Author: kannadanewsnow09

ನವದೆಹಲಿ: 2026 ರಿಂದ ಪ್ರಾರಂಭವಾಗುವ ದ್ವೈವಾರ್ಷಿಕ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ CBSE ಅನುಮೋದನೆ ನೀಡಿದೆ. ಹೀಗಾಗಿ 2026ರಿಂದ 10ನೇ ತರಗತಿ ಸಿಬಿಎಸ್ಸಿ ಬೋರ್ಡ್ ಪರೀಕ್ಷೆಯು ವರ್ಷದಲ್ಲಿ ಎರಡು ಬಾರಿ ನಡೆಯಲಿದೆ. ಬುಧವಾರ ಸಿಬಿಎಸ್‌ಇ ತೆಗೆದುಕೊಂಡ ದೊಡ್ಡ ನಿರ್ಧಾರದಲ್ಲಿ, 2026 ರಿಂದ ವರ್ಷಕ್ಕೆ ಎರಡು ಬಾರಿ 10ನೇ ತರಗತಿ ಪರೀಕ್ಷೆಗಳನ್ನು ನಡೆಸಲು ಮಂಡಳಿಯು ಅನುಮೋದನೆ ನೀಡಿದೆ. 10 ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಹೇಳಿದ್ದಾರೆ. ಮಂಡಳಿಯ ಪ್ರಕಾರ ಎರಡನೇ ಹಂತವು ಐಚ್ಛಿಕವಾಗಿದೆ ಎಂದು ತಿಳಿಸಿದೆ. ಮೊದಲ ಹಂತದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್‌ನಲ್ಲಿ ಮತ್ತು ಎರಡನೇ ಹಂತದ ಫಲಿತಾಂಶವನ್ನು ಜೂನ್‌ನಲ್ಲಿ ಪ್ರಕಟಿಸಲಾಗುವುದು. ಆಂತರಿಕ ಮೌಲ್ಯಮಾಪನವನ್ನು ಒಮ್ಮೆ ಮಾತ್ರ ನಡೆಸಲಾಗುತ್ತದೆ ಎಂದು ಹೇಳಿದೆ. https://twitter.com/PTI_News/status/1937819690140938297

Read More

ಧಾರವಾಡ: ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡಲು ತಪ್ಪಿದ್ದಲ್ಲಿ ವಾಹನದ ಹಣ ಮರಳಿಸಲು ಟ್ರೈಯೋ ಗ್ರೂಪ್ಸ್ ಪ್ಯುವರ್ ಎನರ್ಜಿ ಪ್ರೈ.ಲಿ.ಗೆ ಗ್ರಾಹಕರ  ಆಯೋಗದ ಆದೇಶಿಸಿದೆ.  ಧಾರವಾಡದ ಹಾವೇರಿ ಪೇಟ ನಿವಾಸಿ ಇಲಿಯಾಸ್ ಖಾನ್ ಮೈಸೂರು ಎನ್ನುವವರು ದಿ:15/03/2022 ರಂದು ರೂ.77,000 ಪಾವತಿಸಿ ಇಲೆಕ್ಟ್ರೀಕ್ ಸ್ಕೂಟರನ್ನು ಎದುರುದಾರರಿಂದ ಖರೀದಿಸಿದ್ದರು. ವಾಹನವು ಬ್ಯಾಟರಿಯ ಮೇಲೆ 5 ವರ್ಷದ ವಾರಂಟಿಯನ್ನು ಹೊಂದಿತ್ತು. ದೂರುದಾರರು ಎದುರುದಾರರ ಹೇಳಿಕೆಯಂತೆ ವಾಹನವನ್ನು ಉಪಯೋಗಿಸುತ್ತಿದ್ದು ನಂತರ ಒಮ್ಮಿಂದೊಮ್ಮೆಲೆ ರಸ್ತೆಯ ಮದ್ಯ ನಿಲ್ಲಲು ಪ್ರಾರಂಭಿಸಿತು. ಅಲ್ಲದೇ ಎದುರುದಾರರು ಹೇಳಿದಷ್ಟು ಮೈಲೇಜನ್ನೂ ಸಹ ವಾಹನವು ಕೊಡುತ್ತಿರಲಿಲ್ಲ. ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸಿಕೊಟ್ಟಿರಲಿಲ್ಲ. ಅಲ್ಲದೇ 1ನೇ ಎದುರುದಾರರು ತಮ್ಮ ಮಳಿಗೆಯನ್ನು ಶಾಶ್ವತವಾಗಿ ಮುಚ್ಚಿರುತ್ತಾರೆ. ಇದರಿಂದ ದೂರುದಾರರಿಗೆ ವಾಹನವನ್ನು ರಿಪೇರಿ ಮಾಡಿಸಲು ಕಷ್ಟವಾಗಿರುತ್ತದೆ. ಎದುರುದಾರರ ಇಂತಹ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ…

Read More

ಧಾರವಾಡ: ಯೂರಿಯಾ ಗೊಬ್ಬರವು ಬೆಳೆಗಳಿಗೆ ಎಷ್ಟು ಮುಖ್ಯವೋ ಅತೀಯಾದ ಬಳಕೆ ಅμÉ್ಟೀ ಹಾನಿಕಾರಕ. ಇದರಿಂದ ಬೆಳೆ ಮತ್ತು ಮಣ್ಣಿನ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು. ಮುಖ್ಯವಾಗಿ, ಯೂರಿಯಾ ಮಣ್ಣಿನಲ್ಲಿ ಹೈಡ್ರಾಲಿಸಿಸ್ ಆಗಿ ಅಮೋನಿಯಾವನ್ನು ಬಿಡುಗಡೆ ಮಾಡುತ್ತದೆ, ಇದು ಬೀಜ ಮತ್ತು ಬೇರುಗಳಿಗೆ ಹಾನಿಕಾರಕವಾಗಿದೆ. ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಬಹುದು ಮತ್ತು ಪರಿಸರ ಮಾಲಿನ್ಯ ಉಂಟಾಗಬಹುದು. ಮಣ್ಣಿನ ಮೇಲೆ ಪರಿಣಾಮ: ಯೂರಿಯಾ ಮಣ್ಣಿನಲ್ಲಿ ಹೈಡ್ರಾಲಿಸಿಸ್ ಆಗಿ ಅಮೋನಿಯಾವನ್ನು ಬಿಡುಗಡೆ ಮಾಡುತ್ತದೆ, ಇದು ಮಣ್ಣಿನ ಪಿಎಚ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಸಸ್ಯಗಳಿಗೆ ಹಾನಿಕಾರಕವಾಗಬಹುದು ಮತ್ತು ಮಣ್ಣಿನ ರಚನೆ ಹಾಳಾಗಿ, ಮಣ್ಣಿನ ಆರೋಗ್ಯ ಹದಗೆಡುತ್ತದೆ. ಅತಿಯಾದ ಯೂರಿಯಾ ಬಳಕೆಯು ಮಣ್ಣಿನ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಬಹುದು ಮತ್ತು ದೀರ್ಘಾವಧಿಯಲ್ಲಿ ಮಣ್ಣಿನ ಫಲವತ್ತತೆಯನ್ನು ಕಡಿಮೆ ಮಾಡಬಹುದು. ಬೆಳೆಗಳ ಮೇಲೆ ಪರಿಣಾಮ: ಅತೀಯಾದ ಯೂರಿಯಾ ಬಳಕೆಯಿಂದ ಬೆಳೆಗಳು ಸಸ್ಯ ಬೆಳವಣಿಗೆ ಹೆಚ್ಚಾಗಿ ರಸ ಹೀರುವ ಕೀಟ ಹಾಗೂ ಮುಂತಾದ ಕೀಟ ಮತ್ತು ರೋಗ ಭಾಧೆಗಳಿಗೆ ತುತ್ತಾಗಬಹುದು.…

Read More

ನವದೆಹಲಿ: ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304B (ವರದಕ್ಷಿಣೆ ಸಾವು) ಅಡಿಯಲ್ಲಿ ಶಿಕ್ಷೆಗೊಳಗಾದ ಸೇನಾ ಕಮಾಂಡೋ ಒಬ್ಬರು ಎರಡು ವಾರಗಳಲ್ಲಿ ಅಧಿಕಾರಿಗಳ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಅಲ್ಲದೇ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾದ ಮಾತ್ರಕ್ಕೆ ಪತ್ನಿಯ ಮೇಲೆ ದೌರ್ಜನ್ಯ ಎಸಗಿದ್ದಕ್ಕೆ ವಿನಾಯ್ತಿ ಕೊಡಲು ಸಾಧ್ಯವಿಲ್ಲ ಎಂದು ಪತ್ನಿಯ ಕೊಲೆ ಆರೋಪಿಯಾಗಿರುವ ಬ್ಲ್ಯಾಕ್ ಕಮಾಂಡೋಗೆ (Black Cat Commando) ರಿಲೀಫ್ ಕೊಡಲು ಸುಪ್ರೀಂಕೋರ್ಟ್ (Supreme Court) ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ಅವರ ಮೇಲ್ಮನವಿ ವಿಚಾರಣೆಯ ಸಮಯದಲ್ಲಿ ಶರಣಾಗುವಿಕೆಯಿಂದ ವಿನಾಯಿತಿ ನೀಡುವಂತೆ ಅವರು ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿತು ಮತ್ತು ಪಾಕಿಸ್ತಾನದ ವಿರುದ್ಧದ ಇತ್ತೀಚಿನ ಮಿಲಿಟರಿ ಕಾರ್ಯಾಚರಣೆಯಾದ ಆಪರೇಷನ್ ಸಿಂದೂರ್‌ನಲ್ಲಿ ಅವರು ಭಾಗವಹಿಸಿದ್ದಾರೆ ಎಂಬ ಅವರ ವಾದವನ್ನು ಸಹ ತಿರಸ್ಕರಿಸಿತು. ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ವಿಕ್ರಮ್ ಚೌಧರಿ, ಅರ್ಜಿದಾರರ ಮಿಲಿಟರಿ ಹಿನ್ನೆಲೆಯನ್ನು ಒತ್ತಿ ಹೇಳಲು ಪ್ರಯತ್ನಿಸಿದರು. “ನಾನು ಆಪರೇಷನ್…

Read More

ಬಳ್ಳಾರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಯೋಜನೆಯಡಿ ಪ್ರಸ್ತಕ ಸಾಲಿಗೆ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗೆ ರೂ.1 ಲಕ್ಷ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತಿಯುಳ್ಳ ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಅನುದಾನದಲ್ಲಿ ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ರೂ.10 ಸಾವಿರ ಮತ್ತು ಉಳಿದ ರೂ.90 ಸಾವಿರ ಶಾಲೆಯ ಎಸ್‌ಡಿಎಂಸಿಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಲು ನೀಡಲಾಗುವುದು. ಹಾಗಾಗಿ ಜಿಲ್ಲೆಯಲ್ಲಿ ಪ್ರೋತ್ಸಾಹಧನ ಪಡೆಯಬಯಸುವ ಸರ್ಕಾರಿ ಶಾಲೆಗಳು 2024-25 ನೇ ಸಾಲಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು…

Read More

ಉತ್ತರ ಕನ್ನಡ, ಹಾಸನ, ಬೆಳಗಾವಿ: ಭಾರೀ ಮಳೆಯ ಹಿನ್ನಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದೆ. ಈ ಹಿನ್ನಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಹಾಸನ ಡಿಸಿ ಕೆ ಎಸ್ ಲತಾಕುಮಾರಿ ಘೋಷಿಸಿ ಆದೇಶಿಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ತಹಶೀಲ್ದಾರ್ ಶೈಲೇಶ್ ಪರಮಾನಂದ ಘೋಷಣೆ ಮಾಡಿದ್ದಾರೆ. ಇನ್ನೂ ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ ತಾಲ್ಲೂಕಿನಲ್ಲೂ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಬೆಳಗಾವಿ, ಖಾನಾಪುರ ತಾಲ್ಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. https://kannadanewsnow.com/kannada/aishwarya-gowda-receives-another-big-shock-case-registered-under-pm-la-act/ https://kannadanewsnow.com/kannada/minister-shivraj-tangadagi-inquired-about-the-health-of-dodderangegowda-announced-that-the-government-will-bear-the-medical-expenses/

Read More

ಬೆಂಗಳೂರು: ನಿನ್ನಯಷ್ಟೇ ವಂಚನೆ ಆರೋಪದಡಿಯಲ್ಲಿ ಐಶ್ವರ್ಯ ಗೌಡಗೆ ಸೇರಿದಂತೆ ಕೋಟ್ಯಂತರ 3.98 ಕೋಟಿ ಮೌಲ್ಯದ ಆಸ್ತಿಪಾಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಬೆನ್ನಲ್ಲೇ ಐಶ್ವರ್ಯ ಗೌಡ ವಿರುದ್ಧ ಪಿಎಂಎಲ್ಎ ಕಾಯ್ದೆಡಯಡಿ ಕೇಸ್ ದಾಖಲಿಸಿದೆ. ಇಡಿ ಅಧಿಕಾರಿಗಳು ನಿನ್ನೆಯಷ್ಟೇ, ಬೆಂಗಳೂರಿನ ಇಡಿ, 3.98 ಕೋಟಿ (ಅಂದಾಜು) ಮೌಲ್ಯದ ಫ್ಲಾಟ್‌ಗಳು, ನಿರ್ಮಿತ ಕಟ್ಟಡ ಮತ್ತು ರೂ. 2.01 ಕೋಟಿ (ಅಂದಾಜು) ಮೌಲ್ಯದ ಭೂಮಿ ಮತ್ತು ರೂ. 1.97 ಕೋಟಿ (ಅಂದಾಜು) ಮೌಲ್ಯದ ನಗದು ಮತ್ತು ವಾಹನದ ರೂಪದಲ್ಲಿ ಚಲಿಸಬಲ್ಲ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಶ್ರೀಮತಿ ಐಶ್ವರ್ಯಾ ಗೌಡ ಮತ್ತು ಇತರರ ಪ್ರಕರಣದಲ್ಲಿ ಹೆಚ್ಚಿನ ಆದಾಯದ ಭರವಸೆ ನೀಡಿ ಹಲವಾರು ವ್ಯಕ್ತಿಗಳಿಂದ ಚಿನ್ನ, ನಗದು ಮತ್ತು ಹಣವನ್ನು ಬ್ಯಾಂಕ್ ಖಾತೆಗಳ ಮೂಲಕ ಪಡೆದು ಕ್ರಿಮಿನಲ್ ಪಿತೂರಿಯಲ್ಲಿ ಹಣ ವರ್ಗಾವಣೆಯ ಅಪರಾಧದಲ್ಲಿ ಭಾಗಿಯಾಗಿದ್ದಾರೆಂದು ಕಂಡುಬಂದಿದೆ ಎಂದಿದ್ದರು. https://twitter.com/dir_ed/status/1937113610171670882 ಇಂದು ಹೆಚ್ಚಿನ ಆದಾಯದ ಭರವಸೆ ನೀಡಿ ಹಲವಾರು ವ್ಯಕ್ತಿಗಳಿಂದ ಚಿನ್ನ, ನಗದು ಮತ್ತು ಹಣವನ್ನು ಬ್ಯಾಂಕ್…

Read More

ಬೆಂಗಳೂರು: ರಾಜ್ಯದ ವಿವಿಧೆಡೆ 8 ಭ್ರಷ್ಟ ಅಧಿಕಾರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ಪರಿಶೀಲನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮ ಆಸ್ತಿ-ಪಾಸ್ತಿ ಸಂಪಾದನೆಯ ಮಾಹಿತಿಯನ್ನು ದಾಖಲೆ ಸಹಿತ ಲೋಕಾಯುಕ್ತ ಪೊಲೀಸರು ಹೆಕ್ಕಿ ತೆಗೆದಿದ್ದಾರೆ. ಹಾಗಾದ್ರೇ ಇಂದಿನ ದಾಳಿಯಲ್ಲಿ ಯಾರ ಬಳಿ ಎಷ್ಟು ಅಕ್ರಮ ಆಸ್ತಿ-ಪಾಸ್ತಿ ಸಿಕ್ತು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರು ನಗರ-1, ಬೆಂಗಳೂರು ಗ್ರಾಮಾಂತರ-1, ಕಲಬುರಗಿ-2, ಧಾರವಾಡ-1, ಹಾಸನ-1, ಗದಗ-1 ಮತ್ತು ಶಿವಮೊಗ್ಗ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ. ಈ ದಿನ ದಿನಾಂಕ: 24.06.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 45 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ…

Read More

ಹುಬ್ಬಳ್ಳಿ: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು OHE ಪೋರ್ಟಲ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2, 2025 ರಿಂದ ಜುಲೈ 28, 2025 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಅನ್ನು ಸ್ಥಗಿತಗೊಳಿಸಲಾಗುವುದು. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಗಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ: 1. ರೈಲು ಸಂಖ್ಯೆ 22231 ಕಲಬುರಗಿ – ಎಸ್‌ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (ಶುಕ್ರವಾರ ಹೊರತುಪಡಿಸಿ) ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. 2. ರೈಲು ಸಂಖ್ಯೆ 20703 ಕಾಚೇಗುಡ – ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ಬುಧವಾರ ಹೊರತುಪಡಿಸಿ) ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. 3. ರೈಲು ಸಂಖ್ಯೆ 22232 ಎಸ್‌ಎಂವಿಟಿ ಬೆಂಗಳೂರು – ಕಲಬುರಗಿ…

Read More

ಬೆಂಗಳೂರು: 2025-26ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ (ಎಂಡಿಎಸ್) ಪ್ರವೇಶಕ್ಕೆ ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಜೂನ್ 29ರವರಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಜೂನ್ 30 ಕೊನೆ ದಿನ ಎಂದು ಪ್ರಸನ್ನ ತಿಳಿಸಿದ್ದಾರೆ. ಮೂಲ ದಾಖಲೆಗಳ ಪರಿಶೀಲನೆ ಜೂನ್‌ 30ರಿಂದ ನಡೆಯಲಿದ್ದು, ಇದಕ್ಕೆ 27ರಂದು ಮುಂಗಡ ದಿನಾಂಕ ನಿಗದಿಗೆ‌ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕ್ಲಾಸ್ ಎ ಮತ್ತು ‌ವೈ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಬರುವ ಅಗತ್ಯ ಇರುವುದಿಲ್ಲ. ಒಂದು ವೇಳೆ ಅವರು ಎನ್ ಆರ್ ಐ ವಾರ್ಡ್ ಅಥವಾ ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿ ಕೋರಿದ್ದಲ್ಲಿ ಮಾತ್ರ ಅಂತಹವರು ದಾಖಲೆ ಪರಿಶೀಲನೆ ಗೆ ಬರಬೇಕಾಗುತ್ತದೆ. ಉಳಿದಂತೆ ಕ್ಲಾಸ್ ಬಿ, ಸಿ, ಡಿ, ಇ, ಎಫ್, ಜಿ, ಝೆಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಸ್ಲಾಟ್ ಬುಕ್‌ ಮಾಡಿಕೊಂಡು…

Read More