Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ಮುತ್ತತ್ತಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಬೆಳಕವಾಡಿ ಪೋಲೀಸರು ದಾಳಿ ಮಾಡಿ 24 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ರಾತ್ರಿ ಮುತ್ತತ್ತಿಯಲ್ಲಿ ಹಲವಾರು ಮಂದಿ ಲಕ್ಷಾಂತರ ರೂಪಾಯಿಯೊಂದಿಗೆ ಜೂಜಾಟದಲ್ಲಿ ತೊಡಗಿದ್ದಾರೆ. ಎಂದು ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ಹಾಗೂ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ರವರ ಸೂಚನೆ ಮೇರೆಗೆ ದಾಳಿ ನಡೆಸಿದ ಬೆಳಕವಾಡಿ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ವಿ.ಪ್ರಕಾಶ್ ಹಾಗೂ ಸಿಬ್ಬಂದಿಗಳು ಭಾನುವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ದಾಳಿ ಮಾಡಿ ಸುಮಾರು 4 ಲಕ್ಷದ 38 ಸಾವಿರದ 770 ರೂ ನಗದು ಹಾಗೂ 13 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಲಗೂರು ಪೋಲೀಸ್ ಠಾಣೆಯಲ್ಲಿ 24 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/english-teacher-minister-dr-sharanprakash-patil-video-goes-viral/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/
ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿಯ ನೂತನ ಶರಾವತಿ ಹಿನ್ನೀರಿನ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಸೇತುವೆ, ಕಾರ್ಯಕ್ರಮದ ವೇದಿಕೆಯಾದಂತ ನೆಹರು ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಕುರಿತಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಮಾಹಿತಿ ನೀಡಿದ್ದು, ನಾಳೆ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾಗರದಾಧ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು. ನಾಳೆ ಇಬ್ಬರು ಎಎಸ್ಪಿ, 6 ಡಿವೈಎಸ್ಪಿ, 22 ಸಿಪಿಐ ಹಾಗೂ ಇನ್ಸ್ ಪೆಕ್ಟರ್, 35 ಪಿಎಸ್ಐ, 60 ಎಎಸ್ಐ, 276 ಹೆಚ್ ಸಿ ಪಿಸಿ, 300 ಹೋಂ ಗಾರ್ಡ್ ಸೇರಿದಂತೆ 699 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದಲ್ಲದೇ 3 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಈ ಮೂಲಕ ನಾಳೆಯ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿರುವುದಾಗಿ ಹೇಳಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…
ಬೆಂಗಳೂರು/ಶಿವಮೊಗ್ಗ: ನಾಳೆ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆಯಾದಂತ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಉದ್ಘಾಟನೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ಇಂತಹ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹಾಜರಾದರೇ, ಸಾಗರದಲ್ಲಿ ನಡೆಯುವಂತ ವೇದಿಕೆ ಕಾರ್ಯಕ್ರಮದಿಂದ ದೂರವೇ ಉಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಾಳೆಯ ಕಾರ್ಯಕ್ರಮದ ಅಧಿಕೃತ ಪಟ್ಟಿ ನಿಮ್ಮ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರವಾಸ ಕಾರ್ಯಕ್ರಮ ಪಟ್ಟಿಯಂತೆ ನಾಳೆ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಭೇಟಿಯನ್ನು ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶರಾವತಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಎಂದಿದೆ. ಮಧ್ಯಾಹ್ನ 1.30ರಿಂದ 2.15ರವರೆಗಿನ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ ಎಂಬುದಾಗಿ ತಿಳಿಸಲಾಗಿದೆ. ಇನ್ನೂ ಸಾಗರ ಶಾಸಕ…
ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಈಗಾಗಲೇ ಪ್ರಾಣಿಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈಗ ಪ್ರಾಣಿಗಳಲ್ಲದೇ ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ವ್ಯಕ್ತಿಯೊಬ್ಬರು ಕೇಳಿದಂತ ಮಾಹಿತಿ ಹಕ್ಕು ಅಧಿನಿಯಮ 2005ರ ಅರ್ಜಿಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿ ವಾಷಿಂಗ್ ಮೆಷಿನ್, ಫ್ರಿಡ್ಜ್, ಟ್ರಕ್ ಟಯರ್, ಅನ್ಯೂಮಿನಿಯಂ ಪೈಪ್, ಪಾತ್ರೆ, ಕಬ್ಬಿಣದ ಪೈಪ್, ಬೆಕ್ಕು, ನಾಯಿ, ಮೊಲವನ್ನು ಸಾಗಿಸಬಹುದಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಎಷ್ಟು ದರ ನಿಗದಿ? ಟ್ರಕ್ ಟೈರ್ ಮೂರು ಯೂನಿಟ್ ಗಳೆಂದು ಪರಿಗಣಿಸಲಾಗುತ್ತದೆ. 60 ಕೆಜಿ ವರೆಗಿನವುಗಳು ಕೊಂಡೊಯ್ಯಬಹುದು. ರೆಫ್ರಿಜರೇಟರ್, ಬೈಸಿಕಲ್, ವಾಶಿಂಗ್ ಮೆಷಿನ್, ವೀಣೆ, ಕಾರ್ ಟೈರ್ ಗಳನ್ನು 2 ಯೂನಿಟ್ ಎಂಬುದಾಗಿ ಪರಿಗಣಿಸಲಾಗುತ್ತದೆ. ಟೇಬಲ್ ಫ್ಯಾನ್, ಹಾರ್ಮೋನಿಯಂ, ಟಿವಿ, ಕಂಪ್ಯೂಟರ್ ಮಾನಿಟರ್, ಸಿಪಿಯು, ಬ್ಯಾಟರಿ, 25 ಲೀಟರ್ ಖಾಲಿ ಕಂಟೈನರ್ ಗಳನ್ನು…
ಚಿಕ್ಕಮಗಳೂರು: ಜಿಲ್ಲೆಗೆ ಪ್ರವಾಸಕ್ಕೆ ಬೆಂಗಳೂರಿನಿಂದ ತೆರಳಿದ್ದಂತ ಟೆಕ್ಕಿಯೊಬ್ಬರು ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ರಾಹುಲ್(29) ಎಂಬುವರೇ ಚಿಕ್ಕಮಗಳೂರು ಪ್ರವಾಸದ ವೇಳೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದಂತ ಟೆಕ್ಕಿಯಾಗಿದ್ದಾರೆ. ಚಿಕ್ಕಮಗಳೂರಿಗೆ ಐವರು ಸ್ನೇಹಿತ ಜೊತೆಗೆ ಸೇರಿ ಪ್ರವಾಸಕ್ಕೆ ರಾಹುಲ್ ತೆರಳಿದ್ದರು. ಚಿಕ್ಕಮಗಳೂರು ಹೊರವಲಯದ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/regarding-the-biryani-for-stray-dogs-in-bangalore-this-clarification-was-provided-by-bbmp/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶುಪಾಲನಾ ವಿಭಾಗದ ವತಿಯಿಂದ ಸಮುದಾಯ (ಬೀದಿ) ನಾಯಿಗಳಿಗೆ ಆಹಾರ ನೀಡುವ ಸಲುವಾಗಿ ಟೆಂಡರ್ ಆಹ್ವಾನಿಸಲಾಗಿದ್ದು, ಇದರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ನಂತರ ಅಂತಿಮ ನಿರ್ಣಯಕ್ಕೊಳಪಟ್ಟಿರುತ್ತದೆ. ಇದರ ವಿಚಾರವಾಗಿ ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸದರಿ ವಿಷಯವು ಹಲವು ರೂಪದಲ್ಲಿ ವರದಿ ಹಾಗೂ ವಿಶ್ಲೇಷಣಾತ್ಮಕವಾಗಿದ್ದು, ಈ ಸಂಬಂಧ ಕೆಳಕಂಡಂತೆ ಸ್ಪಷ್ಟೀಕರಣ ಮಾಹಿತಿಯನ್ನು ಒದಗಿಸಿದೆ. * ಬಿಬಿಎಂಪಿ ಯು ಬೀದಿ ನಾಯಿಗಳಿಗೆ ಆಹಾರ ನೀಡುವುದನ್ನು ಕೋವಿಡ್ ಸಮಯದಲ್ಲಿಯೇ ಕೈಗೆತ್ತಿಕೊಂಡಿತ್ತು. ಆ ಚಟುವಟಿಕೆಯ ಮುಂದುವರಿಕೆಯಾಗಿ, ಕಳೆದ ವರ್ಷವೂ ನಿಗದಿತ ಸಂಖ್ಯೆಯಲ್ಲಿ ನಾಯಿಗಳಿಗೆ ಆಹಾರ ನೀಡಲಾಗಿತ್ತು. ಕಳೆದ ವರ್ಷದ ಕಾರ್ಯಕ್ರಮದಿಂದ ಕಲಿತ ಪಾಠಗಳ ಆಧಾರದ ಮೇಲೆ, ಈ ಯೋಜನೆಯು ಒಂದು ಸುಧಾರಣೆಯಾಗಿದೆ ಮತ್ತು ಕೇಂದ್ರ ಸರ್ಕಾರವು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಮೂಲಕ ವ್ಯಾಖ್ಯಾನಿಸಿದ ಪ್ರಾಣಿ ಜನನ ನಿಯಂತ್ರಣ ನಿಯಮಗಳು, 2023ರ ಪ್ರಕಾರ ಕಾನೂನಾತ್ಮಕ ಅವಶ್ಯಕತೆಯಾಗಿದೆ. ಬಿಬಿಎಂಪಿ ಈಗ ಪ್ರತಿ ವಲಯದಲ್ಲಿ ಆಹಾರ ತಯಾರಕರನ್ನು ಆಯಾ…
ಶಿವಮೊಗ್ಗ: ನಾಳೆ ಸಿಗಂದೂರು ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಹೊತ್ತಿನಲ್ಲೇ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಈ ಕಳಸವಳ್ಳಿ-ಅಂಬಾರಗೋಡ್ಲು ಸೇತುವೆ ನಿರ್ಮಾಣಕ್ಕಾಗಿ ಬರೆದಿದ್ದಂತ ಪತ್ರ ವೈರಲ್ ಆಗಿದೆ. ಕಳಸವಳ್ಳಿ-ಅಬಾರಗೊಡ್ಲು ಸೇತುವೆಯ ಕಾಮಗಾರಿ ಮುಕ್ತಾಯಗೊಂಡು ನಾಳೆ ಉದ್ಘಾಟನೆಯ ಹಂತಕ್ಕೆ ಬಂದು ನಿಂತಿದೆ. ಈ ಸೇತುವೆಯ ರೂವಾರಿಗಳು ಹಲವರಿದ್ದರೂ, ಈಗ ಶಾಸಕ ಗೋಪಾಲಕೃಷ್ಣ ಬೇಳೂರು ಅವರು 2008ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದಂತ ಯಡಿಯೂರಪ್ಪಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಆ ಪತ್ರ ವೈರಲ್ ಆಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಬರೆದಿದ್ದ ಪತ್ರದಲ್ಲಿ ಏನಿದೆ.? ಲಿಂಗನಮಕ್ಕಿ ಅಣೆಕಟ್ಟೆಯ ಶರಾವತಿ ನದಿ ಹಿನ್ನೀರಿನಿಂದಾಗಿ ಸಾಗರ ತಾಲ್ಲೂಕಿನ ತುಮರಿ, ಕುದೂರು, ಶಂಕಣ್ಣ ಶ್ಯಾನುಬೋಗ್, ಜೆನ್ನಗೊಂಡ ಹಾಗೂ ಬಾನಕುಳಿ ಹೀಗೆ ಒಟ್ಟು 5 ಗ್ರಾಮ ಪಂಚಾಯ್ತಿಗಳ ಸುಮಾರು 20 ಸಾವಿರ ಜನರು ತಾಲ್ಲೂಕು ಕೇಂದ್ರದಿಂದ ಸಂಪರ್ಕ ಕಳೆದುಕೊಂಡು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿರುವುದು ತಮಗೆ ತಿಳಿದ ವಿಷಯವಾಗಿರುತ್ತದೆ. ಇದೇ ಭಾಗದಲ್ಲಿ ಬರುವ ಶ್ರೀ ಸಿಗಂದೂರು…
ದಿಸ್ಪುರ್: ಪತ್ನಿಯಿಂದ ವಿಚ್ಛೇದ ಸಿಕ್ಕಿದ್ದಕ್ಕೆ ಖುಷಿಯಿಂದ 40 ಲೀಟರ್ ಹಾಲಿನಿಂದ ಸ್ನಾನವನ್ನು ಮಾಡಿ ಪತಿಯೊಬ್ಬ ಸಂಭ್ರಮಿಸಿದಂತ ಘಟನೆ ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ನಡೆದಿದೆ. ಅಸ್ಸಾಂ ರಾಜ್ಯದ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ ನಲ್ಲಿ ಮಾಣಿಕ್ ಅಲಿ ಎಂಬಾತನೇ ಹೀಗೆ ಸ್ನಾನ ಮಾಡಿದಂತ ಪತಿಯಾಗಿದ್ದಾನೆ. ಹೀಗೆ ಹಾಲಿನಿಂದ ಸ್ನಾನ ಮಾಡಿದಂತ ವೀಡಿಯೋ ವೈರಲ್ ಆಗಿದೆ. ವೀಡಿಯೋದಲ್ಲಿ ನಾನು ಈಗ ಸ್ವತಂತ್ರ ಎಂಬುದಾಗಿ ಹೇಳಿಕೊಂಡಿರುವಂತ ಮಾಣಿಕ್ ಆಲಿ, ಕಾನೂನಿನ ಮೂಲಕ ಪತ್ನಿಯಿಂದ ವಿಚ್ಛೇದನ ಪಡೆದಿದ್ದೇನೆ. ಇಂದಿನಿಂದ ನಾನು ಸ್ವತಂತ್ರ ಎಂದಿದ್ದಾನೆ. ಪತ್ನಿಯಿಂದ ವಿಚ್ಛೇದನ ಪಡೆದ ನಾನು ಶುದ್ಧೀಕರಣಕ್ಕಾಗಿ 40 ಲೀಟರ್ ಹಾಲು ತಂದು ಸ್ನಾನ ಮಾಡುತ್ತಿದ್ದೇನೆ ಎಂಬುದಾಗಿ ಹೇಳಿಕೊಂಡಿದದಾನೆ. ಸ್ಥಳೀಯರ ಪ್ರಕಾರ, ದಂಪತಿಗಳು ಪರಸ್ಪರ ಕಾನೂನುಬದ್ಧವಾಗಿ ತಮ್ಮ ಮದುವೆಯನ್ನು ಕೊನೆಗೊಳಿಸಲು ನಿರ್ಧರಿಸುವ ಮೊದಲು ಅವರ ಪತ್ನಿ ಕನಿಷ್ಠ ಎರಡು ಬಾರಿ ಓಡಿಹೋಗಿದ್ದರು. ವಿಚ್ಛೇದನ ಅಂತಿಮಗೊಂಡಿದೆ ಎಂದು ನನ್ನ ವಕೀಲರು ನಿನ್ನೆ ನನಗೆ ತಿಳಿಸಿದರು. ಆದ್ದರಿಂದ, ಇಂದು ನಾನು ನನ್ನ ಸ್ವಾತಂತ್ರ್ಯವನ್ನು ಆಚರಿಸಲು ಹಾಲಿನಲ್ಲಿ ಸ್ನಾನ ಮಾಡುತ್ತಿದ್ದೇನೆ…
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಎದ್ದಿದೆ. ಈ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ.30ರಂದು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ.30ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ತೆರಳುತ್ತಿರುವುದಾಗಿ ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ದೆಹಲಿಗೆ ತೆರಳಿದ್ದರು. ಕೇಂದ್ರದ ಸಚಿವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದರು. ಅನುಮತಿ, ಅನುಮೋದನೆ, ಅನುದಾನದ ಬಗ್ಗೆಯೂ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಮನವಿ ಮಾಡಿ ವಾಪಾಸ್ ಆಗಿದ್ದರು. https://kannadanewsnow.com/kannada/cm-siddaramaiah-will-not-participate-in-the-inauguration-program-of-the-sigandur-bridge-tomorrow-minister-satish-jarkiholi/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಚಿತ್ರದುರ್ಗ: ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತಡವಾಗಿ ಮಾಹಿತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಅವರು ಭಾಗಿಯಾಗುತ್ತಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ತಡವಾಗಿ ಮಾಹಿತಿ ನೀಡಲಾಗಿದೆ. ಅದೇ ದಿನ ಇಂಡಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಕಾರ್ಯಕ್ರಮ ಫಿಕ್ಸ್ ಆಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದರು. ಸಿಎಂ ಸಿದ್ಧರಾಮಯ್ಯ ಪರವಾಗಿ ನಾನು ಕಾರ್ಯಕ್ರಮಕ್ಕೆ ಹೋಗುತ್ತೇನೆ. ಕರೆದಿದ್ದಾರೋ ಬಿಟ್ಟಿದ್ದಾರೋ ಬೇರೆ ಪ್ರಶ್ನೆ. ರಾಜ್ಯದಲ್ಲಿ ಆಗುತ್ತಿದೆ. ಕೇಂದ್ರ ಸಚಿವರು ಬರುತ್ತಿದ್ದಾರೆ. ಗೌರವಿಸಲು ನಾವು ಭಾಗಿಯಾಗುತ್ತೇವೆ ಎಂದರು. https://kannadanewsnow.com/kannada/follow-these-tips-to-avoid-heart-attack/ https://kannadanewsnow.com/kannada/english-teacher-minister-dr-sharanprakash-patil-video-goes-viral/














