Author: kannadanewsnow09

ಕಲಬುರ್ಗಿ: ಜಿಲ್ಲೆಯಲ್ಲಿ ಕೋರ್ಟ್ ನ ಚೇಂಬರ್ ನಲ್ಲಿದ್ದಂತ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ಕೋರ್ಚ್ ಚೇಂಬರ್ ನಲ್ಲಿದ್ದಾಗಲೇ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದಂತ ವಿಶ್ವನಾಥ ಮುಗುಟಿ(44) ಎಂಬುವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೇ ಅವರು ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಅಂದಹಾಗೇ ಇಂದು ಎಂದಿನಂತೆ ಕೋರ್ಟ್ ಗೆ ನಗು ನಗುತ್ತಲೇ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರು ಆಗಮಿಸಿದ್ದರು. ತಮ್ಮ ಚೇಂಬರ್ ನಲ್ಲಿ ಕುಳಿತು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕ, ಕಚೇರಿ ಸಿಬ್ಬಂದಿ ಸಹಾಯದಿಂದ ಕಲಬುರ್ಗಿಯ ಜಯದೇವ ಹದ್ರೋಗ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೇ ಆ ವೇಳೆಗಾಗಲೇ ನ್ಯಾಯಾಧೀಶರು ಮೃತಪಟ್ಟಿದ್ದರು. ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರ ನಿಧನಕ್ಕೆ ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಮೂರ್ತಿಗಳು ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/mysuru-honey-trap-case-five-accused-including-a-police-constable-arrested/ https://kannadanewsnow.com/kannada/big-news-kuws-chairman-vinay-kulakarni-urged-the-chief-minister-to-remove-him-from-the-position/

Read More

ಮೈಸೂರು: ನಗರದಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾ ತೋಡಿ, ಹಣ ದೋಚುತ್ತಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳು ಹನಿಟ್ರ್ಯಾಪ್ ಖೆಡ್ಡಾವನ್ನು ಬಟ್ಟೆ ಅಂಗಡಿಯ ಮಾಲೀಕ ದಿನೇಶ್ ಎಂಬುವರಿಗೆ ತೋಡಿದ್ದರು. ದಿನೇಶ್ ಕುಮಾರ್ ಅಂಗಡಿಗೆ ಬಟ್ಟೆ ಖರೀದಿಗೆ ತೆರಳಿದ್ದಂತ ಯುವತಿ, ಆತನನ್ನ ಪರಿಚಯಿಸಿಕೊಂಡು ಪೋನ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಗೆ ಇಳಿದು, ಮನೆಯಲ್ಲಿ ಯಾರು ಇಲ್ಲ. ಕಾಪಿಗೆ ಬನ್ನಿ ಎಂಬುದಾಗಿ ದಿನೇಶ್ ಕುಮಾರ್ ಆಹ್ವಾನಿಸಿದ್ದರು. ಯುವತಿ ಮಾತಿಗೆ ಮರುಳಾಗಿ ತೆರಳಿದ್ದಂತ ವೇಳೆಯಲ್ಲಿ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ದಿಢೀರ್ ಮನೆಗೆ ನುಗ್ಗಿ ಹಿಗ್ಗಾಮುಗ್ಗಾ ದಿನೇಶ್ ಕುಮಾರ್ ಥಳಿಸಿ ವೀಡಿಯೋ ಮಾಡಿದ್ದರು. ಈ ಘಟನೆಯ ನಂತ್ರ ದಿನೇಶ್ ಕುಮಾರ್ ಗೆ ಬ್ಲಾಕ್ ಮೇಲ್ ಮಾಡಿ, ಈ ವಿಷಯ ಯಾರಿಗೂ ಹೇಳದಿರಲು 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಾನ…

Read More

ಬೆಂಗಳೂರು: “ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ…

Read More

ದಾವಣಗೆರೆ : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು. ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು. ಕಾಯ್ದೆಯ ಪ್ರಕಾರ ಮರುಗಣತಿ ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು…

Read More

ಶಿವಮೊಗ್ಗ: ನಿನ್ನೆ ಸಾಗರದ ವಿಜಯನಗರ ಬಡಾವಣೆಯ ಈಜುಕೊಳದ ಸಮೀಪದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಸಂಬಂಧ ರಶ್ಮಿ ಎಂಬುವರು ಸಾಗರ ಪೇಟೆ ಠಾಣೆಗೆ ತೆರಳಿ, ಸದಾನಂದ ಅವರ ಸಾವಿಗೆ ನನ್ನ ಪತಿ ಗ್ರಾಮ ಲೆಕ್ಕಿಗ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮಾತ್ ಹಾಗೂ ಪ್ರದೀಪ್ ಕಾರಣ ಎಂಬುದಾಗಿ ದೂರು ನೀಡಿದ್ದರು.  ಈ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 103(1) ಹಾಗೂ 238, 3(5)ರಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಎ.1 ಆರೋಪಿಯಾಗಿ ಸಾಗರದ ವಿಜಯನಗರದ ವೆಂಕಟೇಶ್ ಆಚಾರಿ, ಎ2 ಆರೋಪಿಯಾಗಿ ಸಾಗರ ಎಸ್ ಎನ್ ನಗರದ ರವೀಂದ್ರ ಕಾಮತ್ ಹಾಗೂ ಎ.3 ಆರೋಪಿಯಾಗಿ ವಿಜಯನಗರದ ಪ್ರದೀಪ್ ಎಂಬುವರ ವಿರುದ್ಧ ಸಾಗರ ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರು, ಸದಾನಂದ ಅವರ ಹತ್ಯೆ ಪ್ರಕರಣದಲ್ಲಿ ವಿಎ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿಗಳಾದಂತ ರವೀಂದ್ರ…

Read More

ನವದೆಹಲಿ: ಮೆಟಾ ಪ್ಲಾಟ್‌ಫಾರ್ಮ್ಸ್ ಸೋಮವಾರ, ಅರುಣ್ ಶ್ರೀನಿವಾಸ್ ಅವರನ್ನು ಭಾರತದಲ್ಲಿ ಮೆಟಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಇದು ಜುಲೈ 1 ರಿಂದ ಜಾರಿಗೆ ಬರಲಿದೆ. ಶ್ರೀನಿವಾಸ್ ಪ್ರಸ್ತುತ ಟೆಕ್ ದೈತ್ಯ ಕಂಪನಿಯ ಭಾರತದ ಜಾಹೀರಾತು ವ್ಯವಹಾರದ ಮುಖ್ಯಸ್ಥರಾಗಿದ್ದಾರೆ ಎಂದು ಅವರ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಟೆಕ್ ಸಂಸ್ಥೆಯ ಸ್ಪರ್ಧಾತ್ಮಕ ವಿರೋಧಿ ಪದ್ಧತಿಗಳ ಆರೋಪಗಳಿಗೆ ಸಂಬಂಧಿಸಿದಂತೆ ಮೆಟಾ ಮತ್ತು ಭಾರತೀಯ ಅಧಿಕಾರಿಗಳು ಘರ್ಷಣೆ ನಡೆಸುತ್ತಿರುವ ಸಮಯದಲ್ಲಿ ಅವರ ನೇಮಕಾತಿ ಬಂದಿದೆ. ನವೆಂಬರ್‌ನಲ್ಲಿ, ಭಾರತೀಯ ಸ್ಪರ್ಧಾ ಆಯೋಗ (CCI) ಕಂಪನಿಗೆ ನಂಬಿಕೆ ವಿರೋಧಿ ಉಲ್ಲಂಘನೆಗಾಗಿ ದಂಡ ವಿಧಿಸಿತ್ತು ಮತ್ತು ಮೆಟಾ ಒಡೆತನದ ಜನಪ್ರಿಯ ಸಂದೇಶ ವೇದಿಕೆ WhatsApp ಅನ್ನು ಐದು ವರ್ಷಗಳ ಅವಧಿಗೆ ಜಾಹೀರಾತು ಉದ್ದೇಶಗಳಿಗಾಗಿ ಇತರ ಮೆಟಾ-ಮಾಲೀಕತ್ವದ ಅಪ್ಲಿಕೇಶನ್‌ಗಳೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳದಂತೆ ನಿರ್ಬಂಧಿಸಿತ್ತು. ಮೆಟಾ CCI ಯ ಆದೇಶವನ್ನು ಒಪ್ಪಲಿಲ್ಲ ಮತ್ತು ಅದರ ವ್ಯವಹಾರಕ್ಕೆ ಹೊಡೆತ ಬೀಳುವ ಬಗ್ಗೆ ಎಚ್ಚರಿಸಿತ್ತು. ಈ ವರ್ಷದ…

Read More

ಶಿವಮೊಗ್ಗ: ಸಾಗರ ನಗರದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ರಾಮ ಲೆಕ್ಕಿಗ, ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಮೂವರನ್ನು ಸಾಗರ ಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಸಾಗರದ ವಿಜಯನಗರ ಬಡಾವಣೆಯ ಈಜುಕೊಳದ ಸಮೀಪದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ತೆರಳಿದ್ದಂತ ಸಾಗರ ಪೇಟೆ ಠಾಣೆಯ ಪೊಲೀಸರು, ಪರಿಶೀಲಿಸಿ ಮಾಹಿತಿ ಕಲೆ ಹಾಕಿದಾಗ ಮೃತ ವ್ಯಕ್ತಿ ಶಿವಪ್ಪನಾಯಕ ನಗರ ಹೊಸ ಬಡಾವಣೆಯ ನಿವಾಸಿ ಸದಾನಂದ(44) ಎಂಬುದಾಗಿ ಗುರುತು ಸಿಕ್ಕಿತ್ತು. ಈ ಸಂಬಂಧ ರಶ್ಮಿ ಎಂಬುವರು ಸಾಗರ ಪೇಟೆ ಠಾಣೆಗೆ ತೆರಳಿ, ಸದಾನಂದ ಅವರ ಸಾವಿಗೆ ನನ್ನ ಪತಿ ಗ್ರಾಮ ಲೆಕ್ಕಿಗ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮಾತ್ ಹಾಗೂ ಪ್ರದೀಪ್ ಕಾರಣ ಎಂಬುದಾಗಿ ದೂರು ನೀಡಿದ್ದರು. ವೆಂಕಟೇಶ್ ಆಚಾರಿ ಪತ್ನಿ ರಶ್ಮಿಯೇ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯ ಪೊಲೀಸರು ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಕುರಿತಂತೆ ಮಾಹಿತಿ ನೀಡಿದಂತ ಸಾಗರ ಡಿವೈಎಸ್ಪಿ…

Read More

ನವದೆಹಲಿ: ಭಾರತದ G20 ಶೆರ್ಪಾ ಹುದ್ದೆಯಿಂದ ಅಮಿತಾಭ್ ಕಾಂತ್ ಕೆಳಗಿಳಿದಿದ್ದು, ಸರ್ಕಾರಿ ಸೇವೆಯಲ್ಲಿ 45 ವರ್ಷಗಳ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ. 2022 ರಿಂದ G20 ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮತ್ತು 2023 ರ ಅಧ್ಯಕ್ಷತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನೀತಿ ಆಯೋಗದ ಮಾಜಿ ಸಿಇಒ, ಈಗ ಅವರು ಸ್ಟಾರ್ಟ್‌ಅಪ್‌ಗಳು, ಚಿಂತಕರ ಚಾವಡಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳೊಂದಿಗೆ ವೈಯಕ್ತಿಕವಾಗಿ ತೊಡಗಿಸಿಕೊಳ್ಳುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. “ಸರ್ಕಾರಕ್ಕೆ 45 ವರ್ಷಗಳ ಸಮರ್ಪಿತ ಸೇವೆಯ ನಂತರ, ನಾನು ಹೊಸ ಅವಕಾಶಗಳನ್ನು ಸ್ವೀಕರಿಸಲು ಮತ್ತು ಹೊಸ ಅಧ್ಯಾಯವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇನೆ. ಭಾರತದ G20 ಶೆರ್ಪಾ ಹುದ್ದೆಗೆ ನನ್ನ ರಾಜೀನಾಮೆಯನ್ನು ಸ್ವೀಕರಿಸಿದ್ದಕ್ಕಾಗಿ ಮತ್ತು ಭಾರತದ ಬೆಳವಣಿಗೆಯ ಪಥವನ್ನು ರೂಪಿಸಿದ ಅಭಿವೃದ್ಧಿ ಉಪಕ್ರಮಗಳನ್ನು ಮುನ್ನಡೆಸಲು ಅವರು ನನ್ನ ಮೇಲೆ ಇಟ್ಟಿದ್ದ ನಂಬಿಕೆಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಕಾಂತ್ ಸೋಮವಾರ ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/amitabhk87/status/1934466739456139545 ನನ್ನ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಡಾ. ಎಸ್. ಜೈಶಂಕರ್…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಲ್ಲಲ್ಲಿ ಮನೆ, ರಸ್ತೆ, ರಪ್ಪಗಳು ಹಾನಿಗೊಂಡಿವೆ‌. ಈ ಪ್ರದೇಶಗಳಿಗೆ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ಶಾಸಕರ ಆಪ್ತ ಸಹಾಯಕ ಶ್ರೀನಿವಾಸ ಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:15/ 16.06.2025 ರಂದು ಮಳೆ ಮತ್ತು ಗಾಳಿ ವ್ಯಾಪಕವಾಗುತ್ತಿರುವುದರಿಂದ ಮನೆ ಹಾನಿಯಾದರೆ /ಇತರೆ ಹಾನಿಯಾದರೆ ಕೂಡಲೇ VA, RI ಹಾಗೂ ಪಿಡಿಒಗಳು ಸೇರಿದಂತೆ ಇತರೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ. ಇನ್ನೂ ಮಳೆ ಹಾನಿ ಪರಿಹಾರಕ್ಕೆ ವರದಿ ಸಲ್ಲಿಸಿ, ಮಾಹಿತಿಯನ್ನು ಕಛೇರಿಗೆ ನೀಡಿ, ಹೆಚ್ಚಿನ ಮನೆ ಹಾನಿಯಾಗಿದ್ದಲ್ಲಿ ಪಂಚಾಯಿತಿವತಿಯಿಂದ ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸೇವನೆಯಿಂದ ನಿರ್ದೇಶಿತನಾಗಿದ್ದೇನೆ ಎಂದಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Read More

ಶಿವಮೊಗ್ಗ: ಜಿಲ್ಲೆಯಲ್ಲಿ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಜೊತೆಗೆ ಚಳಿಗಾಳಿ ಬೀಸುತ್ತಿದೆ. ಹೀಗಾಗಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸೊರಬ ತಾಲ್ಲೂಕಿನ ಉಳವಿ ಪ್ರೌಢ ಶಾಲೆಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಳವಿ ಪ್ರೌಢಶಾಲೆಗೆ ಇಂದು ರಜೆಯನ್ನು ಘೋಷಿಸಿರುವುದಾಗಿ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಸೊರಬ ತಾಲ್ಲೂಕಿನಲ್ಲಿ ಉಳವಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಾಹಿತಿಯನ್ನು ತಹಶೀಲ್ದಾರ್ ಮಂಜಳಾ ಅವರಿಗೆ ನೀಡಲಾಗಿದೆ. ಅವರೊಂದಿಗೆ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರೊಂದಿಗೆ ಚರ್ಚಿಸಿ ಇಂದು ಉಳವಿಯ ಪ್ರೌಢಶಾಲೆಗೆ ರಜೆ ನೀಡಲಾಗಿದೆ ಎಂದಿದ್ದಾರೆ. ಇಂದು ಶಾಲೆಗೆ ರಜೆಯ ಕಾರಣ ಮುಂದಿನ ಅವದಿಯಲ್ಲಿ ಇಂದಿನ ತರಗತಿ ಪಠ್ಯ ಸರಿದೂಗಿಸುವುದಾಗಿ ಮಾಹಿತಿ ನೀಡಿದ್ದಾರೆ. ವಸಂತ ಬಿ ಈಶ್ವರಗೆರೆ, ಸಂಪಾದಕರು, kannadanewsnow.com – 9738123234

Read More