Subscribe to Updates
Get the latest creative news from FooBar about art, design and business.
Author: kannadanewsnow09
ಕೋಲಾರ: ಜಿಲ್ಲೆಯಲ್ಲಿ ಶಾಲೆಗೆಂದು ಹೋದಂತ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವಂತ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ಎಂಬ ವಿದ್ಯಾರ್ಥಿನಿಯರೇ ನಾಪತ್ತೆಯಾಗಿರುವಂತವರಾಗಿದ್ದಾರೆ. ಈ ಇಬ್ಬರು ವಿದ್ಯಾರ್ಥಿನಿಯರು ನಿನ್ನೆಯ ಶುಕ್ರವಾರದಂದು ಬೆಳಗ್ಗೆ ಶಾಲೆಗೆಂದು ತೆರಳಿದ್ದರು. ಆದರೇ ಇದುವರೆಗೆ ಮನೆಗೆ ವಾಪಾಸ್ಸಾಗಿಲ್ಲ. ಹೀಗಾಗಿ ಇಡೀ ದಿನ ಅವರನ್ನು ಪೋಷಕರು ಹುಡುಕಾಡಿದ್ದಾರೆ. ಆದರೇ ದೊರೆತಿಲ್ಲ. ಹೀಗಾಗಿ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ರಾತ್ರಿಯಾದರೂ ಇಬ್ಬರು ಮಕ್ಕಳು ವಾಪಾಸ್ ಆಗದ ಕಾರಣ ಕೋಲಾರ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಾಪತ್ತೆಯಾಗಿರುವಂತ ಇಬ್ಬರು ವಿದ್ಯಾರ್ಥಿನಿಯರು 10ನೇ ತರಗತಿ ಓದುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/ban-halal-certificate-in-karnataka-yatnals-letter-to-union-home-minister-amit-shah/ https://kannadanewsnow.com/kannada/breaking-regarding-the-construction-of-the-tunnel-route-in-bengaluru-high-court-notice-to-the-state-government-gba/
ಬೆಂಗಳೂರು: ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧಿಸಿ. ಹಲಾಲ್ ಸರ್ಟಿಫಿಕೇಷನ್ ಏಜೆನ್ಸಿಗಳನ್ನು ನಿಷೇಧಿಸಿ. ಹಲಾಲ್ ಸರ್ಟಿಫಿಕೇಟ್ ಹಣ ದುರ್ಬಳಕೆ ಆಗುತ್ತಿದೆ. ದೇಶದ ಭದ್ರತೆ ದೃಷ್ಟಿಯಿಂದ ಹಲಾಲ್ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಂದ ಕೆಲ ಸಂಘಟನೆಗಳು ಹಣ ದುರ್ಬಳಕೆ ಮಾಡ್ತಿವೆ. ಹೀಗಾಗಿ ಹಲಾಲ್ ಸರ್ಟಿಫಿಕೇಟ್ ನಿಷೇಧ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದು ಆಗ್ರಹಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಉತ್ತರ ಪ್ರದೇಶ ಸರ್ಕಾರವು ಅಂತಹ ಎಲ್ಲಾ ಸಂಸ್ಥೆಗಳನ್ನು ನಿಷೇಧಿಸುವ ನಿರ್ಧಾರಕ್ಕೆ ಅನುಗುಣವಾಗಿ, ಹಲಾಲ್ ಪ್ರಮಾಣೀಕರಣ ಸಂಸ್ಥೆಗಳಿಂದ ಹಲಾಲ್ ನಿಧಿಗಳ ದುರುಪಯೋಗ ಮತ್ತು ಅವುಗಳ ಕಾರ್ಯಾಚರಣೆಗಳನ್ನು ನಿಷೇಧಿಸುವ ತುರ್ತು ಅಗತ್ಯದ ಬಗ್ಗೆ ನಾನು ನಿಮ್ಮ…
ವಾಸ್ತು ಪ್ರಕಾರ, ಮನೆಯ ಸಕಾರಾತ್ಮಕತೆಯನ್ನು ಹೆಚ್ಚಿಸಲು ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು. ಆದಾಗ್ಯೂ, ಸಂಪೂರ್ಣ ಶುಚಿಗೊಳಿಸುವಿಕೆಯ ಹೊರತಾಗಿಯೂ, ಸಾಮಾನ್ಯವಾಗಿ ಮನೆಯ ಸೀಲಿಂಗ್ ಮತ್ತು ಮೂಲೆಗಳಲ್ಲಿ ಪದೇ ಪದೇ ಜೇಡ ಬಲೆ ಕಟ್ಟಿರುತ್ತದೆ. ಇದರಿಂದಾಗಿ ಮನೆಯಲ್ಲಿ ವಾಸ್ತು ದೋಷಗಳು ಉಂಟಾಗಬಹುದು. ಮನೆಯಲ್ಲಿ ಅತಿಯಾದ ಜೇಡರ ಬಲೆಗಳು ಕಂಡುಬರುವುದು ಕುಟುಂಬ ಸದಸ್ಯರಿಗೆ ಜೀವನದಲ್ಲಿ ಅನೇಕ ತೊಂದರೆಗಳನ್ನು ಉಂಟುಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ. ಮನೆಯಲ್ಲಿ ನಿರಂತರ ಹಣದ ಕೊರತೆ, ಕೆಲಸದಲ್ಲಿ ಅಡೆತಡೆಗಳು ಮತ್ತು ಕುಟುಂಬ ಸದಸ್ಯರಲ್ಲಿ ಸೋಮಾರಿತನ, ಕಿರಿಕಿರಿ ಮತ್ತು ನಕಾರಾತ್ಮಕತೆ ಕಾರಣವಾಗಬಹುದು. ಮಲಗುವ ಕೋಣೆ: ವಾಸ್ತು ಪ್ರಕಾರ, ಮಲಗುವ ಕೋಣೆಯಲ್ಲಿ ಜೇಡ ಬಲೆ ಕಟ್ಟುವುದು ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತವೆ. ಗಂಡ ಮತ್ತು ಹೆಂಡತಿಯ ನಡುವೆ ನಿರಂತರ ಭಿನ್ನಾಭಿಪ್ರಾಯಗಳು ಉಂಟಾಗಬಹುದು ಮತ್ತು ವೈವಾಹಿಕ ಸಮಸ್ಯೆಗಳು ಉದ್ಭವಿಸಲು ಕಾರಣವಾಗಬಹುದು. ಮನೆಯ ಮೂಲೆ: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮೂಲೆಗಳಲ್ಲಿ ದೀರ್ಘಕಾಲೀನ ಜೇಡರ ಬಲೆಗಳು ಇರುವುದು ಕುಟುಂಬ ಸದಸ್ಯರಿಗೆ ಆರ್ಥಿಕ ಸಮಸ್ಯೆಗಳನ್ನು ಉಂಟುಮಾಡಬಹುದು ಮತ್ತು ಕ್ರಮೇಣ ಆರ್ಥಿಕ…
ಬೆಂಗಳೂರು: ಯಾವುದೇ ಒಂದು ಕೃತಿ ಮಾನವೀಯತೆಯ ನೆಲೆ , ಜನಪರತೆ ಮತ್ತು ವೃಚಾರಿಕ ನೆಲೆಘಟ್ಟಿನ ಮೇಲೆ ರಚನೆಯಾದರೆ ಅವು ಸಹಜವಾಗಿಯೇ ಜನಪ್ರಿಯಗೊಳ್ಳುತ್ತವೆ ಎಂದು ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್ ಅಭಿಪ್ರಾಯ ಪಟ್ಟರು. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಏರ್ಪಡಿಸಿದ್ದ ತುರುವನೂರು ಮಂಜುನಾಥ ಅವರ ಅಂತರ್ಮಿಡಿತ ಕೃತಿ ಬಿಡುಗಡೆ ಮಾಡಿ ಮಾತನಾಡಿದರು. ಲಂಕೇಶ್ ಅವರ ಬರಹಗಳು ಸಾಮಾನ್ಯವಾಗಿ ಬಹುಮುಖ ವಿಚಾರಗಳ ಮತ್ತು ಜನರ ಅಶೋತ್ತರಗಳ ನಾಡಿಮಿಡಿತದ ಬರಹಗಳಾಗಿದ್ದವು ಹಾಗಾಗಿಯೇ ಅವರ ಕೃತಿಗಳು ಜನಪ್ರಿಯಗೊಂಡಿದ್ದವು.ಆ ನಿಟ್ಟಿನಲ್ಲಿ ತುರುವನೂರು ಮಂಜುನಾಥ ಅವರ ಲೇಖನಗಳು ವೈಚಾರಿಕ ನೆಲಘಟ್ಟಿನ ಮೇಲೆ ರಚಿತವಾಗಿವೆ ಎಂದು ಅಭಿಪ್ರಾಯ ಪಟ್ಟರು. ಪತ್ರಿಕೆಯ ಸಂಪಾದಕರಾದವರಿಗೆ ಸಂಪಾದಕೀಯ ಬರಹಗಳು ಜನಮಿಡಿತದ ಮಿಡಿತವಾಗಿರಬೇಕು ,ಅಗಾದಾಗ ಮಾತ್ರ ಯಶಸ್ವಿಯಾಗುತ್ತವೆ ಮಂಜುನಾಥ ಅವರ ಅಂತರ್ಮಿಡಿತ ತ ಬರಹಗಳಲ್ಲಿ ಬಹುತೇಕ ಓದುಗರ ಅಗತ್ಯತೆಗನುಗುಣವಾಗಿವೆ ಆದರೆ ಈಗ ಓದುಗರ ಸಂಖ್ಯೆ ಕ್ಷೀಣಿಸುತ್ತಿದೆ ಎಂದರು. ಸಂಪಾದಕರಾದವರಿಗೆ. ಖ್ಯಾತ ಬರಹಗಾರರ, ಬರಹಗಳ ಓದಿನ ಹಸಿವಿರಬೇಕು ಆ ಬರಹಗಳ ಓದಿನಿಂದಲೇ ತಮ್ಮ ಬರಹಗಳು ಮತ್ತಷ್ಟು ಗಟ್ಟಿಯಾಗುತ್ತವೆ…
ಶಿವಮೊಗ್ಗ : ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದದ್ದು ಅದನ್ನು ವ್ಯವಸ್ಥಿತವಾಗಿ ಮುನ್ನಡೆಸಬೇಕು. ನಿಮ್ಮ ಸಣ್ಣ ತಪ್ಪು ಭವಿಷ್ಯವನ್ನು ಬಲಿ ತೆಗೆದುಕೊಳ್ಳಬುಹದು. ಯಾವುದೇ ಸಂದರ್ಭದಲ್ಲೂ ವಿದ್ಯಾಭ್ಯಾಸದ ಮೇಲಿನ ಆಸಕ್ತಿ ಕಳೆದುಕೊಳ್ಳಬೇಡಿ. ಓದಿನ ಕಡೆ ಹೆಚ್ಚು ಗಮನ ಹರಿಸಿ ಎಂಬುದಾಗಿ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ 2025-26ನೇ ಸಾಲಿನ ಕ್ರೀಡೆ ಸಾಂಸ್ಕೃತಿಕ ಎನ್.ಎಸ್.ಎಸ್. ಸೇರಿ ವಿವಿಧ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದಂತ ಅವರು, ಬಾಹ್ಯಾಕರ್ಷಣೆ ನಿಮ್ಮನ್ನು ವಿದ್ಯಾಭ್ಯಾಸ ಬಿಟ್ಟು ದಾರಿ ತಪ್ಪಿಸಬಹುದು. ಮೊಬೈಲ್, ಇಂಟರ್ನೆಟ್ನoತಹ ಎಲೆಕ್ಟಾನಿಕ್ ವಸ್ತುಗಳನ್ನು ನಿಮ್ಮ ಏಳಿಗೆಗೆ ಬಳಸಿಕೊಳ್ಳಬೇಕೆ ವಿನಃ, ಅದಕ್ಕೆ ದಾಸರಾಗಿ ತಪ್ಪುದಾರಿಯತ್ತ ಹೋಗಬಾರದು ಎಂಬುದಾಗಿ ತಿಳಿಸಿದರು. ನನಗೂ ಪದವಿ ಓದುವ ಅವಕಾಶ ಸಿಕ್ಕಿದ್ದರೆ ಇನ್ಯಾವುದೋ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯವಿತ್ತು. ಆದರೆ ಬಡತನ ನನ್ನಂತ ಅನೇಕ ಜನರ ಶಿಕ್ಷಣ ಮುಂದುವರೆಸಲು ಸಾಧ್ಯವಾಗದೇ ತೊಡಕಾಗಿ ಬಿಟ್ಟಿತು.…
ಬೆಂಗಳೂರು: ಕುಮಾರಸ್ವಾಮಿ ಫ್ಯಾಕ್ಟರಿ ಕಟ್ಟಲಿ, ಅನುಮತಿ ಕೊಡ್ತೀವಿ ಎಂದು ಡಿಸಿಎಂ ಡಿಕೆಶಿ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾನು ಸಿಎಂ ಆಗಿದ್ದಾಗ ಏನೆಲ್ಲ ಸುಧಾರಣೆಗಳನ್ನು ತಂದಿದ್ದೇನೆ ಎಂಬುದನ್ನು ಅವರು ತಿಳಿದುಕೊಳ್ಳಲಿ. ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ ಎಂಬುದಾಗಿ ಹೇಳುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಕಾಂಪಿಟ್ ವಿತ್ ಚೈನಾ ಎನ್ನುವ ಯೋಜನೆ ಮಾಡಿದೆ. 9 ಕ್ಲಸ್ಟರ್ ಗಳಲ್ಲಿ ಕೈಗಾರಿಕೆ ಮಾಡಿದ್ದೆ. ಲಕ್ಷಾಂತರ ಜನರಿಗೆ ಉದ್ಯೋಗ ಮಾಡಿಕೊಡಲು ಯೋಜನೆ ಅದಾಗಿತ್ತು. ಕೈಗಾರಿಕೆ ಕ್ಷೇತ್ರಕ್ಕೆ 25 ಸಾವಿರ ಕೋಟಿ ಸಬ್ಸಿಡಿ ನೀಡುವ ಯೋಜನೆ ಇತ್ತು. ಆದರೆ ಇವರು ಸೇರಿ ನನ್ನ ಸರ್ಕಾರ ತೆಗೆದರು. ಇವರ ಯೋಗ್ಯತೆಗೆ ಗುಂಡಿ ಮುಚ್ಚೋಕೆ ಆಗಿಲ್ಲ. ಯಾಕ್ಕೆ ಆಗಿಲ್ಲ ಇವರಿಂದ? ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು. ಚರ್ಚೆ ಮಾಡುವಷ್ಟು ಯೋಗ್ಯತೆ ಉಳಿಸಿಕೊಂಡಿಲ್ಲ: ಬಹಿರಂಗ…
ಬೆಂಗಳೂರು: ಆರ್ ಎಸ್ ಎಸ್ ಪಥ ಸಂಚಲನ ಇವತ್ತು ನಿನ್ನೆಯಿಂದ ಮಾಡುತ್ತಿಲ್ಲ. ದಶಕಗಳಿಂದ ಮಾಡಿಕೊಂಡು ಬರುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ ಎಸ್ ವಿಷಯ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ಆರ್ ಎಸ್ ಎಸ್ ಅನ್ನು ನಿಷೇಧ ಮಾಡೋದಕ್ಕೆ ಸಾಧ್ಯವಿಲ್ಲ. ನಿತ್ಯ ಯಾಕೆ ಅವರ ಬಗ್ಗೆ ಮಾತಾಡ್ತೀರ? ಅವರ ಪಾಡಿಗೆ ಅವರು ಏನು ಮಾಡಿಕೊಂಡು ಹೋಗ್ತಾ ಇದ್ದಾರೆ. ಆರ್ ಎಸ್ ಎಸ್ ಬಗ್ಗೆ ಮಾತಾಡಿ ಸಮಯ ಯಾಕೆ ವೇಸ್ಟ್ ಮಾಡ್ತೀರಾ ಎಂದು ಹರಿಹಾಯ್ದರು ಸ್ವಲ್ಪ ದಿನ ಧರ್ಮಸ್ಥಳದ ಮೇಲೆ ಬಿದ್ದಿರಿ. ಎಸ್ ಐಟಿ ಅಂತ ಮಾಡಿ ಕಾಲಹರಣ ಮಾಡಿದಿರಿ. ಈಗ ಮಹೇಶ್ ಶೆಟ್ಟಿ ತಿಮರೋಡಿಗೆ ಒಂದು ಕೇಸಿನಲ್ಲಿ ರಿಲೀಫ್ ಸಿಕ್ಕಿದೆ. ಈ ಸರ್ಕಾರದ ಕಾಲದಲ್ಲಿ ಯಾವುದು ತಾರ್ಕಿಕ ಅಂತ್ಯಕ್ಕೆ ಹೋಗಲ್ಲ. ಸುಖಾ ಸುಮ್ಮನೆ ಕಾಲಹರಣ ಮಾಡಿಕೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು…
ಬೆಂಗಳೂರು: ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದ್ದಾರೆ. ಈಗ ಇದು ಒಂದು ಬೆಂಗಳೂರಲ್ಲ; 5 ಬೆಂಗಳೂರು ಎಂದು ಟೀಕಿಸಿದರು. ಜಿಬಿಎ (ಗ್ರೇಟರ್ ಬೆಂಗಳೂರು) ಚುನಾವಣೆ ತಯಾರಿ ಸಂಬಂಧ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅಮರ್ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಪ್ರಮುಖರ ‘ಸಂಕಲ್ಪ’ ಸಭೆ ನಡೆಯಿತು. ಈ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಮನದಿಂದ ಈಗ ಕಾಂಗ್ರೆಸ್ ಹೊರಟು ಹೋಗಿದೆ. ಹೆಣ್ಮಕ್ಕಳು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನೂ ಎರಡೂವರೆ ವರ್ಷ ಈ ಸರಕಾರವನ್ನು ಸಹಿಸಿಕೊಳ್ಳಬೇಕಾದ ನೋವು ನಮಗಿದೆ ಎಂದು ತಿಳಿಸಿದರು. ಈ ಕ್ಷೇತ್ರದಲ್ಲಿ ಸುಮಾರು 400 ಬೂತ್ಗಳಿದ್ದು, 4 ಲಕ್ಷ ಮತದಾರರಿದ್ದಾರೆ. ಬೂತ್ ಮಟ್ಟದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ವಿನಂತಿಸಿದರು. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಮಾಡಿದ ಕೆಲವು ಕುತಂತ್ರಗಳಿಗೆ ನಾವು ಸಮರ್ಥ ಉತ್ತರ ಕೊಡಲಾಗಲಿಲ್ಲ ಎಂದು ವಿಶ್ಲೇಷಿಸಿದರು. ನಾನು ಕಳೆದ 46-47 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ಸಿನಲ್ಲಿ ಹತ್ತಾರು ಜನರು…
ನವದೆಹಲಿ: ಹಿರಿಯ ಬಾಲಿವುಡ್ ಮತ್ತು ಟಿವಿ ನಟ ಸತೀಶ್ ಶಾ ನಿಧನರಾಗಿದ್ದಾರೆ. ನಿರ್ದೇಶಕ ಅಶೋಕ್ ಪಂಡಿತ್ ವೀಡಿಯೊ ಹಂಚಿಕೊಳ್ಳುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಅವರು ತಮ್ಮ ನಟನಾ ವೃತ್ತಿಜೀವನದುದ್ದಕ್ಕೂ ಹಲವಾರು ಅಪ್ರತಿಮ ಪ್ರದರ್ಶನಗಳನ್ನು ನೀಡಿದ್ದಾರೆ. ಅವರ ಗಮನಾರ್ಹ ಪಾತ್ರಗಳಲ್ಲಿ ಕಲ್ ಹೋ ನಾ ಹೋ, ಜಾನೆ ಭಿ ದೋ ಯಾರೋ, ಸಾರಾಭಾಯ್ ವರ್ಸಸ್ ಸಾರಾಭಾಯ್, ಮೈ ಹೂ ನಾ ಸೇರಿವೆ. https://kannadanewsnow.com/kannada/mlc-ramesh-babu-gave-this-response-to-justice-santosh-hegdes-statement/ https://kannadanewsnow.com/kannada/australian-womens-world-cup-players-allegedly-molested-in-indore-accused-arrested/
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಆರ್ ಎಸ್ ಎಸ್ ಬ್ಯಾನ್ ಗೆ ಸಂಬಂಧಪಟ್ಟಂತೆ ಖಾಸಗಿ ಚಾನೆಲ್ ಗೆ ಸಂದರ್ಶನ ನೀಡಿರುವ ನ್ಯಾಯಮೂರ್ತಿ ಸಂತೋಷ ಹೆಗ್ಡೆರವರು ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡುವುದರ ಮೂಲಕ ಒಂದು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಆರ್ ಎಸ್ ಎಸ್ ಬ್ಯಾನ್ ಮಾಡುವುದಾದರೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬಹುದಲ್ಲವೇ ಎಂದು ಹೇಳುವ ಮೂಲಕ ತಮ್ಮ ದ್ವಂದ್ವ ವ್ಯಕ್ತಿತ್ವವನ್ನು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಸ್ವತಂತ್ರ ಪೂರ್ವದಲ್ಲಿ ಎರಡು ಬಾರಿ ಮತ್ತು ಸ್ವತಂತ್ರಾ ನಂತರ ಮೂರು ಬಾರಿ ಬ್ಯಾನ್ ಗೆ ಒಳಗಾಗಿದ್ದ ಸಂಘ ಪರಿವಾರದ ಪರವಾಗಿ ಸಮರ್ಥ ವಕ್ತಾರರಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಹೆಗಲಿಗೆ ಹೇರಿಸಿಕೊಂಡಿದ್ದಾರೆ ಎಂದಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಸನಾತನಿಗಳ…














