Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ, ಸಮಯ ಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭಯದಂತ ಪಂಚಮಂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂಬುದಾಗಿ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಎಂ ಎಲ್ ಹಳ್ಳಿಯಲ್ಲಿ ಶ್ರೀ ರಾಮಕೃಷ್ಣ ವಿವೇಕಾನಂದ ವಸತಿ ವಿದ್ಯಾಲಯ, ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳು ಹಾಗೂ ಚಿಕ್ಕಮಗಳೂರು ಯುವ ಸ್ಪೂರ್ತಿ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದಂತ ವ್ಯಕ್ತಿತ್ವ ವಿಕಸನ ಮತ್ತು ವಿದ್ಯಾರ್ಥಿ ಜಾಗೃತ ಸಮಾವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ವಿದ್ಯಾರ್ಥಗಳು ಇತಿಹಾಸ ಮತ್ತು ಸಂಸ್ಕೃತಿ ತಿಳಿದುಕೊಳ್ಳಬೇಕು. ರಾಮಕೃಷ್ಣ ಪರಮಹಂಸರ ಸಮನ್ವಯತೆಯನ್ನು ಅರಿಯಬೇಕು. ಮಹಾತ್ಮಾ ಗಾಂಧೀಜಿಯವರ ಕಲ್ಯಾಣ ರಾಜ್ಯ, ಸರ್ವೋದಯ ಉದಯದ ಬಗ್ಗೆ ಅರಿವಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವೆಂದರು. ನನಗೆ ಕುವೆಂಪು ಅವರ ಸಮನ್ವಯತೆ, ಸರ್ವೋದಯ, ಪೂರ್ಣದೃಷ್ಠಿ ಪ್ರೇರಣೆ. ಆ ಮೂಲಕ ಮಾನವೀಯ ಗುಣಲಕ್ಷಣ ಬೆಳೆಸಿಕೊಳ್ಳುವಂತಾಗಬೇಕು. ಕಲಿಕೆಗೆ ವಿರಾಮವಿಲ್ಲ. ಅದೊಂದು ನಿರಂತರ ಪ್ರಕ್ರಿಯೆಯಾಗಿದೆ. ತಾಯಿಯ ಗರ್ಭಾಶಯದಿಂದ ಹೊರಬಂದಾಗಿನಿಂದ ಆರಂಭಗೊಂಡು,…
ಶಿವಮೊಗ್ಗ: 2ನೇ ಬಾರಿಗೆ ಸಾಗರ ತಾಲ್ಲೂಕು ಮೊಗವೀರ ಸಂಘದ ನೂತನ ಅಧ್ಯಕ್ಷರಾಗಿ ಸತೀಶ್ ಕೆ ಮೊಗವೀರ ಅವರು ಎರಡೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೊಗವೀರ ಸಮಾಜದ ಮುಖಂಡ ನಾಡೋಜ. ಜಿ. ಶಂಕರ್ ನೇತೃತ್ವದಲ್ಲಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾ ಉಪಸ್ಥಿತಿಯಲ್ಲಿ ಸಾಗರ ತಾಲ್ಲೂಕು ಮೊಗವೀರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ಸತೀಶ್ ಕೆ ಮೊಗವೀರ ಅವರ ಆಯ್ಕೆಯನ್ನು ಸಭೆಯ ಎಲ್ಲಾ ಮುಖಂಡರು ಸರ್ವಾನುಮತದಿಂದ ಅನುಮೋದಿಸಿದರು. ಈ ಮೂಲಕ ಸತೀಶ್ ಕೆ ಮೊಗವೀರ ಅವರು ಸಾಗರ ತಾಲ್ಲೂಕು ಮೊಗವೀರ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸಾಗರ ತಾಲ್ಲೂಕು ಮೊಗವೀರ ಸಮುದಾಯದ ಏಳಿಗೆಗಾಗಿ ಶ್ರಮೀಸುತ್ತೇನೆ. ನನಗೆ ಸಮುದಾಯದ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಂತ ನಾಡೋಜ ಜಿ.ಶಂಕರ್, ಜಯ ಸಿ ಕೋಟ್ಯಾ, ಉಡುಪಿ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಜಯಂತ್ ಅಮೀನ್, ಹಾಲಿ ಅಧ್ಯಕ್ಷರಾಗಿದ್ದಂತ ನಾಗರಾಜ್ ಬಿಲಗುಂಜಿ ಸೇರಿದಂತೆ ಸಮುದಾಯದ ಎಲ್ಲಾ ಮುಖಂಡರಿಗೆ ಸತೀಶ್ ಕೆ…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿತ್ತು. ಆ ಬಳಿಕ ಇಂದು ಮತ್ತೆ ಆರ್ಭಟಿಸಿದೆ. ಇಂದು ಸಂಜೆಯಿಂದ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇದರ ನಡುವೆ ಮುಂದಿನ ಮೂರು ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಗ್ರಾಮಾಂತರ, ನಗರ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವಂತ ಮುನ್ಸೂಚನೆಯನ್ನು ನೀಡಿರುವಂತ ಹವಾಮಾನ ಇಲಾಖೆ, ಗುಡುಗು ಸಿಡಿಲು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ. ಇತ್ತ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಮುಂಗಾರು ಮಳೆ ಆರ್ಭಟಿಸುತ್ತಿದೆ. ಜೂನ್.23ರವರೆಗೆ ಸಾಧಾರಣ ಮಳೆ, ಬೆಂಗಳೂರಿನಲ್ಲೂ ಸಾಧಾರಣ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. https://kannadanewsnow.com/kannada/children-should-work-to-increase-the-respect-of-parents-jay-c-kottiyan-president-of-dakshina-kannada-mogaveera-mahasabha/ https://kannadanewsnow.com/kannada/breaking-mother-daughter-body-found-in-farm-pond-in-bengaluru-alleges-husband-murder/
ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಶಿಸ್ತು, ಸಂಯಮ ಕಡಿಮೆಯಾಗುತ್ತಿದೆ. ಮಕ್ಕಳು ಸಂಸ್ಕಾರವನ್ನು ಕಲಿಯುವ ಕೆಲಸ ಆಗಬೇಕಿದೆ. ಆ ಮೂಲಕ ಪೋಷಕರ ಗೌರವ ಹೆಚ್ಚಿಸುವಂತ ಕೆಲಸ ಮಾಡುವಂತೆ ಆಗಲಿ ಎಂಬುದಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘ, ಉಡುಪಿಯ ಅಂಬಲವಾಡಿ ಡಾ.ಜಿ ಶಂಖರ್ ಫ್ಯಾಮಿಲಿ ಟ್ರಸ್ಟ್ ಇವರ ನೇತೃತ್ವದಲ್ಲಿ, ಉಡುಪಿ ಮೊಗವೀರ ಯುವ ಸಂಘಟನೆ, ಉಳ್ಳಾಲದ ಮಾರುತಿ ಜನ ಸೇವಾ ಸಂಘ, ಮಾರುತಿ ಯುವಕ ಸಂಘದ ಸಹಯೋಗದೊಂದಿಗೆ ವಾರ್ಷಿಕ ಮಹಾಸಭೆ ಹಾಗೂ ನೋಟ್ ಬುಕ್, ಸ್ಕಾಲರ್ ಶಿಪ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಮೊಗವೀರ ಸಮಾಜದ ಮುಖಂಡ ನಾಡೋಜ. ಜಿ. ಶಂಕರ್ ಶೈಶೈಕ್ಷಣಿಕವಾಗಿ ನಮ್ಮ ಸಮಾಜದವರನ್ನು ಮುಂಚೂಣಿಯಾಗಿ ತರಬೇಕು. ಅನಾರೋಗ್ಯ ಪೀಡಿತ ಸಮುದಾಯದ ಜನರಿಗೆ ಸಹಾಯ ಮಾಡಬೇಕು ಎಂಬುದಾಗಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ…
ಮಂಡ್ಯ: ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಅಬಕಾರಿ, ವಾಲ್ಮೀಕಿ ನಿಗಮದ ಬಳಿಕ ವಸತಿ ಇಲಾಖೆಯ ಭ್ರಷ್ಟಾಚಾರ ಬಯಲಿಗೆ ಬಂದಿದೆ. “ಮನೆಗಾಗಿ ಕಾಸು” ವಿಷಯ ಬಹಳ ಚರ್ಚಿತವಾಗುತ್ತಿದೆ. ಕಾಂಗ್ರೆಸ್ನವರೇ ಆದ ಶಾಸಕ ಬಿ.ಆರ್.ಪಾಟೀಲ್ ಅವರೇ ವಸತಿ…
ಬೆಂಗಳೂರು: ಪ್ರಜಾವಾಣಿಯಲ್ಲಿದ್ದ, ಸ್ವಯಂ ನಿವೃತ್ತಿ ಪಡೆದಿದ್ದ ಕುಸುಮಾ ಶಾನಭಾಗ ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ಆಗಿದ್ದಾಗ ಅದರ ವಿರುದ್ಧ ಹೋರಾಡಿ ಗೆದ್ದವರು. ಅವರ ಕುರಿತು ಪತ್ರಕರ್ತನ ಅನುಭವಗಳು ಸರಣಿಯಲ್ಲಿ ಬರೆದುದು ಇಲ್ಲಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನಿಂದ ಮೈಸೂರಿಗೆ ರೈಲಲ್ಲಿ ಹೊರಟಿದ್ದೆ. ನಾಲ್ಕಾರು ಪತ್ರಿಕೆಗಳನ್ನು ಓದುವುದು ನೋಡಿದ ಸಹಪ್ರಯಾಣಿಕರೊಬ್ಬರು ಪರಿಚಯಿಸಿಕೊಂಡು, ‘ಪತ್ರಕರ್ತರಾ?’ ಕೇಳಿದರು. ‘ಹೌದು’ ಎಂದೆ. ‘ಮಂಡ್ಯದವನು. ಕುಸುಮಾ ಶಾನಭಾಗ ಗೊತ್ತಾ?’ ಕೇಳಿದರು. ‘ಗೊತ್ತು ಸರ್. ಅವರ ಸಹೋದ್ಯೋಗಿ’ ಎಂದೆ. ‘ಅವರು ಪ್ರಜಾವಾಣಿಯ ಮಂಡ್ಯದ ವರದಿಗಾರರಾಗಿದ್ದರು’ ‘ಗೊತ್ತು ಸರ್’ ಎಂದೆ. ‘ಪ್ರಾಮಾಣಿಕ, ದಿಟ್ಟ ಪತ್ರಕರ್ತೆ’ ಎಂದು ಮೆಚ್ಚುಗೆಯಾಡಿದರು. ‘ಕೇಳಿದ್ದೆ ಸರ್. ನಿಮಗೆ ಗೊತ್ತಿದ್ದುದು ಹೇಳಿ ದಯವಿಟ್ಟು’ ಕೇಳಿದೆ. ಕುಸುಮಾ ಶಾನಭಾಗ ಅವರು ಮಂಡ್ಯದಲ್ಲಿ ಪ್ರಜಾವಾಣಿಯ ವರದಿಗಾರರಾಗಿದ್ದ ಸಂದರ್ಭ. ವಕೀಲರೂ ಲಂಕೇಶ್ ಪತ್ರಿಕೆಯ ವರದಿಗಾರರೂ ಆಗಿದ್ದ ಕಂಚನಹಳ್ಳಿ ಗಂಗಾಧರ ಮೂರ್ತಿ ಅವರ ಕೊಲೆಯಾಯಿತು. ಕೊಲೆಗೆ ಸಂಬಂಧಿಸಿದಂತೆ ಆರೋಪಿಯೆಂದು ಆಗ ಶಾಸಕರಾಗಿದ್ದವರಿಗೆ ಕೋಳ ಹಾಕಿ ಬಂಧಿಸಿದ ಫೋಟೋವನ್ನು…
ಬಿಜಿಂಗ್: ಚೀನಾದ ವಿಜ್ಞಾನಿಗಳು ಮಿಲಿಟರಿ ಕಾರ್ಯಾಚರಣೆಗಳಿಗಾಗಿ ನಿಜವಾಗಿಯೂ ಚಿಕ್ಕದಾದ, ಸೊಳ್ಳೆ ಗಾತ್ರದ ಡ್ರೋನ್ ಅನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ವರದಿ ಮಾಡಿದೆ. ಮಧ್ಯ ಚೀನಾದ ಹುನಾನ್ ಪ್ರಾಂತ್ಯದಲ್ಲಿರುವ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾಲಯದ (NUDT) ರೊಬೊಟಿಕ್ಸ್ ಪ್ರಯೋಗಾಲಯವು ಮೈಕ್ರೋ ಡ್ರೋನ್ ಅನ್ನು ಅಭಿವೃದ್ಧಿಪಡಿಸಿದೆ. ಮೈಕ್ರೋ ಡ್ರೋನ್ಗಳು ಮಿಲಿಟರಿ ಮತ್ತು ರಕ್ಷಣೆಯ ಜೊತೆಗೆ ವಿವಿಧ ಅನ್ವಯಿಕೆಗಳಿಗೆ ಬಳಸಬಹುದಾದ ಸಣ್ಣ ಮತ್ತು ಸಾಂದ್ರವಾದ ಡ್ರೋನ್ಗಳಾಗಿವೆ. ಅವುಗಳು ತಮ್ಮ ವಿಶಿಷ್ಟ ಸಾಮರ್ಥ್ಯಗಳೊಂದಿಗೆ ವಿವಿಧ ಕೈಗಾರಿಕೆಗಳು ಮತ್ತು ಅನ್ವಯಿಕೆಗಳನ್ನು ಕ್ರಾಂತಿಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ. ಮೂಲಮಾದರಿಯನ್ನು ಸಂಶೋಧಕರು ವಾರಾಂತ್ಯದಲ್ಲಿ CCTV 7 (ಚೀನಾ ಸೆಂಟ್ರಲ್ ಟೆಲಿವಿಷನ್ನ ಮಿಲಿಟರಿ ಚಾನೆಲ್) ನಲ್ಲಿ ಪ್ರಸಾರ ಮಾಡಿದರು ಎಂದು ವರದಿ ಗಮನಿಸಿದೆ. ನನ್ನ ಕೈಯಲ್ಲಿ ಸೊಳ್ಳೆಯಂತಹ ರೋಬೋಟ್ ಇದೆ. ಈ ರೀತಿಯ ಮಿನಿಯೇಚರ್ ಬಯೋನಿಕ್ ರೋಬೋಟ್ಗಳು ಯುದ್ಧಭೂಮಿಯಲ್ಲಿ ಮಾಹಿತಿ ವಿಚಕ್ಷಣ ಮತ್ತು ವಿಶೇಷ ಕಾರ್ಯಾಚರಣೆಗಳಿಗೆ ವಿಶೇಷವಾಗಿ ಸೂಕ್ತವಾಗಿವೆ ಎಂದು NUDT ಯ ವಿದ್ಯಾರ್ಥಿ ಲಿಯಾಂಗ್ ಹೆಕ್ಸಿಯಾಂಗ್ ತನ್ನ…
ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ…
ಸಾಮಾನ್ಯವಾಗಿ ಕಪ್ಪು ನಾಲಿಗೆ ಇರುವವರನ್ನು ಕಂಡರೆ ನಮಗೆ ಸ್ವಲ್ಪ ಭಯವಾಗುತ್ತದೆ. ಅವರು ನಮ್ಮನ್ನು ಏನಾದರೂ ಬೈದರೆ, ಅದು ಕೆಲಸ ಮಾಡುತ್ತದೆ ಎಂಬ ಭಾವನೆ ನಮ್ಮಲ್ಲಿದೆ. ಕಪ್ಪು ನಾಲಿಗೆಯ ಶಾಪ ನಿಜವಾಗಿಯೂ ಕೆಲಸ ಮಾಡುತ್ತದೆಯೇ? ಸಾಯುವುದಿಲ್ಲವೇ? ಕಪ್ಪು ನಾಲಿಗೆಯುಳ್ಳವರು ನಮ್ಮನ್ನು ಶಪಿಸಿದರೆ ಆ ಶಾಪದಿಂದ ಪಾರಾಗಲು ನಾವು ಏನು ಮಾಡಬೇಕು ಎಂಬ ಆಧ್ಯಾತ್ಮಿಕ ಮಾಹಿತಿಯನ್ನು ಈ ಪೋಸ್ಟ್ ಮೂಲಕ ನಾವು ತಿಳಿಯಲಿದ್ದೇವೆ . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ,…
ಹಾಸನ: ಒಂದೆಡೆ ಇರಾನ್-ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಮತ್ತೊಂದೆಡೆ ಭಾರತ-ಪಾಕ್ ನಡುವೆ ಯುದ್ಧ ನಡೆದು ಕದನ ವಿರಾಮ ಏರ್ಪಟ್ಟಿದೆ. ಇದರ ನಡುವೆ ಕೋಡಿಮಠ ಶ್ರೀಗಳು ರಾಜ್ಯ, ದೇಶದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದಂತ ದುಃಖ ಬರಲಿದೆ ಎಂದರು. ಇನ್ನೂ ಮೇಘ ಸ್ಪೋಟ, ಯುದ್ಧದ ಜೊತೆಗೆ ಅರಸನಾಲಯಕ್ಕೆ ಕಾರ್ಮೋಡವು ಕಾದಿದೆ. ಇದು ರಾಜ್ಯ, ದೇಶಕ್ಕೂ ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು. ಈ ಹಿಂದೆ ಎರಡು ಮೂರು ಪ್ರಧಾನ ಮಂತ್ರಿಗಳ ಕೊಲೆ ಆಗ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದೆನು. ಅದು ಈಗ ಆಗಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎದ್ದಿದೆ. ಅದು ಕೂಡ ಆಗಲಿದೆ ಎಂದು ತಿಳಿಸಿದರು. ವಿಶ್ವದಲ್ಲಿ ನಡೆಯುತ್ತಿರುವಂತ ಯುದ್ಧ ನಿಲ್ಲೋದು ಸಂವತ್ಸರ ಪರ್ವದಲ್ಲಿ ಕಷ್ಟವಾಗಿದೆ. ಈ ದ್ವೇಷ, ಅಸೂಯೆಗಳ ಮಧ್ಯದಲ್ಲಿ ಒಂದಿಬ್ಬರು ಬಲಿಯಾಗುತ್ತಾರೆ ಎಂಬುದಾಗಿ ಸ್ಪೋಟಕ…














