Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರವು ಕೆ ಇ ಆರ್ ಸಿ ಮಾದರಿಯಲ್ಲೇ ಸಾರ್ವಜನಿಕ ಸಾರಿಗೆ ದರ ನಿಯಂತ್ರಣಕ್ಕೆ ಸಮಿತಿಯನ್ನು ರಚಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ‌ವೈಜ್ಞಾನಿಕವಾಗಿ ಪ್ರಯಾಣ ದರ ಹೆಚ್ಚಿಸುವ ಸಲುವಾಗಿ ಈ ಹಿಂದೆ ಯಾವುದೇ ಸಮಿತಿಗಳು ರಚನೆಯಾಗಿರುವುದಿಲ್ಲ. ರಾಜಕೀಯ ಇಚ್ಛಾಶಕ್ತಿಗಳಿಂದ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ.ಕಾಲಕಾಲಕ್ಕೆ ಹೆಚ್ಚಳವಾಗುವ ಡೀಸೆಲ್ ಬೆಲೆ ಮತ್ತು ಇತರೆ ವೆಚ್ಚವನ್ನು ಸರಿದೂಗಿಸಲು ಇಂತಿಷ್ಟು ದರ ಪರಿಷ್ಕರಣೆ ಅವಶ್ಯಕ. ಇಲ್ಲವಾದಲ್ಲಿ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ, ಸದೃಢತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಉದಾಹರಣಗೆ ಬಿ.ಎಂ.ಟಿ‌.ಸಿ 2014 ರಲ್ಲಿ , ಇತರೆ ಸಾರಿಗೆ ನಿಗಮಗಳಲ್ಲಿ 2020 ರಲ್ಲಿ ಪ್ರಯಾದ ದರ ಹೆಚ್ಚಳವಾಗಿತ್ತು. 2014 ರಲ್ಲಿನ ಪ್ರತಿ‌ದಿನ ಡೀಸೆಲ್ ವೆಚ್ಚ ರೂ.7 ಕೋಟಿ ಇದು 2025 ಕ್ಕೆ ರೂ.13 ಕೋಟಿಗೆ ಏರಿಕೆಯಾಗಿದೆ. 2014 ರಲ್ಲಿದ್ದ‌ ಪ್ರತಿದಿನದ ಸಿಬ್ದಂದಿ ವೆಚ್ಚವು ರೂ. 6 ಕೋಟಿಯಿಂದ ರೂ.12 ಕೋಟಿಗೆ ಏರಿಕೆಯಾಗಿದೆ. ವೆಚ್ಚಗಳಲ್ಲಿ ಸುಮಾರು 100% ಏರಿಕೆಯಾಗಿರುವುದನ್ನು‌ ಗಮನಿಸಬೇಕು.…

Read More

ಬೆಂಗಳೂರು: ರಾಜ್ಯ ಸರ್ಕಾರವು ಸಮುದಾಯಗಳ ತೀವ್ರ ಒತ್ತಡಕ್ಕೆ ಮಣಿದು, ಜಾತಿಗಣತಿ ನಮೂನೆಯಿಂದ ಹಿಂದೂ ಕ್ರೈಸ್ತಕ್ಕೆ ಕೋಕ್ ನೀಡಲಾಗಿದೆ. ಈ ಮೂಲಕ ಕ್ರೈಸ್ತ ಜೊತೆ ನಾನಾ ಹಿಂದೂ ಜಾತಿ ಉಲ್ಲೇಖಕಕ್ಕೆ ಬ್ರೇಕ್ ಹಾಕಲಾಗಿದೆ. ಇಂದು ಹಿಂದೂಳಿದ ಆಯೋಗದ ಅಧ್ಯಕ್ಷ ಮಧು ಸೂದನ್ ನಾಯಕ್ ಮತ್ತು ಆಯುಕ್ತ ದಯಾನಂದ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜಾತಿ ಗಣತಿಯ ಪಟ್ಟಿಯಿಂದ 33 ಜಾತಿಗಳನ್ನು ತೆಗೆದಿರುವುದಾಗಿ ತಿಳಿಸಿದ್ದಾರೆ. ಜಾತಿಗಣತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಎನ್ನುವುದು ನಮೂದಿ ಎಂಬುದಾಗಿ ಹೇಳಲಾಗಿತ್ತು. ಜೊತೆಗೆ ಜಾತಿ ಪಟ್ಟಿಯಲ್ಲೂ ಸೇರಿಸಲಾಗಿತ್ತು. ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿ, ಸಮುದಾಯಗಳ ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಹೀಗಾಗಿ 33 ಜಾತಿಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ ಎಂದು ಮಧುಸೂದನ ನಾಯಕ್ ತಿಳಿಸಿದ್ದಾರೆ. ಯಾರು ಯಾವ ಜಾತಿ ಬೇಕಾದರೂ ಬರೆಸಬಹುದು. 1561 ಜಾತಿ ಬಿಟ್ಟು ಬೇರೆ ಯಾವುದೇ ಇದ್ದರೂ ಅದರ ಮಾಹಿತಿ ಕೊಡಬಹುದು. ನಾನು ಜಾತಿ ಹೇಳುವುದಿಲ್ಲ ಎಂದರೂ ಅದಕ್ಕೂ ಅವಕಾಶವಿದೆ. ಇತರೇ ಅಂತಲೂ ಕಾಲಂ…

Read More

ಶಿವಮೊಗ್ಗ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವು ಸೆ. 22 ರಿಂದ ಅ. 7 ರವರೆಗೆ ನಡೆಯಲಿದ್ದು, ಜಿಲ್ಲೆಯ ನಾಗರೀಕರು ಸಮೀಕ್ಷೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಮೆಸ್ಕಾಂ ಇಲಾಖೆಯ ಮಾಹಿತಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಆರ್ ಆರ್ ಸಂಖ್ಯೆ ಹೊಂದಿರುವ ಅಂದಾಜು 543925 ಮನೆಗಳಿದ್ದು, ಈಗಾಗಲೇ ಮೀಟರ್ ರೀಡರ್‌ಗಳಿಂದ ಮನೆ ಮನೆಗೆ ಭೇಟಿ ನೀಡಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವು ಈಗಾಗಲೇ ಮುಕ್ತಾಯ ಹಂತಕ್ಕೆ ಬಂದಿದೆ. ಸಮೀಕ್ಷಾ ಕಾರ್ಯಕ್ಕಾಗಿ ಅಂದಾಜು 4215 ಸಂಖ್ಯೆಯ ಗಣತಿದಾರರನ್ನು ನೇಮಕ ಮಾಡಿದ್ದು, ಸದರಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಆಯೋಗದ ಪ್ರಶ್ನಾವಳಿಗೆ ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಸಲಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದಿರುವ ಗ್ರಾಮಗಳಲ್ಲಿರುವ ಕುಟುಂಬಗಳ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ನೆಟ್ವರ್ಕ್…

Read More

ಶಿವಮೊಗ್ಗ : ಸರ್ಕಾರದ ಯಾವುದೇ ನೆರವಿಲ್ಲದೆ, ಸರ್ಕಾರಗಳು ಮಾಡದಿರುವ ಸಮಾಜಮುಖಿ ಕಾರ್ಯವನ್ನು ಸಹಕಾರ ಸಂಘಗಳು ಮಾಡುತ್ತಿರುವುದು ಮಾದರಿ ಕಾರ್ಯಗಳಲ್ಲೊಂದಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ ಅವರು ಹೇಳಿದರು. ಅವರು ಇಂದು ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ರಾಜ್ಯ ಸರ್ಕಾರಿ ನೌಕರರ ಸೌಹಾರ್ಧ ಸಹಕಾರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ದ್ವಾರಕಾ ಕನ್ವೆನ್ಶನ್‌ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಸರ್ವಸದಸ್ಯರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಾವುದೇ ಸಹಕಾರ ಸಂಘಗಳು ಜಾತಿ, ಪಕ್ಷ ಮತ್ತು ಲಿಂಗಭೇದ ಮರೆತು ಕಾರ್ಯನಿರ್ವಹಿಸುವಂತಾಗಬೇಕು. ಯಾವುದೇ ಸಹಕಾರಿ ಸಂಸ್ಥೆ ನಾಯಕನ ವ್ಯಕ್ತಿತ್ವದ ಮೇಲೆ ಅವಲಂಬಿತವಾಗಿರುತ್ತವೆ ಎಂದವರು ನುಡಿದರು. ನಗರದ ಬೆಳವಣಿಗೆಯಲ್ಲಿ ಇಂತಹ ಸಹಕಾರ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದ ಅವರು, ಸಂಘಗಳಲ್ಲಿ ಎಲ್ಲರಿಗೂ ಸರಳವಾಗಿ, ಸುಲಭವಾಗಿ ಸಾಲಸೌಲಭ್ಯಗಳು ದೊರೆಯುವಂತಾಗಬೇಕು. ಆಗ ನಿಜವಾದ ಸಹಕಾರದ ಪದಕ್ಕೆ ಅರ್ಥ ಬರಲಿದೆ. ಇದರಿಂದಾಗಿ ಅರ್ಹರಿಗೆ ಸಾಲಸೌಲಭ್ಯ ದೊರೆಯುವುದು ಮಾತ್ರವಲ್ಲ, ಪರೋಕ್ಷವಾಗಿ ಉದ್ಯೋಗಸೃಷ್ಠಿಯಾಗಲಿದೆ. ಸಾಲ…

Read More

ಬೆಂಗಳೂರು: ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭಗೊಳ್ಳಲಿದೆ‌. ಈ ಕೆಳಕಂಡ 60 ಪ್ರಶ್ನೆಗಳಿಗೆ ಉತ್ತರಿಸುವುದು ಕಡ್ಡಾಯವಾಗಿದೆ ಎಂದು ಹೇಳಲಾಗುತ್ತಿದೆ. ಆ ಪ್ರಶ್ನೆಗಳು ಈ ಕೆಳಕಂಡಂತೆ ಇವೆ. ಮನೆಯ ಮುಖ್ಯಸ್ಥರ ಹೆಸರು ತಂದೆಯ ಹೆಸರು ತಾಯಿಯ ಹೆಸರು ಕುಟುಂಬದ ಕುಲಹೆಸರು ಮನೆ ವಿಳಾಸ ಮೊಬೈಲ್ ಸಂಖ್ಯೆ ರೇಷನ್ ಕಾರ್ಡ್ ಸಂಖ್ಯೆ ಆದಾರ್ ಸಂಖ್ಯೆ ಮತದಾರರ ಗುರುತಿನ ಚೀಟಿ ಸಂಖ್ಯೆ ಕುಟುಂಬದ ಒಟ್ಟು ಸದಸ್ಯರು. ಧರ್ಮ ಜಾತಿ / ಉಪಜಾತಿ ಜಾತಿ ವರ್ಗ (SC/ST/OBC/General/Other) ಜಾತಿ ಪ್ರಮಾಣ ಪತ್ರ ಇದೆಯೇ? ಪ್ರಮಾಣ ಪತ್ರ ಸಂಖ್ಯೆ ಜನ್ಮ ದಿನಾಂಕ ವಯಸ್ಸು ಲಿಂಗ (ಪುರುಷ/ಸ್ತ್ರೀ/ಇತರೆ) ವೈವಾಹಿಕ ಸ್ಥಿತಿ ಜನ್ಮ ಸ್ಥಳ ವಿದ್ಯಾಭ್ಯಾಸದ ಮಟ್ಟ ಮನೆಯಲ್ಲಿ ಓದಲು ಬಲ್ಲವರು ಎಷ್ಟು? ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆಯೇ? ಶಾಲೆಯ ಪ್ರಕಾರ (ಸರ್ಕಾರಿ/ಖಾಸಗಿ) ಮನೆಯಲ್ಲಿ ಶಾಲೆ ಬಿಟ್ಟವರು ಇದೆಯೇ? ಮನೆಯ ಮುಖ್ಯ ಉದ್ಯೋಗ ಎಷ್ಟು ಜನರು ಉದ್ಯೋಗದಲ್ಲಿದ್ದಾರೆ? ಕೆಲಸದ ಪ್ರಕಾರ (ಸರ್ಕಾರಿ/ಖಾಸಗಿ) ನಿರುದ್ಯೋಗಿಗಳು ಇದೆಯೇ? ದಿನಸಿ ಆದಾಯ ತಿಂಗಳ ಆದಾಯ…

Read More

ಬೆಂಗಳೂರು: ನಕಲಿ ಧರ್ಮರಕ್ಷಕ’ ಬಿಜೆಪಿ ಸರ್ಕಾರದವರು 2019-2023 ಅವಧಿಯಲ್ಲಿ 24 ಹಿಂದೂ ದೇವಾಲಯಗಳ ಪೂಜಾ ಸೇವಾ ಶುಲ್ಕವನ್ನು ಏರಿಕೆ‌ ಮಾಡಿರುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಬಿಜೆಪಿ ನಾಯಕರ ಬೌದ್ಧಿಕ ಅಧಃಪತನದ ಪರಾಮಾವಧಿ – ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಹತಾಶ ಪ್ರಯತ್ನ ಎಂದಿದ್ದಾರೆ. ಧರ್ಮ ರಕ್ಷಣೆಗಾಗಿಯೇ ಅಧಿಕಾರಕ್ಕೆ ಬಂದವರು ನಾವು ಎನ್ನುವ ‘ನಕಲಿ ಧರ್ಮರಕ್ಷಕ’ ಬಿಜೆಪಿ ಸರ್ಕಾರದವರು 2019-2023 ಅವಧಿಯಲ್ಲಿ 24 ಹಿಂದೂ ದೇವಾಲಯಗಳ ಪೂಜಾ ಸೇವಾ ಶುಲ್ಕವನ್ನು ಏರಿಕೆ‌ ಮಾಡಿದ್ದರು. ಇದು ಧರ್ಮ ವಿರೋಧಿ ನಡೆಯೇ ? ಇದರ‌‌ ಪ‌ಟ್ಟಿ‌ ಇಲ್ಲಿದೆ ಎಂದು ಪಟ್ಟಿ ನೀಡಿದ್ದಾರೆ. 1. ಶ್ರೀ ವೀರಭದ್ರ ಸ್ವಾಮಿ ದೇವಾಲಯ, ನೆಲಮಂಗಲ ತಾಲ್ಲೂಕು 2. ಶ್ರೀ ಮಹಾಲಿಂಗೇಶ್ವರಸ್ವಾಮಿ ದೇವಾಲಯ, ಕವೂರು 3. ಶ್ರೀ ವೀರಭದ್ರೇಶ್ವರಸ್ವಾಮಿ ದೇವಾಲಯ, ದರೂರು ಗ್ರಾಮ, ಸಿರುಗುಪ್ಪ ತಾಲ್ಲೂಕು, ಬಳ್ಳಾರಿ 4. ಶ್ರೀ ಮೈಲಾರಲಿಂಗಸ್ವಾಮಿ ದೇವಾಲಯ, ಹೂವಿನಹಡಗಲಿ ತಾಲ್ಲೂಕು,…

Read More

ಚಿಕ್ಕಬಳ್ಳಾಪುರ : ಮಾಹಿತಿ ಹಕ್ಕು ಕಾಯ್ದೆಯಡಿಯ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ತ್ವರಿತವಾಗಿ ವಿಲೆವಾರಿ ಮಾಡಿ ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಮಟ್ಟದಲ್ಲಿಯೇ ಅದಾಲತ್ ನಡೆಸುವ ಚಿಂತನೆಯನ್ನು ಆಯೋಗ ಹೊಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ತಿಳಿಸಿದರು. ಶನಿವಾರದಂದು ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 7 ತಿಂಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ ಸುಮಾರು 54 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೆವಾರಿಗೆ ಬಾಕಿ ಇದ್ದವು. ಈ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಹಲವು ಯುಕ್ತ ಕ್ರಮಗಳನ್ನು ಆಯೋಗ ತೆಗೆದುಕೊಂಡು 12,896 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ. ಪ್ರಸ್ತುತ 41,104ಕ್ಕೆ ಮಾಹಿತಿ ಹಕ್ಕು ಅರ್ಜಿಗಳನ್ನು ಇಳಿಸಲಾಗಿದೆ. ಈ 41,104 ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುವ ಉದ್ದೇಶದಿಂದ ಮಾಹಿತಿ ಆಯುಕ್ತರೇ ಜಿಲ್ಲಾ ಮಟ್ಟಕ್ಕೆ ಆಗಮಿಸಿ ಅದಾಲತ್ ತೆಗೆದುಕೊಂಡು ಸ್ಥಳದಲ್ಲೆ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಕಾರ್ಯ ಮುಂದಿನ ಕನ್ನಡ…

Read More

ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಭಾರತ ಸರ್ಕಾರ ರೈಲ್ ಮಂತ್ರಾಲಯ ರೈಲ್ವೆ ಸಚಿವಾಲಯ (ರೈಲ್ವೆ ಬೋರ್ಡ್ ರೈಲ್ವೇ ಬೋರ್ಡ್) ತನ್ನ ರೈಲು ನೀರಿನ ಬಾಟಲಿಯ ದರವನ್ನು ಕಡಿತ ಮಾಡಲಾಗಿದೆ.  ಈ ಕುರಿತಂತೆ ರೈಲ್ವೆ ಸಚಿವಾಲಯು ಆದೇಶ ಹೊರಡಿಸಿದ್ದು, ಜಿಎಸ್ಟಿ ಮಂಡಳಿಯ ಸುತ್ತೋಲೆಯ ಮುಂದುವರಿಕೆಯಾಗಿ, F(C) ನಿರ್ದೇಶನಾಲಯದ ಒಪ್ಪಿಗೆಯೊಂದಿಗೆ ರೈಲ್ವೆ ಸಚಿವಾಲಯ (ರೈಲ್ವೇ ಮಂಡಳಿ) ಈಗ ಈ ಕೆಳಗಿನಂತೆ ನಿರ್ಧರಿಸಿದೆ ಎಂದಿದೆ. ಪ್ಯಾಕೇಜ್ಡ್ ಕುಡಿಯುವ ನೀರಿನ ಬಾಟಲಿ ‘ರೈಲ್ ನೀರ್’ ನ ಗರಿಷ್ಠ ಚಿಲ್ಲರೆ ಬೆಲೆಯನ್ನು ಒಂದು ಲೀಟರ್ ಬಾಟಲಿಗೆ 15/- ರಿಂದ 14/- ಕ್ಕೆ ಮತ್ತು 500 ಮಿಲಿ ಸಾಮರ್ಥ್ಯದ ಬಾಟಲಿಗೆ 10/- ರಿಂದ 9/- ಕ್ಕೆ ಪರಿಷ್ಕರಿಸಲಾಗುತ್ತದೆ ಎಂದು ತಿಳಿಸಿದೆ. ಗರಿಷ್ಠ ರೈಲ್ವೆ ಆವರಣ/ರೈಲುಗಳಲ್ಲಿ ಮಾರಾಟವಾಗುವ ಇತರ ಬ್ರಾಂಡ್‌ಗಳ ಐಆರ್‌ಸಿಟಿಸಿ/ರೈಲ್ವೆ ಶಾರ್ಟ್‌ಲಿಸ್ಟ್ ಮಾಡಿದ ಪ್ಯಾಕ್ ಮಾಡಿದ ಕುಡಿಯುವ ನೀರಿನ ಬಾಟಲಿಗಳ ಚಿಲ್ಲರೆ ಬೆಲೆಯನ್ನು ಒಂದು ಲೀಟರ್ ಬಾಟಲಿಗೆ 15/- ರಿಂದ 14/- ಕ್ಕೆ ಮತ್ತು 500 ಮಿಲಿ ಸಾಮರ್ಥ್ಯದ…

Read More

ಶಿವಮೊಗ್ಗ : ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ ಹಿರೇನಾಯ್ಕ್ (91) ನಿಧನರಾಗಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಶನಿವಾರ ನಿಧನ ಹೊಂದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ ಹಿರೇನಾಯ್ಕ್(19) ವಯೋ ಸಹಜತೆಯಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಇಂದು ಮದ್ಯಾಹ್ನ 2 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ ಹಿರೇನಾಯ್ಕ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Read More

ಬೆಂಗಳೂರು: 2026ರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in…

Read More