Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನವದೆಹಲಿ: ಬಿಹಾರದ ಜನತೆ ಮತ್ತೆ ಜಂಗಲ್ ರಾಜ್ ಸರ್ಕಾರಕ್ಕೆ ಅವಕಾಶ ನೀಡಿಲ್ಲ. ಎನ್ ಡಿ ಎ ಬೆಂಬಲಿಸಿದ ಬಿಹಾರದ ಜನರಿಗೆ ಆಭಾರಿಯಾಗಿದ್ದೇನೆ. ಬಿಹಾರದ ಜನರಿಗೆ ಹೃದಯ ಪೂರ್ವಕ ಧನ್ಯವಾದಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ದೇಶದ ಜನತೆ ಉದ್ದೇಶಿಸಿ ಮಾತನಾಡಿದಂತ ಅವರು, ಬಿಹಾರದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ. ಬಿಹಾರದ ಮಹಿಳೆಯರಿಗೆ ವಿಶೇಷ ಅಭಿನಂದನೆಗಳು. ಎನ್ ಡಿ ಎ ಗೆಲುವಿಗೆ ಕಾರಣರಾದ ಎಲ್ಲಾ ನಾಯಕರಿಗೆ ಧನ್ಯವಾದಗಳು ಎಂದರು. ಕಾಂಗ್ರೆಸ್ ತನ್ನ ನಕಾರಾತ್ಮಕ ರಾಜಕೀಯದಲ್ಲಿ ಎಲ್ಲರನ್ನೂ ಮುಳುಗಿಸುತ್ತಿದೆ ಎಂದು ಕಾಂಗ್ರೆಸ್ ಮಿತ್ರಪಕ್ಷಗಳು ಸಹ ಅರ್ಥಮಾಡಿಕೊಳ್ಳಲು ಪ್ರಾರಂಭಿಸಿವೆ. ಅದಕ್ಕಾಗಿಯೇ, ಬಿಹಾರ ಚುನಾವಣೆಯ ಸಮಯದಲ್ಲಿ, ಕಾಂಗ್ರೆಸ್‌ನ ‘ನಾಮದಾರ’ ಕೊಳದಲ್ಲಿ ಸ್ನಾನ ಮಾಡುವ ಮೂಲಕ ಬಿಹಾರ ಚುನಾವಣೆಯಲ್ಲಿ ತನ್ನನ್ನು ಮತ್ತು ಇತರರನ್ನು ಮುಳುಗಿಸಲು ಅಭ್ಯಾಸ ಮಾಡುತ್ತಿದ್ದಾನೆ ಎಂದು ನಾನು ಹೇಳಿದ್ದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ನಾನು ಈ ವೇದಿಕೆಯಿಂದಲೇ ಕಾಂಗ್ರೆಸ್ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ್ದೇನೆ. ಕಾಂಗ್ರೆಸ್ ಒಂದು…

Read More

ಬೆಂಗಳೂರು:  ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ‌ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಸ್ಪಷ್ಟನೆ ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವ್ಯಾಟ್ಸಪ್ ಗ್ರೂಪ್ಗಳಲ್ಲಿ ಸರ್ಕಾರದ ಅಧಿಸೂಚನೆ ದಿನಾಂಕ: 14.11.2025 ರಂದು ” ಸಾಲುಮರದ ತಿಮ್ಮಕ್ಕರವರು ” ನಿಧನರಾದ ಹಿನ್ನೆಲೆಯಲ್ಲಿ ಇವರ ಅಂತ್ಯಕ್ರಿಯೆಯನ್ನು ಹುಟ್ಟು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಎಂದು ತಿಳಿಸಿರುವ ಅಧಿಸೂಚನೆಯೂ ನೈಜ್ಯತೆಯಿಂದ ಕೂಡಿರುವುದಿಲ್ಲ ಹಾಗೂ ಇದು ನಕಲಿ ಆಗಿರುತ್ತದೆ ಎಂಬುದಾಗಿ ಹೇಳಿದೆ. ಸದರಿ ನಕಲಿ ಅಧಿಸೂಚನೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಎಂದು ಘೋಷಿಸಿರುವುದು ಕೂಡ ನಕಲಿ ಆಗಿರುತ್ತದೆ ನೈಜತೆಯಿಂದ ಕೂಡಿರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯು ಸ್ಪಷ್ಟ ಪಡಿಸಿದೆ.

Read More

ಬೆಂಗಳೂರು: ನಾಳೆ ರಾಜ್ಯಾಧ್ಯಂತ ಸರ್ಕಾರಿ ರಜೆ ಇರುವುದಿಲ್ಲ. ಕೇವಲ ಸರ್ಕಾರಿ ಗೌರವಗಳೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಗೆ ಆದೇಶಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ನಾಳೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಾಲು ಮರದ ತಿಮ್ಮಕ್ಕ ಅವರ ನಿಧನದ ಕಾರಣದಿಂದಾಗಿ ಸರ್ಕಾರಿ ರಜೆ ಘೋಷಿಸಲಾಗಿದೆ ಎನ್ನುವಂತ ಆದೇಶ ಪತ್ರವೊಂದು ವೈರಲ್ ಆಗಿತ್ತು. ಆದರೇ ಇದು ಎಸ್ ಎಂ ಕೃಷ್ಣ ಅವರು ಮರಣ ಹೊಂದಿದ ಆದೇಶವನ್ನು ತಿರುಚಿ ಹಾಕಲಾಗಿದೆ. ಆ ಆದೇಶದ ಕೆಳಗೆ ಸಹಿ ಮಾಡಿದ ಅಧಿಕಾರಿಯು ಪ್ರಸ್ತುತ ಆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದಾಗಿ ಸರ್ಕಾರ ತಿಳಿಸಿದೆ. ಇಂದಿನ ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರವು ಆದೇಶಿಸಿದೆ.…

Read More

ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. https://kannadanewsnow.com/kannada/nda-will-register-a-huge-victory-pm-modis-prediction-about-bihar-elections-goes-viral/ https://kannadanewsnow.com/kannada/alert-diabetes-can-cause-these-serious-problems-including-heart-attacks/

Read More

ಶುಕ್ರವಾರದಂದು ತಾಯಿ ಮಹಾ ಲಕ್ಷ್ಮಿಯನ್ನು ಧರ್ಮಗ್ರಂಥಗಳಲ್ಲಿ ಸಂಪತ್ತಿನ ದೇವತೆ ಎಂದು ಪರಿಗಣಿಸಲಾಗಿದೆ. ಈ ದಿನ ಆತನನ್ನು ಪೂಜಿಸುವುದರಿಂದ ಆತನ ಅನುಗ್ರಹ ದೊರೆಯುತ್ತದೆ ಎಂದು ನಂಬಲಾಗಿದೆ. ಇಂದು 2025 ರ ಕಾರ್ತಿಕ ಮಾಸ ತಿಂಗಳ ಕೋನೆ ಶುಕ್ರವಾರ. ಸನಾತನ ಹಿಂದೂ ಧರ್ಮದಲ್ಲಿ ಶುಕ್ರವಾರವನ್ನು ಮಹಾಲಕ್ಷ್ಮಿ ಮತ್ತು ವೈಭವ್-ವಿಲಾಸ್ ದಿನವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ನೀವು ತಾಯಿ ಲಕ್ಷ್ಮಿಯನ್ನು ಸರಿಯಾಗಿ ಪೂಜಿಸಿದರೆ, ಮಹಾಲಕ್ಷ್ಮಿ ನಿಮ್ಮ ಪ್ರತಿಯೊಂದು ಆಸೆಯನ್ನು ಪೂರೈಸುತ್ತದೆ ಮತ್ತು ನೀವು ಪ್ರತಿ ಬಿಕ್ಕಟ್ಟಿನಿಂದ ಮುಕ್ತರಾಗಬಹುದು. ಧರ್ಮಗ್ರಂಥಗಳಲ್ಲಿ, ಲಕ್ಷ್ಮಿಯನ್ನು  ಸಂಪತ್ತಿನ ದೇವತೆ ಎಂದು ಪರಿಗಣಿಸಲಾಗಿದೆ. ಶುಕ್ರವಾರದಂದು (ಶುಕ್ರವಾರ ಉಪಾಯ)  ಪೂಜಿಸುವುದರಿಂದ ಆತನ ಆಶೀರ್ವಾದ ಉಳಿಯುತ್ತದೆ ಎಂದು ನಂಬಲಾಗಿದೆ. ಇದರೊಂದಿಗೆ, ಎಲ್ಲಾ ತೊಂದರೆಗಳು ದೂರವಾಗುತ್ತವೆ, ಆರ್ಥಿಕ ಅಡಚಣೆಗಳು ದೂರವಾಗುತ್ತವೆ ಮತ್ತು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ. ಹಣದ ಕೊರತೆ ನೀಗಿಸಲು ಮಹಾಲಕ್ಷ್ಮಿ ದೇವಿಯನ್ನು ಪೂಜಿಸುತ್ತೇವೆ. ಮಹಾ ಲಕ್ಷ್ಮಿಯನ್ನು ಸಂಪತ್ತು ಮತ್ತು ಆಸ್ತಿಯ ಪ್ರಧಾನ ದೇವತೆ ಎಂದು ಪರಿಗಣಿಸಲಾಗಿದೆ. ಅವಳು ಸಮುದ್ರದಿಂದ ಜನಿಸಿದಳು ಮತ್ತು ಅವಳು ಶ್ರೀ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಇದುವರೆಗಿನ ಅತಿದೊಡ್ಡ ಗೆಲುವು ಸಾಧಿಸಲಿದೆ ಎಂದು ಪ್ರತಿಪಾದಿಸಿರುವ ಹಳೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದೇಶದ ಅತ್ಯಂತ ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಒಂದಾದ ಬಿಹಾರದಲ್ಲಿ ಮೈತ್ರಿಕೂಟವು ಆರಾಮವಾಗಿ ಅಧಿಕಾರವನ್ನು ಉಳಿಸಿಕೊಳ್ಳಲಿದೆ. “ಈ ವರ್ಷ ಬಿಹಾರದಲ್ಲಿ ಎನ್‌ಡಿಎ ತನ್ನ ಅತಿದೊಡ್ಡ ಗೆಲುವು ಸಾಧಿಸಲಿದೆ ಎಂದು ನನಗೆ ಖಚಿತವಾಗಿದೆ. ನವೆಂಬರ್ 14 ರಂದು ವಿಜಯೋತ್ಸವಕ್ಕೆ (ಭವ್ಯ ಆಚರಣೆ) ಸಿದ್ಧರಾಗಿ” ಎಂದು ಪ್ರಧಾನಿ ಮೋದಿ ವೈರಲ್ ವೀಡಿಯೊದಲ್ಲಿ ಹೇಳುವುದನ್ನು ಕೇಳಬಹುದು. ಮಧ್ಯಾಹ್ನ 3.30 ರ ಹೊತ್ತಿಗೆ 208 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಎನ್‌ಡಿಎ, 2010 ರ ಚುನಾವಣಾ ದಾಖಲೆಯನ್ನು ಮುರಿದಿದೆ, ಅದು 206 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಅವರು ಭಾಷಣ ಮಾಡಿದ ಹಲವು ರಾಜಕೀಯ ರ್ಯಾಲಿಗಳಲ್ಲಿ ಒಂದರಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಇಂದು ಸಂಜೆ, ಅವರು ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ…

Read More

ಬೆಂಗಳೂರು: ಜಾಹೀರಾತು ಸಂ.1/2020 ದಿನಾಂಕ:14-02-2020 ಚಾಲಕ-ಕಂ-ನಿರ್ವಾಹಕ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಉಲ್ಲೇಖದನ್ವಯ ಪ್ರಕಟಿಸಲಾದ ಹೆಚ್ಚುವರಿ ಆಯ್ಕ್ಕೆಪಟ್ಟಿಯಲ್ಲಿ ಸ್ಥಾನ ಪಡೆದು ಕೌನ್ಸಿಲಿಂಗ್ ಮೂಲಕ ವಿಭಾಗಗಳಿಗೆ ನಿಯೋಜಿತರಾಗಿದ್ದ ಅಭ್ಯರ್ಥಿಗಳಲ್ಲಿ ವರದಿ ಮಾಡಿಕೊಳ್ಳದ 22 ಅಭ್ಯರ್ಥಿಗಳ ಸ್ಥಾನದಲ್ಲಿ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿ ನಿಗಮದ ಕೇಂದ್ರ ಕಛೇರಿ, ಶಾಂತಿ ನಗರ, ಬೆಂಗಳೂರು-27 ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್-ಸೈಟ್ ಆದ ksrtcjobs.karnataka.gov.in ನಲ್ಲಿ ಪ್ರಕಟಿಸಲಾಗಿದೆ. 2ನೇ ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ವಿಭಾಗ /ಘಟಕಗಳಿಗೆ ಹಂಚಿಕೆ ಮಾಡುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಹೇಳಿದೆ. https://kannadanewsnow.com/kannada/government-orders-cremation-of-vriksha-mata-salamura-thimmakka-with-state-honours/ https://kannadanewsnow.com/kannada/alert-diabetes-can-cause-these-serious-problems-including-heart-attacks/

Read More

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಈ ಕುರಿತಂತೆ ಆಡಳಿತ ಮತ್ತು ಸಿಬ್ಬಂದಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರವು ಆದೇಶಿಸಿದೆ.   https://kannadanewsnow.com/kannada/alert-diabetes-can-cause-these-serious-problems-including-heart-attacks/ https://kannadanewsnow.com/kannada/extension-of-midday-meal-for-pre-university-students-minister-madhu-bangarappa-requests-cm/

Read More

ಬೆಂಗಳೂರು: ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪೋಷಕ-ಶಿಕ್ಷಕರ ಸಭೆಯ (Mega Parents-Teachers Meet) ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ ವಿವಿಧ ಭಾಗಗಳ ಸರ್ಕಾರಿ ಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳೊಂದಿಗೆ ಆನ್‌ಲೈನ್ ಹಾಗೂ ನೇರವಾಗಿ ಸಂವಾದ ನಡೆಸಿದರು. ಈ ವೇಳೆ, ಪಠ್ಯೇತರ ಚಟುವಟಿಕೆಗಳಿಗೆ ಒತ್ತು, ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ ಹಾಗೂ ಉದ್ಯೋಗಾವಕಾಶಗಳ ಕುರಿತು ಪ್ರಮುಖ ವಿಚಾರವಾಗಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಸರ್ಕಾರಿ ಶಾಲಾ ವಿದ್ಯಾರ್ಥಿಯಾದ ಈರಣ್ಣ ಅವರು, ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಗಮನ ನೀಡುವಂತೆ ಸಚಿವರಲ್ಲಿ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಗುಣಮಟ್ಟದ ಶಿಕ್ಷಣ ಮತ್ತು ಚಟುವಟಿಕೆಗಳಿಗೆ ಒತ್ತು ನೀಡಲು ಸರ್ಕಾರ ಬದ್ಧವಾಗಿದೆ. ಈಗಾಗಲೇ ಸುಮಾರು 13,000 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಮತ್ತು ಶೀಘ್ರದಲ್ಲೇ ಮತ್ತೆ 12,000 ಶಿಕ್ಷಕರನ್ನು ಹಾಗೂ ಅನುದಾನಿತ ಸಂಸ್ಥೆಗಳಲ್ಲಿ 6,000ಕ್ಕೂ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಮುಂಬರುವ…

Read More

ನವದೆಹಲಿ: ಭಾರತದ ಭದ್ರತೆ ಮತ್ತು ಸಂಪನ್ಮೂಲಗಳೊಂದಿಗೆ ಆಟವಾಡುವ ಒಳನುಸುಳುವವರು ಮತ್ತು ಅವರ ಸಹಾನುಭೂತಿ ಹೊಂದಿರುವವರ ವಿರುದ್ಧ ಮೋದಿ ಸರ್ಕಾರದ ನೀತಿಯಲ್ಲಿ ಬಿಹಾರದ ಜನರ ಪ್ರತಿಯೊಂದು ಮತವೂ ನಂಬಿಕೆಯ ಸಂಕೇತವಾಗಿದೆ. ಮತ ಬ್ಯಾಂಕ್‌ಗಳ ಸಲುವಾಗಿ ಒಳನುಸುಳುವವರನ್ನು ರಕ್ಷಿಸುವವರಿಗೆ ಸಾರ್ವಜನಿಕರು ತಕ್ಕ ಉತ್ತರವನ್ನು ನೀಡಿದ್ದಾರೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಹಾರದ ಜನರಿಗೆ, ವಿಶೇಷವಾಗಿ ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ, ಮೋದಿ ಜಿ ಅವರ ನೇತೃತ್ವದಲ್ಲಿ ನೀವು ಎನ್‌ಡಿಎಗೆ ನೀಡಿದ ಭರವಸೆ ಮತ್ತು ವಿಶ್ವಾಸದೊಂದಿಗೆ, ಎನ್‌ಡಿಎ ಸರ್ಕಾರವು ಅದನ್ನು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಪೂರೈಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ ಎಂದಿದ್ದಾರೆ. ಭಾರತದ ಭದ್ರತೆ ಮತ್ತು ಸಂಪನ್ಮೂಲಗಳೊಂದಿಗೆ ಆಟವಾಡುವ ನುಸುಳುಕೋರರು ಮತ್ತು ಅವರ ಸಹಾನುಭೂತಿ ಹೊಂದಿರುವವರ ವಿರುದ್ಧ ಮೋದಿ ಸರ್ಕಾರದ ನೀತಿಯಲ್ಲಿ ಬಿಹಾರದ ಜನರ ಪ್ರತಿಯೊಂದು ಮತವು ನಂಬಿಕೆಯ ಸಂಕೇತವಾಗಿದೆ. ಮತ ಬ್ಯಾಂಕ್‌ಗಳ ಸಲುವಾಗಿ ನುಸುಳುಕೋರರನ್ನು ರಕ್ಷಿಸುವವರಿಗೆ…

Read More