Author: kannadanewsnow09

ಹೈದರಾಬಾದ್: ಇಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ರಾಪಿಡೋ ಚಾಲಕನೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕೊಂದು, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ನದಿಗೆ ಎಸೆದಿರುವಂತ ಘಟನೆ ನಡೆದಿದೆ. ಹೈದರಾಬಾದ್‌ನ ಪ್ರತಾಪ್ ಸಿಂಗಾರಮ್ ಬಳಿಯ ಮುಸಿ ನದಿಯಲ್ಲಿ ವ್ಯಕ್ತಿಯೊಬ್ಬ ತನ್ನ ಐದು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ತುಂಡು ಮಾಡಿ, ಭಾಗಗಳನ್ನು ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಮಹೇಂದರ್ ರೆಡ್ಡಿ ಎಂದು ಗುರುತಿಸಲಾದ ಆರೋಪಿ, ಬೋಡುಪ್ಪಲ್‌ನ ಬಾಲಾಜಿ ಹಿಲ್ಸ್‌ನಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ತನ್ನ ಪತ್ನಿ ಸ್ವಾತಿ (22) ಅವರನ್ನು ಕೊಲೆ ಮಾಡಿ, ನಂತರ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ಕವರ್‌ಗಳಲ್ಲಿ ಪ್ಯಾಕ್ ಮಾಡಿದ್ದಾನೆ. https://twitter.com/Shyamsundarak6/status/1959488364299928062 ರ್ಯಾಪಿಡೊ ಚಾಲಕನಾಗಿ ಕೆಲಸ ಮಾಡುತ್ತಿದ್ದ ರೆಡ್ಡಿ ನಂತರ ಆಕೆಯ ತಲೆ, ಕೈಗಳು ಮತ್ತು ಕಾಲುಗಳನ್ನು ಜೌಗು ಗುಂಡಿಯಲ್ಲಿ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಆದರೆ ಇಲ್ಲಿಯವರೆಗೆ ಮುಂಡ ಮಾತ್ರ ಪತ್ತೆಯಾಗಿದೆ. ಪ್ರೇಮ ವಿವಾಹದ ನಂತರ ದಂಪತಿಗಳು ಕಳೆದ 25 ದಿನಗಳಿಂದ ಈ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ…

Read More

ಬೆಂಗಳೂರು: ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಹೈನುಗಾರಿಕೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ 1.25 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್‌ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಹೈನುಗಾರಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚ ಶೇ.50ರಷ್ಟು ಅಥವಾ ಗರಿಷ್ಟ 1.25 ಲಕ್ಷಗಳ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025 ಈ ಕೆಳಗಿ‌ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: http://sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ. https://twitter.com/SWDGoK/status/1959226920333394218

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. ಅದೇ ದೇವದಾಸಿ ಮಕ್ಕಳಿಗೆ ಪಿತೃತ್ವ ಹಕ್ಕು ನೀಡುವುದಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ದೇವದಾಸಿ ಮಹಿಳೆಯರಿಗೆ ಶೋಷಣೆಯಿಂದ ವಿಮೋಚನೆ, ಅವರ ಮಕ್ಕಳಿಗೆ ಸಬಲೀಕರಣ ಹಾಗೂ ಸಾಮಾಜಿಕ ಗೌರವ ತರುವ ನಿಟ್ಟಿನಲ್ಲಿ ಕರ್ನಾಟಕ ದೇವದಾಸಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ – 2025 ಅಂಗೀಕಾರವಾಗಿದೆ. https://twitter.com/SWDGoK/status/1958880891511431454

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಬರೋಬ್ಬರಿ 4 ಲಕ್ಷದವರೆಗೆ ಸಹಾಯಧನ ಸಿಗಲಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಐಎಸ್‌ಬಿ (ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ)ಯೋಜನೆಯ ಅಡಿಯಲ್ಲಿ ಸಂಪೂರ್ಣ ಸಹಾಯಧನದೊಂದಿಗೆ ₹4.00 ಲಕ್ಷ ಮೌಲ್ಯದ ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಚಲಿಸುವ ಆಹಾರ ಸೇವಾ ಘಟಕವನ್ನು ಪರಿಶಿಷ್ಟ ಜಾತಿಯವರಿಗೆ ನೀಡಲಾಗುವುದು ಎಂದಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025 ಆಗಿದೆ. ಈ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು: http://sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಎಂದು ತಿಳಿಸಿದೆ. https://twitter.com/SWDGoK/status/1957448855496102111

Read More

ಶಿವಮೊಗ್ಗ: ಬಿಜೆಪಿಯವರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದರೇ ಮಳೆ-ಬೆಳೆ ಆಗೋದಿಲ್ಲ ಅಂತ ಅಪಪ್ರಚಾರ ಮಾಡುತ್ತಾರೆ. ಆದರೇ ಅವರು ಮುಖ್ಯಮಂತ್ರಿಯಾದ ಮೇಲೆ ಚೆನ್ನಾಗಿ ಮಳೆಯಾಗಿದೆ. ಮಳೆಯಾದ ಕಾರಣ ಲಿಂಗನಮಕ್ಕಿ ಜಲಾಶಯ ಕಳೆದ ವರ್ಷವೂ ತುಂಬಿತ್ತು, ಈ ವರ್ಷವೂ ತುಂಬಿದೆ ಎಂಬುದಾಗಿ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದ ಕ್ರೆಸ್ಟ್ಗೇಟ್ ತೆರೆದು, ಶರಾವತಿ ನದಿ ನೀರಿಗೆ ಪುಷ್ಪವೃಷ್ಟಿ ಮಾಡಿ ಮಾತನಾಡಿದಂತ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ಮಳೆಬೆಳೆಯಾಗುವುದಿಲ್ಲ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದ್ದರು. ಕಳೆದ ವರ್ಷ ಸಹ ಉತ್ತಮ ಮಳೆಯಾಗಿ ಡ್ಯಾಂ ಭರ್ತಿಯಾಗಿತ್ತು. ಈ ವರ್ಷ ಸಹ ಡ್ಯಾಂ ಭರ್ತಿಯಾಗಿದ್ದು ಲಿಂಗನಮಕ್ಕಿ ಡ್ಯಾಂ ನಿರ್ಮಾಣವಾದ ನಂತರ 21ನೇ ಬಾರಿ ಕ್ರೆಸ್ಟ್ಗೇಟ್ ತೆರೆದು ನೀರು ಬಿಟ್ಟಿದೆ ಎಂದರು. ಲಿಂಗನಮಕ್ಕಿ ಜಲಾಶಯಕ್ಕೆ ಬಾಗಿನ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಊಹಾಪೋಹ ಇದೆ. ಆದರೆ ಕೆಲವು ದಿನಗಳ ಹಿಂದೆ ಅಧಿಕಾರಿಗಳು ಬಾಗಿನ…

Read More

ಬೆಂಗಳೂರು: ನಗರದಲ್ಲಿ ರಜಾ ದಿನಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಚುರುಕು ನೀಡಿದ್ದು, ಸಕ್ರಿಯವಾಗಿ ಎಲ್ಲಾ ವಲಯಗಳಲ್ಲಿ ನಡೆಸಲಾಗುತ್ತಿದೆ. ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ಆದೇಶ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ನಿರ್ದೇಶನದ ಮೇರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಲಯಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಂದಾಗಿ ವಾಹನಗಳ ಸಂಚಾರದ ಸಮಸ್ಯೆಯಾಗಿ ಸಂಚಾರ ದಟ್ಟಣೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಂಚಾರಿ ಪೊಲೀಸ್ ವಿಭಾಗದಿಂದ 4,614 ಗುಂಡಿಗಳನ್ನು ಗುರುತಿಸಿ ಆದ್ಯತೆ ಮೇರೆಗೆ ಮುಚ್ಚಲು ಪಾಲಿಕೆಗೆ ಪಟ್ಟಿಯನ್ನು ನೀಡಲಾಗಿತ್ತು. ಅದರಲ್ಲಿ 3,995 ಪಾಲಿಕೆ ಹಾಗೂ 619 ಬಿಬಿಎಂಪಿಯ ಹೊರಭಾಗದಲ್ಲಿ ಬರಲಿವೆ. ಅದರಂತೆ, ಬಿಬಿಎಂಪಿ ಗೆ 3,287 ರಸ್ತೆಗುಂಡಿಗಳು ಬರಲಿದ್ದು, ಉಳಿದ ರಸ್ತೆಗುಂಡಿಗಳು ಜಲಮಂಡಳಿ, ಬೆಸ್ಕಾಂ, ಗೇಲ್, ಮೆಟ್ರೋ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಇನ್ನಿತರೆ ಇಲಾಖೆಗಳಿಗೆ ಬರಲಿವೆ. ಈ ಸಂಬಂಧ ಬಿಬಿಎಂಪಿ ಹಾಗೂ ವಿವಿಧ ಇಲಾಖೆಗಳು ಕೈಜೋಡಿಸಿ…

Read More

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಗೈರಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ನಗರದ ಡಾ || ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಮಹೇಶ್ ಜೋಶಿ ಪ್ರತಿಭಟನೆಗೆ ಬೆದರಿ ಗೈರಾದರ ಎಂಬ ಅನುಮಾನ ಮೂಡಿದೆ. ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಮುಗಿದು 8 ತಿಂಗಳಾದರೂ ಮಹೇಶ ಜೋಶಿ ಅವರು ಮಂಡ್ಯಕ್ಕೆ ಒಮ್ಮೆಯೂ ಕಾಲಿಟ್ಟಿಲ್ಲ. ಸಮ್ಮೇಳನಕ್ಕೆ ಬಿಡುಗಡೆಯಾದ 30 ಕೋಟಿ ಅನುದಾನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ 2.50 ಕೋಟಿ ನೀಡಲಾಗಿತ್ತು. ಇದರ ಖರ್ಚು-ವೆಚ್ಚದ ಲೆಕ್ಕವನ್ನು ಇದುವರೆಗೆ ಜೋಶಿಯವರು ಕೊಟಿಲ್ಲ. ಇನ್ನು ಏಪ್ರಿಲ್‌ನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಖರ್ಚು-ವೆಚ್ಚಗಳ ವಿವರ ನೀಡುವ ಸಚಿವರ ಪತ್ರಿಕಾಗೋಷ್ಠಿಗೂ ಅವರು ಬಂದಿರಲಿಲ್ಲ. ಹೀಗಾಗಿ ಸ್ಮರಣ ಸಂಚಿಕೆ ಕಾರ್ಯಕ್ರಮಕ್ಕೆ ಬಂದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಎಚ್ಚರಿಕೆ ನೀಡಿದ್ದರು. ಈ…

Read More

ಶಿವಮೊಗ್ಗ : ರಾಜ್ಯಕ್ಕೆ ಅತಿಹೆಚ್ಚು ವಿದ್ಯುತ್ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯ ತುಂಬಿರುವುದು ರಾಜ್ಯದಲ್ಲಿ ಮಳೆಬೆಳೆ ಸಮೃದ್ದವಾಗಿ ಆಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಲಿಂಗನಮಕ್ಕಿಗೆ ಜಲಾಶಯಕ್ಕೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದು ಅರ್ಥವಿಲ್ಲದ ಮಾತು. ಎಲ್ಲರೂ ಒಂದಲ್ಲ ಒಂದು ದಿನ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದ ಕ್ರೆಸ್ಟ್ಗೇಟ್ ತೆರೆದು, ಶರಾವತಿ ನದಿ ನೀರಿಗೆ ಪುಷ್ಪವೃಷ್ಟಿ ಮಾಡಿ ಮಾತನಾಡಿದಂತ ಅವರು, ಈ ಸ್ಥಳಕ್ಕೆ ಬಂದಾಗ ನಮ್ಮ ಪೂರ್ವಿಕರು ಇಂತಹದ್ದೊಂದು ಆಣೆಕಟ್ಟು ಕಟ್ಟಿದ್ದಾರಲ್ಲಾ ಎನ್ನುವುದು ನೆನಪಿಸಿಕೊಳ್ಳಬೇಕು. ಈತ ಇಂತಹ ನಿರ್ಮಾಣ ಕಷ್ಟಸಾಧ್ಯ. ಲಿಂಗನಮಕ್ಕಿ ಜಲಾಶಯದ ಮೇಲೆ ಎಲ್ಲರೂ ನಿಂತು ಸಂಭ್ರಮಿಸುವುದು ಶಾಶ್ವತವಾಗಿ ಇರಬೇಕು. ಬಂಗಾರಪ್ಪ ಅವರ ಆಶಯ ಸಹ ಅದೇ ಆಗಿತ್ತು. ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣ ಸಂದರ್ಭದಲ್ಲಿ ಹೆಚ್ಚು ಪರಿಸರ ನಾಶವಾಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ…

Read More

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೆ ಆರ್ ಮಾರ್ಕೆಟ್ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ತಂದೆ ಜೊತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(10) ಸಾವನ್ನಪ್ಪಿದ್ದಾರೆ. ಜಿಎಂ ಪಾಳ್ಯದ ನಿವಾಸಿಯಾಗಿರುವ ಪೂಜಾರಿ ದಿಲೀಪ್ ಕುಮಾರ್ ಜೊತೆಗೆ ಪುತ್ರ ಶಬರೀಶ್ ತೆರಳುತ್ತಿದ್ದರು. ಮಗನ ಜೊತೆಗೆ ಕೆ ಆರ್ ಮಾರ್ಕೆಟ್ ಗೆ ದಿಲೀಪ್ ಕುಮಾರ್ ತೆರಳಿದ್ದರು. ಈ ವೇಳೆ ಬಸ್ಸಿಗೆ ಬಿಎಂಟಿಸಿ ಬಸ್ ಟಚ್ ಆಗಿದೆ. ಈ ಸಂದರ್ಭದಲ್ಲಿ ಪುತ್ರ ಶಬರೀಶ್ ಕೆಳಗೆ ಬಿದ್ದಿದ್ದಾನೆ. ಅವರ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://kannadanewsnow.com/kannada/dharmasthala-case-is-a-sponsored-attack-on-hindu-religious-beliefs-prahlad-joshi/ https://kannadanewsnow.com/kannada/good-news-for-farmers-application-invitation-for-dairy-farming-a-subsidy-of-1-25-lakh-will-be-available/

Read More

ಬೆಂಗಳೂರು: ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ ಈ ಧರ್ಮಸ್ಥಳ ಪ್ರಕರಣ ಎಂಬುದು ಈಗ ಬಹಿರಂಗಗೊಂಡಿದೆ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ಧಾರ್ಮಿಕತೆಯ ಮೇಲೆ ದಾಳಿ ನಡೆಸಿ, ಪುರಾತನವಾದ, ಪ್ರಸಿದ್ಧ ಹಿಂದೂ ದೇವಾಲಯದ ವಿರುದ್ಧ ಇಲ್ಲ-ಸಲ್ಲದ ಷಡ್ಯಂತ್ರದ ಟೂಲ್‌ಕಿಟ್ ಬಳಸಿಕೊಂಡಿತು ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಆತುರದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹಿನ್ನೆಲೆ ಪರಿಶೀಲನೆ ಮಾಡದೇ, ಏಕಾಏಕಿ ದೊಂಬರಾಟಕ್ಕೆ ದಾರಿ ಮಾಡಿಕೊಟ್ಟಿದ್ದು ಐತಿಹಾಸಿಕ ದುರಂತ. ಮುಖವಾಡ ಧರಿಸಿದ ವ್ಯಕ್ತಿಯಿಂದ ಹಿಡಿದು ಪ್ರಾಯೋಜಿತ ಯೂಟ್ಯೂಬರ್‌ಗಳವರೆಗೆ, ಯಾವುದೇ ಸತ್ಯಾಸತ್ಯತೆಗಳನ್ನು ಪರಿಶೀಲಿಸದೇ, ಧರ್ಮಸ್ಥಳದ ಪವಿತ್ರ್ಯವನ್ನು ಹಾಳುಗೆಡವಿ, 15 ದಿನಗಳ ಕಾಲ ಮಾಧ್ಯಮಗಳಿಗೆ ಸರ್ಕಸ್ ಆಗಿ ಬಿಂಬಿಸಲಾಗಿದೆ ಎಂದಿದ್ದಾರೆ. https://twitter.com/JoshiPralhad/status/1959606614979231954 ಧಾರ್ಮಿಕ ನಂಬಿಕೆ ಎಂದೆಂದಿಗೂ ವೈಯಕ್ತಿಕ, ಆದರೆ, ಆಡಳಿತದಲ್ಲಿ ಸಮತೋಲನ ಪ್ರಾಮುಖ್ಯ ವಹಿಸುತ್ತದೆ. ಅಸ್ಪಷ್ಟತೆಯ ಕಾಂಗ್ರೆಸ್ ಸರ್ಕಾರದಿಂದಲೇ ಇಷ್ಟು ರಾದ್ದಾಂತ ಸೃಷ್ಟಿಯಾಗಿದೆ. ಹೆಸರು ಹಾಳು ಮಾಡಿದ ಬಳಿಕ, ಆರೋಪಿಗಳನ್ನು ಬಂಧಿಸುವ…

Read More