Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಅಪಾರ್ಟ್ಮೆಂಟ್ ಮಾಲೀಕರ ಮತ್ತು ಸಂಘಗಳ ಹಿತಾಸಕ್ತಿ ರಕ್ಷಣೆಗೆ ಸಮಗ್ರ ಶಾಸನ ಜಾರಿಗೆ BAF ಆಗ್ರಹ
ಬೆಂಗಳೂರು : ಬೆಂಗಳೂರಿನಾದ್ಯಂತ 1,400ಕ್ಕೂ ಹೆಚ್ಚು ಅಪಾರ್ಟ್ಮೆಂಟ್ ಮತ್ತು ವಿಲ್ಲಾ ನಿವಾಸಿ ಕಲ್ಯಾಣ ಸಂಘಗಳನ್ನು (RWAs) ಪ್ರತಿನಿಧಿಸುವ ಬೆಂಗಳೂರು ಅಪಾರ್ಟ್ಮೆಂಟ್ ಫೆಡೆರೇಷನ್ (BAF), ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಿದ್ದಪಡಿಸಲಾಗಿರುವಂತಹ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ಕಾನೂನನ್ನು ತಕ್ಷಣವೇ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. 3,50,000ಕ್ಕೂ ಹೆಚ್ಚು ಕುಟುಂಬಗಳು ಮತ್ತು ಸುಮಾರು ಒಂದೂವರೆ ದಶಲಕ್ಷ (15 ಲಕ್ಷ) ನಾಗರಿಕರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ BAF, ದೀರ್ಘಕಾಲದಿಂದ ಬಾಕಿ ಇರುವ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಕಾಯ್ದೆ 1972 ಅನ್ನು ನವೀಕರಿಸಿ, ಸಮಗ್ರ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಅನ್ನು ಜಾರಿಗೆ ತರಲು ಒತ್ತಾಯಿಸಿದೆ. ವಿಳಂಬದಿಂದ ಲಕ್ಷಾಂತರ ಮಾಲೀಕರಿಗೆ ತೊಂದರೆ BAF ಅಧ್ಯಕ್ಷರಾದ ಸತೀಶ್ ಮಲ್ಯ ಅವರು ಮಾತನಾಡಿ, “ಅಪಾರ್ಟ್ಮೆಂಟ್ ಮಾಲೀಕರಿಗೆ ಸಮಗ್ರ ಕಾನೂನು ಚೌಕಟ್ಟನ್ನು ಜಾರಿಗೊಳಿಸುವುದು BAF ನ ಹಲವು ವರ್ಷಗಳ ಮುಖ್ಯ ಬೇಡಿಕೆಯಾಗಿದೆ.…
ಮಂಡ್ಯ : ಮದ್ದೂರು ನಗರದ ಸೋಮೇಗೌಡರ ಬೀದಿಯಲ್ಲಿ ಭಾನುವಾರ ತಡರಾತ್ರಿ ಮನೆಗಳ್ಳತನವೊಂದು ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ರೂ ಹಣದೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ. ಸೋಮೇಗೌಡರ ಬೀದಿಯ ಪೂರ್ಣಿಮ ಬಸವಯ್ಯ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಂಗಳೂರಿನಲ್ಲಿ ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಯೋಗಕ್ಷೇಮ ವಿಚಾರಿಸಲು ತೆರಳಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಭಾನುವಾರ ತಡರಾತ್ರಿ ಮನೆಗೆ ನುಗ್ಗಿ ಕಳ್ಳರು ಸುಮಾರು 60 ಗ್ರಾಂ ಚಿನ್ನಾಭರಣ 1 ಲಕ್ಷ ರೂ ಹಣದೊಂದಿಗೆ ಪರಾರಿಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಮದ್ದೂರು ಠಾಣೆಯ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಯಶವಂತ್ ಕುಮಾರ್, ಮದ್ದೂರು ಪೋಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವರದಿ…
Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಡನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣುಗಳನ್ನು ನೀಡಲುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಆಹಾರದ ಪ್ರಮಾಣ ಮತ್ತು ಘಟಕ ವೆಚ್ಚಕ್ಕೆ ಅನುಗುಣವಾಗಿ 2019-20ನೇ ಸಾಲಿನಿಂದ ಮಧ್ಯಾಹ್ನದ ಉಪಹಾರ ಯೋಜನೆಯಿ ಬೆಳಗಿನ ಉಪಹಾರ, ಬಿಸಿಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ಒದಗಿಸಲು ಅನುಮೋದನೆ ನೀಡಲಾಗಿರುತ್ತದೆ ಎಂದಿದ್ದಾರೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ಶಾಲೆಗಳನ್ನು ಒಳಗೊಂಡಂತೆ ಪಿಎಂಶ್ರೀ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 2018-19ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ…
ಬೆಂಗಳೂರು: ಜರ್ಮನಿ ಸರ್ಕಾರದ ಫೆಡರಲ್ ಸಚಿವಾಲಯ ಇಕಾನಾಮಿಕ್ ಕೋಆಪರೇಶನ್ ಅಂಡ್ ಡೆವಲಪ್ಮೆಂಟ್ (BMZ) ನ ಉನ್ನತ ಮಟ್ಟದ ನಿಯೋಗವು ತಮ್ಮ ಭಾರತದ ಪ್ರವಾಸದ ಭಾಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭೇಟಿ ನೀಡಿತು. ನಿಯೋಗದ ಸದಸ್ಯರು ದೃಷ್ಟಿ ದೋಷ ಹೊಂದಿದ ಪ್ರಯಾಣಿಕರ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ ಸಹಾಯಕ ಧ್ವನಿ-ನೇವಿಗೇಶನ್ ಪರಿಹಾರ “ಧ್ವನಿ ಸ್ಪಂದನ – ಆನ್ಬೋರ್ಡ್” ಬಗ್ಗೆ ಖುದ್ದು ಮಾಹಿತಿ ಪಡೆದರು. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಅವರು ಧ್ವನಿ ಸ್ಪಂದನ ಯೋಜನೆಯ ಕುರಿತು ವಿವರವಾಗಿ ಮಾಹಿತಿ ನೀಡಿ, ಈ ಯೋಜನೆಗೆ ಭಾರತದ ಸರ್ಕಾರದಿಂದ ದೊರೆತ ಪ್ರಶಸ್ತಿಯನ್ನು ತೋರಿಸಿದರು. ಈ ನಿಯೋಗದಲ್ಲಿ BMZ ನ ಮಾನ್ಯ ಮಹಾ ನಿರ್ದೇಶಕಿ ಮಿಸ್. ಕ್ರಿಸ್ಟೀನ್ ಟೋಟ್ಝ್ಕೆ, ಮಿಸ್. ಬಾರ್ಬರಾ ಶಾಫರ್ ಮತ್ತು ಕ್ರಿಸ್ಟೋಫ್ ವಾನ್ ಸ್ಟೆಕೋವ್ ಉಪಸ್ಥಿತರಿದ್ದರು. ರೈಸ್ಡ್ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿದ ಮತ್ತು GIZ ನ ಗ್ರೀನ್ ಅರ್ಬನ್ ಮೊಬಿಲಿಟಿ ಇನೋವೇಶನ್ ಮುಂದಾಳತ್ವದಲ್ಲಿ ವಿಸ್ತರಿಸಲ್ಪಟ್ಟ ಆನ್ಬೋರ್ಡ್…
ಬೆಂಗಳೂರು: ರಾಜ್ಯದ ಜನರು ಗೊಂದಲಕ್ಕೆ ಒಳಗಾಗುವಂತೆ ಆಗಿದೆ. ರಾಜ್ಯದ ಜನತೆಗೆ ಸಿಎಂ ಯಾರು.? ಡಿಸಿಎಂ ಯಾರು ಎಂಬುದನ್ನು ಕಾಂಗ್ರೆಸ್ ನಾಯಕರು ಸ್ಪಷ್ಟ ಪಡಿಸುವಂತೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಇಂದು ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿ ನಡೆಯುತ್ತಿದೆ. ಸಿಎಂ ಒಮ್ಮೆ, ಡಿಸಿಎಂ ಒಮ್ಮೆ ಎರಡು ಬಾರಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಅದೇನೋ ನಾಟಿ ಕೋಳಿ ತಿಂದರು ಅಂತ ಮಾಧ್ಯಮಗಳಲ್ಲಿ ನೋಡಿದೆ ಎಂದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಾರು, ಉಪ ಮುಖ್ಯಮಂತ್ರಿ ಯಾರು ಎಂಬುದು ಗೊತ್ತಾಗುತ್ತಿಲ್ಲ. ರಾಜ್ಯದ ಜನರು ಈ ಗೊಂದಲದಲ್ಲಿ ಇದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ವೀಕ್ ಇದೆ. ಇದಕ್ಕೆ ಕಾರಣ ಕರ್ನಾಟಕದಿಂದ ಚೀಲ ಚೀಲ ಹಣ ಹೋಗುತ್ತದೆ ಎಂದು ಆರೋಪಿಸಿದರು. ಎಐಸಿಸಿ ಅಧ್ಯಕ್ಷರೇ ಸುಪ್ರೀಂ. ಆದರೆ ಸಿಎಂ, ಡಿಸಿಎಂ ಗೊಂದಲದ ಬಗ್ಗೆ ಹೈಕಮಾಂಡ್ ಕೇಳುತ್ತೇವೆ. ಚರ್ಚಿಸಿ ಹೇಳುತ್ತೇವೆ ಅಂತ ಹೇಳುತ್ತಿದ್ದಾರೆ. ಯಾಕೆ ಹೀಗೆ ಎಂಬುದೇ…
ಬೆಂಗಳೂರು: ಮಹಿಳಾ ಸಬಲೀಕರಣಕ್ಕೆ ಆಧ್ಯತೆ ನೀಡುತ್ತಿರುವ ಹಿನ್ನೆಲೆಯಲ್ಲಿಯೇ ಬೆಂಗಳೂರು ಮೂಲದ ಮಹಿಳಾ ಆಹಾರ ಉದ್ಯಮಿ ಸಾಹಿನಿರ್ಮಲ ಎಂಬುವವರು “ನಿರಾಗ್ ಫುಡ್ಸ್” ಶಾಖೆ ತೆರೆಯುವ ಮಲಕ ಕ್ವಿಕ್ ಕಾಮನ್ಸ್ ಕ್ಷೇತ್ರದಲ್ಲಿಯೂ ಯಶಸ್ಸು ಕಂಡಿದ್ದಾರೆ. ಈ ಕುರಿತು ಮಾತನಾಡಿದ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ಮಹಿಳೆಯರು ಸ್ವಂತ ಉದ್ಯೋಗ ನಿರ್ಮಿಸಿ ಯಶಸ್ಸು ಕಾಣುವುದು ಅತ್ಯಂತ ಕಷ್ಟಕರ, ಆದಾಗ್ಯೂ, ಎಲ್ಲರ ಬೆಂಬಲದೊಂದಿಗೆ ಇಂದು ನಿರಾಗ್ ಫುಡ್ಸ್ ತೆರೆಯುವ ಮೂಲಕ ಮಹಿಳೆಯರು ಸಹ ಸ್ವಂತ ಉದ್ಯೋಗದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂಬುದು ನಿರೂಪಿಸಲಾಗಿದೆ. ನಿರಾಗ್ ಫುಡ್ಸ್ ಅಡಿಯಲ್ಲಿ, ಮಲ್ಲಿಗೆ ಇಡ್ಲಿ, ಪೆಸರಟ್ಟು ಮತ್ತು ಅದೈ ದೋಸೆಯಂತಹ ದಕ್ಷಿಣ ಭಾರತೀಯ ಶ್ರೇಷ್ಠ ಉತ್ಪನ್ನಗಳನ್ನು ನೀಡಲಾಗುತ್ತದೆ. ಬೆಂಗಳೂರು ಮೂಲದ ನಿರಾಗ್ ಫುಡ್ಸ್, ಮದ್ದೂರು ವಡ ಸೇರುದಂತೆ ಹಲವು ಖಾಧ್ಯಗಳಿಗೆ ಕ್ವಿಕ್ ಕಾಮರ್ಸ್ನಲ್ಲಿಯೂ ಉತ್ತಮ ಬೇಡಿಕೆ ಕಂಡು ಬರುತ್ತಿದೆ. ಹೆಚ್ಚುತ್ತಿರುವ ಬೇಡಿಕೆ ಹಿನ್ನೆಲೆಯಲ್ಲಿ ಇದೀಗ ಎರಡು ಪೂರ್ಣ ಪ್ರಮಾಣದ ಅಡುಗೆ ಮನೆಯ ಘಟಕಗಳನ್ನು ವಿಸ್ತರಿಸಲಾಗಿದೆ ಎಂದು ಹೇಳಿದರು. ಕಾರ್ಪೋರೇಟ್ ವೃತ್ತಿ ತ್ಯಜಿಸಿ,…
ಬೆಂಗಳೂರು; ತಾಂತ್ರಿಕ ಕೌಶಲ್ಯದ ಜಾಗತಿಕ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ ಧನುಷ್ ಒದಗಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯ ಗ್ರಾಮೀಣ ಯುವ ಪ್ರತಿಭೆ ಧನುಷ್ ಎಂ.ಜಿ. ವರ್ಲ್ಡ್ಸ್ಕಿಲ್ಸ್ ಏಷ್ಯಾ 2025 (ತೈಪೆ, ತೈವಾನ್ ದೇಶ) ಸ್ಪರ್ಧೆಯಲ್ಲಿ Electrical Installation ವಿಭಾಗದಲ್ಲಿ “Medallion of Excellence” ಪದಕ ಪಡೆದು ದೇಶದ ಧ್ವಜವನ್ನು ಎತ್ತಿ ಹಿಡಿದಿದ್ದಾರೆ. ಇದು ಗವರ್ನಮೆಂಟ್ ಟೂಲ್ ರೂಂ ಆಂಡ್ ಟ್ರೈನಿಂಗ್ ಸೆಂಟರ್ (ಜಿಟಿಟಿಸಿ) ಇತಿಹಾಸದಲ್ಲೇ ಮೊದಲ ವರ್ಲ್ಡ್ಸ್ಕಿಲ್ಸ್ ಏಷ್ಯಾ ಪದಕವಾಗಿದೆ. ಕರ್ನಾಟಕದ ಗ್ರಾಮೀಣ ಭಾಗದಿಂದ ಬಂದ ಯುವಜನರಿಗೆ ದೊಡ್ಡ ಸ್ಫೂರ್ತಿಯಾಗಿದೆ. ಮಧುಗಿರಿಯ ಗೋವಿಂದರಾಜ್ ಹಾಗೂ ಜಯಲಕ್ಷ್ಮಿ ದಂಪತಿಯ ಪುತ್ರ ಧನುಷ್, ಮಧುಗಿರಿಯ SM ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶಾಲಾ ಶಿಕ್ಷಣ ಪೂರೈಸಿ, ಗೌರಿಬಿದನೂರು ಜಿಟಿಟಿಸಿಯಲ್ಲಿ ಮೆಕಾಟ್ರಾನಿಕ್ಸ್ ಡಿಪ್ಲೊಮಾ ಪಡೆದರು. ಬಳಿಕ ಬೆಂಗಳೂರು ಜಿಟಿಟಿಸಿಯಲ್ಲಿ ಒಂದು ವರ್ಷದ ಇನ್-ಪ್ಲಾಂಟ್ ತರಬೇತಿ ಮತ್ತು ವಿಶೇಷ Electrical Installation ತರಬೇತಿ ಪಡೆದರು. 2024ರಲ್ಲಿ India Skills ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ ಮತ್ತು…
ರೇಣುಕಾ ದೇವಿಯು ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಅಪಾರ ಭಕ್ತಾದಿಗಳಿಗೆ ಕುಲದೇವತೆ. ಪ್ರಾಕೃತಿಕ ಸೌಂದರ್ಯವನ್ನು ಸವಿಯಲು ಬರುವ ಅನೇಕರು ಅಮ್ಮನವರ ಪವಾಡಗಳನ್ನು ಅರಿತು ಕೆಲವೇ ದಿನಗಳಲ್ಲಿ ಅಮ್ಮನವರ ಭಕ್ತಾದಿಗಳು ಆಗುತ್ತಾರೆ. ಹೆಜ್ಜೇನುಗಳ ಗೂಡಿನಿಂದ ಕೂಡಿರುವ ಬೃಹತ್ ಕಲ್ಲುಬಂಡೆಗಳು ದೇವಾಲಯಕ್ಕೆ ಮೇಲ್ಚಾವಣಿ, ಚಪ್ಪರ ಹಾಗೂ ಗೋಡೆ ಆಗಿದೆ. ಈ ದೇವಾಲಯವು ಇರುವುದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಹೋಬಳಿಯ ಅಮ್ಮನಗಟ್ಟ ಎಂಬ ಬೆಟ್ಟದಲ್ಲಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…
ಮಂಡ್ಯ : ಮದ್ದೂರು ತಾಲೂಕಿನ 42 ಗ್ರಾಮ ಪಂಚಾಯಿತಿಗಳ ಪೈಕಿ ಭಾರತೀನಗರ ( ಕೆ.ಎಂ.ದೊಡ್ಡಿ ) ಗ್ರಾಮ ಪಂಚಾಯಿತಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಲ್ಲೂ ಸರ್ವತೋಮುಖ ಅಭಿವೃದ್ಧಿ, ಆರ್ಥಿಕ ಶಿಸ್ತು, ನೈರ್ಮಲ್ಯ ನಿರ್ವಹಣೆಯೊಂದಿಗೆ ಹಲವಾರು ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಉತ್ತಮ ಆಡಳಿತ ಮತ್ತು ಕಾರ್ಯಸಾಧನೆ ಮಾಡಿರುವ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ನೀಡುವ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಉದ್ದೇಶದಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯಿತಿಗಳನ್ನು ಪ್ರೋತ್ಸಾಹಿಸಲು 2013–14ನೇ ಸಾಲಿನಿಂದ ಪ್ರತಿ ತಾಲ್ಲೂಕಿಗೆ ಒಂದು ಗ್ರಾಮ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತಿದ್ದು, ಹೀಗಾಗಿ 2023-24 ನೇ ಸಾಲಿನಲ್ಲಿ ಮದ್ದೂರು ತಾಲೂಕಿನ ಭಾರತೀನಗರ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಸೋಮವಾರ ವಿಧಾನಸೌಧದ ಬ್ಯಾಂಕೇಟ್ ಹಾಲ್ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾದ ಅನಿತಾ…
ಬೆಂಗಳೂರು: ಇಂದಿನ ಮಕ್ಕಳಲ್ಲಿ ಅತಿಯಾಗಿ ಬೊಜ್ಜುತನಕ್ಕೆ ಹೆಚ್ಚುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ “ಹ್ಯಾಪಿಯೆಸ್ಟ್ ಹೆಲ್ತ್” ಡಿ.6ರಂದು ಕೋರಮಂಗಲದ ಸೇಂಟ್ ಜಾನ್ಸ್ ಸಭಾಂಗಣದಲ್ಲಿ ಗೆಟ್ ಸೆಟ್, ಗ್ರೋ! ಚಿಲ್ಡ್ರನ್ಸ್ ವೆಲ್ನೆಸ್ ಸಮ್ಮಿಟ್’ 3ನೇ ಆವೃತ್ತಿಯನ್ನು ಆಯೋಜಿಸಿದೆ. ಇಡೀ ದಿನದ ಸಮ್ಮಿಟ್ನಲ್ಲಿ “ಮಕ್ಕಳು ಮತ್ತು ಬೊಜ್ಜು: ಬೆಳೆಯುತ್ತಿರುವ ಕಾಳಜಿ ಮತ್ತು ಅದನ್ನು ನಿಭಾಯಿಸುವ ಮಾರ್ಗಗಳು”. ಈ ಶೀರ್ಷಿಕೆಯಡಿ ಸಂವಾದ ನಡೆಯಲಿದ್ದು, ತಜ್ಞ ವೈದ್ಯರು ಈ ಬಗ್ಗೆ ಮಕ್ಕಳಿಗೆ ಹಾಗೂ ಅವರ ಕುಟುಂಬಗಳಿಗೆ ವಿಷಯದ ಮನವರಿಕೆ ಮಾಡಿಕೊಡಲಿದ್ದಾರೆ, ಈ ಸಮ್ಮಿಟ್ನಲ್ಲಿ ಮಕ್ಕಳು, ಶಿಕ್ಷಣ ಸಂಸ್ಥೆಗಳು ಸಹ ನೋಂದಣಿ ಮಾಡಿಕೊಳ್ಳಲು ಅರ್ಹವಾಗಿದೆ. ಹ್ಯಾಪಿಯೆಸ್ಟ್ ಹೆಲ್ತ್ನ ಜ್ಞಾನ ಸಹ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘು ಕೃಷ್ಣನ್ ಮಾತನಾಡಿ, “ಭಾರತದ ಮಕ್ಕಳಲ್ಲಿ ಬಾಲ್ಯದಲ್ಲಿಯೇ ಸ್ಥೂಲಕಾಯತೆ ಹೆಚ್ಚುತ್ತಿರುವ ಕಳಕಳಕಾರಿ ಸಂಗತಿ, ಇಂದು ಸಿಗುತ್ತಿರುವ ಜಂಕ್ ಫುಡ್ನ ಹಾವಳಿಯಿಂದ ಸಾಕಷ್ಟು ಮಕ್ಕಳು ಪೌಷ್ಠಿಕಯುಕ್ತ ಆಹಾರ ಸೇವಿಸದೇ ಜಂಕ್ ಫುಡ್ನತ್ತ ವಾಲುತ್ತಿದ್ದಾರೆ, ಇದರಿಂದ ಸಣ್ಣ ವಯಸ್ಸಿನಲ್ಲಿಯೇ ಬೊಜ್ಜು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗೆ…














