Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿಯ ಎಂಎಲ್ಸಿ ಎನ್ ರವಿಕುಮಾರ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ ರದ್ದುಕೋರಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ ಆದೇಶಿಸಿತ್ತು. ಇಂದು ಜಾಮೀನು ಕುರಿತಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು, ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಮೊತ್ತದ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸಲು ಸೂಚಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸದಂತೆ ಕೋರ್ಟ್ ಷರತ್ತು ವಿಧಿಸಿದೆ. https://kannadanewsnow.com/kannada/kee-has-released-the-schedule-for-the-first-round-seat-allocation-for-admission-to-various-courses-including-engineering/ https://kannadanewsnow.com/kannada/the-following-documents-are-mandatory-for-the-aadhaar-card-renewal-these-are-uidais-new-rules/

Read More

ನವದೆಹಲಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು. ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌…

Read More

ನವದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು. ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ…

Read More

ನಮೀಬಿಯಾ: ಬುಧವಾರ ಪ್ರಧಾನಿ ಮೋದಿ ಅವರಿಗೆ ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯೆಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಜುಲೈ ಆರಂಭದಲ್ಲಿ ಅವರು ಆರಂಭಿಸಿದ ಐದು ರಾಷ್ಟ್ರಗಳ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪ್ರಶಸ್ತಿ ಬಂದಿತು. ಇದು ಪ್ರಧಾನಿ ಮೋದಿ ಅವರ ಮೊದಲ ನಮೀಬಿಯಾ ಭೇಟಿಯಾಗಿದ್ದು, ಭಾರತದಿಂದ ದೇಶಕ್ಕೆ ಭೇಟಿ ನೀಡುತ್ತಿರುವ ಮೂರನೇ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಅವರನ್ನು ನಮೀಬಿಯಾದ ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ವ್ಯಾಪಾರ ಸಚಿವೆ ಸೆಲ್ಮಾ ಅಶಿಪಲಾ-ಮುಸಾವಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ದೇಶಕ್ಕೆ ಆಗಮಿಸಿದಾಗ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. “ಸ್ವಲ್ಪ ಸಮಯದ ಹಿಂದೆ ವಿಂಡ್‌ಹೋಕ್‌ನಲ್ಲಿ ಬಂದಿಳಿದಿದ್ದೇವೆ. ನಮೀಬಿಯಾ ಮೌಲ್ಯಯುತ ಮತ್ತು ವಿಶ್ವಾಸಾರ್ಹ ಆಫ್ರಿಕನ್ ಪಾಲುದಾರರಾಗಿದ್ದು, ಅವರೊಂದಿಗೆ ನಾವು ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಬಯಸುತ್ತೇವೆ. ಅಧ್ಯಕ್ಷ ಡಾ. ನೆಟುಂಬೊ ನಂದಿ-ನದೈತ್ವಾ ಅವರನ್ನು ಭೇಟಿ ಮಾಡಲು ಮತ್ತು ಇಂದು ನಮೀಬಿಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಎದುರು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಶಾಲೆಗೆ ಚಕ್ಕರ್ ಹಾಕೋದಕ್ಕೆ ಬ್ರೇಕ್ ಬೀಳಲಿದೆ. ಅಲ್ಲದೇ ಪಾಠ ಮಾಡದೇ ಕಳ್ಳಾಟ ಮಾಡೋದಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆಯನ್ನು ಶಾಲಾ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿಯ ಆನ್‌ಲೈನ್‌ ಹಾಜರಾತಿಗೆ ಚಾಲನೆ ನೀಡಲಾಗಿದೆ. ಇನ್ನು ಮುಂದೆ ಖೊಟ್ಟಿ ಹಾಜರಾತಿಗೆ ತಡೆ ಬೀಳಲಿದೆ. ಶಾಲೆ ತಲುಪಿದ ಬಳಿಕ ಶಿಕ್ಷಕರು ಆನ್‌ಲೈನ್‌ ಹಾಜರಾತಿ ಹಾಕಬೇಕು. ಇದರಿಂದ ಸಮಯಕ್ಕೆ ಸರಿಯಾಗಿ ಶಿಕ್ಷಕರು ಶಾಲೆಗೆ ಬರುತ್ತಾರೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ. ಶೀಘ್ರವೇ ರಾಜ್ಯದಲ್ಲಿನ 57 ಲಕ್ಷ ವಿದ್ಯಾರ್ಥಿಗಳ ಮುಖ ಚಹರೆ ಆಧರಿಸಿ ಆನ್‌ಲೈನ್‌ ಹಾಜರಾತಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1942571114510835892 https://kannadanewsnow.com/kannada/tomorrow-is-guru-purnima-if-you-do-this-one-task-it-will-never-hinder-the-progress-of-your-life/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್ ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್ ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್ ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಅದರ ಬಳಿಕ ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜು.22ರವರೆಗೆ ಅವಕಾಶ ಇರುತ್ತದೆ. ಜುಲೈ 25ರಂದು ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ನೋಡಿಕೊಂಡು ಇಚ್ಛೆ/…

Read More

ಹುಬ್ಬಳ್ಳಿ: ಉತ್ತರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಕೆಳಗಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಗಳನ್ನು ನೈಋತ್ಯ ರೈಲ್ವೆಯು ರದ್ದುಗೊಳಿಸಿದೆ. ರದ್ದಾದ ರೈಲುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 06529 ಎಸ್ಎಂವಿಟಿ ಬೆಂಗಳೂರು–ಗೋಮತಿ ನಗರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 25.08.2025 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು. ಆದರೆ, ಈಗ ಇದನ್ನು 11.08.2025 ರಿಂದ 25.08.2025 ರವರೆಗೆ ರದ್ದುಗೊಳಿಸಲಾಗಿದೆ. 2. ರೈಲು ಸಂಖ್ಯೆ 06530 ಗೋಮತಿ ನಗರ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 29.08.2025 ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಇದನ್ನು 15.08.2025 ರಿಂದ 29.08.2025 ರವರೆಗೆ ರದ್ದುಪಡಿಸಲಾಗಿದೆ. 3. ರೈಲು ಸಂಖ್ಯೆ 07327 ಬೆಳಗಾವಿ – ಮವೂ ಜಂಕ್ಷನ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 31.08.2025 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು. ಇದು ಈಗ 20.07.2025 ರಿಂದ 31.08.2025 ರವರೆಗೆ ರದ್ದುಗೊಂಡಿದೆ. 4. ರೈಲು…

Read More

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಲ್ಲಿನ ಗರ್ಭಕಂಠದ ಕ್ಯಾನ್ಸರ್ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಾಗಿ ಹೆಚ್ ಪಿ ವಿ ಲಸಿಕಾಕರಣ ನೀಡಲಾಗುವುದು ಅಂತ ಘೋಷಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯ ಮಂತ್ರಿಯವರ 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-42ರಲ್ಲಿ “ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಲು ಪಥಮ ಹಂತದಲ್ಲಿ ಗಣಿ ಭಾದಿತ ಮತ್ತು ಕಲ್ಯಾಣ ಕರ್ನಾಟಕ ಪುದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣು ಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು” ಎಂದು ಘೋಷಿಸಲಾಗಿದೆ. ಈ ಯೋಜನೆಯು ಹೊಸಯೋಜನೆಯಾಗಿದ್ದು, ಈ ಯೋಜನೆಯನ್ನು ಕಲ್ಯಾಣ ಕರ್ನಾಟಕ ಮತ್ತು ಗಣಿಭಾದಿತ ಪುದೇಶಗಳಲ್ಲಿ KKRDB ಮತ್ತು KMERC ಅನುದಾನದಲ್ಲಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಎಂದು ತಿಳಿಸಲಾಗಿದೆ. ಮೇಲೆ ಕ್ರಮ ಸಂಖ್ಯೆ (3)ರಲ್ಲಿ ಓದಲಾದ ಕಡತ ಸಂಖ್ಯೆ: HFW/58/PRS/2025ರಲ್ಲಿ ಹೂಮನ್ ವ್ಯಾಪಿಲೋಮ ವೈರಸ್…

Read More

ನವದೆಹಲಿ: ಬಾಲಿವುಡ್ ಸೆಲೆಬ್ರಿಟಿ ದಂಪತಿಗಳಾದ ರಾಜ್‌ಕುಮಾರ್ ರಾವ್ ಮತ್ತು ಪತ್ರಲೇಖಾ ಜುಲೈ 9, 2025 ರಂದು ತಮ್ಮ ಗರ್ಭಧಾರಣೆಯನ್ನು ಘೋಷಿಸಿದಾಗ ಅವರು ತುಂಬಾ ಸಂತೋಷದ ಸುದ್ದಿಯನ್ನು ಹಂಚಿಕೊಂಡರು.  ದಂಪತಿಗಳು ಜಂಟಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಸಂತೋಷದ ಸುದ್ದಿಯನ್ನು ಹಂಚಿಕೊಂಡರು, ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಸ್ವಾಗತಿಸಲು ಸಿದ್ಧರಾಗುತ್ತಿರುವಾಗ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಅವರು ನವೆಂಬರ್ 2021 ರಲ್ಲಿ ವಿವಾಹವಾದರು. ರಾಜ್‌ಕುಮಾರ್ ರಾವ್ ಮತ್ತು ಪತ್ರಲೇಖಾ ಸಾಮಾಜಿಕ ಮಾಧ್ಯಮದಲ್ಲಿ ಸಂತೋಷದ ನವೀಕರಣವನ್ನು ಹಂಚಿಕೊಂಡರು. ಅದು “ಮಗು ಬರುತ್ತಿದೆ (sic)” ಎಂದು ಬರೆದಿದ್ದಾರೆ. ಈ ಪ್ರಕಟಣೆಯು ತ್ವರಿತವಾಗಿ ವೈರಲ್ ಆಯಿತು, ಹಲವಾರು ನಟರು, ಸೆಲೆಬ್ರಿಟಿಗಳು ಮತ್ತು ಚಲನಚಿತ್ರ ಭ್ರಾತೃತ್ವದ ಸದಸ್ಯರು ಕಾಮೆಂಟ್‌ಗಳ ವಿಭಾಗದಲ್ಲಿ ಪ್ರೀತಿ ಮತ್ತು ಪೋಷಕರಿಗಾಗಿ ಅಭಿನಂದನೆಗಳೊಂದಿಗೆ ತುಂಬಿದರು. ಸೋನಾಕ್ಷಿ ಸಿನ್ಹಾ, ನುಶ್ರತ್ ಭರುಚ್ಚ, ಪುಲ್ಕಿತ್ ಸಾಮ್ರಾಟ್, ಈಶಾ ಗುಪ್ತಾ, ಭೂಮಿ ಪೆಡ್ನೇಕರ್, ಮಾನುಷಿ ಚಿಲ್ಲರ್, ಹುಮಾ ಖುರೇಷಿ ಮತ್ತು ಫರಾ ಖಾನ್ ಸೇರಿದಂತೆ ಇತರರು ಹೃದಯಸ್ಪರ್ಶಿ ಶುಭಾಶಯಗಳನ್ನು ಕಳುಹಿಸಲು ಧಾವಿಸಿದರು.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ರಾಜನಾಥ್ ಸಿಂಗ್ ಅವರು, ದಸರಾ ಏರ್ ಶೋಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರನ್ನೊಳಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ವಿವಿಧ ವಿಚಾರಗಳ ಕುರಿತಂತೆ ಚರ್ಚಿಸಲಾಯಿತು. ಇನ್ನೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆಯೂ ಮನವಿ ಮಾಡಲಾಯಿತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/pm-kisan-samman-nidhi-scheme-farmers-must-comply-with-these-rules/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More