Author: kannadanewsnow09

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಬೆಂಗಳೂರು ನಗರ ವಿವಿ, ಇನ್ಮುಂದೆ ಡಾ.ಮನಮೋಹನ್ ಸಿಂಗ್ ವಿವಿ ಎಂಬುದಾಗಿ ಮರುನಾಮಕರಣವಾಗಲಿದೆ. ಬೆಂಗಳೂರು ನಗರ ವಿವಿಯ ಹೆಸರು ಮರು ನಾಮಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ವಿಧೇಯಕದ ಬಗ್ಗೆ ಚರ್ಚೆಯ ನಂತ್ರ ಅಂಗೀಕಾರವನ್ನು ನೀಡಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಹೆಸರು ಬದಲಾವಣೆಯಾಗಲಿದೆ. ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕವು ವಿಧಾನ ಪರಿಷತ್ತಿನಲ್ಲೂ ಅಂಗೀಕಾರಗೊಂಡರೇ ಡಾ.ಮನಮೋಹನ್ ಸಿಂಗ್ ವಿವಿ ಎಂಬುದಾಗಿ ಬೆಂಗಳೂರು ನಗರ ವಿವಿ ಮರು ನಾಮಕರಣವಾಗಲಿದೆ. https://kannadanewsnow.com/kannada/dharmasthala-case-this-is-veerendra-hegdes-first-reaction/ https://kannadanewsnow.com/kannada/the-special-state-cabinet-meeting-scheduled-for-today-at-5-pm-has-been-postponed-to-730-pm/

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಅವರು ರಾಜ್ಯ ಸರ್ಕಾರದ ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ನಾನು ಸಿಬಿಐ ತನಿಖೆಯ ವೇಳೆಯಲ್ಲೂ ಸಂಪೂರ್ಣವಾಗಿ ಸಹಕಾರ ನೀಡಿದ್ದಾಗಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು. ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. https://twitter.com/PTI_News/status/1957750961692139638 ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಧರ್ಮಸ್ಥಳಕ್ಕೆ ಕಳಂಕ ತರಲು ಕೆಲವರು ಯತ್ನಿಸುತ್ತಿದ್ದಾರೆ. ಎಸ್ಐಟಿ ಅಧಿಕಾರಿಗಳ ತನಿಖಾ ವರದಿಗಾಗಿ ನಾವು ಕಾಯುತ್ತಿದ್ದೇವೆ. ಎಸ್ಐಟಿ ಸತ್ಯ ಹೊರಗೆ ತರುತ್ತೆ ಎಂದು ವೀರೇಂದ್ರ ಹೆಗಡೆ ಎಸ್ಐಟಿ ತನಿಖೆಯನ್ನು ಸ್ವಾಗತಿಸಿದರು. ಅಂದಹಾಗೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್…

Read More

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ಇಂದು ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಈ ಸಭೆಯನ್ನು 5 ಗಂಟೆಗೆ ನಿಗದಿ ಪಡಿಸಿದ್ದನ್ನು, ಸಂಜೆ 7.30ಕ್ಕೆ ಮುಂದೂಡಲಾಗಿದೆ. ರಾಜ್ಯ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟದ ವಿಶೇಷ ಸಭೆಯನ್ನು ಸಂಜೆ 7.30ಕ್ಕೆ ಮುಂದೂಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

Read More

ಕೊಪ್ಪಳ: ಜಿಲ್ಲೆಯ ಜೀವನಾಡಿ ತುಂಗಭದ್ರಾ ಡ್ಯಾಂ ಭರ್ತಿಯಾಗಿದೆ. ಹೀಗಾಗಿ ತುಂಗಭದ್ರಾ ಡ್ಯಾಂನಿಂದ ನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಯಶ ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಭರ್ತಿಯಾಗಿದೆ. ಹೀಗಾಗಿ ಜಲಾಶಯದ 26 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದೆ. ತುಂಗಭದ್ರಾ ಡ್ಯಾಂನ 7 ಗೋಟ್ ಜಾಮ್ ಹಿನ್ನಲೆಯಲ್ಲಿ 26 ಗೇಟ್ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ಡ್ಯಾನ 11, 18, 20, 24, 28ನೇ ಗೇಟ್ ಜಾಮ್ ಆಗಿದೆ. 19ನೇ ಗೇಟ್ ಮೂಲಕ ಅಲ್ಪ ಪ್ರಮಾಣದ ನೀರು ನದಿಗೆ ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/bengaluru-cylinder-blast-case-gas-leak-caused-the-blast-throughout-the-night/

Read More

ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಬಳಿಯ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಲಿಂಡರ್ ಸ್ಪೋಟ ಘಟನೆ ನಡೆದಿತ್ತು. ಈ ದುರಂತಕ್ಕೆ ರಾತ್ರಿಯೆಲ್ಲಾ ಗ್ಯಾಸ್ ಲೀಕ್ ಆಗಿರೋದೇ ಕಾರಣ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತಂತೆ ಆಡುಗೋಡಿ ಪೊಲೀಸರಿಂದ ತನಿಖೆ ನಡೆಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಮನೆಯಲ್ಲಿ ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿದ್ದು, ಬೆಳಗ್ಗೆ ಮಗು ಟಿವಿ ಆನ್ ಮಾಡಿದಂತ ಸಂದರ್ಭದಲ್ಲಿ ಸ್ಪೋಟಗೊಂಡಿದೆ ಎಂಬುದಾಗಿ ತಿಳಿದು ಬಂದಿದೆ. ಆಗಸ್ಟ್.15ರಂದು ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಗೂಢ ಸ್ಪೋಟ ಘಟನೆ ನಡೆದಿತ್ತು. ತನಿಖೆ ನಡೆಸಿದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದಾಗಿ ತಿಳಿದು ಬಂದಿತ್ತು. ಈ ದುರಂತದಲ್ಲಿ ಅಂದೇ ಓರ್ವ ಬಾಲಕ ಸಾವನ್ನಪ್ಪಿದ್ದನು. ನಿನ್ನೆ ಬಾಲಕನ ತಾಯಿ, ಸಹೋದರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/invitation-for-recruitment-application-for-the-positions-of-anganwadi-worker-and-assistant/

Read More

ಚಿತ್ರದುರ್ಗ: ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ, 53 ಸಹಾಯಕಿರು ಸೇರಿ 64 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‍ಸೈಟ್ https://karnemakaone.kar.inc.in/abcd/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು. ಮೀಸಲಾತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ನಗರದ ಟಿ.ಬಿ.ವೃತ್ತದಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಭವನದ ಕಟ್ಟಡದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ಈ ವರ್ಷದಿಂದ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ  ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದರು. https://twitter.com/KarnatakaVarthe/status/1957419072628379860

Read More

ಬೆಂಗಳೂರು : ಜಂಗಲ್‌ ಅಥವಾ ಬಿ-ಖರಾಬು ಜಮೀನನ್ನು ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ. ಈ ಹಿಂದೆ ಇಂತಹ ಕೆಲವು ಪ್ರಕರಣಗಳು ಕಂಡು ಬಂದಿದ್ದು ಈ ಬಗ್ಗೆ ತನಿಖೆಯನ್ನೂ ನಡೆಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ” ಜಂಗಲ್‌ ಅಥವಾ ಬಿ-ಖರಾಬು ಜಮೀನು ಮಂಜೂರಾತಿ ವಿಚಾರದಲ್ಲಿ ಯಾವುದೋ ಕಾಲದಲ್ಲಿ ತಪ್ಪಾಗಿದೆ. ಆಗಿನ ಸರ್ಕಾರ ಸರಿಯಾದ ಹೆಚ್ಚೆ ಇಟ್ಟಿಲ್ಲ.ಆದರೆ, ಅದನ್ನು ನಾವು ಸರಿ ಮಾಡುವ ಕೆಲಸಕ್ಕೆ ಮುಂದಾಗಿದ್ದೇವೆ. ಈಗಾಗಲೇ ಬೆಂಗಳೂರು ವಿಭಾಗ ಪ್ರದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಇದರ ನೈಜತೆ ಪರಿಶೀಲನೆಯ ಜವಾಬ್ದಾರಿ ಕೊಟ್ಟಿದ್ದೇವೆ. ತನಿಖೆ ಆರಂಭವಾಗಿದೆ. ಆದರೆ, ಪ್ರಗತಿ ಆಗಿಲ್ಲ. ತನಿಖೆಯನ್ನು ಶೀಘ್ರದಲ್ಲಿ ಮುಗಿಸಲು ಸೂಚಿಸಿದ್ದೇನೆ” ಎಂದು ತಿಳಿಸಿದರು. ಏತನ್ಮಧ್ಯೆ ಇಂತಹ ಜಮೀನುಗಳು ಪೋಡ್ ಆಗುವುದು ಅಥವಾ ಭೂ ವ್ಯವಹಾರ ನಿಲ್ಲಿಸಬೇಕು ಎಂಬ ಕೂಗೂ ಕೇಳಿಬರುತ್ತಿದೆ. ಆದರೆ,…

Read More

ಬೆಂಗಳೂರು: ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಸವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು…

Read More

ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಮಾಜಿ ಸೈನಿಕನೊಬ್ಬ ಹಾರಿದ್ದಾನೆ. ನಂತ್ರ ಮನಸ್ಸು ಬದಲಿಸಿ ಮರದ ಕೊಂಬೆ ಹಿಡಿದುಕೊಂಡು ಜೋತಾಡಿ ನೆರವಿಗಾಗಿ ಮೊರೆಯಿಟ್ಟ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ಬಳಿಯ ಕಾವೇರಿ ನದಿಗೆ ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಮಾಜಿ ಸೈನಿಕ ಭೃಂಗೇಶ್ ಹಾರಿದ್ದಾನೆ. ಆದರೇ ಕಾವೇರಿ ನದಿಗೆ ಹಾರಿದ ಬಳಿಕ ಮನಸ್ಸು ಬದಲಾಗಿ ಬದುಕೋದಕ್ಕೆ ನಿರ್ಧರಿಸಿದ್ದಾನೆ. ಬದುಕೋದಕ್ಕೆ ನಿರ್ಧರಿಸಿದಂತ ಮಾಜಿ ಸೈನಿಕ ಭೃಂಗೇಶ್ ಸಮೀಪದಲ್ಲೇ ಇದ್ದಂತ ಮರದ ಕೊಂಬೆ ಹಿಡಿದುಕೊಂಡು ರಕ್ಷಣೆಗಾಗಿ ಮೊರೆಯಿಟ್ಟಿದ್ದಾನೆ. ಈ ಮೊರೆಯನ್ನು ಕೇಳಿದಂತ ಅಂಬಿಗನೊಬ್ಬ ಮಾಜಿ ಸೈನಿಕ ಭೃಂಗೇಶ್ ರಕ್ಷಿಸಿದ್ದಾರೆ. ಅಂದಹಾಗೇ ಸಾಲದ ಬಾಧೆಯಿಂದ ಮಾಜಿ ಸೈನಿಕ ಭೃಂಗೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾವೇರಿ ನದಿ ದಡಕ್ಕೆ ತೆರಳಿ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ಕೊಚ್ಚಿ ಹೋಗಿದ್ದಾರೆ. ನಂತ್ರ ಮನಸ್ಸು ಬದಲಿಸಿ ಮರದ ಕೊಂಬೆಯನ್ನು ಹಿಡಿದುಕೊಂಡು ರಕ್ಷಣೆಗಾಗಿ ಮೊರೆಯಿಟ್ಟಾಗ ಅಂಬಿಗನ ಸಹಾಯದಿಂದ ಬದುಕಿ ಬಂದಿದ್ದಾರೆ. https://kannadanewsnow.com/kannada/bengaluru-cylinder-explosion-case-two-more-die-today-without-treatment-death-toll-rises-to-3/ https://kannadanewsnow.com/kannada/tomorrow-there-will-be-a-power-outage-in-the-areas-of-ballari-district/

Read More