Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು. ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು. ನೀಟ್ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ…
ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ನ ಅವಧಿ ಡಿಸೆಂಬರ್-2025 ರವರೆಗೆ ವಿಸ್ತರಣೆ ಮಾಡಲಾಗಿದೆ. ಜುಲೈ 1 ರಿಂದ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ನ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ (07377/07378) ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು 2025ರ ಡಿಸೆಂಬರ್ವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಈಗಿರುವ ಮಾರ್ಗ, ನಿಲುಗಡೆಗಳು ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಯಲಿವೆ. ಇದಲ್ಲದೆ, ಜುಲೈ 1, 2025 ರಿಂದ ಜಾರಿಗೆ ಬರುವಂತೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ನ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜೂನ್ 30, 2025ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07377 ವಿಜಯಪುರ-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ಜುಲೈ 1ರಿಂದ ಡಿಸೆಂಬರ್ 31, 2025ರವರೆಗೆ ವಿಸ್ತರಿಸಲ್ಪಟ್ಟಿದೆ. ಅದೇ ರೀತಿ, ಜುಲೈ 1, 2025ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲು…
ನವದೆಹಲಿ: ತನ್ನ ಜಲ ರಾಜತಾಂತ್ರಿಕತೆ ಮತ್ತು ಕಾರ್ಯತಂತ್ರದ ಸಂಪನ್ಮೂಲ ಯೋಜನೆಯ ಗಮನಾರ್ಹ ಏರಿಕೆಯಲ್ಲಿ, ಭಾರತವು ಸಿಂಧೂ ನದಿ ವ್ಯವಸ್ಥೆಯಿಂದ ಹೆಚ್ಚುವರಿ ನೀರನ್ನು ಮರುನಿರ್ದೇಶಿಸುವ ದೊಡ್ಡ ಯೋಜನೆಗೆ ಮುಂದಾಗಿದೆ. ಹೆಚ್ಚುವರಿ ಸಿಂಧೂ ನದಿಯ ನೀರನ್ನು ಕಾಲುವೆ ನಿರ್ಮಿಸುವ ಮೂಲಕ ರಾಜಸ್ಥಾನ, ಪಂಜಾಬ್ ಹಾಗೂ ಹರಿಯಾಣಕ್ಕೆ ತಿರುಗಿಸಲು ಭಾರತ ಮುಂದಾಗಿರುವುದಾಗಿ ತಿಳಿದು ಬಂದಿದೆ. ಲಭ್ಯವಿರುವ ಹರಿವುಗಳನ್ನು ನಿಯಂತ್ರಿಸಲು ಮತ್ತು ಬಳಸಿಕೊಳ್ಳಲು ತ್ವರಿತ, ಅಲ್ಪಾವಧಿಯ ಕ್ರಮಗಳನ್ನು ಪ್ರಾರಂಭಿಸಿದ ನಂತರ, ಸರ್ಕಾರವು ಈಗ ಅಂತರ-ಜಲಾನಯನ ನೀರಿನ ವರ್ಗಾವಣೆ ಯೋಜನೆಯತ್ತ ಗಮನ ಹರಿಸಿದೆ. ಇದು ಜಮ್ಮು ಮತ್ತು ಕಾಶ್ಮೀರದಿಂದ ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ ಬರಡಾದ ಭೂಮಿಗೆ ಹೆಚ್ಚುವರಿ ನೀರನ್ನು ತಿರುಗಿಸಲು ವಿನ್ಯಾಸಗೊಳಿಸಲಾದ 113 ಕಿಮೀ ಉದ್ದದ ಕಾಲುವೆಯಾಗಿದೆ. ನೀರಾವರಿ ಮತ್ತು ಕುಡಿಯುವ ನೀರಿನ ಪೂರೈಕೆಯನ್ನು ಹೆಚ್ಚಿಸುವುದರ ಜೊತೆಗೆ ಜಲವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ದೀರ್ಘಕಾಲದಿಂದ ಸ್ಥಗಿತಗೊಂಡಿರುವ ಉಜ್ ಬಹುಪಯೋಗಿ ಯೋಜನೆಯನ್ನು ಕೇಂದ್ರವು ಪುನರುಜ್ಜೀವನಗೊಳಿಸಲಿದೆ. ಈ ಕ್ರಮವು ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ…
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ…
ಬೆಂಗಳೂರು : ಪ್ಲಾಸ್ಟಿಕ್ ತ್ಯಾಜ್ಯ ಜನ-ಜಾನುವಾರುಗಳ ಆರೋಗ್ಯಕ್ಕೆ ಕಂಟಕವಾಗಿದ್ದು, ಪರಿಸರಕ್ಕೂ ಮಾರಕವಾಗಿದೆ. ಏಕಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಇಚ್ಛಾಶಕ್ತಿ ಅಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ವಾಕ್ಯ ಪ್ಲಾಸ್ಟಿಕ್ ತ್ಯಾಜ್ಯ ಕೊನೆಗಾಣಿಸೋಣ ಎಂಬುದಾಗಿದ್ದು. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದರು. ಬೆಂಗಳೂರು ನಗರದ ಹಸಿರು ಹೊದಿಕೆ ವೃದ್ಧಿಗೆ ಕ್ರಮ: ನಿವೃತ್ತರ ಸ್ವರ್ಗ, ಉದ್ಯಾನ ನಗರಿ ಎಂದು ಖ್ಯಾತವಾಗಿದ್ದ ಬೆಂಗಳೂರು ಇಂದು ಕಾಂಕ್ರೀಟ್ ಕಾಡಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶ್ವಾಸ ತಾಣ ಉಳಿಸಲು ಹೆಸರುಘಟ್ಟ ಹುಲ್ಲುಗಾವಲಿನ 5678 ಎಕರೆ ಪ್ರದೇಶವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ ಎಂದರು. ಬೆಂಗಳೂರು ಉತ್ತರದ ಯಲಹಂಕ ಬಳಿ 153 ಎಕರೆ ಭೂಮಿಯಲ್ಲಿ ಬೃಹತ್…
ಬೆಂಗಳೂರು: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ. ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ. ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ…
ಬಳ್ಳಾರಿ: ಈ ಬಾರಿ ಬಜೆಟ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಶಾಲೆಗಳ ಶಿಥಿಲ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು. ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವ…
ಬಳ್ಳಾರಿ: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ, ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು. ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಪರೀಕ್ಷೆ ಎದುರಿಸಲು ಮೂರು ಬಾರಿ ಅವಕಾಶ ನೀಡಲಾಗಿದೆ. ಇಲ್ಲಿಯೂ ಉತ್ತೀರ್ಣರಾಗದಿದ್ದರೆ ಅಂತಹ ಮಕ್ಕಳಿಗೆ ಶಾಲೆಗಳಲ್ಲಿ ಪುನಃ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಅಲ್ಲಿಯೂ ಸಹ ಎಲ್ಲಾ ಮಕ್ಕಳಂತೆ ಬಟ್ಟೆ, ಪುಸ್ತಕ, ಶೂ ಹಾಗೂ ಇತರೆ ಸೌಲಭಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.…
ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ಪೀಡಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ 3,500 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಅವರಿಗೆ ಶಿಕ್ಷಣದೊಂದಿಗೆ ನಿರಂತರವಾಗಿ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಪರಿಸರದಲ್ಲಿ ವಸತಿಯುತ ಶಾಲೆ (ಕ್ಯಾನ್ಸರ್ ರೆಸಿಡೆನ್ಸಿಯಲ್ ಸ್ಕೂಲ್) ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1934595121150107929 https://kannadanewsnow.com/kannada/kantara-chapter-1-faces-difficulties-again-tahsildar-issues-notice-3-day-deadline-for-response/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬೆಂಗಳೂರು: ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುತ್ತಿದೆ. ಇದರಿಂದ ವೈದ್ಯರ ಗೈರಿನ ಬಗ್ಗೆ ಸಾರ್ವಜನಿಕರ ದೂರುಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1934594226978738620 ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯು ಮೀಸಲಾದ ಹಾರ್ಡ್ವೇ ಸಾಧನಗಳ ಮೂಲಕ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣೀಕರಣವನ್ನು ಅವಲಂಭಿಸಿದೆ. ಹಾರ್ಡ್ ಸಾಧನಗಳಿಗೆ ಆಗಾಗ್ಗೆ ನಿರ್ವಹಣೆ, ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದ್ದು, ಇದು ಇಲಾಖೆಗೆ ಗಣನೀಯ ಪುನರಾವರ್ತಿತ ವೆಚ್ಚಗಳಿಗೆ ಕಾರಣವಾಗಿದೆ. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದಾಗಿ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಿಬ್ಬಂದಿ ಮತ್ತು ದೂರದ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಅಸಮರ್ಥತೆಗಳನ್ನು ಸೃಷ್ಟಿಸುತ್ತದೆ. ಈ ವ್ಯವಸ್ಥೆಯ ಸೀಮಿತ…













