Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: 2025ರ ಅಕ್ಟೋಬರ್ 15ರಂದು, ಮೈಸೂರು ವಿಭಾಗದ ವಾಣಿಜ್ಯ ವಿಭಾಗವು ಟಿಕೆಟ್ ಪರಿಶೀಲನಾ ಸಿಬ್ಬಂದಿ ನಡೆಸಿದ ಕ್ಷೇತ್ರ ಪರಿಶೀಲನೆಗಳಲ್ಲಿ ಉತ್ತರ ಫಲಿತಾಂಶವನ್ನು ಸಾಧಿಸಿದೆ. ಟಿಕೆಟ್ ಇಲ್ಲದೆ ಪ್ರಯಾಣ ಮತ್ತು ಇತರ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ವಿಭಾಗದ ವಿವಿಧ ಮಾರ್ಗಗಳಲ್ಲಿ ತೀವ್ರ ಟಿಕೆಟ್ ಪರಿಶೀಲನಾ ಅಭಿಯಾನಗಳನ್ನು ಹಮ್ಮಿಕೊಳ್ಳಲಾಯಿತು. ಈ ಪರಿಶೀಲನೆಗಳಲ್ಲಿ ಒಟ್ಟು 727 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ₹6,29,010 ದಂಡವನ್ನು ಸಂಗ್ರಹಿಸಲಾಗಿದೆ. ವಿವರಗಳು ಹೀಗಿವೆ: ಹೆಚ್ಚಿನ ದಂಡದ ಪ್ರಕರಣಗಳು: 543 – ₹5,60,060 ದಂಡ ಅತಿಕ್ರಮ ಪ್ರಯಾಣದ ಪ್ರಕರಣಗಳು: 33 – ₹37,640 ದಂಡ ಬುಕ್ ಮಾಡದ ಸರಕು (ಲಗೇಜ್) ಪ್ರಕರಣಗಳು: 7 – ₹1,250 ದಂಡ ಧೂಮಪಾನ ಪ್ರಕರಣಗಳು: 3 – ₹600 ದಂಡ ಅನಧಿಕೃತ ವ್ಯಾಪಾರ (ವೆಂಡಿಂಗ್) ಪ್ರಕರಣ: 1 – ₹1,000 ದಂಡ ಇತರ ಪ್ರಕರಣಗಳು: 140 – ₹28,460 ರೂ ಸಂಗ್ರಹಿಸಲಾಗಿದೆ. ಮೈಸೂರು ವಿಭಾಗದ ವಾಣಿಜ್ಯ ವಿಭಾಗವು ಪ್ರಯಾಣಿಕರು ಸರಿಯಾದ ಟಿಕೆಟ್ ಗಳೊಂದಿಗೆ ಪ್ರಯಾಣಿಸುವಂತೆ ಮತ್ತು ರೈಲ್ವೆ ನಿಯಮಗಳನ್ನು…
ಬೆಂಗಳೂರು : ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು.…
ಬೆಂಗಳೂರು: ರಾಜ್ಯದಲ್ಲಿನ 75 ವರ್ಷ ಮೇಲ್ಪಟ್ಟ AAY ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಅನ್ನ ಸುವಿಧಾ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನ್ನ ಸುವಿಧಾ ಯೋಜನೆಯ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಆತ್ಮಗೌರವದ ಬದುಕಿಗೆ ನೂತನ ಹೆಜ್ಜೆ ಇರಿಸಿದೆ. 75 ವರ್ಷ ಮೇಲ್ಪಟ್ಟ ಎಎವೈ ಹಾಗೂ ಬಿಪಿಎಲ್ ಪಡಿತರದಾರರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈಗ ನಿಮ್ಮ ಪಡಿತರ ನಿಮ್ಮ ಮನೆ ಬಾಗಿಲಿಗೇ ತಲುಪುತ್ತದೆ. ಇಂದೇ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಾಯಿಸಿ, ಸರ್ಕಾರದ ಜನಹಿತದ ಪ್ರಯತ್ನದಲ್ಲಿ ಭಾಗಿಯಾಗಿರಿ ಎಂಬುದಾಗಿ ಕರೆ ನೀಡಿದ್ದಾರೆ. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು…
ಬೆಂಗಳೂರು : ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು.…
ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ರೈತ ಭವನದ ಬಳಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆಯನ್ನು ಕೊಡುತ್ತದೆ ಎಂದು ಜನರು ಭಾವಿಸಿದ್ದರು. ದೊಡ್ಡ ದೊಡ್ಡ ಜಾಹೀರಾತುಗಳನ್ನು ನೋಡಿ ನಾನು ಕೂಡ ಹಾಗೆಯೇ ಅಂದುಕೊಂಡಿದ್ದೆ. ಆದರೆ, ಅದು ದೀಪಾವಳಿ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಇದಾಗಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು. ಬೆಂಗಳೂರು ನಗರ ಜನರಿಗೆ ದೀಪಾವಳಿ ಕೊಡುಗೆ ನೀಡಲು ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ…
ಬೆಂಗಳೂರು: ನಾವು ಹಿಂದುಳಿದ ಯಾವ ಜಾತಿಗೂ ಸೇರುವವರಲ್ಲ ಎಂಬುದಾಗಿ ಹೇಳುವ ಮೂಲಕ ಕರ್ನಾಟಕದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆಯಲ್ಲಿ ಮಾಹಿತಿ ನೀಡಲು ಇನ್ಫೋಸಿಸ್ ನ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ಲೇಖಕಿ ಸುಧಾ ಮೂರ್ತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಗಣತಿದಾರರು ತಮ್ಮ ಮನೆಗೆ ಭೇಟಿ ನೀಡಿದಾಗ, ದಂಪತಿಗಳು “ನಮ್ಮ ಮನೆಯಲ್ಲಿ ಸಮೀಕ್ಷೆ ನಡೆಸುವುದು ನಮಗೆ ಇಷ್ಟವಿಲ್ಲ” ಎಂದು ಹೇಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಯಾವುದೇ ಹಿಂದುಳಿದ ಸಮುದಾಯಕ್ಕೆ ಸೇರಿದವರಲ್ಲ ಮತ್ತು ಆದ್ದರಿಂದ ಅಂತಹ ಗುಂಪುಗಳಿಗಾಗಿ ಉದ್ದೇಶಿಸಲಾದ ಸರ್ಕಾರಿ ಕಾರ್ಯದಲ್ಲಿ ಭಾಗವಹಿಸುವ ಅಗತ್ಯವನ್ನು ಅವರು ನೋಡುವುದಿಲ್ಲ ಎಂದು ಅವರು ಹೇಳಿದರು. ಸುಧಾ ಮೂರ್ತಿ ಯಾವುದೇ ಅಧಿಕೃತ ಹೇಳಿಕೆಯನ್ನು ಸಲ್ಲಿಸಿದ್ದಾರೆಯೇ? ಹೌದು. ಇಂಡಿಯಾ ಟುಡೇ ವರದಿಯ ಪ್ರಕಾರ, ಸುಧಾ ಮೂರ್ತಿ ಅವರು ಸಮೀಕ್ಷೆಯ ನಮೂನೆಯಲ್ಲಿ…
ಬೆಂಗಳೂರು: 2013ರಲ್ಲೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮ ನಿಷೇಧ ಮಾಡಿ ಆದೇಶಿಸಲಾಗಿತ್ತು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು. ಈ ಆದೇಶವನ್ನು ಹೊರಡಿಸಿದ್ದು 2013ರಲ್ಲಿ ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷಕ್ಕೆ ತನ್ನದೇ ಸರ್ಕಾರ ಹೊರಡಿಸಿದ ಆದೇಶ, ತಾವೇ ರೂಪಿಸಿದ ನಿಯಮಗಳ ಬಗ್ಗೆ ಅರಿವಿಲ್ಲವೇ? ಅಥವಾ ಈ ಆದೇಶ ಆರ್ಎಸ್ಎಸ್ ಗೆ ಅನ್ವಯಿಸುವುದಿಲ್ಲವೇ? RSS ಸಂಘಟನೆಯು ಈ ದೇಶದ ಸಂವಿಧಾನ, ಕಾನೂನು, ನೀತಿ ನಿಯಮಗಳಿಗೆ ಅತೀತವಾಗಿದೆ ಎಂದು ಭಾವಿಸಿದೆಯೇ ಬಿಜೆಪಿ? ಎಂದು ಪ್ರಶ್ನಿಸಿದ್ದಾರೆ. ಈ ಆದೇಶ ಜಾರಿಯಲ್ಲಿದ್ದರೂ ಆರ್ಎಸ್ಎಸ್ ಎಂಬ ಸಂಘಟನೆಯು ಯಾವ ಅಂಜಿಕೆ ಇಲ್ಲದೆ ಶಾಲೆಗಳು ಹೆಡ್ಗೆವಾರ್ ಅವರ ವಂಶಸ್ಥರ ಆಸ್ತಿ…
ನವದೆಹಲಿ: ನೆಸ್ಲೆ ಮಾರಾಟ ಪ್ರಮಾಣವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವುದರಿಂದ ಸುಮಾರು 16,000 ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ಸಿಇಒ ಫಿಲಿಪ್ ನವ್ರಾಟಿಲ್ ( CEO Philipp Navratil ) ಗುರುವಾರ ಹೇಳಿದ್ದಾರೆ. ವಿಶ್ವದ ಅತಿದೊಡ್ಡ ಪ್ಯಾಕೇಜ್ಡ್ ಆಹಾರ ಕಂಪನಿಯು ಕಾಫಿ ಮತ್ತು ಮಿಠಾಯಿಗಳಲ್ಲಿ ಬೆಲೆ ಏರಿಕೆಯಿಂದಾಗಿ ನಿರೀಕ್ಷೆಗಿಂತ ಉತ್ತಮ ಮಾರಾಟ ಬೆಳವಣಿಗೆಯನ್ನು ವರದಿ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನೆಸ್ಲೆ ಹೆಚ್ಚು ಪರಿಣಾಮಕಾರಿಯಾಗಲು ಪ್ರಯತ್ನಿಸುತ್ತಿರುವಾಗ, ಉತ್ಪಾದನೆ ಮತ್ತು ಪೂರೈಕೆ ಸರಪಳಿಯಲ್ಲಿ ನಡೆಯುತ್ತಿರುವ ಉಪಕ್ರಮಗಳ ಭಾಗವಾಗಿ ಇನ್ನೂ 4,000 ಜನರ ಸಂಖ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ 12,000 ವೈಟ್ ಕಾಲರ್ ಉದ್ಯೋಗ ಕಡಿತವಾಗಲಿದೆ ಎಂದು ನವ್ರಾಟಿಲ್ ಹೇಳಿದ್ದಾರೆ. ನೆಸ್ಲೆ ಪ್ರಸ್ತುತ ಪ್ರಪಂಚದಾದ್ಯಂತ ಸುಮಾರು 277,000 ಜನರನ್ನು ನೇಮಿಸಿಕೊಂಡಿದೆ. ನೆಸ್ಲೆಸೊದ ಮಾಜಿ ಮುಖ್ಯಸ್ಥರಾದ ನವ್ರಾಟಿಲ್, ನೇರ ವರದಿಯೊಂದಿಗೆ ಬಹಿರಂಗಪಡಿಸದ ಸಂಬಂಧದ ಕಾರಣ ಸೆಪ್ಟೆಂಬರ್ನಲ್ಲಿ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ವಜಾಗೊಳಿಸಲಾದ ಲಾರೆಂಟ್ ಫ್ರೀಕ್ಸ್ ಅವರನ್ನು ಬದಲಾಯಿಸಿದರು. ನೆಸ್ಲೆ ಅಭೂತಪೂರ್ವ ನಿರ್ವಹಣಾ ಪ್ರಕ್ಷುಬ್ಧತೆಯ ಅವಧಿಯನ್ನು ಸಹಿಸಿಕೊಂಡಿದೆ, ಅಧ್ಯಕ್ಷ ಪಾಲ್…
ತುಮಕೂರು: ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 8,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿಂಕೆರೆಯ ಉದ್ಯಮಿ ಟಿ.ಕೆ ಮೊಹಮ್ಮದ್ ಎಂಬುವರು ಇ-ಸ್ವತ್ತಿಗಾಗಿ ಅರ್ಜಿಯನ್ನು ತೋವಿಂಕೆರೆ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ದರು. ಇ-ಸ್ವತ್ತು ಮಾಡಿಕೊಡೋದಕ್ಕೆ ತೋವಿಂಕೆರೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಸುಮಾ, ಬಿಲ್ ಕಲೆಕ್ಟರ್ ಮಾರುತಿ ರೂ.8,000 ಲಂಚ ನೀಡಲು ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ತುಮಕೂರು ಲೋಕಾಯುಕ್ತ ಎಸ್ಪಿಗೆ ಟಿ.ಕೆ ಮೊಹಮ್ಮದ್ ದೂರು ನೀಡಿದ್ದರು. ಇಂದು ಇ-ಸ್ವತ್ತು ನೀಡಲು 8,000 ಲಂಚದ ಹಣವನ್ನು ತೋವಿಂಕೆರೆ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಸುಮಾ, ಬಿಲ್ ಕಲೆಕ್ಟರ್ ಮಾರುತಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ರೆಡ್ ಹ್ಯಾಂಡ್ ಇಬ್ಬರನ್ನು ಹಿಡಿದಿದ್ದಾರೆ. ಈ ಸಂಬಂಧ 08/2025 ಯು/ಎಸ್ 7 (ಎ) ಪಿಸಿ ಆಕ್ಟ್ 1988 (ತಿದ್ದುಪಡಿ ಕಾಯ್ದೆ 2018) ರಂತೆ ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಯನ್ನು…
ಶಿವಮೊಗ್ಗ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:21.10.2025 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.. https://kannadanewsnow.com/kannada/ban-on-private-events-in-government-school-premises-in-the-state-order-issued-in-2013-letter-goes-viral/ https://kannadanewsnow.com/kannada/good-news-for-the-people-of-maddur-mandya-government-orders-upgrading-these-schools-to-karnataka-public-schools/














