Subscribe to Updates
Get the latest creative news from FooBar about art, design and business.
Author: kannadanewsnow09
ಉತ್ತರ ಕನ್ನಡ: ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮನೆಯಲ್ಲಿದ್ದಂತ ಎಲ್ ಪಿ ಜಿ ಸಿಲಿಂಡರ್ ಸ್ಪೋಟಗೊಂಡು ಯುವತಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ರಂಜಿತಾ ನಾಗಪ್ಪ ದೇವಾಡಿಗ(21) ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದಂತ ಎಲ್ ಪಿ ಜಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಪೋಷಕರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಎಲ್ ಪಿ ಜಿ ಸಿಲಿಂಡರ್ ಸ್ಪೋಟಗೊಂಡಿದೆ. ಅನಾರೋಗ್ಯದಿಂದ ಮನೆಯಲ್ಲೇ ಉಳಿದಿದ್ದ ರಂಜಿತಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಎಲ್ ಪಿ ಜಿ ಸಿಲಿಂಡರ್ ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಶಿರಸಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. https://kannadanewsnow.com/kannada/famous-actor-superstar-mohanlal-conferred-with-dadasaheb-phalke-award/ https://kannadanewsnow.com/kannada/low-pressure-in-the-bay-of-bengal-heavy-rains-in-the-state-till-september-29/
ನವದೆಹಲಿ: ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಅವರು ಸೆಪ್ಟೆಂಬರ್ 23, 2025 ರಂದು ಮಂಗಳವಾರ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2023 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇಂದು ಸೆಪ್ಟೆಂಬರ್ 23 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಧಿಕೃತವಾಗಿ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ಚಿತ್ರರಂಗದ ಕೆಲವು ಅತ್ಯುತ್ತಮ ಪ್ರತಿಭೆಗಳಿಗೆ ಪ್ರತಿಷ್ಠಿತ ಗೌರವಗಳನ್ನು ಪ್ರದಾನ ಮಾಡುತ್ತಿದ್ದಾರೆ. ಶಾರುಖ್ ಖಾನ್, ರಾಣಿ ಮುಖರ್ಜಿ, ವಿಕ್ರಾಂತ್ ಮಾಸ್ಸಿ, ಮೋಹನ್ ಲಾಲ್ ಮತ್ತು ಇನ್ನೂ ಅನೇಕರಿಂದ, ಈ ಸಂಜೆ ಪ್ರೇಕ್ಷಕರ ಮೇಲೆ ಅಳಿಸಲಾಗದ ಛಾಪು ಮೂಡಿಸಿದ ಅತ್ಯುತ್ತಮ ಪ್ರದರ್ಶನಗಳು ಮತ್ತು ಚಲನಚಿತ್ರಗಳನ್ನು ಆಚರಿಸಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟ ಮೋಹನ್ ಲಾಲ್ ಅವರಿಗೆ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. https://twitter.com/ANI/status/1970459004347523424
ಸೂಪರ್ಸ್ಟಾರ್ ಶಾರುಖ್ ಖಾನ್ ಗೆ ‘ಜವಾನ್’ ಚಿತ್ರಕ್ಕಾಗಿ ಅತ್ಯುತ್ತಮ ನಾಯಕ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೂಪರ್ಸ್ಟಾರ್ ಶಾರುಖ್ ಖಾನ್ ಅವರಿಗೆ ‘ಜವಾನ್’ ಚಿತ್ರಕ್ಕಾಗಿ ಅತ್ಯುತ್ತಮ ನಾಯಕ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದರು. https://twitter.com/ANI/status/1970457364772843884 ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೂಪರ್ಸ್ಟಾರ್ ಶಾರುಖ್ ಖಾನ್ ಅವರಿಗೆ ‘ಜವಾನ್’ ಚಿತ್ರಕ್ಕಾಗಿ ಅತ್ಯುತ್ತಮ ನಾಯಕ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದರು. https://twitter.com/ANI/status/1970456179785847115 https://kannadanewsnow.com/kannada/i-have-nothing-wrong-with-this-accused-burude-chinnaiah-breaks-down-in-tears-before-the-judge/ https://kannadanewsnow.com/kannada/low-pressure-in-the-bay-of-bengal-heavy-rains-in-the-state-till-september-29/
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟ ಮೋಹನ್ ಲಾಲ್ ಅವರಿಗೆ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. https://twitter.com/ANI/status/1970459004347523424
ಶುಕ್ರವಾರದ ಅಮಾವಾಸ್ಯೆಯಂದು 11 ಅಥವಾ 16 ಲವಂಗವನ್ನು ಇದರ ಜೊತೆ ಸುಟ್ಟಾಕಿ ಬರಬೇಕಾಗಿರುವ ದುಡ್ಡು ಐಶ್ವರ್ಯ ಬಂಗಾರ ಹಣ ನದಿಯಂತೆ ಹರಿದು ಬರುತ್ತದೆ.! ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು…
ದಕ್ಷಿಣ ಕನ್ನಡ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂಬುದಾಗಿ ನ್ಯಾಯಾಧೀಶರ ಎದುರು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/rs-175-crore-proposed-for-100-feet-road-in-maddur-town-mla-k-m-uday/ https://kannadanewsnow.com/kannada/these-trains-will-be-temporarily-halted-at-nagalavi-station-in-dharwad/
ಧಾರವಾಡ: ಜಿಲ್ಲೆಯ ನಾಗಲಾವಿಯ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಅಕ್ಟೋಬರ್ 3 ರಿಂದ 5, 2025ರವರೆಗೆ ನಡೆಯಲಿದೆ, ಭಕ್ತಾದಿಗಳ ಅನುಕೂಲಕ್ಕಾಗಿ ನಾಗಲಾವಿ ಹಾಲ್ಟ್ ನಿಲ್ದಾಣದಲ್ಲಿ ಈ ಕೆಳಗಿನ ರೈಲುಗಳಿಗೆ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆಗಳನ್ನು ಒದಗಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. 1. ರೈಲು ಸಂಖ್ಯೆ 17332 ಎಸ್ಎಸ್ಎಸ್ ಹುಬ್ಬಳ್ಳಿ-ಮಿರಜ್ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಿಗ್ಗೆ 11:33ಕ್ಕೆ ಆಗಮಿಸಿ, 11:35ಕ್ಕೆ ಹೊರಡಲಿದೆ. 2. ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 7:58ಕ್ಕೆ ಬಂದು, 08:00ಕ್ಕೆ ಹೊರಡಲಿದೆ. 3. ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಸಾಯಂಕಾಲ 6:33ಕ್ಕೆ ಆಗಮಿಸಿ, 06:35ಕ್ಕೆ ಹೊರಡಲಿದೆ. 4. ರೈಲು ಸಂಖ್ಯೆ 17331 ಮಿರಜ್-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಮಧ್ಯಾಹ್ನ 12:25ಕ್ಕೆ ಆಗಮಿಸಿ, 12:27ಕ್ಕೆ ಹೊರಡಲಿದೆ. ಈ ರೈಲುಗಳು ತಮ್ಮ ಮೂಲ ನಿಲ್ದಾಣದಿಂದ ಪ್ರಾರಂಭಿಸುವ ಪ್ರಯಾಣದಿಂದ…
ಮಂಡ್ಯ : ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂಗಳನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ಪಟ್ಟಣದ ನಗರಸಭಾ ಕಛೇರಿಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷೆ ಕೋಕಿಲಾ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 2.5 ಕಿ.ಮೀ ರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ 175 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಂದು ತಿಂಗಳಲ್ಲಿ ತಾಂತ್ರಿಕ ಅನುಮೋದನೆ ದೊರಕಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದರು. ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೆಲ್ದರ್ಜೆಗೆರಿಸಿದೆ. ಹೀಗಾಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಸರ್ಕಾರಕ್ಕೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿದ್ದು, ಇನ್ನು ಎರಡು ಮೂರು ತಿಂಗಳಲ್ಲಿ 50 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ…
ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯಿತು. ಸರ್ಕಾರವು ಇದು ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂಬುದಾಗಿ ವಾದಿಸಿತು. ಈ ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆಗೆ ವಿಚಾರಣೆಯನ್ನು ಮುಂದೂಡಿದೆ. ರಾಜ್ಯ ಸರ್ಕಾರ ನಡೆಸುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ, ಅಂಕಿ ಅಂಶ ಸಂಗ್ರಹಕ್ಕೂ ಪ್ರತ್ಯೇಕ ಕಾಯ್ದೆ ಇದೆ. ಆ ಕಾಯ್ದೆಯಲ್ಲಿ ರಾಜ್ಯಕ್ಕೆ ಅಂಕಿ ಅಂಶ ಸಂಗ್ರಹದ ಅಧಿಕಾರ ನೀಡಲಾಗಿಲ್ಲ. ಹಿಂದೆಂದೂ ಇತರೆ ಧರ್ಮದೊಂದಿಗೆ ಜಾತಿಯನ್ನು ಸೇರಿಸಲಾಗಿರಲಿಲ್ಲ ಎಂದು ವಾದಿಸಿದರು. ಬಣಜಿಗ ಕ್ರಿಶ್ಚಿಯನ್, ಬೆಸ್ತರು ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಚೆರೋಡಿ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಗೊಲ್ಲ ಕ್ರಿಶ್ಚಿಯನ್ ಹೀಗೆ 35 ರಿಂದ 40 ಧರ್ಮ ಮಿಶ್ರಿತ ಜಾತಿಗಳನ್ನು ಗುರುತಿಸಿದ್ದಾರೆ. 2002ರ ಜಾತಿಗಳ ಅಧಿಸೂಚನೆಗೂ ಈಗಿನ ಜಾತಿಗಳ ಸಮೀಕ್ಷೆಗೂ…
ಬೆಂಗಳೂರು: ಬುದ್ದಿಮಾಂದ್ಯತೆ ಹೊಂದಿರುವ ಶೇ. 60ರಷ್ಟು ಜನರು ತಮ್ಮ ಇಳಿವಯಸ್ಸಿನಲ್ಲಿ ಅಲ್ಜೈಮರ್ ಕಾಯಿಲೆಗೆ ಒಳಗಾಗುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ನರವಿಜ್ಞಾನ ಎಪಿಲೆಪ್ಟಾಲಜಿ ಮತ್ತು ಸ್ಲೀಪ್ ಮೆಡಿಸಿನ್ನ ಮುಖ್ಯಸ್ಥ ಮತ್ತು ಸಲಹೆಗಾರ ಡಾ. ಪ್ರಮೋದ್ ಕೃಷ್ಣನ್ ಹೇಳಿದ್ದಾರೆ. “ವಿಶ್ವ ಅಲ್ಜೈಮರ್ ದಿನ”ದ ಪ್ರಯುಕ್ತ ಮಣಿಪಾಲ್ ಆಸ್ಪತ್ರೆ ಹಾಗೂ ರೋಚೆ ಡಯಾಗ್ನೋಸ್ಟಿಕ್ಸ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿದ್ದ #MemoryVault ಅಭಿಯಾನದ ಭಾಗವಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ನಾವು ನೋಡಿದ ಎಲ್ಲಾ ಬುದ್ಧಿಮಾಂದ್ಯತೆಯ ರೋಗಿಗಳಲ್ಲಿ ಶೇ.60 ರಷ್ಟು ಜನರು ಆಲ್ಝೈಮರ್ ಕಾಯಿಲೆಗೆ ತುತ್ತಾಗಿದ್ದಾರೆ, ಇದರಲ್ಲಿ ಶೇ.70 ಕ್ಕಿಂತ ಹೆಚ್ಚು ಜನರು 2-3 ವರ್ಷಗಳ ರೋಗಲಕ್ಷಣದ ಕಂಡು ಬಂದ ಬಳಿಕ ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ಹೇಳಿದರು. “ಅಲ್ಜೈಮರ್ ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದರಿಂದ ಅದನ್ನು ಚಿಕಿತ್ಸೆಮಾಡಲು ಅವಕಾಶ ದೊರೆಯಲಿದೆ. CSF ಬಯೋಮಾರ್ಕರ್ಗಳಂತಹ ನಿಖರ ಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿಧಾನಗೊಳಿಸುವ ಜೊತೆಗೆ ರೋಗಿಯ ಜೀವನದ ಗುಣಮಟ್ಟವನ್ನು ಸುಧಾರಿಸಬಹುದು. ARDSI ಅಧ್ಯಕ್ಷೆ ರೇಣು ವೋಹ್ರಾ ಮಾತನಾಡಿ, ಅಲ್ಜೈಮರ್…








