Author: kannadanewsnow09

ಬೆಂಗಳೂರು: 18 ವರ್ಷಗಳ ನಂತ್ರ ಆರ್ ಸಿ ಬಿ ಐಪಿಎಲ್ ಕಪ್ ಗೆದ್ದರು ಅಂತ ರಾಜ್ಯ ಕಾಂಗ್ರೆಸ್ ಸರ್ಕಾರವು ವಿಜಯೋತ್ಸವ ಆಚರಣೆ ಮಾಡೋದರಿಂದ ಹೆಸರು ಬರುತ್ತೆ ಅಂತ ಹೋಗಿ ಮಾಡಬಾರದ್ದು ಮಾಡಿ ಬಿಟ್ರು. ಒಂದು ವಾರ ಬಿಟ್ಟು ಮಾಡಬಹುದಿತ್ತು. ಕಾಲ್ತುಳಿತ ದುರಂತದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡಬೇಕು ಅಂಕ ಕೇಂದ್ರ ರಾಜ್ಯ ಖಾತೆಯ ರೈಲ್ವೆ ಸಚಿವ ವಿ.ಸೋಮಣ್ಣ ಆಗ್ರಹಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಕಾಲ್ತುಳಿದಲ್ಲಿ 11 ಜನರ ಸಾವಿನ ಪ್ರಕರಣ ವಿಚಾರವಾಗಿ ಮಾತನಾಡಿ, ನೋಡಿ, ಇದು ಲಜ್ಜಗೇಡಿ ಸರ್ಕಾರವಾಗಿದೆ. 18 ವರ್ಷದ ನಂತರ ಗೆದ್ರು. ಅದಕ್ಕೆ ಹೆಸರು ಬರುತ್ತೆ ಅಂತ ಹೀಗೆ ಮಾಡಿದ್ರು. ಒಂದು ವಾರ ಬಿಟ್ಟು ಮಾಡ್ಬಹುದಿತ್ತು. ಏನೇನ್ ಮಾಡಬಾರದಿತ್ತೋ ಎಲ್ಲಾ ಮಾಡಿದ್ರು. ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಸಿದ್ದರಾಮಯ್ಯನವರ ವಿವೇಚನೆ ಎಲ್ಲಿ ಹೋಗಿತ್ತು? ತಕ್ಷಣ ನಿರ್ಧಾರ ತೆಗೆದುಕೊಂಡ್ರುಯ ದಕ್ಷ ಕಮೀಷನರ್‌ಗೆ ನೋವು ಕೊಟ್ಟಿದ್ದೀರಿ. ನೀವು ಮಾಡಿರುವ ಅಕ್ಷಮ್ಯ ಅಪರಾಧ ಇದು ಎಂಬುದಾಗಿ ಕೇಂದ್ರ ಸಚಿವ ವಿ.ಸೋವಣ್ಣ ಕಿಡಿಕಾರಿದರು. https://kannadanewsnow.com/kannada/union-minister-h-d-kumaraswamy-is-relentless-in-telling-lies-former-mp-d-k-suresh/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/

Read More

ಬೆಂಗಳೂರು : “ಆರ್‌ ಸಿಬಿ ತಂಡ ಗೆದ್ದ ನಂತರ ಕುಮಾರಸ್ವಾಮಿ ಅವರು ಹಾಗೂ ಅವರ‌ ಪಕ್ಷ ಏನೇನು ಎಕ್ಸ್ (ಟ್ವೀಟ್) ಮಾಡಿತ್ತು ಎಂಬುದನ್ನು ತಾವು (ಮಾಧ್ಯಮ) ರಾಜ್ಯದ ಜನತೆಗೆ ತೋರಿಸಬೇಕು‌. ಏಕೆಂದರೆ ಅವರು ಸುಳ್ಳು ಹೇಳುವುದರಲ್ಲಿ, ಮಾತುಗಳನ್ನು ತಿರುಗಿಸುವುದರಲ್ಲಿ ನಿಸ್ಸೀಮರು” ಎಂದು ನಿಕಟ ಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು‌‌. ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಉತ್ತರಿಸಿದ ಅವರು, “ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೆ. ಅವರು ಒತ್ತಡದಲ್ಲಿ ಇದ್ದಾರೆ, ಆರೋಗ್ಯ ಸರಿಯಿಲ್ಲ ಎನಿಸುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ ಈ ರಾಷ್ಟ್ರದ ಸೇವೆ ಮಾಡಲಿ” ಎಂದರು‌. ರಾಜಕುಮಾರ್ ಅವರ ನಿಧನದ ವೇಳೆಯ ಘಟನೆಗಳನ್ನು ಶಿವಕುಮಾರ್ ಬಿಚ್ಚಿಡುವುದು ಏನಿಲ್ಲ. ನಾನೇ ಒಪ್ಪಿಕೊಳ್ಳುವೆ ಎನ್ನುವ ಕುಮಾರಸ್ವಾಮಿ ಅವರ ಉತ್ತರದ ಬಗ್ಗೆ ಹೇಳಿದಾಗ, “ಕುಮಾರಸ್ವಾಮಿ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಬೆಳಗ್ಗೆಯೊಂದು, ರಾತ್ರಿಯೊಂದು ಮಾತನಾಡುತ್ತಾರೆ” ಎಂದು ತಿಳಿಸಿದರು. “ಕಾಲ್ತುಳಿತ ದುರಂತದಿಂದ ಸರ್ಕಾರ ಪಲಾಯನ ಮಾಡುತ್ತಿಲ್ಲ. ಇತ್ತೀಚೆಗೆ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತದಿಂದ 3 ಸಾವಿರ…

Read More

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಖಂಡಿಸಿ ನಾಳೆ ಬೆಂಗಳೂರಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬಳಿಯಿರುವಂತ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿಯ ಸಂಸದರು, ಶಾಸಕರು, ಕಾರ್ಯಕರ್ತರು ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದು, ಬೆಂಗಳೂರು ಕಾಲ್ತುಳಿತ ದುರಂತವನ್ನು ಖಂಡಿಸಲಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. https://kannadanewsnow.com/kannada/bengaluru-disaster-cm-was-about-to-cancel-the-program-in-front-of-vidhana-soudha/ https://kannadanewsnow.com/kannada/calamitous-disaster-where-is-rahul-gandhi-who-pokes-his-nose-into-everything-now-shobha-karandlaje-questions/

Read More

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ  ಓರ್ವ ಆರ್ ಸಿ ಬಿ ಅಭಿಮಾನಿ ಸಾವನ್ನಪ್ಪಿದಂತ ವಿಷಯ ತಿಳಿದಂತ ಸಿಎಂ ಸಿದ್ಧರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದಂತ ಸನ್ಮಾನ ಕಾರ್ಯಕ್ರಮವನ್ನೇ ರದ್ದುಗೊಳಿಸೋದಕ್ಕೆ ಮುಂದಾಗಿದ್ದರು ಎನ್ನುವಂತ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಹೌದು. 11 ಮಂದಿ ಸಾವಿನ ಸುದ್ದಿ ಕೇಳಿ ಸಿಎಂ ಶಾಕ್ ಆಗಿದ್ದರು. ಕಿವಿಗೆ ಸುದ್ದಿ ಬೀಳುತ್ತಲೇ ತೀರ್ವ ನೋವಿಗೊಳಗಾಗಿದ್ದರು. ವಿಧಾನಸೌಧದ ಮುಂಭಾಗದ ಕಾರ್ಯಕ್ರಮವನ್ನೇ ಕ್ಯಾನ್ಸಲ್ ಮಾಡೋಕೆ ಹೊರಟಿದ್ರು ಎನ್ನುವ ವಿಚಾರ ತಿಳಿದು ಬಂದಿದೆ. ಈ ಕಾರ್ಯಕ್ರಮಕ್ಕೂ ಮೊದಲೇ ಸಾವಿನ ಸುದ್ದಿ ಕಿವಿಗೆ ಬಿದ್ದಿದ್ದರೆ ಕಾರ್ಯಕ್ರಮವನ್ನೇ ರದ್ಧು ಮಾಡಲು ಹೊರಟಿದ್ರಂತೆ. ಆದರೆ ಸಾವಿನ ಸುದ್ದಿ ಸಿಎಂ ಕಿವಿಗೆ ಬಿದ್ದಿದ್ದೇ ತುಂಬಾ ವಿಳಂಬವಾಗಿತ್ತಂತೆ. ಆ ಕಾರಣಕ್ಕೇ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರ ಅಮಾನತು ಮಾಡಿದ್ದಂತೆ. ಸಾವಿನ ಸುದ್ದಿ ವಿಳಂಬವಾಗಿ ನೀಡಿದ್ದಕ್ಕೆ ಕೋಪಗೊಂಡೇ ಸಸ್ಪೆಂಡ್ ಮಾಡಿದ್ದಂತೆ. ಇಲ್ಲವಾಗಿದ್ದ ಆಯುಕ್ತರ ಸಸ್ಪೆಂಡ್ ಮಾಡುವಷ್ಟರ ಮಟ್ಟಿಗೆ ಹೋಗ್ತಿಲಿಲ್ಲವೆಂಬ ಮಾಹಿತಿ ತಿಳಿದು…

Read More

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಹ ಕಲಾವಿದೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮಡೆನೂರು ಮನು ಬಂಧನವಾಗಿತ್ತು. ಅವರನ್ನು ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿದ್ದಂತ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಂದು ಪರಪ್ಪನ ಅಗ್ರಹಾರದಿಂದ ಮಡೆನೂರು ಮನು ಬಿಡುಗಡೆಯಾಗಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದರ್ಶನ್, ಶಿವರಾಜ್ ಕುಮಾರ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವಂತ ಆಡಿಯೋ ನನ್ನದಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂಬುದಾಗಿ ಬೇಸರ ವ್ಯಕ್ತ ಪಡಿಸಿದರು. ನನ್ನ ಸಿನಿಮಾ ರಿಲೀಸ್ ಆಗುವುದನ್ನು ತಡೆಯಲು ಸಾಕಷ್ಟು ಪ್ರಯತ್ನ…

Read More

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ದಿನದಂದು ಆಟಗಾರರನ್ನು ಸ್ವಾಗತಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಹೀಗಿದ್ದರೂ ಪ್ರೋಟೋಕಾಲ್ ಮೀರಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಆರ್ ಸಿ ಬಿ ಆಟಗಾರರನ್ನು ಸ್ವಾಗತಿಸಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯ ನಂತ್ರ ಮೊನ್ನೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದಂತ ಸಿಎಂ ಸಿದ್ಧರಾಮಯ್ಯ, ಈ ವೇಳೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾಗಿ ತಿಳಿದು ಬಂದಿದೆ. ನೀವ್ಯಾಕ್ರೀ ಹೆಚ್ ಎಎಲ್ ಗೆ ಹೋಗಿದ್ರಿ? ಆರ್ ಸಿಬಿ ಆಟಗಾರರನ್ನ ಯಾಕೆ ಸ್ವಾಗತಮಾಡಿಕೊಂಡ್ರಿ? ಪ್ರೋಟೋಕಾಲ್ ಏನು ಇತ್ತಾ? ಅಧಿಕಾರಿಗಳನ್ನ ನಿಯೋಜಿಸಿಸಲಾಗಿತ್ತು. ನೀವ್ಯಾಕೆ ಅಲ್ಲಿಗೆ ಹೋಗಬೇಕಿತ್ತೆಂದು ಸಿಎಂ ಸಿದ್ಧರಾಮಯ್ಯ ಅವರು ಸಂಪುಟ ಸದಸ್ಯದ ಮುಂದೆಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಆ ವೇಳೆಯಲ್ಲಿ ಏನೂ ಉತ್ತರಿಸದೇ ಡಿಕೆ ಶಿವಕುಮಾರ್ ಸುಮ್ಮನಿದ್ದಾಗಿ ಹೇಳಲಾಗುತ್ತಿದೆ. https://kannadanewsnow.com/kannada/helmet-usage-is-mandatory-in-bellary-district-no-exceptions-sp-dr-shobharani/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/

Read More

ಬಳ್ಳಾರಿ : ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಹೇಳಿದರು. ನಗರದ ಕನಕದುರ್ಗಮ್ಮ ದೇವಸ್ಥಾನ ವೃತ್ತದಲ್ಲಿ ಎಸ್ಪಿ ಶುಕ್ರವಾರ ಆಯೋಜಿಸಲಾಗಿದ್ದ ಸಾರ್ವಜನಿಕರ ಸುರಕ್ಷತೆಗಾಗಿ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹೆಲ್ಮೆಟ್ ಮತ್ತು ಗುಲಾಬಿ ಹೂ ವಿತರಿಸಿ ಅವರು ಮಾತನಾಡಿದರು. ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವರ ಸಂಖ್ಯೆ ಹೇರಳವಾಗಿದೆ. ಆ ವೇಳೆ ತಲೆಗೆ ಪೆಟ್ಟಾಗಿ ಸಾವನ್ನಪ್ಪಿರುವವರು ಹೆಚ್ಚಾಗಿದ್ದಾರೆ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ. ಹಾಗಾಗಿ ನಿಮ್ಮ ಮನೆಯವರು ಹಾಗೂ ನಿಮ್ಮನ್ನು ನಂಬಿದವರಿಗಾಗಿ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಲೇಬೇಕು ಎಂದು ಹೇಳಿದರು. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದರಿಂದ ಸಂಭವನೀಯ ಅಪಘಾತಗಳಿಂದ ತಲೆಗೆ ಪೆಟ್ಟಾಗುವುವುದು ತಪ್ಪುತ್ತದೆ. ಪೊಲೀಸರು ನೀಡುವ ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಸ್ಥಳದಲ್ಲಿಯೇ ರೂ.500 ದಂಡ ತೆರಬೇಕಾಗುತ್ತದೆ. 18 ವರ್ಷದ…

Read More

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಎರಡನೇ ಆರೋಪಿ ಅವರ ಪುತ್ರಿ ಕೃತಿಗೆ ಈಗ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಬಂಧನದ ಭೀತಿ ಎದುರಾದಂತೆ ಆಗಿದೆ. ಕರ್ನಾಟಕದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಅವರ ಪುತ್ರಿಯ ವಿರುದ್ಧವೂ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಕೃತಿ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಅವರಿಗೆ ಬಂಧನದ ಭೀತಿ ಎದುರಾದಂತೆ ಆಗಿದೆ. ಅಂದಹಾಗೆ ಏಪ್ರಿಲ್.20ರಂದು ಕರ್ನಾಟಕದ ನಿವೃತ್ತ ಡಿಜಿಪಿ ಓಂ ಪ್ರಕಾಶ್(68) ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ…

Read More

ಬೆಂಗಳೂರು: ಆರ್ಥಿಕ ಅಪರಾಧ ಇರುವವರ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‍ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸತ್ತಿದ್ದು, ಈ ದುರ್ಘಟನೆಗೆ ಸಿದ್ದರಾಮಯ್ಯನವರ ಸರ್ಕಾರ ನೇರ ಹೊಣೆ. ಆದ್ದರಿಂದ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು. ಹಿಂದಿನ ಸರಕಾರ ಈ ಆರ್ಥಿಕ ಅಪರಾಧಿ ಕಂಪನಿಗಳ ಸಂಭ್ರಮಾಚಾರಣೆಗೆ ಮುಂದಾಗಿಲ್ಲ ಹಾಗೂ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿಲ್ಲ. ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವಂತದ್ದು ಸಿದ್ದರಾಮಯ್ಯನವರ ಸರ್ಕಾರ ಎಂದು ಟೀಕಿಸಿದರು. ಮೊನ್ನೆ ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ನೇರವಾಗಿ ಕರ್ನಾಟಕ ಸರ್ಕಾರವೇ ಹೊಣೆಗಾರ ಎಂದು ಆರೋಪಿಸಿದರು. ದೇಶದ ಇಬ್ಬರು ಆರ್ಥಿಕ ಅಪರಾಧಿಗಳಿಗೆ ಸಂಬಂಧಿಸಿದ ಕಂಪನಿಗಳಲ್ಲಿ ಒಂದನೇಯದ್ದು…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೊಮ್ಮಗನ ಕ್ರಿಕೆಟ್ ಆಟಗಾರರ ಜೊತೆಗೆ ಪೋಟೋಗ್ರಾಫ್, ಆಟೋಗ್ರಾಫ್ ತೆಗೆಸುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಲಲ್ಲ. ನಿಮಗೆ ಆತ್ಮಸಾಕ್ಷಿ ಇದ್ಯಾ? ಎಂಬುದಾಗಿ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ 11 ಅಮಾಯಕ ಜನರ ಸಾವಿಗೆ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಸ್ವಾಮಿ ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ತೆಗೆಸಿಕೂಡುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನ ಕೊಂದು ಬಿಟ್ಟರಲ್ಲ ಸ್ವಾಮಿ, ನಿಮಗೆ ಆತ್ಮಸಾಕ್ಷಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ನಿಮ್ಮ ಮೊಮ್ಮಗನಿಗೆ ವೇದಿಕೆಯ ಮೇಲೆ ಕುರ್ಚಿ, ಜನಸಾಮಾನ್ಯರಿಗೆ ಬೀದಿಯಲ್ಲಿ ಕಾಲ್ತುಳಿತ. ಆಹಾ, ಇನ್ನು ಮುಂದೆಂದೂ ಸಮಾಜವಾದ, ಸಾಮಾಜಿಕ ನ್ಯಾಯ ಎಂದು ಭಾಷಣ ಬಿಗಿದು ಆ ಪದಗಳಿಗೆ, ಸಿದ್ಧಾಂತಗಳಿಗೆ ಅಪಮಾನ ಮಾಡಬೇಡಿ ಎಂದು ವಾಗ್ಧಾಳಿ ನಡೆಸಿದ್ದಾರೆ.…

Read More