Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಆಗಸ್ಟ್.13ರ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 13.08.2024 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 16:00 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ಗ್ರೋವ್, ದೇವಮತ ಶಾಲೆ, ಅಮರ್ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ,…
‘ನಮ್ಮ ಮೆಟ್ರೋ ರೈಲು ಪ್ರಯಾಣಿಕ’ರ ಗಮನಕ್ಕೆ: ಇಂದಿನಿಂದ ಆ.15ರವರೆಗೆ ಈ ಮಾರ್ಗದಲ್ಲಿ ‘ಸಂಚಾರ ವ್ಯತ್ಯಯ’ | Namma Metro
ಬೆಂಗಳೂರು: ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆಯ ನಡುವೆ ಆಗಸ್ಟ್.13ರ ಇಂದಿನಿಂದ ಆಗಸ್ಟ್.15ರವರೆಗೆ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಆ.13 ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದಿದೆ. ನಾಗಸಂದ್ರದಿಂದ ಮಾದಾವರ (BIEC) ವರೆಗಿನ ರೀಚ್-3ರ ವಿಸ್ತ್ರತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದ್ದು ಇದರ ವಿವರ ಈ ಕೆಳಕಂಡಂತಿವೆ. 1. ದಿನಾಂಕ 13ನೇ ಆಗಸ್ಟ್ 2024 ರಂದು ಗಂಟೆಯವರೆಗೆ -ಕೊನೆಯ ರೈಲು ಸೇವೆ ರಾತ್ರಿ 11.00 ಕ್ಕೆ ಬದಲಾಗಿ 10.00 ಗಂಟೆಯವರೆಗೆ. 2. ದಿನಾಂಕ 14ನೇ ಆಗಸ್ಟ್ 2024 ರಂದು ಬೆಳಿಗ್ಗೆ 5.00 ಕ್ಕೆ ಬದಲಾಗಿ 06.00 ಕ್ಕೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11.00…
ಬೆಂಗಳೂರು: ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿಪಡಿಸಲಾಗಿದೆ. ‘ಅರಿವು ಕೇಂದ್ರ’ಗಳ ಕೆಲಸದ ಸಮಯವನ್ನು ದಿನಕ್ಕೆ 6 ರಿಂದ 8 ಗಂಟೆಗಳಿಗೆ ಏರಿಸಿ ಗ್ರಂಥಾಲಯ ಮೇಲ್ವಿಚಾರಕರಿಗೆ ರೂ. 16,382 ರೂ. ಮಾಸಿಕ ಕನಿಷ್ಠ ವೇತನ ಮತ್ತು 1542 ರೂ. ವ್ಯತ್ಯಯವಾಗುವ ತುಟ್ಟಿ ಭತ್ಯೆ ಸೇರಿಸಿ, ಮಾಸಿಕ 17,924 ರೂ. ಪಾವತಿಸಲಾಗುತ್ತಿದೆ. ಗ್ರಂಥಾಲಯ ಮೇಲ್ವಿಚಾರಕರಿಗೆ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವತಿಯಿಂದ 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಓದುವ ಬೆಳಕು ಓದುವ ಬೆಳಕು’ ಕಾರ್ಯಕ್ರಮದಡಿ 6 ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವವನ್ನು ನೀಡಿ ಮನೆಗೆ ಪುಸ್ತಕಗಳನ್ನು ತೆಗೆದುಕೊಂಡು ಹೋಗಿ ಓದಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಒಟ್ಟು 48,57,351 ಮಕ್ಕಳು ನೋಂದಣಿಯಾಗಿದ್ದಾರೆ. ವಿವಿಧ ಚಟುವಟಿಕೆಗಳು ಮಕ್ಕಳ ಸ್ನೇಹಿಯಾಗಿಸಲು ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಓದಿನ ಮನೆಗೆ ಹೋಗೋಣ, ಚದುರಂಗ ಆಟ ಆಡೋಣ, ಗಟ್ಟಿ ಓದು, ಅಮ್ಮನಿಗಾಗಿ ಒಂದು ಪುಸ್ತಕ, ಪತ್ರ…
ಬೆಂಗಳೂರು: ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಹಾಗೂ ವಿವಿಧ ರಂಗಾಯಣಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡಿ ಆದೇಶಿಸಿದ್ದಾರೆ. ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ…
ದೇಶದ ಅತಿದೊಡ್ಡ ವ್ಯವಹಾರ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಗ್ರೂಪ್ 2024 ರ ಹಣಕಾಸು ವರ್ಷದಲ್ಲಿ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ. ಹೆಚ್ಚುವರಿಯಾಗಿ, ತನ್ನ ವ್ಯವಹಾರಗಳಿಗೆ ಸಂಯೋಜಿತ ಹೊಂದಾಣಿಕೆಯ ಹುಡುಕಾಟದಲ್ಲಿ, ವೈವಿಧ್ಯಮಯ ಸಮೂಹವು ಹಣಕಾಸು ವರ್ಷ 2023 ಕ್ಕೆ ಹೋಲಿಸಿದರೆ ಕಳೆದ ಹಣಕಾಸು ವರ್ಷದಲ್ಲಿ ನೇಮಕಾತಿಗಳ ಸಂಖ್ಯೆಯನ್ನು ಕಡಿಮೆ ಮಾಡಿದೆ. 2024ರ ಹಣಕಾಸು ವರ್ಷದಲ್ಲಿ, ಮುಂಬೈ ಪ್ರಧಾನ ಕಚೇರಿ ಹೊಂದಿರುವ ಗ್ರೂಪ್ ತನ್ನ ಒಟ್ಟು ಉದ್ಯೋಗಿಗಳ ಸಂಖ್ಯೆಯನ್ನು 2023 ರ ಹಣಕಾಸು ವರ್ಷದ ಕೊನೆಯಲ್ಲಿ 389,414 ರಿಂದ 347,362 ಕ್ಕೆ ಇಳಿಸಿದೆ. 2024ರ ಹಣಕಾಸು ವರ್ಷದಲ್ಲಿ, ರಿಲಯನ್ಸ್ ಗ್ರೂಪ್ನ ಒಟ್ಟು ಉದ್ಯೋಗಿಗಳಲ್ಲಿ, 53.9% 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮತ್ತು 21.4% ಮಹಿಳೆಯರು. ಅದರ ವಾರ್ಷಿಕ ವರದಿಯ ಪ್ರಕಾರ, ಒಟ್ಟು ಸ್ವಯಂಪ್ರೇರಿತ ಪ್ರತ್ಯೇಕತೆಗಳಲ್ಲಿ, 74.9% 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮತ್ತು 22.7% ಮಹಿಳೆಯರು. ಎಫ್ವೈ 2024 ರಲ್ಲಿ ಒಟ್ಟಾರೆ ಸ್ವಯಂಪ್ರೇರಿತ ಪ್ರತ್ಯೇಕತೆಗಳು ಎಫ್ವೈ 2023 ಕ್ಕಿಂತ ಕಡಿಮೆಯಾಗಿದೆ. “ಚಿಲ್ಲರೆ…
ಬೆಂಗಳೂರು: ದಾವಣಗೆರೆ ವೃತ್ತಿ ರಂಗಾಯಣದ ನಿರ್ದೇಶಕರನ್ನಾಗಿ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಕಳೆದ ಎರಡು ವರ್ಷಕಾಲ ಖಾಲಿ ಇದ್ದ ಹುದ್ದೆಗೆ ನಿರ್ದೇಶಕರಾಗಿ ಕಡಕೋಳ ಮೂರು ವರ್ಷದ ಅವಧಿಗೆ ನೇಮಕವಾಗಿದ್ದಾರೆ. ಈ ಹಿಂದೆ ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗ ಸಮಾಜದ ಸದಸ್ಯರಾಗಿ ಬಾ ಅತಿಥಿ, ರಂಗ ಸಮಾಗಮ, ತಿಂಗಳ ಬೆಳಕಲಿ ರಂಗದ ಮೆರಗು ಮೊದಲಾದ ಕಾರ್ಯಕ್ರಮಗಳ ಮೂಲಕ ಕಡಕೋಳ ಅವರು ರಂಗಾಸಕ್ತರು ಮತ್ತು ಸರಕಾರದ ಗಮನ ಸೆಳೆದಿದ್ದರು. ದಾವಣಗೆರೆ ವೃತ್ತಿ ರಂಗಾಯಣ ಸ್ಥಾಪನೆಯಲ್ಲೂ ಅವರ ಪರಿಶ್ರಮ ಗಮನಾರ್ಹ. “ವೃತ್ತಿ ರಂಗಭೂಮಿ : ವರ್ತಮಾನದ ಸವಾಲುಗಳು” ವಿಷಯದ ಮೇಲೆ ಫೆಲೋಶಿಪ್ ಮಾಡಿದ್ದಾರೆ. https://kannadanewsnow.com/kannada/namma-metro-railway-passengers-traffic-on-this-route-to-be-disrupted-from-august-13-to-15/ https://kannadanewsnow.com/kannada/state-govt-orders-hike-in-honorarium-for-part-time-lecturers-of-government-technical-colleges/ https://kannadanewsnow.com/kannada/tungabhadra-dam-gate-repair-work-begins-deputy-cm-dk-shivakumar/
ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ ಗಳು, ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅರೆಕಾಲಿಕ ಉಪನ್ಯಾಸಕರುಗಳಿಗೆ ಗೌರವಧನ ಹೆಚ್ಚಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ಗಳ ಅರೆಕಾಲಿಕ ಉಪನ್ಯಾಸಕರುಗಳಿಗೆ ಮಾಸಿಕ ಸಂಭಾವನೆಯನ್ನು ಕ್ರಮವಾಗಿ ರೂ.7,500/- ಹಾಗೂ ರೂ.10,000/-ಗಳನ್ನು ನಿಗದಿಪಡಿಸಲಾಗಿದೆ ಎಂದಿದೆ. ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ರೂ.7,500/- ರಿಂದ 12,500/- ಕ್ಕೆ ಹಾಗೂ ಸರ್ಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರುಗಳ ಮಾಸಿಕ ಗೌರವ ಧನವನ್ನು ರೂ.10,000/- ಗಳಿಂದ 15,000/- ಕ್ಕೆ ಹೆಚ್ಚಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ…
ಬೆಂಗಳೂರು : “ಅಣೆಕಟ್ಟು ಸುರಕ್ಷತಾ ಸಮಿತಿ ರಚನೆ ಮಾಡಲಾಗುತ್ತಿದ್ದು, ಈ ಸಮಿತಿಯು ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭೇಟಿ ನೀಡಿ ಸುರಕ್ಷತೆಯ ಬಗ್ಗೆ ವರದಿ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಸಮಿತಿಯು ಎಲ್ಲಾ ಅಣೆಕಟ್ಟುಗಳ ಅಧ್ಯಯನ ನಡೆಸಿ ಮುಂದಿನ ಒಂದು ತಿಂಗಳ ಒಳಗಾಗಿ ವರದಿ ನೀಡುವುದು. ತುಂಗಾಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯಕ್ಕೂ ಈ ಸಮಿತಿಗೂ ಸಂಬಂಧವಿಲ್ಲ. ಉಳಿದ ವಿಚಾರದ ಬಗ್ಗೆ ವರದಿ ತಯಾರಿಸಲಾಗುವುದು” ಎಂದು ತಿಳಿಸಿದರು. “ಈಗಾಗಲೇ ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕೆಲಸ ನಡೆಯುತ್ತಿದೆ. ತುಂಗಭದ್ರಾ ನೀರಾವರಿ ನಿಗಮ ನಮ್ಮೊಬ್ಬರ ಅಧಿಕಾರ ವ್ಯಾಪ್ತಿಯಲ್ಲಿ ಬರುವುದಿಲ್ಲ.ಕೇಂದ್ರ ಹಾಗೂ ಮೂರು ರಾಜ್ಯಗಳ ಸದಸ್ಯರು ಇದರಲ್ಲಿ ಇರುತ್ತಾರೆ. ಗೇಟ್ ಚೈನ್ ಕಿತ್ತು ಹೋದ ಪ್ರಕರಣದ ಬಗ್ಗೆ ಎಲ್ಲರಿಗೂ ತಕ್ಷಣ ಮಾಹಿತಿ ನೀಡಲಾಯಿತು. ಅಣೆಕಟ್ಟು ಸುರಕ್ಷತಾ ಸಮಿತಿಯಲ್ಲಿ ಈ ಮೊದಲೇ ಕೆಲಸ ಮಾಡಿದಂತಹ ತಂತ್ರಜ್ಞರು ಇದ್ದರು. ಅವರ ಬಳಿ ಚರ್ಚೆ ನಡೆಸಲಾಯಿತು. ನಂತರ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬೆಂಗಳೂರಿನಲ್ಲಿಂದು ಬಿಡುಗಡೆ ಮಾಡಿದರು. ವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ 2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ ಪಟ್ಟಿಯನ್ನು ಬಿಡುಗಡೆ ಮಾಡಿದರು. ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಮಹೇಂದ್ರ, ಗೋಪಿ, ಭೀಮ, ಪ್ರಶಾಂತ, ಧನಂಜಯ, ಸುಗ್ರೀವ, ಹಿರಣ್ಯ, ರೋಹಿತ, ಏಕಲವ್ಯ ಕಂಜನ್, ಲಕ್ಷ್ಮೀ, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಪಾಲ್ಗೊಳ್ಳಲಿವೆ. ಸಂಪ್ರದಾಯದಂತೆ ಮೈಸೂರು ಜಿಲ್ಲಾಡಳಿತದ ಸಹಯೋಗದಲ್ಲಿ ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ…
ಬೆಂಗಳೂರು : ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನಮೊದಲು ಅಂದರೆ ಅ. 2ರಿಂದ 21 ದಿನಗಳ ಕಲಾ ದೀಪಾಲಂಕಾರ ಮಾಡಲುನಿರ್ಧರಿಸಲಾಗಿದೆ. ಅಲ್ಲದೆ, ವಿದ್ಯುತ್ ದೀಪಾಲಂಕಾರ ಈ ಬಾರಿಯ ದಸರಾಗೆ ಮತ್ತಷ್ಟು ಕಳೆ ಕಟ್ಟಬೇಕು. ಈ ವಿಚಾರವಾಗಿ ಸೆಸ್ಕ್ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ. 2024ರ ದಸರಾದಲ್ಲಿ 130 ಕಿ.ಮೀ. ರಸ್ತೆಗಳ ಉದ್ದದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿದಂತೆ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್ ದೀಪಗಳು ಕಂಗೊಳಿಸಲಿವೆ. ಹಸಿರು ಚಪ್ಪರ, ಸುಸ್ವಾತಗ, ವಿವಿಧ ಕಮಾನುಗಳು, ನಿಗಮದ ಕಚೇರಿಗಳ ದೀಪಾಲಂಕಾರ, ಛಾಯಾಗ್ರಹಣ ಮತ್ತು ಸಮಾರಂಭಗಳ ವೇದಿಕೆ ಮತ್ತಿತರೆಡೆ ವಿದ್ಯುತ್ ದೀಪಾಲಾಂಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೆಸ್ಕ್ ವ್ಯವಸ್ಥಾಪಕ…