ, ನಂತರ ನಿಯಂತ್ರಣ ಕಳೆದುಕೊಂಡು ನೆಲದ ಮೇಲೆ ಬೆಂಕಿ ಹೊತ್ತಿಕೊಂಡಿರುವುದನ್ನು ಇದು ತೋರಿಸುತ್ತದೆ. ವಿಮಾನ ನಿಲ್ದಾಣದ ಪರಿಧಿಯ ಬಳಿಯ ಪತನದ ಪ್ರದೇಶದಿಂದ ಭಾರೀ ಹೊಗೆ ಮತ್ತು ಬೆಂಕಿ ಏರುತ್ತಿದ್ದಂತೆ ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪೈಲಟ್ನ ಸ್ಥಿತಿ ಮತ್ತು ಪತನದ ಕಾರಣದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/sarcastic_us/status/1991816391033532903 https://kannadanewsnow.com/kannada/breaking-central-government-takes-important-step-for-workers-welfare-new-labour-codes-to-come-into-effect-from-today/ https://kannadanewsnow.com/kannada/7-11-crore-cash-robbery-case-in-bengaluru-police-arrest-kingpin-ravis-wife/
ನವದೆಹಲಿ: ಭಾರತದ ಕಾರ್ಮಿಕ ಆಡಳಿತವನ್ನು ಆಧುನೀಕರಿಸುವ ಗುರಿಯನ್ನು ಹೊಂದಿರುವ ಒಂದು ಹೆಗ್ಗುರುತು ಕ್ರಮದಲ್ಲಿ, ಸರ್ಕಾರವು ಶುಕ್ರವಾರ ನಾಲ್ಕು ಕಾರ್ಮಿಕ ಸಂಹಿತೆಗಳನ್ನು – ವೇತನ ಸಂಹಿತೆ (2019), ಕೈಗಾರಿಕಾ ಸಂಬಂಧ ಸಂಹಿತೆ (2020), ಸಾಮಾಜಿಕ ಭದ್ರತೆ ಸಂಹಿತೆ (2020), ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳು (OSHWC) ಸಂಹಿತೆ (2020) – ಜಾರಿಗೆ ತಂದಿದೆ – ಅಸ್ತಿತ್ವದಲ್ಲಿರುವ 29 ಕೇಂದ್ರ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುತ್ತದೆ ಮತ್ತು ತರ್ಕಬದ್ಧಗೊಳಿಸುತ್ತದೆ. ಇದನ್ನು “ಐತಿಹಾಸಿಕ ನಿರ್ಧಾರ” ಎಂದು ಕರೆದ ಸರ್ಕಾರ, ಹೊಸ ಚೌಕಟ್ಟು ದಶಕಗಳಷ್ಟು ಹಳೆಯದಾದ, ವಿಘಟಿತ ಕಾರ್ಮಿಕ ನಿಯಮಗಳನ್ನು ಸರಳಗೊಳಿಸುತ್ತದೆ, ಕಾರ್ಮಿಕರ ಕಲ್ಯಾಣವನ್ನು ಹೆಚ್ಚಿಸುತ್ತದೆ, ಸುರಕ್ಷತಾ ಮಾನದಂಡಗಳನ್ನು ಬಲಪಡಿಸುತ್ತದೆ ಮತ್ತು ಭಾರತದ ಕಾರ್ಮಿಕ ಪರಿಸರ ವ್ಯವಸ್ಥೆಯನ್ನು ಜಾಗತಿಕ ಅತ್ಯುತ್ತಮ ಅಭ್ಯಾಸಗಳೊಂದಿಗೆ ಜೋಡಿಸುತ್ತದೆ ಎಂದು ಹೇಳಿದೆ. ವರ್ಷಗಳ ಸಮಾಲೋಚನೆ ಮತ್ತು ಪೂರ್ವಸಿದ್ಧತಾ ಕಾರ್ಯಗಳ ನಂತರ, ಅನುಷ್ಠಾನವು 21 ನವೆಂಬರ್ 2025 ರಿಂದ ಜಾರಿಗೆ ಬರುತ್ತದೆ. ಭವಿಷ್ಯಕ್ಕೆ ಸಿದ್ಧವಾಗಿರುವ ಕಾರ್ಯಪಡೆಗೆ ಆಧುನಿಕ ಚೌಕಟ್ಟು ಈ ಸಂಹಿತೆಗಳು…
ಬೆಂಗಳೂರು: ನಗರದಲ್ಲಿ ಎಟಿಎಂಗೆ ತುಂಬೋದಕ್ಕೆ ಕೊಂಡೊಯ್ಯುತ್ತಿದ್ದಂತ ಹಣವನ್ನು ಆರ್ ಬಿ ಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ಮಾಡಿದ್ದರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣದಲ್ಲಿ ಕಿಂಗ್ ಪಿನ್ ರವಿ ಎಂಬುದಾಗಿ ಪೊಲೀಸರು ತನಿಖೆಯಲ್ಲಿ ಪತ್ತೆ ಹಚ್ಚಿದ್ದರು. ಅಲ್ಲದೇ ಬಂಧಿಸಿದ್ದರು. ಈ ಪ್ರಕರಣದಲ್ಲಿ ನಿನ್ನೆ ರಾತ್ರಿ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಪತಿ ರವಿ, 7.11 ಕೋಟಿ ದರೋಡೆ ಕೇಸಲ್ಲಿ ಭಾಗಿಯಾಗಿರೋದನ್ನು ಅವರ ಪತ್ನಿ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ನಾನೇ ಪೊಲೀಸ್ ಠಾಣೆಗೆ ಬರಬೇಕು ಎಂದುಕೊಂಡಿದ್ದೆ. ನೀವೇ ಬಂದ್ರಿ ಎಂದು ಪೊಲೀಸರ ಜೊತೆಗೆ ರವಿತ ಪತ್ನಿ ತೆರಳಿರೋದಾಗಿ ಹೇಳಲಾಗುತ್ತಿದೆ. ತನ್ನ ಪತಿ ರವಿ ಬೆಂಗಳೂರಲ್ಲಿ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದರು. ಲಾಸ್ ಆಗಿ ಕೆಲಸ ಇಲ್ಲದೇ ಮನೆಯಲ್ಲಿದ್ದರು. ಈ ವೇಳೆ ಏರಿಯಾದ ಹುಡುಗರನ್ನು ಸೇರಿಸಿಕೊಂಡು ರಾಬರಿಗೆ…
ಬೆಂಗಳೂರು: ಆಮ್ ಆದ್ಮಿ ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಿಕಾಂತ ರಾವ್ ” ರಾಜ್ಯದಲ್ಲಿ ಎಲ್ಲೆಂದರಲ್ಲಿ ಅವ್ಯಾಹತವಾಗಿ ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದು ಜನತೆ ಶಾಂತಿಯಿಂದ ಜೀವಿಸಲು ಸಾಧ್ಯವಾಗುತ್ತಿಲ್ಲ. ಹಾಡಹಗಲೇ ಸಿನಿಮಿಯ ರೀತಿಯಲ್ಲಿ ಕೋಟ್ಯಾಂತರ ಹಣವನ್ನು ಲೂಟಿ ಮಾಡುವಂತ ಪ್ರಕರಣಗಳು ನಡೆಯುತ್ತಿವೆ. ಮಹಿಳೆ ಮತ್ತು ಮಕ್ಕಳ ಮೇಲೆ ಮೇಲೆ ನಿರಂತರ ಅತ್ಯಾಚಾರ – ದೌರ್ಜನ್ಯ ಪ್ರಕರಣಗಳು, ಕೋಟ್ಯಾಂತರ ರೂಪಾಯಿಗಳ ಸೈಬರ್ ಅಪರಾಧಗಳು, ಕಳ್ಳತನ ಕೊಲೆ , ದೊಂಬಿ, ಕೋಮು ದಳ್ಳುರಿ ನಡೆಯುತ್ತಿದ್ದರೂ ಗೃಹ ಸಚಿವ ಜಿ ಪರಮೇಶ್ವರ್ ಉಡಾಫೆ ಉತ್ತರಗಳನ್ನು ನೀಡುತ್ತಾ ಸಂಪೂರ್ಣ ನಿರಂತರ ವೈಫಲ್ಯವನ್ನು ಹೊಂದುತ್ತಿದ್ದಾರೆ. ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಎಳ್ಳಷ್ಟು ಹತೋಟಿ ಇಲ್ಲದಾಗಿದೆ. ಕೂಡಲೇ ಇಂತಹ ನಿರ್ಲಕ್ಷ್ಯ , ಬೇಜವಾಬ್ದಾರಿ ಮಂತ್ರಿಗಳನ್ನು ಸಂಪುಟದಿಂದ ಕೈ ಬಿಡಬೇಕು ” ಎಂದು ಆಗ್ರಹಿಸಿದರು. ” ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ. ಇದು ಮುಂದುವರೆದರೆ ಮುಖ್ಯಮಂತ್ರಿಗಳ ಮನೆ ಮುಂದೆ…
ನವದೆಹಲಿ: ದೇಶದ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಗಿಫ್ಟ್ ನೀಡಿದ್ದಾರೆ. ಇಂದಿನಿಂದಲೇ ಜಾರಿಗೆ ಬರುವಂತೆ ಹೊಸ ಕಾರ್ಮಿಕ ಸಂಹಿತೆಗಳನ್ನು ಅಧಿಸೂಚನೆ ಹೊರಡಿಸಿದ್ದಾರೆ. ಈ ಅಧಿಸೂಚನೆಯಂತೆ ಇನ್ಮುಂದೆ ಎಲ್ಲಾ ಕಾರ್ಮಿಕರಿಗೆ ಸಕಾಲಿಕ ಕನಿಷ್ಠ ವೇತನ ಖಾತರಿ ಜಾರಿಯಾಗಲಿದೆ. ಭಾರತದ ಬಹುನಿರೀಕ್ಷಿತ ಕಾರ್ಮಿಕ ಸುಧಾರಣೆಗಳು ಇಂದು ಜಾರಿಗೆ ಬಂದಿದ್ದು, ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಅಧಿಕೃತವಾಗಿ ಅಧಿಸೂಚನೆ ಮತ್ತು ನವೆಂಬರ್ 21, 2025 ರಿಂದ ಜಾರಿಗೆ ತರಲಾಗಿದೆ. ಈ ಸುಧಾರಣೆಗಳು ಕೇವಲ ಸಾಮಾನ್ಯ ಬದಲಾವಣೆಗಳಲ್ಲ, ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರ ಕಲ್ಯಾಣಕ್ಕಾಗಿ ತೆಗೆದುಕೊಂಡ ಪ್ರಮುಖ ಹೆಜ್ಜೆಯಾಗಿದೆ ಎಂದು ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. “ಇಂದಿನಿಂದ, ದೇಶದಲ್ಲಿ ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲಾಗಿದೆ” ಎಂದು ಮಾಂಡವಿಯಾ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಮನ್ಸುಖ್ ಮಾಂಡವಿಯಾ ಎಕ್ಸ್ ಪೋಸ್ಟ್ ನಲ್ಲಿ ಈ ಕೆಳಗಿನಂತಿದೆ… ಮೋದಿ ಸರ್ಕಾರದ ಭರವಸೆ: ಪ್ರತಿಯೊಬ್ಬ ಕೆಲಸಗಾರನಿಗೂ ಗೌರವ! ದೇಶದಲ್ಲಿ ಇಂದು ಹೊಸ ಕಾರ್ಮಿಕ ಸಂಹಿತೆಗಳು ಜಾರಿಗೆ…
ಬೆಂಗಳೂರು: “ವೃತ್ತಿ ಯಾವುದೇ ಇರಲಿ. ಮೇಲು- ಕೀಳು ಎಂಬ ಮನೋಭಾವ ಬಿಟ್ಟುಬಿಡಿ. ಪ್ರಾಮಾಣಿಕತೆ, ನೈತಿಕೆ ಉಳಿಸಿಕೊಂಡಲ್ಲಿ ವೃತ್ತಿಯಲ್ಲಿ ಯಶಸ್ಸು ಕಾಣಬಹುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಮಾಜಿ ಅಧ್ಯಕ್ಷ ಅನಿಲ್ ಸಹಸ್ರಬುಧೆ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಆಯೋಜಿಸಿದ್ದ ಮಾಸಿಕ ಉಪನ್ಯಾಸ ಕಾರ್ಯಕ್ರಮದಲ್ಲಿ `ಸಾರ್ವತ್ರಿಕ ಮಾನವೀಯ ಮೌಲ್ಯ’ ವಿಷಯ ಕುರಿತು ಮಾತನಾಡಿದ ಅವರು, “ವೃತ್ತಿಯಲ್ಲಿ ಮೇಲು- ಕೀಳು ಎಂಬುದು ಇಲ್ಲ. ವೃತ್ತಿಯಾವುದೇ ಇರಲಿ ಅದಕ್ಕೆ ಗೌರವ ನೀಡುವುದನ್ನು ನೀವು ಕಲಿಯಬೇಕು. ಅದು ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯಲು ಸಹಾಯ ಮಾಡಲಿದೆ ಎಂದರು. ವಿದ್ಯಾರ್ಥಿಗಳು ಘಟಿಕೋತ್ಸವದ ವೇಳೆ ಸತ್ಯದಿಂದ ನಡೆಯುತ್ತೇನೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸುತ್ತೀರಿ, ಇದನ್ನು ನಿಮ್ಮ ಜೀವನದಲ್ಲಿ ರೂಢಿಸಿಕೊಂಡು ಹೋಗಬೇಕು. ಅಲ್ಲದೆ, ನೀವು ಜೀವನದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿ.ಎಚ್.ಡಿ ಗೆ ನಿಮ್ಮ ಕಲಿಕೆ ಮುಗಿಯಿತು ಎಂದು ಭಾವಿಸುವುದು ತಪ್ಪು. ಕಲಿಕೆ ಎಂಬುದು ಜೀವನದಲ್ಲಿ ನಿರಂತರ. ಶಿಕ್ಷಕರು ಸಹ ಪ್ರತಿನಿತ್ಯ ಅಪ್ಡೇಟ್ ಆಗಬೇಕು. ಏಕೆಂದರೆ, ತಂತ್ರಜ್ಞಾನ ವೇಗವಾಗಿ…
ಬೆಂಗಳೂರು: ನನ್ನ ಕರ್ತದಲ್ಲೇ ಗುಂಪುಗಾರಿಕೆ ಅನ್ನೋದು ಇಲ್ಲ. ನಾನು ಯಾವುದೇ ಬಣದ ನಾಯಕನೂ ಅಲ್ಲ. ನಾನು ಪಕ್ಷದ ಕಟ್ಟಾಳು. ನಾನು 140 ಮಂದಿ ಶಾಸಕರ ಅಧ್ಯಕ್ಷ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ದೆಹಲಿಗೆ ಶಾಸಕರು ತೆರಳಿರೋ ಬಗ್ಗೆ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದರು. ಆ ಕಾರಣಕ್ಕಾಗಿ ಅವರು ಮಂತ್ರಿ ಸ್ಥಾನ ಕೇಳೋದಕ್ಕೆ ದೆಹಲಿಗೆ ತೆರಳಿರಬೇಕೇನೋ ಎಂದರು. ಶಾಸಕರಂದ ಮೇಲೆ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡೋದು ಸಾಮಾನ್ಯವಾಗಿದೆ. ಅದೇ ಕಾರಣಕ್ಕಾಗಿ ಅವರು ದೆಹಲಿಗೆ ಹೋಗಿರಬಹುದು. ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲು ಕಾಂಗ್ರೆಸ್ ಶಾಸಕರು ದೆಹಲಿಗೆ ಹೋದ್ರೆ ತಪ್ಪೇನು? ಈ ಹಿಂದೆ ಸಿದ್ದರಾಮಯ್ಯ ಜೊತೆಗೆ ಕೆಲವರು ದೆಹಲಿಗೆ ಹೋಗಿರಲಿಲ್ಲವೇ ಎಂದರು. ನಾನು ಯಾರನ್ನು ದೆಹಲಿಗೆ ಕರೆದುಕೊಂಡು ಹೋಗಿಲ್ಲ. ಮುಖ್ಯಮಂತ್ರಿ ಹೈಕಮಾಂಡ್ ಹೇಳಿದಂತೆ ಕೇಳುತ್ತಾರೆ. ಸಿದ್ಧರಾಮಯ್ಯ ಅವರ ವಿಚಾರ ಹೇಳಿದ್ದಾರೆ. ನಾನೇ ಐದು ವರ್ಷ ಸಿಎಂ ಎಂದಿದ್ದಾರೆ. ಅವರಿಗೆ ಆಲ್ ದಿ ಬೆಸ್ಟ್. ನಾವೆಲ್ಲರೂ…
ಶಿವಮೊಗ್ಗ : ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದಂತ ಜಿ.ನಾಗೇಶ್ ಅವರಿಗೆ ಶ್ರೀ ಮುರುಘರಾಜೇಂದ್ರ ಸಂಸ್ಥಾನ ಮಠದಿಂದ ಸಮಾಜಸೇವಾ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂನ ಮುರುಘಾಮಠದಲ್ಲಿ ಗುರುವಾರ ಶ್ರೀ ಮುರುಘರಾಜೇಂದ್ರ ಸಂಸ್ಥಾನ ಮಠದ ವತಿಯಿಂದ ಏರ್ಪಡಿಸಿದ್ದ ಕಂಚಿನ ರಥ ಕಾರ್ತಿಕ ರಥ ದೀಪೋತ್ಸವ ಮತ್ತು ಭಾವೈಕ್ಯ ಸಮ್ಮೇಳನದಲ್ಲಿ ಕೆಯುಡಬ್ಲ್ಯೂಜೆ ನಿಕಟಪೂರ್ವ ಅಧ್ಯಕ್ಷ, ಸಾಗರ ಸುತ್ತ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಜಿ.ನಾಗೇಶ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಣಂದೂರು ಲಿಂಗಪ್ಪ ಅವರಿಗೆ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಗಳು, ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು, ಕುಂದುಗೋಳು ಮಠದ ಶ್ರೀ ಅಭಿನವ ಬಸವಣಜ್ಜ ಸ್ವಾಮಿಗಳು, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಡಾ. ಶಾಲಿನಿ ನಾಲ್ವಾಡ್, ಸಂಧ್ಯಾ ಶೆಣೈ, ಡಾ. ಅರ್.ಸಿ.ಜಗದೀಶ್, ಸ್ವಾಮಿರಾವ್, ಬಿ.ಟಾಕಪ್ಪ, ವಿ.ಟಿ.ಸ್ವಾಮಿ, ವಿವಿಧ…
ಮಂಡ್ಯ: ಭವಿಷ್ಯದಲ್ಲಿ ಪಕ್ಷ ಸಂಘಟನೆ ಡಿಕೆಶಿಗೆ ಸಿಎಂ ಪಟ್ಟ ಸಿಗಬೇಕು. ಕೊಟ್ಟ ಮಾತಿಗೆ ಹೈಕಮಾಂಡ್ ತಪ್ಪಬಾರದು. ಡಿಕೆಶಿ ಶ್ರಮಕ್ಕೆ ತಕ್ಕ ಫಲ ಸಿಗಬೇಕು ಎಂಬುದಾಗಿ ಡಿಕೆಶಿ ಪರ ಶಾಸಕ ಕದಲೂರು ಉದಯ್ ಬ್ಯಾಟ್ ಬೀಸಿದ್ದಾರೆ. ಇಂದು ಡಿಸಿಎಂ ಡಿಕೆಶಿ ಸಿಎಂ ಚರ್ಚೆ ವಿಚಾರವಾಗಿ ಮದ್ದೂರಿನಲ್ಲಿ ಶಾಸಕ ಕದಲೂರು ಉದಯ್ ಮಾತನಾಡಿ, ಹೈಕಮಾಂಡ್ ಮಟ್ಟದಲ್ಲಿ ಇದು ತೀರ್ಮಾನ ಆಗಿರುತ್ತೆ. ಒಬ್ಬೊಬ್ಬರು ಒಂದೊಂದು ಮಾತು ಹೇಳ್ತಾರೆ ಅಷ್ಟೆ. ಇದಕ್ಕೆಲ್ಲ ಹೈಕಾಮಂಡ್ ಪರಿಹಾರ ಕೊಡಬೇಕು. ಬಹಳಷ್ಟು ಶಾಸಕರಿಗೆ ಅಭಿಲಾಷೆ ಇದೆ ಆ ನಿಟ್ಟಿನಲ್ಲಿ ದೆಹಲಿಗೆ ಶಾಸಕರು ಹೋಗಿದ್ದಾರೆ ಅಷ್ಟೆ. ಪಕ್ಷಕ್ಕೆ ದಕ್ಕೆ ಆಗಬಾರದು ಅನ್ನೊ ನಿಟ್ಟಿನಲ್ಲಿ ಭೇಟಿ. ಸಿಎಂ ಚರ್ಚೆ ವಿಚಾರಕ್ಕೆ ತೆರೆ ಹೆಳೆಯೋದಕ್ಕೆ ಭೇಟಿ ಎಂದರು. ನಮಗಿಂತ ವಿರೋಧ ಪಕ್ಷದವರೇ ಹೆಚ್ಚು ಚರ್ಚೆ ಮಾಡ್ತಿದ್ದಾರೆ. ನಮ್ಮ ಪಾರ್ಟಿ ತೀರ್ಮಾನ ವಿರೋಧ ಪಕ್ಷಕ್ಕೆ ಏನು ಸಂಬಂಧ? 140 ಶಾಸಕರು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ ಯಾವುದೇ ಅನುಮಾನ ಇಲ್ಲ. ಪಕ್ಷದ ಹಿತದೃಷ್ಟಿಯಿಂದ ಈ ಚರ್ಚೆ ಬೇಡ ತೆರೆ ಎಳೆಯಿರಿ ಅನ್ನೋದಕ್ಕೆ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಯಲಹಂಕಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.11.2025 (ಭಾನುವಾರ) ರಂದು ಬೆಳಗ್ಗೆ 11:00 ಯಿಂದ ಸಂಜೆ 04:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕೆಎಂಎಫ್, ವೈಎನ್ಕೆ ನ್ಯೂ ಟೌನ್ 208, 407, ‘ಬಿ’ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ.ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್ಎಫ್, ಐಎಎಫ್, ಇಂಟರ್ನ್ಯಾಶನಲ್ ಸ್ಕೂಲ್, ಕಾಗೆನ್ಅಡ್ಯಾನ್ಕಾಲೇಜ್, ಕಾಗೆನ್ಅಡ್ಯಾನ್ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾನಗರ ಇತ್ಯಾದಿ.ಪೂರ್ವಂಕರ RMZ ಗ್ಯಾಲೇರಿಯಾ. ಮತ್ತು ಸುತ್ತಮುತ್ತಲಿನ ಪ್ರದೇಶಲ್ಲಿ ಕರೆಂಟ್ ಇರೋದಿಲ್ಲ. 66/11ಕೆವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.11.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಎರಿಯ, ಸಿಂಗಾಪುರ, ಅಬ್ಬಿಗೆರೆ, ಪೈಪ್ ಲೈನ್ ರೋಡ್,ನಿಸರ್ಗ ಬಡಾವಣೆ, ಕೆಂಪೆಗೌಡ…














