Subscribe to Updates
Get the latest creative news from FooBar about art, design and business.
Author: kannadanewsnow09
ಉತ್ತರಾಖಂಡ್: ಇಲ್ಲಿನ ಕೇದಾರನಾಥ್ ಬಳಿಯಲ್ಲಿ ಹೆಲಿಕಾಪ್ಟರ್ ಒಂದು ಹೆದ್ದಾರಿಯ ಪಕ್ಕದಲ್ಲೇ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ. ಕೇದಾರನಾಥಕ್ಕೆ ಭಕ್ತರನ್ನು ಕೊಂಡೊಯ್ಯುತ್ತಿದ್ದಂತ ಹೆಲಿಕಾಪ್ಟರ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಹೆದ್ದಾರಿಯ ಪಕ್ಕದಲ್ಲೇ ತುರ್ತು ಭೂ ಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಫೈಲೆಟ್ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ನಲ್ಲಿದ್ದಂತ ಐವರು ಸೇಫ್ ಆಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. https://twitter.com/ANI/status/1931268727946748106
ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹವನ್ನು ಮುಂದಿಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಹೈಕೋರ್ಟಿನ ಪ್ರಸಕ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು. ಯಾರ ತಪ್ಪೆಂಬುದು ಹೊರಬರಲಿ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ನೀವು ಯಾವುದೇ ನಿರ್ಧಾರ ಮಾಡಿದರೂ ಅದಕ್ಕೆ ನಾವು ಸಿದ್ಧ ಎಂದು ಸರಕಾರ ತಿಳಿಸಲಿ ಎಂದು ಸವಾಲೆಸೆದರು. ಬೆಂಗಳೂರು ಪೊಲೀಸ್ ಕಮೀಷನರ್ ಸರಕಾರದ ಅಂಗವೇ ಆಗಿದ್ದಾರೆ. ಸರಕಾರದ್ದೇನೂ ತಪ್ಪಿಲ್ಲವೆಂದಾದರೆ ಅವರನ್ನು ಅಮಾನತು ಮಾಡುವುದು ಸರಕಾರಕ್ಕೆ ಕಪ್ಪು ಚುಕ್ಕಿ ಎಂದು ಯಾಕೆ ಅನಿಸಿಲ್ಲ ಎಂದು ಕೇಳಿದರು. ಇವತ್ತು ಆರ್ಸಿಬಿಯವರು, ಮ್ಯಾನೇಜ್ಮೆಂಟ್ ತಂಡದವರನ್ನೂ ಬಂಧಿಸಿದ್ದಾರೆ. ಯಾಕೆ ನಿಮ್ಮನ್ನು ಬಂಧಿಸಬಾರದು? ನಟ ಅಲ್ಲು ಅರ್ಜುನ್ ಕಾರ್ಯಕ್ರಮದಲ್ಲಿ…
ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶೈಸಿದರು. ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ…
ಉಕ್ರೇನ್: ಉಕ್ರೇನ್ನಾದ್ಯಂತ ರಷ್ಯಾ ಕ್ಷಿಪಣಿಗಳು, ಡ್ರೋನ್ಗಳು ಮತ್ತು ಬಾಂಬ್ಗಳ ದಾಳಿ ನಡೆಸಿದ್ದರಿಂದ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ರಷ್ಯಾ ರಾತ್ರೋರಾತ್ರಿ 215 ಕ್ಷಿಪಣಿಗಳು ಮತ್ತು ಡ್ರೋನ್ಗಳೊಂದಿಗೆ ದಾಳಿ ನಡೆಸಿತು ಮತ್ತು ಉಕ್ರೇನಿಯನ್ ವಾಯು ರಕ್ಷಣಾ ಪಡೆಗಳು 87 ಡ್ರೋನ್ಗಳು ಮತ್ತು ಏಳು ಕ್ಷಿಪಣಿಗಳನ್ನು ಹೊಡೆದುರುಳಿಸಿ ತಟಸ್ಥಗೊಳಿಸಿದವು ಎಂದು ಉಕ್ರೇನಿಯನ್ ವಾಯುಪಡೆ ತಿಳಿಸಿದೆ. ಈಶಾನ್ಯ ನಗರವಾದ ಖಾರ್ಕಿವ್ನಲ್ಲಿ ಕನಿಷ್ಠ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ 17 ಜನರು ಗಾಯಗೊಂಡಿದ್ದಾರೆ ಎಂದು ಮೇಯರ್ ಇಹೋರ್ ಟೆರೆಖೋವ್ ಹೇಳಿದ್ದಾರೆ. 2022 ರಲ್ಲಿ ರಷ್ಯಾ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ ನಂತರ ನಗರದ ಮೇಲೆ ನಡೆದ “ಅತ್ಯಂತ ಶಕ್ತಿಶಾಲಿ” ದಾಳಿ ಎಂದು ಬಣ್ಣಿಸಿದ್ದಾರೆ. ರಷ್ಯಾದ ಗಡಿಯಿಂದ ಕೇವಲ 50 ಕಿಮೀ (30 ಮೈಲುಗಳು) ದೂರದಲ್ಲಿರುವ 1.4 ಮಿಲಿಯನ್ ಜನರ ನಗರದಲ್ಲಿ ಬೆಳಗಿನ ಜಾವಕ್ಕೆ ಮುನ್ನ 48 ಇರಾನ್…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಐಡಿ ಅಧಿಕಾರಿಗಳ ತಂಡವು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಯಿತು. ಇಂದು ಚಿನ್ನಸ್ವಾಮಿ ಕ್ರೀಡಾಂಗಣ ದುರಂತ ನಡೆದಂತ ಸ್ಥಳಕ್ಕೆ ಸಿಐಡಿ ಅಧಿಕಾರಿಗಳ ತಂಡವು ಭೇಟಿ ನೀಡಿತು. ಓರ್ವ ಇನ್ಸ್ ಪೆಕ್ಟರ್ ಹಂತದ ಅಧಿಕಾರಿ ಸೇರಿದಂತೆ ವಿವಿಧ ಸಿಬ್ಬಂದಿಗಳ ತಂಡವು ಭೇಟಿ ನೀಡಿತು. ದುರಂತ ನಡೆದಂತ ಸ್ಥಳದಲ್ಲಿ ಘಟನೆಯ ಸಂಬಂಧ ವಿವಿಧ ರೀತಿಯಲ್ಲಿ ಮಾಹಿತಿಯನ್ನು ಪರಿಶೀಲಿಸಿತು. ಇದೇ ಸಂದರ್ಭದಲ್ಲಿ ಸಿಐಡಿ ತಂಡದ ಮುಂದೆ ಕೆ ಎಸ್ ಸಿ ಎ ಅಧ್ಯಕ್ಷರು, ಸಿಬ್ಬಂದಿಗಳು ಭೇಟಿ ನೀಡಿ, ಘಟನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಅವರು ನೀಡಿದಂತ ಮಾಹಿತಿಯನ್ನು ಸಿಐಡಿ ಅಧಿಕಾರಿಗಳ ತಂಡವು ದಾಖಲಿಸಿಕೊಂಡಿದೆ. https://kannadanewsnow.com/kannada/the-chief-minister-and-deputy-chief-minister-are-not-only-responsible-for-the-calamity-but-also-the-stakeholders-crf-report-to-the-governor/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ತಂಡಕ್ಕೂ ಸಂಕಷ್ಟ ತಂದೊಡ್ಡಿದೆ. 11 ಜನರ ಮರಣ ಹೋಮಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಇಲಾಖೆಗಳ ಆಕ್ಷೇಪದ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಠಕ್ಕೆ ಬಿದ್ದು RCB ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನ್ಯಾಯಾಂಗ ತನಿಖೆ ಮುಗಿಯುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಕೆಯಾಗಿದೆ. ಮಾನವ ಹಕ್ಕುಗಳ ಹೋರಾಟ ಸಂಸ್ಥೆಯಾಗಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ವತಿಯಿಂದ ರಾಜ್ಯಪಾಲರಿಗೆ ಸಲ್ಲಿಕೆಯಾಗಿರುವ ದೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 04.06.2025ರಂದು ಸಂಭವಿಸಿರುವ ಕಾಲ್ತುಳಿತ ದುರ್ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೊಣೆಗಾಗರಷ್ಟೇ ಅಲ್ಲ, ಅವರೇ ನೇರ ಕಾರಣಕರ್ತರು ಎಂದು ಆರೋಪಿಸಲಾಗಿದೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಿದ್ದರಾಮಯ್ಯ ಅವರೇ ಸಚಿವರಾಗಿದ್ದಾರೆ,…
ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶೈಸಿದರು. ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ…
ಬೆಂಗಳೂರು: ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ (JICA)ಯ ನಿಯೋಗ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ ಭೇಟಿ ನೀಡಿತು. ಈ ನಿಯೋಗವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆತ್ಮೀಯವಾಗಿ ಬರಮಾಡಿಕೊಂಡು, ಚರ್ಚಿಸಿದರು. ಸಾರಿಗೆಯಲ್ಲಿ ಡಿಜಿಟಲ್ ಲೀಪ್ ಮುಕ್ತ ಡೇಟಾ ಏಕೀಕರಣ ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಗುರಿಯಾಗಿಟ್ಟುಕೊಂಡು ಸಾರಿಗೆ ತಂತ್ರಜ್ಞಾನ ಸ್ಟ್ಯಾಕ್ ಅನ್ನು ಸಹ-ಅಭಿವೃದ್ಧಿಪಡಿಸಲು ಕರ್ನಾಟಕ ಸಾರಿಗೆ ಇಲಾಖೆ JICA ಜೊತೆ ಪಾಲುದಾರಿಕೆಯ ಗುರಿ ಹೊಂದಿದೆ. Smart Transport Govt Tech JICA JICA DxLab ಡೇಟಾ-ಚಾಲಿತ ಚಲನಶೀಲತೆಯ ಕಡೆಗೆ JICA ಯ DXLab ಬೆಂಬಲದೊಂದಿಗೆ, ಕರ್ನಾಟಕವು ನೈಜ-ಸಮಯದ ಒಳನೋಟಗಳು, ಮುಕ್ತ API ಗಳು ಮತ್ತು ವರ್ಧಿತ ಸಾರ್ವಜನಿಕ ಸೇವಾ ವಿತರಣೆಗಾಗಿ ಮುಂದಿನ-ಪೀಳಿಗೆಯ ಸಾರಿಗೆ ಸ್ಟ್ಯಾಕ್ ಅನ್ನು ನಿರ್ಮಿಸುತ್ತಿದೆ. ಮುಕ್ತ ಡೇಟಾ | ಸ್ಮಾರ್ಟರ್ ಸೇವೆಗಳು ನಾಗರಿಕರು, ಸ್ಟಾರ್ಟ್ಅಪ್ಗಳು ಮತ್ತು ನೀತಿ ನಿರೂಪಕರಿಗೆ ಸಮಾನವಾಗಿ ಅಧಿಕಾರ ನೀಡುವ ಸಾರಿಗೆ ಸ್ಟ್ಯಾಕ್ ಅನ್ನು ರಚಿಸಲು ಕರ್ನಾಟಕ JICA ಜೊತೆ ದಿಟ್ಟ ಹೆಜ್ಜೆ ಇಟ್ಟಿದೆ. #ಡಿಜಿಟಲ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆ ಕೇಳುವಂತ ಹೆಚ್.ಡಿ ಕುಮಾರಸ್ವಾಮಿಗೆ ನಾಚಿಕೆ ಆಗಬೇಕು. ಡಾ.ರಾಜ್ ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ ಅಂತ ಸಾಗರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಾ.ರಾಜ್ ಕುಮಾರ್ ತೀರಿಕೊಂಡಾಗ ನಾನು ಕಂಠೀರವ ಸ್ಟೂಡಿಯೋದಲ್ಲಿದ್ದೆ. ಆಗ ಕುಮಾರಸ್ವಾಮಿ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು. ಆಗ ರಾಜೀನಾಮೆ ನೀಡಿದ್ರಾ ಎಂದು ಪ್ರಶ್ನಿಸಿದರು. ಅಲ್ಲದೇ ಹಾವೇರಿಯಲ್ಲಿ ರೈತರ ಮೇಲೆ ಬಿಎಸ್ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದ್ರು. ಆಗ ರಾಜೀನಾಮೆ ಕೊಟ್ರ? ಎಂದು ಕೇಳಿದರು. ಇನ್ನೂ ಪಹಲ್ಗಾಮ್ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು, ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಸಾವನ್ನಪ್ಪಿದ್ರು, ಆಗ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಿದ್ರ? ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಖಡಕ್ ತಿರುಗೇಟು ನೀಡಿದರು.…
ಇಸ್ಲಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಿ ಅಧಿಕಾರಿಗಳು ಏಪ್ರಿಲ್ನಿಂದ ಹಲವಾರು ಬಾರಿ ಭಾರತೀಯ ಸಹವರ್ತಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ದಯವಿಟ್ಟು ನೀರು ಬಿಡಿ ಅಂತ ಪಾಕಿಸ್ತಾನ ಭಾರತವನ್ನು ಅಲವತ್ತುಕೊಂಡಿದೆ. ಆರು ದಶಕಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಪಾಕಿಸ್ತಾನವು “ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ” ಸ್ಥಗಿತಗೊಳಿಸುವ ಭಾರತದ ನಿರ್ಧಾರವು ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯ ಒಂದು ದಿನದ ನಂತರ ದಂಡನಾತ್ಮಕ ಕ್ರಮಗಳ ಭಾಗವಾಗಿ ನೀರು ಸ್ಥಗಿತಗೊಳಿಸಿತ್ತು. ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಅಂದಿನಿಂದ ಭಾರತದ ಜಲಶಕ್ತಿ ಸಚಿವಾಲಯಕ್ಕೆ ಒಟ್ಟು ನಾಲ್ಕು ಪತ್ರಗಳನ್ನು ಕಳುಹಿಸಿದ್ದಾರೆ. ಒಪ್ಪಂದವನ್ನು ಅಮಾನತುಗೊಳಿಸುವ ನಿರ್ಧಾರವನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಪತ್ರಗಳನ್ನು ಯಾವಾಗ ಕಳುಹಿಸಲಾಗಿದೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ, ಆದರೆ ಈ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬರು ಆಪರೇಷನ್ ಸಿಂಧೂರ್ ನಂತರ ಮೂರು ಪತ್ರಗಳನ್ನು ಬರೆಯಲಾಗಿದೆ…













