Subscribe to Updates
Get the latest creative news from FooBar about art, design and business.
Author: kannadanewsnow09
ಬೆಳ್ತಂಗಡಿ: “ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಆಮೂಲಕ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ ಭೀಮ್ ಹಾಗೂ ಜೈ ಸಂವಿಧಾನ ಸಮಾವೇಶ ಮಾಡಿ, ಗಾಂಧೀಜಿ, ಅಂಬೇಡ್ಕರ್ ತತ್ವ ಸಿದ್ಧಾಂತ ಹಾಗೂ ಸಂವಿಧಾನ ರಕ್ಷಣೆಗೆ ಕರೆ ನೀಡಿದ್ದಾರೆ. ಇವುಗಳನ್ನು ನಾವು ಉಳಿಸಿ, ಬೆಳೆಸಿಕೊಂಡು ಹೋಗಬೇಕು” ಎಂದರು. “ಕೇಂದ್ರ ಬಿಜೆಪಿ ನಾಯಕರು ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದರು. ಎಲ್ಲಾ ಧರ್ಮಗಳನ್ನು ಒಟ್ಟಾಗಿ ಸೇರಿಸಿಕೊಂಡು ಕೆಲಸ ಮಾಡುವುದೇ ಕಾಂಗ್ರೆಸ್ ಸಿದ್ಧಾಂತ. ಇಂದು ಕ್ರೈಸ್ತ ಬಾಂಧವರ ಈಸ್ಟರ್ ಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಶುಭ…
ಬೆಂಗಳೂರು: ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆ ಬಳಿಕ I Have Finished Monster ಎಂಬುದಾಗಿ ಮತ್ತೋರ್ವ ಮಾಜಿ ಡಿಜಿ ಮತ್ತು ಐಜಿಪಿ ಪತ್ನಿಗೆ ಕರೆ ಮಾಡಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್(68) ಅವರನ್ನು ಅವರ ಪತ್ನಿ ಪಲ್ಲವಿ ಎಂಬುವರೇ ಚಾಕುವಿನಿಂದ ಇರಿದು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಓಂ ಪ್ರಕಾಶ್ ಕೊಲೆ ಬಳಿಕ ವೀಡಿಯೋ ಕರೆಯನ್ನು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿ ಪತ್ನಿ ಪಲ್ಲವಿ ಮಾಡಿದ್ದಾರೆ. I Have Finished Monster ಎಂಬುದಾಗಿ ವೀಡಿಯೋ ಕರೆಯಲ್ಲಿ ತಿಳಿಸಿದ್ದಾಗಿ ತಿಳಿದು ಬಂದಿದೆ. ಅಂದಹಾಗೇ ಮೂರು ದಿನಗಳ ಹಿಂದೆ ಐಪಿಎಸ್ ಫ್ಯಾಮಿಲಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಓಂ ಪ್ರಕಾಶ್ ಪತ್ನಿ ವಾಟ್ಸ್ ಆಪ್ ಮೆಸೇಜ್ ಮಾಡಿದ್ದರು. ನನ್ನ ಪತಿ ನನಗೆ, ಮಗಳಿಗೆ ತುಂಬಾ…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಬೈಕ್ ವೀಲ್ಹಿಂಗ್ ಮಾಡೋರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗೆ ಮಾಡಿದಂತ ಮೂವರು ಅಪ್ರಾಪ್ತನ ವಿರುದ್ಧ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಈ ಬಗ್ಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಮಾಹಿತಿ ಹಂಚಿಕೊಂಡಿದ್ದು, ಸಾಗರ ನಗರದ ಹೆಲಿಪ್ಯಾಡ್ ಬಳಿಯಲ್ಲಿ ಬೈಕ್ ವೀಲ್ಹಿಂಗ್ ನಲ್ಲಿ ತೊಡಗಿದ್ದಂತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಮೂವರು ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ನೀಡುವುದು ಕಾನೂನಿನಡಿ ಅಪರಾಧವಾಗಿದೆ. ಈ ಕಾರಣದಿಂದಾಗಿ ಬಾಲಕರ ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮೂವರು ಅಪ್ರಾಪ್ತ ಬಾಲಕರು, ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಸೋ ಸಾಗರ ತಾಲ್ಲೂಕಿನ ಜನರೇ ಎಚ್ಚೆತ್ತು ಕೊಳ್ಳಿ. ಅಪ್ರಾಪ್ತರ ಕೈಗೆ ಬೈಕ್ ನೀಡಿ, ಅಪರಾಧ ಚಟುವಟಿಕೆ, ಅಪಘಾತ, ಈ ರೀತಿಯ ಬೈಕ್ ವೀಲ್ಹಿಂಗ್ ನಂತಹ ಪ್ರಕರಣ ದಾಖಲಾದಾಗ, ನಿಮ್ಮ ವಿರುದ್ಧವೂ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗಮಾತ್ರ ಗುಲಾಮಗಿರಿಯನ್ನು ನೀಗಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಹಣಬರ ಸಂಘದ ಶತಮಾನೋತ್ಸವ ಹಾಗೂ ಶ್ರೀ ಯಾದವಾನಂದ ಸ್ವಾಮಿಗಳ 16 ನೇ ಪಟ್ಟಾಭಿಷೆಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ,ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ , ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ…
ಶಿವಮೊಗ್ಗ : ಕೆಎಫ್ಡಿ ರೋಗದ ಹರಡುವಿಕೆ ಪ್ರಮಾಣ ಅರ್ಥ ಮಾಡಿಕೊಂಡು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ(ಐಸಿಎಂಆರ್) ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ಎಪಿಡೆಮಿಯಾಲಜಿಯು ಜಿಲ್ಲೆಯಲ್ಲಿ ಸೀರೋಸರ್ವೇ ನಡೆಸಿತು. ಕ್ಯಾಸನೂರು ಫಾರೆಸ್ಟ್ ಡಿಸೀಜ್ (ಕೆಎಫ್ಡಿ) ಸಾಮಾನ್ಯವಾಗಿ ಮಂಗನ ಜ್ವರವೆಂದು ಕರೆಯಲ್ಪಡುವ ಈ ರೋಗವು ಪಶ್ಚಿಮಘಟ್ಟದ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತದೆ. ಆರಂಭದಲ್ಲಿ ಈ ರೋಗವು ಕೇವಲ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಕಂಡುಬಂದಿದ್ದರೆ, ಈಗ ಇದು ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಹಾಗು ಪಕ್ಕದ ರಾಜ್ಯಗಳಲ್ಲಿಯೂ ಹರಡಿದೆ. ಈ ರೋಗದ ಹರಡುವಿಕೆ ಪ್ರಮಾಣವನ್ನು ಅರ್ಥಮಾಡಿಕೊಳ್ಳಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ(ಐಸಿಎಂಆರ್) ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ಎಪಿಡೆಮಿಯಾಲಜಿ(ಎನ್ಐಇ) ವಿಭಾಗವು ಪಶ್ಚಿಮಘಟ್ಟದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳ ಹಾಗೂ ವಯಸ್ಕರಲ್ಲಿ ಕೆಎಫ್ಡಿ ಸೀರೋಸರ್ವೇ(ರಕ್ತಸಾರ ಸಮೀಕ್ಷೆ) ನಡೆಸುತ್ತಿದೆ. ಈ ಸೀರೋಸರ್ವೇಯನ್ನು ಕರ್ನಾಟಕ, ಮಹಾರಾಷ್ಟç, ಗೋವಾ, ಕೇರಳ ಮತ್ತು ತಮಿಳುನಾಡು ಸೇರಿದಂತೆ ಐದು ರಾಜ್ಯಗಳಲ್ಲಿ ನಡೆಸಲಾಗುವುದು. ಕರ್ನಾಟಕದಲ್ಲಿ ಈ ಸೀರೋಸರ್ವೇ ಅನ್ನು ಶಿವಮೊಗ್ಗದ…
ಬೆಳ್ತಂಗಡಿ: “ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಧರ್ಮ ಆಚರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡಲಿದೆ” ಎಂದು ತಿಳಿಸಿದರು. “ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ನಾವು ಹುಟ್ಟುವಾಗ ಇಂತಹುದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿಲ್ಲ. ನಾವು ಜಾತಿ ಧರ್ಮ ಬೇಡ ಎಂದು ಎಷ್ಟೇ ಹೇಳಿದರೂ, ನಮ್ಮ…
ಬೆಂಗಳೂರು: ಕರ್ನಾಟಕದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದಂತ ಓಂ ಪ್ರಕಾಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಮ್ಮ ಮನೆಯಲ್ಲೇ ರಕ್ತದ ಮಡುವಿನಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ಶವವಾಗಿ ಪತ್ತೆಯಾಗಿದ್ದಾರೆ. 2015ರಲ್ಲಿ ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿದ್ದವರು ಓಂ ಪ್ರಕಾಶ್. 68 ವರ್ಷದ ಅವರನ್ನು ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ವಾಸವಾಗಿದ್ದಂತ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಪತ್ತೆಯಾಗಿರೋದಾಗಿ ಮಾಹಿತಿಯನ್ನು ಪತ್ನಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಂತ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರನ್ನು ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ಸ್ಥಳಕ್ಕೆ ದೌಡಾಯಿಸಿರುವಂತ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ. 1981ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಂತ ಓಂ ಪ್ರಕಾಶ್ ಅವರು, ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. https://kannadanewsnow.com/kannada/govt-committed-to-punish-anyone-found-guilty-in-case-of-dismemberment-of-students-dks/ https://kannadanewsnow.com/kannada/cm-siddaramaiah-announces-minimum-wages-for-all-pourakarmikas-minimum-wages-for-contract-employees/
ಬೆಳಗಾವಿ: ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಯಲ್ಲಿ ಉತ್ತರ ಬರೆಯೋದು ಬಿಟ್ಟು, ಇಬ್ಬರು ವಿದ್ಯಾರ್ಥಿಗಳು ವಿಚಿತ್ರ ಬೇಡಿಕೆಯನ್ನು ಉತ್ತರ ಪತ್ರಿಕೆಯಲ್ಲೇ ಬರೆದು, ಮೌಲ್ಯ ಮಾಪಕರ ಮುಂದಿಟ್ಟಿದ್ದಾರೆ. ಅವರ ಬರವಣಿಗೆಯನ್ನು ಕಂಡು ಮೌಲ್ಯಮಾಪಕರೇ ದಂಗಾಗಿ ಹೋಗಿದ್ದಾರೆ. ಅದೇನು ಅಂತ ಮುಂದೆ ಓದಿ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಮೌಲ್ಯ ಮಾಪಕನ ಕಾರ್ಯವು ಕೇಂದ್ರವೊಂದರಲ್ಲಿ ನಡೆಯುತ್ತಿದೆ. ಈ ಪರೀಕ್ಷಾ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯ ಮಾಪನದ ವೇಳೆಯಲ್ಲಿ ಮೌಲ್ಯ ಮಾಪಕರು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಗಳು ಬೇಡಿಕೆ ಕಂಡು ಬೆರಗಾಗಿ ಹೋಗಿದ್ದಾರೆ. ನೀವು ಪಾಸ್ ಮಾಡಿದ್ರೆ ನನ್ನನ್ನು ಪೋಷಕರು ಕಾಲೇಜಿಗೆ ಕಳಿಸೋದಿಲ್ಲ ಓರ್ವ ವಿದ್ಯಾರ್ಥಿ ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಯಲ್ಲಿ ಪ್ಲೀಸ್ ಮೀಸ್ ಅಂಡ್ ಸರ್. ದಯವಿಟ್ಟು ಪ್ಲೀಸ್ ಪ್ಲೀಸ್ ನಂಗೆ ಪಾಸ್ ಮಾಡಿ. ಪ್ಲೀಸ್ ಸರ್. ಮಿಸ್ ನಂಗೆ ಪಾಸ್ ಮಾಡಿಲ್ಲಾ ಅಂದ್ರೆ ನಮ್ಮ ಮನೆಯಲ್ಲಿ ಮುಂದೆ…
ಪ್ರತಿದಿನ ಹಣದ ಹರಿವು ಎಷ್ಟು ಮುಖ್ಯ ಎಂದು ಎಲ್ಲರಿಗೂ ತಿಳಿದಿದೆ. ಆ ಹಣದ ಹರಿವನ್ನು ಹೆಚ್ಚಿಸಲು ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ. ಆದರೆ ಹಲವರಿಗೆ ಹಣ ಕೈಗೆ ಬರುವ ಮುನ್ನವೇ ಖರ್ಚು ಬರುತ್ತದೆ. ಕೆಲವು ಜನರು ಆದಾಯದ ಅವಕಾಶವಿಲ್ಲದೆ ಉಳಿದಿದ್ದಾರೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನೀವು ಹಣದ ಅಡೆತಡೆಗಳನ್ನು ಸರಿಪಡಿಸುವ ಮತ್ತು ನಗದು ಹರಿವನ್ನು ಹೆಚ್ಚಿಸುವ ಅದ್ಭುತ ಪರಿಹಾರವನ್ನು ಕಾಣಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…
ಮಧ್ಯಪ್ರದೇಶ: ಕಳೆದ ಗುರುವಾರ ಮಧ್ಯಪ್ರದೇಶದ ಛತ್ತರ್ಪುರದ ಜಿಲ್ಲಾ ಆಸ್ಪತ್ರೆಯಲ್ಲಿ 77 ವರ್ಷದ ವ್ಯಕ್ತಿಯನ್ನು ವೈದ್ಯರು ನಿರ್ದಯವಾಗಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಇದಷ್ಟೇ ಅಲ್ಲದೇ ನಂತರ ನಡೆದದ್ದು ಇನ್ನಷ್ಟು ಆತಂಕಕಾರಿಯಾಗಿತ್ತು – ದುರ್ಬಲ ವೃದ್ಧನನ್ನು ಆಸ್ಪತ್ರೆಯ ಆವರಣದಾದ್ಯಂತ ವೈದ್ಯರೇ ಎಳೆದಾಡಿದ ಘಟನೆ ನಡೆದಿದೆ. ಏಪ್ರಿಲ್ 17 ರಂದು ನಡೆದ ಈ ಘಟನೆಯನ್ನು ಪಕ್ಕದಲ್ಲಿದ್ದವರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. https://twitter.com/INCMP/status/1913836184062620004 ಉಧವ್ಲಾಲ್ ಜೋಷಿ ತಮ್ಮ ಅಸ್ವಸ್ಥ ಪತ್ನಿಯನ್ನು ಹೊಟ್ಟೆಯ ರಕ್ತನಾಳದ ಕಾಯಿಲೆಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ವೈದ್ಯರು ಅವರನ್ನು ಎದುರಿಸಿದಾಗ ಅವರು ಲೆಕ್ಕವಿಲ್ಲದಷ್ಟು ಇತರರಂತೆ ಸರದಿಯಲ್ಲಿ ಕಾಯುತ್ತಿದ್ದರು ಎಂದು ಅವರು ಹೇಳಿದರು. ಜನಸಂದಣಿಯಿಂದ ಸಿಟ್ಟಿಗೆದ್ದ ವೈದ್ಯರು, ನೀವು ಸರದಿಯಲ್ಲಿ ಏಕೆ ಇದ್ದೀರಿ ಎಂದು ಕೇಳಿದರು ಎಂದು ಜೋಶಿ ಹೇಳಿದರು. ಅವರು ವಿವರಿಸಲು ಪ್ರಯತ್ನಿಸಿದಾಗ, ವೈದ್ಯರು ಅವರನ್ನು ಕಪಾಳಮೋಕ್ಷ ಮಾಡಿದರು ಎಂದು ಆರೋಪಿಸಲಾಗಿದೆ. ನಂತರ, ವೈದ್ಯರು ಅವರನ್ನು ಆಸ್ಪತ್ರೆ ಆವರಣದೊಳಗಿನ ಪೊಲೀಸ್ ಠಾಣೆಯ ಕಡೆಗೆ ಎಳೆದೊಯ್ದರು. ವೈದ್ಯರು ನನ್ನನ್ನು ಒದ್ದು ಚೌಕಿಗೆ ಎಳೆದೊಯ್ದರು. ಅವರು…











