Author: kannadanewsnow09

ಚಿಕ್ಕೋಡಿ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಅಪರಾಧಿಗೆ ಕೋರ್ಟ್ 30 ವರ್ಷ ಜೈಲು ಶಿಕ್ಷ, 10,000 ದಂಡವನ್ನು ವಿಧಿಸಿ ಮಹತ್ವದ ತೀರ್ಪು ನೀಡಿದೆ. ಚಿಕ್ಕೋಡಿಯ ನಿಪ್ಪಾಣಿ ತಾಲ್ಲೂಕಿನಲ್ಲಿ ಆಕಾಶ್ ಆಲಿಯಾಸ್ ಅಕ್ಷಯ್ ಮಹಾದೇವ್ ಸಾಳುಂಕೆ ಎಂಬಾತ 14 ವರ್ಷದ ಬಾಲಕಿಯ ಮೇಲೆ ಆಗಸ್ಟ್.18, 2019ರಂದು ಅತ್ಯಾಚಾರ ಎಸಗಿದ್ದನು. ಈ ಸಂಬಂಧ ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕುರಿತಂತೆ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದಂತ ಸಿಎಂ ಪುಷ್ಪಲತಾ ಅವರು, ಸೆಪ್ಟೆಂಬರ್.4, 2025ರಂದು ಆಕಾಶ್ ಅಪರಾಧಿ ಎಂಬುದಾಗಿ ತೀರ್ಪು ನೀಡಿದ್ದರು. ಇದೀಗ ಅಪರಾಧಿ ವಿರುದ್ಧ ಐಪಿಸಿ ಸೆಕ್ಷನ್ 376ರಡಿ ಪೋಕ್ಸೋ ಕೇಸ್ ಅಡಿಯಲ್ಲಿ 30 ವರ್ಷ ಕಠಿಣ ಜೈಲು ಶಿಕ್ಷೆ, 10,000 ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/ https://kannadanewsnow.com/kannada/women-should-be-careful-now-if-they-sleep-wearing-a-bra-at-night/

Read More

ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ದಿನೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಾ.ದಿನೇಶ್ ಅವರನ್ನು, ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರನ್ನಾಗಿ ನೇಮಿಸಿದೆ. ಡಾ.ಬಿ ದಿನೇಶ್ ಅವರು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ  Interventional Cardiologist ಮತ್ತು Professor in the Department of Cardiology ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ದೊಡ್ಡೆಬಾಗಿಲು ಗ್ರಾಮದ ಕೃಷಿಕ ಕುಟುಂಬದಲ್ಲಿ ಡಾ.ದಿನೇಶ್ ಜನಿಸಿದ್ದರು. ಮೈಸೂರಲ್ಲಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಇಲಾಖೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಕೆ ಆರ್ ಆಸ್ಪತ್ರೆಯಲ್ಲಿ ಎಂಡಿ ವ್ಯಾಸಂಗ ಮಾಡಿದ ಬಳಿಕ ಮೈಸೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿಭಾಗದ ಉಪನ್ಯಾಸಕರಾಗಿ, ಸಹಾಯಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. https://kannadanewsnow.com/kannada/food-civil-supplies-department-meeting-held-by-chief-minister-siddaramaiah-here-are-the-highlights/

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಈ ಕೆಳಕಂಡಂತಿವೆ. • ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. • ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ. • ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ…

Read More

ಬೆಂಗಳೂರು: ರಾಜ್ಯದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿ ವೇತನಕ್ಕೆ ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ಆಧಾರ್‌ ಜೋಡಣೆ ಕಡ್ಡಾಯ! ಪರಿಶಿಷ್ಟ ಜಾತಿಯ 9 ಮತ್ತು 10ನೇ ತರಗತಿ (ಮೆಟ್ರಿಕ್ ಪೂರ್ವ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು ಎಂದಿದೆ. ಅರ್ಜಿ ಸಲ್ಲಿಸಿದ ನಂತರ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ನೀವು ಓದುತ್ತಿರುವ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಆಧಾರ್ ಕಾರ್ಡ್‌ನೊಂದಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿರಬೇಕು. ಅರ್ಜಿ ಸಲ್ಲಿಸಲು https://ssp.postmatric.karnataka.gov.in/ssppre/ ಈ ಕೆಳಗಿನ ಲಿಂಕ್ ಬಳಸುವಂತೆ ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. https://twitter.com/SWDGoK/status/1965345421934690643

Read More

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಿಸಲು ಸಮುದಾಯ ಆಧಾರಿತ ತೀವ್ರ ಅಪೌಷ್ಠಿಕ ಮಕ್ಕಳ ನಿರ್ವಹಣೆಯ ಯೋಜನೆ ʼಚಿಗುರುʼ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ ನೀಡಿದರು. ಮಕ್ಕಳ ಅಪೌಷ್ಟಿಕತೆ ನಿವಾರಣೆ ಇಲಾಖೆಯ ಅತ್ಯಂತ ಆದ್ಯತೆಯ ಯೋಜನೆಗಳಲ್ಲೊಂದಾಗಿದ್ದು, ಈ ಮೂಲಕ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಯೋಜನೆಯ ವಿವರ: ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಿಸಲು ಸಮುದಾಯ ಆಧಾರಿತ ತೀವ್ರ ಅಪೌಷ್ಟಿಕ ಮಕ್ಕಳ ನಿರ್ವಹಣೆ [Community Based Management of acute malnourished (C-MAM)] ಈ ಯೋಜನೆಯ ಭಾಗವಾಗಿದೆ. NFHS-5 ಸಮೀಕ್ಷೆಯ ಪ್ರಕಾರ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಿಸಲು ಸಮುದಾಯ ಆಧಾರಿತ ತೀವ್ರ ಅಪೌಷ್ಟಿಕ ಮಕ್ಕಳ ನಿರ್ವಹಣೆ ಯೋಜನೆಯನ್ನು ಅನುಷ್ಟಾನಗೊಳಿಸಲು UNICEF ಸಂಸ್ಥೆಯ ಸಹಯೋಗದೊಂದಿಗೆ C-MAM ಬಗ್ಗೆ technical protocol ಅನ್ನು ಕೇಂದ್ರ ಸರ್ಕಾರದಿಂದ ಒದಗಿಸಲಾದ document ಮಾದರಿಯಲ್ಲಿ ಸಿದ್ಧಪಡಿಸಲಾಗಿದೆ. ಯೋಜನೆಯನ್ನು ಪ್ರಸ್ತುತ ಕರ್ನಾಟಕ ರಾಜ್ಯದ ನಾಲ್ಕು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿ ಬಹುದೊಡ್ಡ ಹಗರಣ ಎನ್ನುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಡೆದಿದೆ. ಈ ಗ್ರಾಮ ಪಂಚಾಯ್ತಿಯಲ್ಲಿ ಸತ್ತವರು, ಅನಾರೋಗ್ಯ ಪೀಡಿತರು, ಕೈ-ಕಾಲು ಮುರಿದುಕೊಂಡು ಕೆಲಸಕ್ಕೇ ಬಾರದವರ ಹೆಸರಿಗೂ ನರೇಗಾ ಕೂಲಿ ಹಣವನ್ನು ಜಮಾ ಮಾಡಲಾಗಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ಇಂತದ್ದೊಂದು ಬಹುದೊಡ್ಡ ಹಗರಣ, ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ನೀಡುವುದು ಸೇರಿದಂತೆ, ಕೆಲಸ ಮಾಡದವರೂ, ಕೆಲಸಕ್ಕೆ ಬಾರದವರಿಗೂ ಹಣವನ್ನು ಜಮಾ ಮಾಡಿರುವಂತ ಆರೋಪವಿದೆ. ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಬಹುದೊಡ್ಡ ಗೋಲ್ಮಾಲ್ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನರ್ಹರು, ಖಾಯಿಲೆ ಬಿದ್ದು ಮನೆಯಲ್ಲಿ ಮಲಗಿದ್ದವರ ಹೆಸರಿಗೂ ಜಾಬ್ ಕಾರ್ಡ್ ನೀಡಿ, ಉದ್ಯೋಗ ಖಾತ್ರಿಯ ಹಣವನ್ನು ಸಂದಾಯ ಮಾಡಿರುವಂತ ಆರೋಪ ಕೇಳಿ…

Read More

ಬೆಂಗಳೂರು: ಕರ್ನಾಟಕವು ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರದ (ಜಿಸಿಸಿ) ಭೂದೃಶ್ಯವನ್ನು ಸತತವಾಗಿ ಮುನ್ನಡೆಸುತ್ತಲೇ ಇದ್ದು, ಕರ್ನಾಟಕವು ದೇಶದ ಜಿಸಿಸಿಗಳಲ್ಲಿ ಶೇ.30ಕ್ಕಿಂತ ಹೆಚ್ಚು ಉದ್ಯಮಗಳಿಗೆ ನೆಲೆಯಾಗಿದೆ, ಬೆಂಗಳೂರು ನಗರವೊಂದೇ ಈ ವಲಯದಲ್ಲಿ 600,000 ಕ್ಕೂ ಹೆಚ್ಚು ವೃತ್ತಿಪರರಿಗೆ ಉದ್ಯೋಗ ನೀಡಿವೆ, ಕಳೆದ ಮೂರು ವರ್ಷಗಳಲ್ಲಿ, ಭಾರತದಲ್ಲಿ ಸ್ಥಾಪಿಸಲಾದ ಎಲ್ಲಾ ಹೊಸ ಜಿಸಿಸಿಗಳಲ್ಲಿ ಶೇ.43 ಉದ್ಯಮಗಳು ಕರ್ನಾಟಕವನ್ನು ಆಯ್ಕೆ ಮಾಡಿಕೊಂಡಿವೆ, ಇದು ಜಾಗತಿಕ ಉದ್ಯಮಗಳು ರಾಜ್ಯದ ಪರಿಸರ ವ್ಯವಸ್ಥೆಯ ಮೇಲೆ ಇರಿಸಿರುವ ನಂಬಿಕೆಯನ್ನು ಒತ್ತಿಹೇಳುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಕರ್ನಾಟಕ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಹೊರ ತಂದ ಕ್ಯಾಟಲಿಸ್ಟ್ ಕೈಪಿಡಿಯನ್ನು ಅನಾವರಣಗೊಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಹೊಸ ಮಧ್ಯಮ-ಮಾರುಕಟ್ಟೆ ವರದಿಯೊಂದಿಗೆ ಜಿಸಿಸಿ ಪ್ರಾಬಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಪ್ರಶಂಸಿಸದರು. ಕರ್ನಾಟಕದ ಮಧ್ಯಮ-ಮಾರುಕಟ್ಟೆ ಜಿಸಿಸಿಗಳು ತಮ್ಮ ರಾಷ್ಟ್ರೀಯ ಸಮಾನಸ್ಥ ಕಂಪನಿಗಳಿಗಿಂತ 1.4 ಪಟ್ಟು ವೇಗವಾಗಿ ಪಕ್ವವಾಗುತ್ತಿವೆ. ಇದು…

Read More

ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸಚಿವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ಆದರೇ ಅವರು ಕೇಂದ್ರ ಸಚಿವರು ಅಲ್ಲ ಎಂಬುದಾಗಿ ತನಿಖೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಎಂಬುದಾಗಿ ಹೇಳಿ ಭಾನುವಾರ ಮಧ್ಯಾಹ್ನ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ 2 ಬಾರಿ ಕರೆ ಮಾಡಲಾಗಿತ್ತು. ಮೊದಲ ಬಾರಿಗೆ ಕರೆ ಮಾಡಿದ್ದಂತ ಅಪರಿಚಿತ ರಾಜ್ಯಪಾಲರ ಆರೋಗ್ಯವನ್ನು ವಿಚಾರಿಸಿದ್ದರೇ, ಕೇಂದ್ರ ಸಚಿವರ ಆರೋಗ್ಯವನ್ನು ರಾಜ್ಯಪಾಲರು ವಿಚಾರಿಸಿದ್ದರು. ಆರ್ಧ ಗಂಟೆಯ ನಂತ್ರ ಮತ್ತೆ ರಾಜ್ಯಪಾಲರಿಗೆ ಕರೆ ಮಾಡಿದ್ದಂತ ಅಪರಿಚಿತ ವ್ಯಕ್ತಿ, ಅದೇ ರೀತಿ ಮಾತನಾಡಿದ್ದನು. ಈ ವೇಳೆ ಅನುಮಾನಗೊಂಡಂತ ರಾಜ್ಯಪಾಲರು ಆತನ ಬಗ್ಗೆ ವಿಚಾರಿಸಿದಾಗ ಏಕಾಏಕಿ ಕರೆ ಕಡಿತವಾಗಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಆತ ಕೇಂದ್ರ ಸಚಿವ ಅಲ್ಲ ನಕಲಿ ವ್ಯಕ್ತಿ ಅನ್ನೋದು ತಿಳಿದು ಬಂದಿತ್ತು. ಹೀಗಾಗಿ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಎಫ್ಐಆರ್…

Read More

ಬೆಂಗಳೂರು: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸಿಲುಕಿರುವಂತ ಕರ್ನಾಟಕದ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. https://twitter.com/CMofKarnataka/status/1965441973436948805 https://kannadanewsnow.com/kannada/starting-from-22nd-a-social-and-educational-survey-will-be-conducted-across-the-state-cm-siddaramaiah-made-this-appeal-to-the-people/ https://kannadanewsnow.com/kannada/fir-registered-against-organizers-for-bursting-colored-paper-firecrackers-during-ganesh-procession-in-chitradurga/

Read More

ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಈ ಸಮೀಕ್ಷೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತೆಗೆ ಈ ಕೆಳಗಿನಂತೆ ಮನವಿ ಮಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕೈಗೊಳ್ಳಲಿದೆ ಎಂದಿದ್ದಾರೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರಿದ್ದಾರೆ. https://twitter.com/CMofKarnataka/status/1965410150032048578 https://kannadanewsnow.com/kannada/mla-satish-sail-arrested-by-ed-officials-in-bangalore/ https://kannadanewsnow.com/kannada/breaking-nepal-president-ramachandra-poudel-resigns-nepals-president-resigns/

Read More