Author: kannadanewsnow09

ಧಾರವಾಡ : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ, ವೇತನ ಪತ್ರ, ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು…

Read More

ಬೆಂಗಳೂರು: ಜಯನಗರ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಚಿವೆ ಸೌಮ್ಯ ರೆಡ್ಡಿ ಅವರ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನೀಡಿದ್ದಂತ ತೀರ್ಪು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಬಿಗ್ ಶಾಕ್ ನೀಡಿದೆ. ಹೀಗಾಗಿ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತ ಕೋರಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು ಡಿವಿಡಿ ಸೇರಿದಂತೆ 10 ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿತ್ತು. ಫೆಬ್ರವರಿ.14ರವರೆಗೆ ಡಿವಿಡಿ ಸೇರಿದಂತೆ ಇತರೆ ದಾಖಲೆ ಸಲ್ಲಿಸಲು ಸೌಮ್ಯಾರೆಡ್ಡಿ ಅವರಿಗೆ ಹೈಕೋರ್ಟ್ ಅವಕಾಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ…

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿ ಇರುವುದು ಒಳ್ಳೆಯದು.  ಕಾರ್ಮಿಕ ವರ್ಗಕ್ಕೆ ಸಲಹೆಗಳು ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಲೋಟ ಅಥವಾ ಅಧಕ್ಕಿಂತ ಹೆಚ್ಚು ನೀರು ಕುಡಿಯಬೇಕು. ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿರಬೇಕು. ಹೊರಾಂಗಣ ಚಟುವಟಿಕೆಗಳಲ್ಲಿ ಕೆಲಸಗಾರರಿಗೆ ಪ್ರತಿ ಗಂಟೆಗೆ 5 ನಿಮಿಷಗಳ ಬಿಡುವು ನೀಡಬೇಕು. ಸೂರ್ಯನ ಕಿರಣಗಳು ನೇರವಾಗಿ ಮೈಮೇಲೆ ಬೀಳದಂತೆ ಕೆಲಸಾಗರರು ಎಚ್ಚರವಹಿಸಬೇಕು. ಶ್ರಮದಾಯಕ, ಹೊರಾಂಗಣ ಚಟುವಟಿಕೆಗಳನ್ನು ಬೆಳಿಗ್ಗೆ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಿಸಬೇಕು. ಗರ್ಭಿಣಿಯರು, ನಿಗದಿತ ಅನಾರೋಗ್ಯ ಸಮಸ್ಯೆಗೆ ಔಷಧೋಪಚಾರ ಪಡೆಯುತ್ತಿರುವವರು ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು. https://twitter.com/KarnatakaVarthe/status/1896547816555848124 ಬಿಸಿಲ ಬೇಗೆಗೆ ದೇಹದ…

Read More

ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್‌ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್‌”ನನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್‌ ಬಾಲ್‌ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್‌ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್‌. ಪಿ. ಪಾಟೀಲ್‌ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.…

Read More

ಮಂಡ್ಯ: ಜಿಲ್ಲೆಯ ದೇವರ ಪ್ರಸಾದ ಸೇವಿಸಿದಂತ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನಿನ್ನೆ ಗ್ರಾಮದ ಚನ್ನಬೀರೇಶ್ವರ ಹಬ್ಬವನ್ನು ನಡೆಸಲಾಗಿತ್ತು. ಈ ಹಬ್ಬದ ಸಂದರ್ಭದಲ್ಲಿ ಪ್ರಸಾದವನ್ನು ಜನರಿಗೆ ವಿತರಿಸಲಾಗಿತ್ತು. ಇಂತಹ ಪ್ರಾಸದ ತಿಂದಂತ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೀಗ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. https://kannadanewsnow.com/kannada/in-a-shocking-incident-in-the-state-a-couple-was-brutally-murdered-in-a-farmhouse/ https://kannadanewsnow.com/kannada/jds-to-stage-protest-near-gandhi-statue-in-vidhana-soudha-demanding-release-of-grihalakshmi-funds-tomorrow/

Read More

ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತ ಘಟನೆ ಎನ್ನುವಂತೆ ತೋಟದ ಮನೆಯಲ್ಲಿದ್ದಂತ ದಂಪತಿಗಳನ್ನು ಒಳಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕಗ್ಗೊಲೆ ಮಾಡಿರುವಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನಾಡಪನಳ್ಳಿಯಲ್ಲಿ ತೋಟದ ಮನೆಯಲ್ಲಿ ರಂಗಸ್ವಾಮಿ ಗೌಡ(65) ಹಾಗೂ ಶಾಂತಮ್ಮ ಎಂಬುವರು ವಾಸವಾಗಿದ್ದರು. ಅವರನ್ನು ಒಳಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳ ಈ ಕಗ್ಗೊಲೆಯಿಂದಾಗಿ ಮೈಸೂರು ಜಿಲ್ಲೆಯ ತೋಟದ ಮನೆಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಿಳಿಕೆರೆ ಠಆಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದಾರೆ. ದಂಪತಿಗಳ ಕೊಲೆಯ ಹಿಂದಿನ ಕಾರಣ ತನಿಖೆಯ ನಂತ್ರವೇ ತಿಳಿಯಬೇಕಿದೆ. https://kannadanewsnow.com/kannada/jds-to-stage-protest-near-gandhi-statue-in-vidhana-soudha-demanding-release-of-grihalakshmi-funds-tomorrow/ https://kannadanewsnow.com/kannada/dont-shut-down-9-universities-in-karnataka-bjp-delegation-to-governor/

Read More

ಬೆಂಗಳೂರು : ಈ ಪ್ರತಿಭಟನೆ ಇವತ್ತು ಬೆಂಗಳೂರು ನಗರದಲ್ಲಿ ಪ್ರಾರಂಭ ಮಾಡಿದ್ದೀವಿ. ಇದು ಇಡೀ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಮ್ಮ ಹೋರಾಟ ಮುದುವರೆಯುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಗೃಹಲಕ್ಷ್ಮಿ ಹಣ ಬಿಡುಗಡೆ ಆಗ್ರಹಿಸಿ ನಾಳೆ (ಮಂಗಳವಾರ ) ನಮ್ಮ ಪಕ್ಷದ ಶಾಸಕರು, ವಿಧಾನಪರಿಷತ್ ಸದ್ಯಸರು ಎಲ್ಲರೂ ಸೇರಿ ವಿಧಾನಸೌಧದ ಮುಂಭಾಗ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಗೃಹಲಕ್ಷ್ಮೀ ಹಣ ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಂತರ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ಅವರು ; ನಮ್ಮ ಹೋರಾಟ ಮುದುವರೆಯುತ್ತೆ ಇಲ್ಲಿಗೆ ನಿಲ್ಲುವುದಿಲ್ಲ, ಇಡೀ ರಾಜ್ಯಾದ್ಯಂತ ನಮ್ಮ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟದ ಕರೆ ಕೊಟ್ಟರು. ನಾಡಿನ ಜನತೆಯ ಪರವಾಗಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡ್ತೀನಿ ಗೃಹಲಕ್ಷ್ಮಿ ಯಾವ ದಿನಾಂಕಕ್ಕೆ ಕೊಡ್ತೀರಾ.? ಕ್ಯಾಲೆಂಡರ್ ನಲ್ಲಿ ಯಾವ ದಿನಾಂಕಕ್ಕೆ ಜಮೆ ಮಾಡ್ತೀರಾ ಎಂದು ಉತ್ತರ ಕೊಡಬೇಕು ಎಂದು ನಿಖಿಲ್…

Read More

ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು. 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವು ಅವೈಜ್ಞಾನಿಕ, ಅಸಾಂವಿಧಾನಿಕ ಮಾತ್ರವಲ್ಲದೆ ಇದೊಂದು ಅನ್ಯಾಯದ ನಿರ್ಧಾರ ಎಂದು ಗಮನ ಸೆಳೆಯಲಾಯಿತು. ಅದರಿಂದ ಆಗುವ ದುಷ್ಪರಿಣಾಮಗಳ ಕುರಿತು ಗಮನಕ್ಕೆ ತರಲಾಯಿತು. ರಾಜ್ಯ ಸರಕಾರದ ಈ ಕ್ರಮವನ್ನು ತಕ್ಷಣ ಹಿಂಪಡೆದುಕೊಳ್ಳುವಂತೆ ಸೂಚಿಸಿ, ಸೂಕ್ತ ನಿರ್ಧಾರ ಕೈಗೊಂಡು ಲಕ್ಷಾಂತರ ಗ್ರಾಮೀಣ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಮನವಿ ವಿನಂತಿಸಿದೆ. https://kannadanewsnow.com/kannada/time-is-not-far-when-congress-will-be-taught-a-lesson-rajkumar-patil-telkur/ https://kannadanewsnow.com/kannada/do-you-know-why-cm-siddaramaiah-was-late-in-the-house-today/

Read More

ಕಲಬುರಗಿ : ಕಲ್ಯಾಣ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿ ಈ ಭಾಗದ ಜನರಿಗೆ ಮಣ್ಣೆರಚಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿ ಕಲ್ಯಾಣ ಕರ್ನಾಟಕದ ಜನರ ಆರೋಗ್ಯ, ಶಿಕ್ಷಣ, ಸಾಕ್ಷರತೆ, ಆರ್ಥಿಕತೆ ಸುಧಾರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 2024-25 ನೇ ಸಾಲಿನ ಬಜೆಟ್ ನಲ್ಲಿ ₹5 ಸಾವಿರ ಕೋಟಿ ಮೊತ್ತದ ಕ್ರಿಯಾ ಯೋಜನೆ ರೂಪಿಸಲು ಅನುಮೋದನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಆರ್ಥಿಕ ವರ್ಷದ ಅಂತ್ಯ ತಲುಪಿದರೂ ಈ ಸಾಲಿನ ಅನುದಾನದಲ್ಲಿ ನಯಾ ಪೈಸೆ ಬಿಡುಗಡೆ ಮಾಡದೇ ತನ್ನ ಬೊಕ್ಕಸ ಬರಿದಾಗಿಸಿಕೊಂಡು ಆರ್ಥಿಕವಾಗಿ ದಿವಾಳಿ ಅಂಚಿನತ್ತ ತಲುಪಿರುವುದಕ್ಕೆ ನಿದರ್ಶನ. ಜೊತೆಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಈ ಸರ್ಕಾರಕ್ಕೆ ಎಳ್ಳಷ್ಟೂ ಕಾಳಜಿಯಿಲ್ಲ ಎನ್ನುವುದನ್ನು ಸಾಕ್ಷೀಕರಿಸುತ್ತಿದೆ. ಹಿಂದುಳಿದ ಪ್ರದೇಶಗಳೆನಿಸಿಕೊಂಡಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಸರ್ಕಾರದ ಕೊಡುಗೆಗಳು ಏನೇನೂ…

Read More

ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು. ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ. ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ. ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ…

Read More