Subscribe to Updates
Get the latest creative news from FooBar about art, design and business.
Author: kannadanewsnow09
ಅರಿಶಿನ ಕೊಂಬಿನ ಮಾಲೆ ಎಂದರೆ ಅರಿಶಿನದ ಕೊಂಬುಗಳಿಂದ ಮಾಡಿದ ಒಂದು ರೀತಿಯ ಮಾಲೆ. ಇದನ್ನು ಸಾಮಾನ್ಯವಾಗಿ ಮಂಗಳ ಕಾರ್ಯಗಳಲ್ಲಿ ಅಥವಾ ಧಾರ್ಮಿಕ ಆಚರಣೆಗಳಲ್ಲಿ ಬಳಸುತ್ತಾರೆ. ಅರಿಶಿನವು ಶುದ್ಧಿ ಮತ್ತು ಮಂಗಳಕರ ಸಂಕೇತವಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಅರಿಶಿನ ಕೊಂಬಿನ ಮಾಲೆಯು ಅರಿಶಿನದ ಕೊಂಬುಗಳನ್ನು ಒಟ್ಟಿಗೆ ಸೇರಿಸಿ, ದಾರದಿಂದ ಕಟ್ಟಿ ತಯಾರಿಸಲಾಗುತ್ತದೆ. ಕೆಲವೊಮ್ಮೆ ಅರಿಶಿನದ ಕೊಂಬುಗಳ ಜೊತೆಗೆ ಇತರ ವಸ್ತುಗಳನ್ನು ಕೂಡ ಸೇರಿಸಲಾಗುತ್ತದೆ. ಇದು ಮದುವೆ, ಗೃಹಪ್ರವೇಶ, ಅಥವಾ ಇತರ ಶುಭ ಸಮಾರಂಭಗಳಲ್ಲಿ ಅಲಂಕಾರಕ್ಕಾಗಿ ಬಳಸಲಾಗುತ್ತದೆ. ಅಲ್ಲದೆ, ದೇವಸ್ಥಾನಗಳಲ್ಲಿ ಅಥವಾ ಪೂಜಾ ಸ್ಥಳಗಳಲ್ಲಿಯೂ ಇದನ್ನು ಕಾಣಬಹುದು. ಅರಿಶಿನದ ಮಾಲೆಯನ್ನು ಧರಿಸುವುದರಿಂದ ಮಂಗಳಕರ ಮತ್ತು ಶುಭ ಫಲಿತಾಂಶಗಳು ಸಿಗುತ್ತವೆ ಎಂಬ ನಂಬಿಕೆಯಿದೆ. ಅರಿಶಿನದ ಕೊಂಬುಗಳ ಜೊತೆಗೆ…
ಬೆಂಗಳೂರು: ಡೆಲಾಯ್ಟ್ ಇಂಡಿಯಾ ಪ್ಯಾರಾಒಲಂಪಿಕ್ನಲ್ಲಿ ಚಿನ್ನದಪದಕ ಪಡೆದ ಬಿಲ್ಲುಗಾರ್ತಿ ಶೀತಲ್ ದೇವಿ ಅವರೊಂದಿಗೆ ಪಾಲುದಾರಿಕೆ ಘೋಷಿಸಿದ್ದು, ಪ್ಯಾರಒಲಂಪಿಕ್ನಲ್ಲಿ ಭಾಗವಹಿಸಲು ಇಚ್ಚಿಸುವ ಹಾಗೂ ಅರ್ಹರ ಪ್ರತಿಭೆಗೆ ಬೆಂಬಲ ನೀಡಲು ಮುಂದಾಗಿದೆ. ಈ ಕುರಿತು ಮಾತನಾಡಿದ ಡೆಲಾಯ್ಟ್ ದಕ್ಷಿಣ ಏಷ್ಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೋಮಲ್ ಶೆಟ್ಟಿ, 15 ನೇ ವಯಸ್ಸಿನಲ್ಲಿ ಬಿಲ್ಲು ಎತ್ತುವ ಮೂಲಕ ಶೀತಲ್ ತನ್ನ ಪ್ರತಿಭೆಯನ್ನು ಇಡೀ ಜಗತ್ತಿಗೆ ತಿಳಿಸಿದರು, 16 ನೇ ವಯಸ್ಸಿನಲ್ಲಿ ವಿಶ್ವದ ನಂ. 1 ಬಿಲ್ಲುಗಾರ್ತಿ ಆಗುವುದಷ್ಟೇ ಅಲ್ಲದೆ, 17 ನೇ ವಯಸ್ಸಿನಲ್ಲಿ ಅರ್ಜುನ ಪ್ರಶಸ್ತಿ ಮತ್ತು ಪ್ಯಾರಾಲಿಂಪಿಕ್ ಕಂಚಿನ ಪದಕವನ್ನು ಗಳಿಸಿದರು, ಇಂತಹ ಪ್ರತಿಭೆಗಳನ್ನು ಪೋಷಿಸಲು ಡೆಲಾಯ್ಟ್ ಇಂಡಿಯಾ ಅರ್ಹರಿಗೆ ಸಂಪೂರ್ಣ ಬೆಂಬಲ ನೀಡಲು ಮುಂದಾಗಿದೆ. ಭಾರತದ ಭವಿಷ್ಯವು ಇಂತಹ ಪ್ರತಿಭಾನ್ವಿತರ ಕೈಯಲ್ಲಿದ್ದು, ಇವರಿಗೆ ಬೇಕಾದ ಸವಲತ್ತು ಹಾಗೂ ಸೌಲಭ್ಯ ಒದಗಿಸಿದರೆ, ಪ್ರತಿಯೊಬ್ಬರೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕಿರೀಟವನ್ನು ಎತ್ತಿ ಹಿಡಿಯುತ್ತಾರೆ. ಭಾರತದ ದೊಡ್ಡ ಶಕ್ತಿ ಅದರ ಜನರಲ್ಲಿದೆ, ಅವರು ದೊಡ್ಡ ಕನಸು ಕಾಣುವ,…
ಬೆಂಗಳೂರು: ಭಾರತದ ಪ್ರಮುಖ ಆನ್-ಡಿಮಾಂಡ್ ಪ್ಲಾಟ್ಫಾರ್ಮ್ ಸ್ವಿಗ್ಗಿ ಲಿಮಿಟೆಡ್, ಐಟಿ ಹಾಗೂ ಇತರೆಡೆ ಕೆಲಸ ಮಾಡುವರಿಗಾಗಿ ಡೆಸ್ಕ್ಈಟ್ಸ್ ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಕುರಿತು ಮಾತನಾಡಿದ ಸ್ವಿಗ್ಗಿಯ ಉಪಾಧ್ಯಕ್ಷ , (ಆಹಾರ ತಂತ್ರ, ಗ್ರಾಹಕ ಅನುಭವ ಮತ್ತು ಹೊಸ ಉಪಕ್ರಮಗಳು) ಶ್ರೀ ದೀಪಕ್ ಮಲೂ, ಇದು ಭಾರತದ 30 ನಗರಗಳಲ್ಲಿನ 7 ಸಾವಿರಕ್ಕೂ ಅಧಿಕ ಟೆಕ್ ಪಾರ್ಕ್ಗಳು, ವ್ಯಾಪಾರ ಕೇಂದ್ರಗಳು ಮತ್ತು ಕಾರ್ಪೊರೇಟ್ ಕಾಂಪ್ಲೆಕ್ಸ್ಗಳಲ್ಲಿ ಕೆಲಸ ಮಾಡುವ ವೃತ್ತಿಪರರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಫುಡ್ ಅನುಭವವಾಗಿದೆ. ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಗುರುಗ್ರಾಮ್, ಪುಣೆ ಮತ್ತು ಕೋಲ್ಕತ್ತಾದಂತಹ ನಗರಗಳಲ್ಲಿ ಇದು ಲಭ್ಯವಿದೆ. ಡೆಸ್ಕ್ ಈಟ್, ಕಚೇರಿಯಲ್ಲಿರುವಾಗ ಸುಲಭ, ವೇಗ ಮತ್ತು ವೈವಿಧ್ಯಮಯ ಆಹಾರ ಸೇವೆಯ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ. ಈ ಸಂಗ್ರಹವು 200,000 ಕ್ಕೂ ಹೆಚ್ಚು ರೆಸ್ಟೋರೆಂಟ್ಗಳಿಂದ ಸುಮಾರು 7 ಲಕ್ಷ ಆಹಾರ ಪದಾರ್ಥಗಳನ್ನು ಒಳಗೊಂಡಿದೆ. ಬಳಕೆದಾರರು ಸ್ವಿಗ್ಗಿ ಅಪ್ಲಿಕೇಶನ್ನಲ್ಲಿ “ಆಫೀಸ್” ಅಥವಾ “ವರ್ಕ್” ಎಂದು ಟೈಪ್ ಮಾಡುವ ಮೂಲಕ ಈ ಸೇವೆಯನ್ನು ಪಡೆಯಬಹುದು.…
ಬೆಂಗಳೂರು: ಸುಜಾತ ಭಟ್ ಮೃತ ಯುವತಿ ಪೋಟೋ ತೋರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದೂರುದಾರೆ ಸುಜಾತಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವಂತ ದೂರುದಾರೆ ಸುಜಾತ ಭಟ್ ಅವರು, ಎಲ್ಲರೂ ಒಂದೊಂದು ರೀತಿ ತೇಜೋವಧೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ. ನನ್ನ ನೋವು ನನಗೆ ಗೊತ್ತು ಎಂಬುದಾಗಿ ಕಿಡಿಕಾರಿದರು. ಇದರಲ್ಲಿ ಫೇಕ್ ಯಾವುದೂ ಇಲ್ಲ. ನಾನು ರಂಗಪ್ರಸಾದ್ ಅವರ ಮನೆಯಲ್ಲಿ ಇದ್ದಿದ್ದು ನಿಜ. ನಾನು ಕೇಳಿರೋದು ನನ್ನ ಮಗಳ ಅಸ್ಥಿ. ಅನಾಮಧೇಯ ವ್ಯಕ್ತಿ ಬಂದು ಶವಗಳನ್ನು ಹೂತಿದ್ದಾಗಿ ಹೇಳಿದ್ದ. ನನ್ನ ಮಗಳ ಅಸ್ಥಿ ಪಂಜರ ಸಿಕ್ಕಿದ್ರೆ ಕೊಡಿ ಎಂದು ಕೇಳಿದ್ದೆ ಎಂದರು. ಪೋಟೋದಲ್ಲಿ ಇರುವವಳು ನನ್ನ ಮಗಳು. ಅದು ಸತ್ಯ. ಒಬ್ಬ ವ್ಯಕ್ತಿ ರೀತಿ ತುಂಬಾ ಜನ ಇರುತ್ತಾರೆ ಅಲ್ವ? ನನ್ನ ಭಾವ ಈ ಆರೋಪಗಳನ್ನು ಮಾಡ್ತಿದ್ದಾರೆ. ನಾನು ಎಲ್ಲಿ ದಾಖಲೆ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದರು. ರಿಪ್ಪನ್ ಪೇಟೆಯಲ್ಲಿ ಪ್ರಭಾಕರ್…
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಬೆಂಗಳೂರು ನಗರ ವಿವಿ, ಇನ್ಮುಂದೆ ಡಾ.ಮನಮೋಹನ್ ಸಿಂಗ್ ವಿವಿ ಎಂಬುದಾಗಿ ಮರುನಾಮಕರಣವಾಗಲಿದೆ. ಬೆಂಗಳೂರು ನಗರ ವಿವಿಯ ಹೆಸರು ಮರು ನಾಮಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ವಿಧೇಯಕದ ಬಗ್ಗೆ ಚರ್ಚೆಯ ನಂತ್ರ ಅಂಗೀಕಾರವನ್ನು ನೀಡಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಹೆಸರು ಬದಲಾವಣೆಯಾಗಲಿದೆ. ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕವು ವಿಧಾನ ಪರಿಷತ್ತಿನಲ್ಲೂ ಅಂಗೀಕಾರಗೊಂಡರೇ ಡಾ.ಮನಮೋಹನ್ ಸಿಂಗ್ ವಿವಿ ಎಂಬುದಾಗಿ ಬೆಂಗಳೂರು ನಗರ ವಿವಿ ಮರು ನಾಮಕರಣವಾಗಲಿದೆ. https://kannadanewsnow.com/kannada/dharmasthala-case-this-is-veerendra-hegdes-first-reaction/ https://kannadanewsnow.com/kannada/the-special-state-cabinet-meeting-scheduled-for-today-at-5-pm-has-been-postponed-to-730-pm/
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಅವರು ರಾಜ್ಯ ಸರ್ಕಾರದ ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ನಾನು ಸಿಬಿಐ ತನಿಖೆಯ ವೇಳೆಯಲ್ಲೂ ಸಂಪೂರ್ಣವಾಗಿ ಸಹಕಾರ ನೀಡಿದ್ದಾಗಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು. ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. https://twitter.com/PTI_News/status/1957750961692139638 ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಧರ್ಮಸ್ಥಳಕ್ಕೆ ಕಳಂಕ ತರಲು ಕೆಲವರು ಯತ್ನಿಸುತ್ತಿದ್ದಾರೆ. ಎಸ್ಐಟಿ ಅಧಿಕಾರಿಗಳ ತನಿಖಾ ವರದಿಗಾಗಿ ನಾವು ಕಾಯುತ್ತಿದ್ದೇವೆ. ಎಸ್ಐಟಿ ಸತ್ಯ ಹೊರಗೆ ತರುತ್ತೆ ಎಂದು ವೀರೇಂದ್ರ ಹೆಗಡೆ ಎಸ್ಐಟಿ ತನಿಖೆಯನ್ನು ಸ್ವಾಗತಿಸಿದರು. ಅಂದಹಾಗೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ಇಂದು ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಈ ಸಭೆಯನ್ನು 5 ಗಂಟೆಗೆ ನಿಗದಿ ಪಡಿಸಿದ್ದನ್ನು, ಸಂಜೆ 7.30ಕ್ಕೆ ಮುಂದೂಡಲಾಗಿದೆ. ರಾಜ್ಯ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟದ ವಿಶೇಷ ಸಭೆಯನ್ನು ಸಂಜೆ 7.30ಕ್ಕೆ ಮುಂದೂಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಕೊಪ್ಪಳ: ಜಿಲ್ಲೆಯ ಜೀವನಾಡಿ ತುಂಗಭದ್ರಾ ಡ್ಯಾಂ ಭರ್ತಿಯಾಗಿದೆ. ಹೀಗಾಗಿ ತುಂಗಭದ್ರಾ ಡ್ಯಾಂನಿಂದ ನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಯಶ ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಭರ್ತಿಯಾಗಿದೆ. ಹೀಗಾಗಿ ಜಲಾಶಯದ 26 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದೆ. ತುಂಗಭದ್ರಾ ಡ್ಯಾಂನ 7 ಗೋಟ್ ಜಾಮ್ ಹಿನ್ನಲೆಯಲ್ಲಿ 26 ಗೇಟ್ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ಡ್ಯಾನ 11, 18, 20, 24, 28ನೇ ಗೇಟ್ ಜಾಮ್ ಆಗಿದೆ. 19ನೇ ಗೇಟ್ ಮೂಲಕ ಅಲ್ಪ ಪ್ರಮಾಣದ ನೀರು ನದಿಗೆ ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/bengaluru-cylinder-blast-case-gas-leak-caused-the-blast-throughout-the-night/
ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಬಳಿಯ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಲಿಂಡರ್ ಸ್ಪೋಟ ಘಟನೆ ನಡೆದಿತ್ತು. ಈ ದುರಂತಕ್ಕೆ ರಾತ್ರಿಯೆಲ್ಲಾ ಗ್ಯಾಸ್ ಲೀಕ್ ಆಗಿರೋದೇ ಕಾರಣ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತಂತೆ ಆಡುಗೋಡಿ ಪೊಲೀಸರಿಂದ ತನಿಖೆ ನಡೆಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಮನೆಯಲ್ಲಿ ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿದ್ದು, ಬೆಳಗ್ಗೆ ಮಗು ಟಿವಿ ಆನ್ ಮಾಡಿದಂತ ಸಂದರ್ಭದಲ್ಲಿ ಸ್ಪೋಟಗೊಂಡಿದೆ ಎಂಬುದಾಗಿ ತಿಳಿದು ಬಂದಿದೆ. ಆಗಸ್ಟ್.15ರಂದು ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಗೂಢ ಸ್ಪೋಟ ಘಟನೆ ನಡೆದಿತ್ತು. ತನಿಖೆ ನಡೆಸಿದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದಾಗಿ ತಿಳಿದು ಬಂದಿತ್ತು. ಈ ದುರಂತದಲ್ಲಿ ಅಂದೇ ಓರ್ವ ಬಾಲಕ ಸಾವನ್ನಪ್ಪಿದ್ದನು. ನಿನ್ನೆ ಬಾಲಕನ ತಾಯಿ, ಸಹೋದರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/invitation-for-recruitment-application-for-the-positions-of-anganwadi-worker-and-assistant/
ಚಿತ್ರದುರ್ಗ: ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ, 53 ಸಹಾಯಕಿರು ಸೇರಿ 64 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್ಸೈಟ್ https://karnemakaone.kar.inc.in/abcd/ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು. ಮೀಸಲಾತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ನಗರದ ಟಿ.ಬಿ.ವೃತ್ತದಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಭವನದ ಕಟ್ಟಡದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.














