Author: kannadanewsnow09

ನವದೆಹಲಿ: ಭಾರತವು ಬುಧವಾರ ಒಡಿಶಾದ ಚಾಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ತನ್ನ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ‘ಅಗ್ನಿ-5’ ಅನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ನ ಆಶ್ರಯದಲ್ಲಿ ನಡೆಸಲಾದ ಈ ಉಡಾವಣೆಯು ಕ್ಷಿಪಣಿಯ ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ ನಿಯತಾಂಕಗಳನ್ನು ಮೌಲ್ಯೀಕರಿಸಿದೆ. ಇದು ದೇಶದ ಕಾರ್ಯತಂತ್ರದ ತಡೆಗಟ್ಟುವಿಕೆ ಸಾಮರ್ಥ್ಯಗಳಿಗೆ ಗಮನಾರ್ಹ ಉತ್ತೇಜನವನ್ನು ಸೂಚಿಸುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. https://twitter.com/ANI/status/1958165707042013540 ಆಗಸ್ಟ್ 20, 2025 ರಂದು ಒಡಿಶಾದ ಚಾಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ‘ಅಗ್ನಿ 5’ ಅನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಉಡಾವಣೆಯು ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ ನಿಯತಾಂಕಗಳನ್ನು ಮೌಲ್ಯೀಕರಿಸಿತು. ಇದನ್ನು ಕಾರ್ಯತಂತ್ರದ ಪಡೆಗಳ ಕಮಾಂಡ್‌ನ ಆಶ್ರಯದಲ್ಲಿ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. https://twitter.com/ANI/status/1958165279470444665 https://kannadanewsnow.com/kannada/opposition-disrupts-the-assembly-proceedings-maddur-mla-k-m-uday/ https://kannadanewsnow.com/kannada/d-devaraja-arasus-public-contributions-model-maddur-tahsildar-parashuram-sathigeri/

Read More

ಮಂಡ್ಯ : ಹಿಂದುತ್ವದ ವಿಚಾರವನ್ನಷ್ಟೆ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಸದನದ ಸಮಯಯನ್ನು ಹಾಳು ಮಾಡುತ್ತಿದ್ದಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಬುಧವಾರ ವಾಗ್ದಾಳಿ ನಡೆಸಿದರು. ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಅಭಿವೃದ್ಧಿ, ಸಮಸ್ಯೆ ಹಾಗೂ ರೈತರ ಬಗ್ಗೆ ಸದನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದ್ದ ವಿರೋಧ ಪಕ್ಷದ ನಾಯಕರು ದೇವಸ್ಥಾನ, ಹಿಂದುತ್ವದ ವಿಚಾರಗಳನ್ನಷ್ಟೆ ಮುಂದಿಟ್ಟುಕೊಂಡು ಎರಡರೆಡು ವಾರಗಳ ಕಾಲ ಚರ್ಚಿಸಿ ಸದನದ ಅಮೂಲ್ಯ ಸಮಯವನ್ನು ಹಾಳು ಮಾಡುತ್ತಿದ್ದಾರೆ ಎಂದರು ಕಿಡಿಕಾರಿದರು. ವಿಪಕ್ಷ ನಾಯಕರಿಗೆ ರಾಜ್ಯದ ಅಭಿವೃದ್ಧಿಪಡಿಸುವ ಬಗ್ಗೆ ಚಿಂತೆಯಿಲ್ಲ. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳ ಶಾಸಕರ ಸಮಸ್ಯೆಗಳನ್ನು ಚರ್ಚಿಸಲು ಸಮಯಾವಕಾಶ ಕೊರತೆಯಾಗುತ್ತಿದೆ. ಕೆಲ ಬಿಲ್ ಗಳಿಗೆ ಮಾತ್ರ ಅನುಮತಿ ಸಿಗುತ್ತಿದೆ. ಶಾಸಕರು ಸಂಕ್ಷಿಪ್ತವಾಗಿ ಚರ್ಚಿಸಲು ವಿರೋಧ ಪಕ್ಷದ ನಾಯಕರ ಕಾಲಹರಣದಿಂದ ಅಡ್ಡಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸದನದಲ್ಲಿ ಚರ್ಚೆಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರತ್ಯೆಕವಾಗಿ…

Read More

ಆಪಲ್‌ನ ಉತ್ಪಾದನಾ ಕಾರ್ಯತಂತ್ರವು ಮತ್ತೊಂದು ಮಹತ್ವದ ಬದಲಾವಣೆಯ ಅಂಚಿನಲ್ಲಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರೋಧ ಮತ್ತು ಭಾರತೀಯ ಆಮದುಗಳ ಮೇಲೆ 50% ಸುಂಕವನ್ನು ಕಠಿಣವಾಗಿ ವಿಧಿಸುವ ಮಾತುಕತೆಗಳ ಹೊರತಾಗಿಯೂ ಆಪಲ್ ಐಫೋನ್ 17 ರ ಎಲ್ಲಾ ಭವಿಷ್ಯದ ಮಾದರಿಗಳನ್ನು ಭಾರತದಲ್ಲಿ ಉತ್ಪಾದಿಸಲು ಮತ್ತು ಅವುಗಳನ್ನು ಅಮೆರಿಕಕ್ಕೆ ರಫ್ತು ಮಾಡಲು ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಆಪಲ್ ತೆಗೆದುಕೊಂಡ ಅತ್ಯಂತ ನಿರ್ಣಾಯಕ ಕ್ರಮಗಳಲ್ಲಿ ಈ ಕಠಿಣ ಕ್ರಮ ಒಂದಾಗಿದೆ. ಭಾರತದಿಂದ ಬಿಡುಗಡೆಯಾಗಲಿರುವ ಐಫೋನ್ 17 ಲೈನ್‌ಅಪ್ ಬ್ಲೂಮ್‌ಬರ್ಗ್ ವರದಿ ಪ್ರಕಾರ ಇತ್ತೀಚಿನ ಐಫೋನ್ 17, ಐಫೋನ್ 17 ಪ್ರೊ, ಐಫೋನ್ 17 ಪ್ರೊ ಮ್ಯಾಕ್ಸ್, ಹಾಗೆಯೇ ಹೊಸ ಮಾದರಿ ಐಫೋನ್ 17 ಏರ್ ಎಲ್ಲವನ್ನೂ ಮುಂದಿನ ತಿಂಗಳು ಭಾರತದಲ್ಲಿ ತಯಾರಿಸಲಾಗುವುದು. ನಂತರ ಈ ಘಟಕಗಳನ್ನು ಅಮೇರಿಕನ್ ಗ್ರಾಹಕರಿಗೆ ರಫ್ತು ಮಾಡಲಾಗುತ್ತದೆ, ಇದು ಭಾರತದಲ್ಲಿ ಉತ್ಪಾದನಾ ವೇದಿಕೆಯಾಗಿ ಆಪಲ್‌ನ ಬೆಳೆಯುತ್ತಿರುವ ನಂಬಿಕೆಯನ್ನು ಪ್ರದರ್ಶಿಸುತ್ತದೆ. ಆಪಲ್ ಭಾರತವನ್ನು ಅವಲಂಬಿಸಿರುವುದೇ ಇದೇ ಮೊದಲಲ್ಲ,…

Read More

ಹುಬ್ಬಳ್ಳಿ: ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು ನಡೆಸಲಿದೆ. ರೈಲು ಸಂಖ್ಯೆ 07341 ಎಸ್‌ಎಸ್‌ಎಸ್ ಹುಬ್ಬಳ್ಳಿ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಆಗಸ್ಟ್ 26, 2025 ರಂದು (ಮಂಗಳವಾರ) ಸಂಜೆ 4:00 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 11:45 ಕ್ಕೆ ಮಂಗಳೂರು ಸೆಂಟ್ರಲ್ ತಲುಪುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07342 ಆಗಸ್ಟ್ 27, 2025 ರಂದು (ಬುಧವಾರ) ಮಧ್ಯಾಹ್ನ 2:15 ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮರುದಿನ ಬೆಳಿಗ್ಗೆ 09:45 ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಗೆ ಆಗಮಿಸುತ್ತದೆ. ಮಾರ್ಗಮಧ್ಯೆ, ರೈಲು SMM ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟವಾಲ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲ್ಲುತ್ತದೆ. ಈ ರೈಲು 17 ಬೋಗಿಗಳೊಂದಿಗೆ ಚಲಿಸಲಿದ್ದು, 01…

Read More

ಆಪಲ್‌ನ ಉತ್ಪಾದನಾ ಕಾರ್ಯತಂತ್ರವು ಮತ್ತೊಂದು ಮಹತ್ವದ ಬದಲಾವಣೆಯ ಅಂಚಿನಲ್ಲಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರೋಧ ಮತ್ತು ಭಾರತೀಯ ಆಮದುಗಳ ಮೇಲೆ 50% ಸುಂಕವನ್ನು ಕಠಿಣವಾಗಿ ವಿಧಿಸುವ ಮಾತುಕತೆಗಳ ಹೊರತಾಗಿಯೂ ಆಪಲ್ ಐಫೋನ್ 17 ರ ಎಲ್ಲಾ ಭವಿಷ್ಯದ ಮಾದರಿಗಳನ್ನು ಭಾರತದಲ್ಲಿ ಉತ್ಪಾದಿಸಲು ಮತ್ತು ಅವುಗಳನ್ನು ಅಮೆರಿಕಕ್ಕೆ ರಫ್ತು ಮಾಡಲು ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಆಪಲ್ ತೆಗೆದುಕೊಂಡ ಅತ್ಯಂತ ನಿರ್ಣಾಯಕ ಕ್ರಮಗಳಲ್ಲಿ ಈ ಕಠಿಣ ಕ್ರಮ ಒಂದಾಗಿದೆ. ಭಾರತದಿಂದ ಬಿಡುಗಡೆಯಾಗಲಿರುವ ಐಫೋನ್ 17 ಲೈನ್‌ಅಪ್ ಬ್ಲೂಮ್‌ಬರ್ಗ್ ವರದಿ ಪ್ರಕಾರ ಇತ್ತೀಚಿನ ಐಫೋನ್ 17, ಐಫೋನ್ 17 ಪ್ರೊ, ಐಫೋನ್ 17 ಪ್ರೊ ಮ್ಯಾಕ್ಸ್, ಹಾಗೆಯೇ ಹೊಸ ಮಾದರಿ ಐಫೋನ್ 17 ಏರ್ ಎಲ್ಲವನ್ನೂ ಮುಂದಿನ ತಿಂಗಳು ಭಾರತದಲ್ಲಿ ತಯಾರಿಸಲಾಗುವುದು. ನಂತರ ಈ ಘಟಕಗಳನ್ನು ಅಮೇರಿಕನ್ ಗ್ರಾಹಕರಿಗೆ ರಫ್ತು ಮಾಡಲಾಗುತ್ತದೆ, ಇದು ಭಾರತದಲ್ಲಿ ಉತ್ಪಾದನಾ ವೇದಿಕೆಯಾಗಿ ಆಪಲ್‌ನ ಬೆಳೆಯುತ್ತಿರುವ ನಂಬಿಕೆಯನ್ನು ಪ್ರದರ್ಶಿಸುತ್ತದೆ. ಆಪಲ್ ಭಾರತವನ್ನು ಅವಲಂಬಿಸಿರುವುದೇ ಇದೇ ಮೊದಲಲ್ಲ,…

Read More

ಮಂಡ್ಯ : ಉಳುವವನೇ ಭೂ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ 21 ಲಕ್ಷ ಎಕರೆ ಭೂಮಿಯನ್ನು ನಿರ್ಗತಿಕರಿಗೆ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದವರು ಡಿ.ದೇವರಾಜ ಅರಸು ಅವರು ಎಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಬುಧವಾರ ಹೇಳಿದರು. ಮದ್ದೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಳುವವನೇ ಭೂ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ 21 ಲಕ್ಷ ಎಕರೆ ಭೂಮಿಯನ್ನು ನಿರ್ಗತಿಕರಿಗೆ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದರು. ಈ ಕಾಯ್ದೆ ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕನ್ನು ನೀಡಿತು. ಅರಸು ಅವರು ಸರ್ವ ಜನಾಂಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾನೂನುಗಳನ್ನು ಜಾರಿಗೊಳಿಸಿದ ಪರಿಣಾಮ ಅವರನ್ನು ಸದಾ ನೆನೆಯುವಂತಾಗಿದೆ ಎಂದರು. ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದು ಕೊಟ್ಟು.…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದುವರಿದು, ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಅಳವಡಿಕೆ ಹಾಗೂ ಇತರೆ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಚಿತಾಗಾರದ ಫರ್ನೇಸ್ ಅನ್ನು ದಿನಾಂಕ: 22-08-2025 ರಿಂದ 28-08-2025 ರವರೆಗೆ 7 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ದಕ್ಷಿಣ ವಲಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ. https://kannadanewsnow.com/kannada/bbmp-issued-guidelines-for-the-celebration-of-ganesh-festival-in-bangalore-compliance-with-these-rules-is-mandatory/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/

Read More

ಬೆಂಗಳೂರು: 2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿ ತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವ ನಿಮಿತ್ತ ಮಾನ್ಯ ಮುಖ್ಯ ಆಯುಕ್ತರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿರುತ್ತದೆ. ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕಾಗಿ ತೀರ್ಮಾನವಾಗಿರುತ್ತದೆ. ಅದರಂತೆ, ದಿನಾಂಕ: 05-08-2025 ರಂದು ಮುಖ್ಯ ಆಯುಕ್ತರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಹಾಗೂ ತೀರ್ಮಾನಗಳಂತೆ ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ…

Read More

ಬೆಂಗಳೂರು: ಒಳ ಮೀಸಲಾತಿ ಸಂಬಂಧ ರಾಜ್ಯದ ಕಾಂಗ್ರೆಸ್ ಸರಕಾರವು ಕೇವಲ ರಾಜಕೀಯ ತೀರ್ಮಾನ ವ್ಯಕ್ತಪಡಿಸಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂಥ ತೀರ್ಮಾನವನ್ನು ಸರಕಾರವು ಯಾವತ್ತೋ ಕೊಡಬಹುದಾಗಿತ್ತು. ಇಷ್ಟು ಕಾಯಬೇಕಿರಲಿಲ್ಲ ಎಂದು ಅವರು ಟೀಕಿಸಿದರು. ಸರಕಾರ ಸಾಮಾಜಿಕ ನ್ಯಾಯದ ಪರವಾಗಿ ಇದೆಯೇ ಎಂಬುದು ರಾಜ್ಯದ ಜನರಿಗೆ ಪ್ರಶ್ನಾರ್ಥಕ ಚಿಹ್ನೆಯಾಗಿದೆ ಎಂದು ವಿಶ್ಲೇಷಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ವಿಷಯದಲ್ಲಿ ಒಂದು ತೀರ್ಮಾನಕ್ಕೆ ಬಂದ ವಿಚಾರ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ತೀರ್ಮಾನವು ಸುಪ್ರೀಂ ಕೋರ್ಟ್ ಆದೇಶದ ಪರವಾಗಿ ಅಥವಾ ಸದಾಶಿವ ಆಯೋಗದ ಪರವಾಗಿಯೂ ಇಲ್ಲ; ನಾಗಮೋಹನ್ ದಾಸ್ ಆಯೋಗದ ವಿಚಾರಗಳೂ ಇದರಲ್ಲಿ ಇಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ಅವರು 5 ಗುಂಪುಗಳಾಗಿ ವಿಂಗಡಿಸಿದ್ದರು. ನೀವು ಅದನ್ನು ತಿರಸ್ಕಾರ ಮಾಡಿ, 3 ಗುಂಪಾಗಿ ಸೀಮಿತಗೊಳಿಸಿದ್ದೀರಿ. ಎಡ, ಬಲ ಮತ್ತು ಸ್ಪøಶ್ಯ ಸಮುದಾಯವಾಗಿ ಮಾಡಿದ ಮಾಹಿತಿ ಇದೆ. ಹಾಗಾದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದ್ದರು. 2025ನೇ ಸಾಲಿನ ಜನಸಂದಣಿ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗಿತ್ತು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂಧೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು. ರಾಜ್ಯ ಸರ್ಕಾರದಿಂದ ಜನಸಂದಣಿ ನಿಯಂತ್ರಣಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. https://kannadanewsnow.com/kannada/high-court-directs-the-state-government-to-clarify-its-position-on-formulating-rules-for-bike-taxis/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/

Read More