Author: kannadanewsnow09

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India – UIDAI) ಆಧಾರ್ ನೋಂದಣಿ ( Aadhaar registration ) ಮತ್ತು 2025–26ರ ಮೌಲ್ಯಮಾಪನ ವರ್ಷಕ್ಕೆ ಅನ್ವಯವಾಗುವ ಮಾರ್ಪಾಡುಗಳಿಗಾಗಿ ಪರಿಷ್ಕೃತ ಮಾನ್ಯ ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಧಾರ್ ಸುತ್ತಲಿನ ಪ್ರಮುಖ ನಿಯಮಗಳಲ್ಲಿ ಒಂದೆಂದರೆ, ಪ್ರತಿಯೊಬ್ಬ ವ್ಯಕ್ತಿಯು ಒಂದೇ ಆಧಾರ್ ಸಂಖ್ಯೆಯನ್ನು ಮಾತ್ರ ಹೊಂದಲು ಅನುಮತಿಸಲಾಗಿದೆ. ಒಬ್ಬ ವ್ಯಕ್ತಿಯು ಬಹು ಆಧಾರ್ ಐಡಿಗಳನ್ನು ಪಡೆದಿರುವ ಸಂದರ್ಭಗಳಲ್ಲಿ – ಬಹುಶಃ ವ್ಯವಸ್ಥೆಯ ದೋಷಗಳು ಅಥವಾ ಪುನರಾವರ್ತಿತ ಅರ್ಜಿಗಳಿಂದಾಗಿ – ಬಯೋಮೆಟ್ರಿಕ್ ವಿವರಗಳೊಂದಿಗೆ ರಚಿಸಲಾದ ಮೊದಲ ಆಧಾರ್ ಮಾತ್ರ ಸಕ್ರಿಯ ಮತ್ತು ಮಾನ್ಯವಾಗಿರುತ್ತದೆ. ಹೆಚ್ಚುವರಿಯಾಗಿ, ಆಧಾರ್ ಸೇವೆಗಳಿಗೆ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯನ್ನು ಆಧಾರ್ (ದಾಖಲಾತಿ ಮತ್ತು ನವೀಕರಣ) ಮೊದಲ ತಿದ್ದುಪಡಿ ನಿಯಮಗಳು, 2025 ರ ಪ್ರಕಾರ ಪರಿಷ್ಕರಿಸಲಾಗಿದೆ. ನವೀಕರಿಸಿದ ಮಾರ್ಗಸೂಚಿಗಳು ಈಗ ಗುರುತು, ವಿಳಾಸ, ಜನ್ಮ ದಿನಾಂಕ ಮತ್ತು ಕುಟುಂಬ ಸಂಬಂಧಗಳನ್ನು ಪರಿಶೀಲಿಸಲು ಬಳಸಬಹುದಾದ ದಾಖಲೆಗಳ ಪ್ರಕಾರಗಳನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸುತ್ತವೆ. ಪರಿಶೀಲನೆಗೆ…

Read More

ಯಾದಗಿರಿ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದರೇ, 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿಯ ಸುರಪುರ ತಾಲ್ಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಂತ ದೇವಿಕೆಮ್ಮ ಹೊಟ್ಟಿ, ವೆಂಕಮ್ಮ, ರಾಮಣ್ಣ ಪೂಜಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 10 ದಿನಗಳ ಹಿಂದೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇನ್ನೂ ತಿಪ್ಪನಟಗಿ ಗ್ರಾಮದಲ್ಲಿ 20ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿದ್ದರಿಂದ ಅಸ್ಪಸ್ಥರಾಗಿದ್ದರೇ, 6 ಮಂದಿ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/15-lakhs-financial-assistance-to-the-ashraf-family-who-was-killed-in-mangalore/ https://kannadanewsnow.com/kannada/breaking-icc-ceo/

Read More

ಮಂಗಳೂರು: ಕೇರಳ ಮೂಲದ ಅಶ್ರಫ್ ಮಂಗಳೂರಲ್ಲಿ ಗುಂಪು ದಾಳಿಯಲ್ಲಿ ಬಲಿಯಾಗಿದ್ದರು. ಹೀಗೆ ಹತ್ಯೆಗೆ ಒಳಗಾದಂತ ಅಶ್ರಫ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಹಾಗೂ ಸ್ಪೀಕರ್ ಯು.ಟಿ ಖಾದರ್ ಜೊತೆಗೂಡಿ 15 ಲಕ್ಷ ಆರ್ಥಿಕ ನೆರವನ್ನು ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ,ಗುಂಪು ಹತ್ಯೆ ಅಶ್ರಫ್ ಕುಟುಂಬಸ್ಥರೊಂದಿಗೆ ಸಭಾಧ್ಯಕ್ಷ ಯು.ಟಿ.ಖಾದರ್,ಸಚಿವ ಜಮೀರ್ ಅಹ್ಮದ್ ಖಾನ್,ಎಐಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಚರ್ಚೆ ಹಾಗೂ ಪರಿಹಾರ ವಿತರಣೆ ಮಾಡಿದರು. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇರಳ ಸಂಸದ ಕೆ.ಸಿ.ವೇಣುಗೋಪಾಲ್ ರವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು.ಟಿ.ಖಾದರ್,ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ.ಕೆ.ಹರಿಪ್ರಸಾದ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾಂಗ್ರೆಸ್ ಮುಖಂಡರಾದ ಜಿ ಎ ಬಾವ ಹಾಗೂ ಮಂಜೇಶ್ವರ ಶಾಸಕರಾದ ಎ ಕೆ ಎಂ ಅಶ್ರಫ್, ರವರು ಗುಂಪು ಹಲ್ಲೆಯಲ್ಲಿ ಹತ್ಯೆಗೀಡಾದ ಅಶ್ರಫ್ ರವರ ಕುಟುಂಬಸ್ಥರೊಂದಿಗೆ…

Read More

ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ ಆಗುವುದಿಲ್ಲ; 15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಯಾರೇ ಮುಖ್ಯಮಂತ್ರಿ ಆದರೂ ರಾಜ್ಯವು ಅಭಿವೃದ್ಧಿ ಕಾಣಲು ಸಾಧ್ಯವಾಗದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆ 100…

Read More

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವಂತ ಘಟನೆ ನಡೆದಿದೆ. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಈ ವಿಚಾರವಾಗಿ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿ ಎಂಬುವರು ಪ್ರಶ್ನಿಸಿದ್ದರು. ಹೀಗೆ ಪ್ರಶ್ನಿಸಿದ್ದಕ್ಕೆ ಸೋಹಿಲ್ ಇನಾಮದಾರ್ ಸೇರಿದಂತೆ ಇಬ್ಬರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ಬೆಳಗಾವಿಯ ಕೋರ್ಟ್ ಆವರಣದಲ್ಲೇ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿಯ ಮೇಲೆ ಇಬ್ಬರು ಆರೋಪಿಗಳುಕಲ್ಲು, ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳ ಹಲ್ಲೆಯಿಂದಾಗಿ ವಕೀಲ ಜಹೀರ್ ತಲೆ, ಕಿವಿ, ಮೂಗು, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದಾವೆ. ಜಮೀನು ವ್ಯಾಜ್ಯದ ಕೇಸ್ ವಿಚಾರಣೆ ಮುಗಿಸಿ ಕೋರ್ಟ್ ನಿಂದ ಹೊರಬರುತ್ತಿದ್ದಂತ ವೇಳೆಯಲ್ಲಿ ಅವರ ಮೇಲೆ ಏಕಾಏಕಿ ಹಲ್ಲೆಯಾಗಿದೆ. ಹಲ್ಲೆ ನಡೆಸಿದಂತ ನಂತ್ರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳು ವಕೀಲ ಜಹೀರ್ ಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/opposition-party-leaders-gain-confidence-to-present-the-greater-bangalore-authority-report-in-the-cabinet-meeting-dks/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/

Read More

ಬೆಂಗಳೂರು: “ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ…

Read More

ಬೆಂಗಳೂರು: ನಗರದಲ್ಲಿ ಪತ್ನಿಗೆ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಐಎಸ್ ಡಿ ಡಿವೈಎಸ್ಪಿ ಶಂಕ್ರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಕಾಲೇಜಿಗೆ ಹೋಗುತ್ತಿರುವ ಮಗನಿದ್ದರೂ ಬೇರೊಬ್ಬ ಹೆಣ್ಣಿನ ಸಂಪರ್ಕ ಮಾಡಿದ್ದಂತ ಐಎಸ್ ಡಿ ಡಿವೈಎಸ್ಪಿ ಶಂಕ್ರಪ್ಪ, ಪತ್ನಿಗೆ ಹಲ್ಲೆ, ಕಿರುಕುಳ ನೀಡುತ್ತಿದ್ದರು. ಅಲ್ಲದೇ ಮಾನಸಿಕ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಅಕ್ರಮವಾಗಿ ಬೇರೊಂದು ಹೆಣ್ಣಿನ ಜೊತೆಗೆ ಮದುವೆಯಾಗಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂಬುದಾಗಿ ಅವರ ಪತ್ನಿ ಡಿಜಿ ಮತ್ತು ಐಜಿಪಿಗೆ ದೂರು ನೀಡಿದ್ದಾರೆ. ನನ್ನ ಸಂಸಾರ ಹಾಳು ಮಾಡಬೇಡಿ ಎಂಬುದಾಗಿಯೂ ಡಿವೈಎಸ್ಪಿ ಪತ್ನಿ ಪರಿ ಪರಿಯಾಗಿ ಬೇಡಿದರೂ ಕೇಳದೇ ಬೆದರಿಕೆ ಹಾಕಿದ್ದಾರೆ ಎಂಬುದಾಗಿಯೂ ಆರೋಪಿಸಿದ್ದಾರೆ. ಈ ದೂರು ಆಧರಿಸಿ ಬೆಂಗಳೂರಿನ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಎಸ್ ಡಿ ಡಿವೈಎಸ್ಪಿ ಶಂಕ್ರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/two-people-fell-victim-to-a-heart-attack-in-tumakuru-city/ https://kannadanewsnow.com/kannada/breaking-icc-ceo/

Read More

ತುಮಕೂರು: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ತುಮಕೂರು ನಗರದಲ್ಲಿ ಹೃದಯಾಘಾತದಿಂದ ಜಯಂತ್(31) ಮತ್ತು ಶ್ರೀಧರ್(52) ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರು ನಗರದ ಹನುಮಂತಪುರದ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಮುಂದುವರೆದಿದೆ. https://kannadanewsnow.com/kannada/what-does-the-report-submitted-by-the-technical-advisory-committee-to-the-government-say-about-the-series-of-deaths-due-to-heart-attacks/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/

Read More

ಬೆಂಗಳೂರು: ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನ ನಡೆಸಿದೆ. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ, ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ. ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿತ್ತು. ಅದರಲ್ಲೂ ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಿದ್ದರು. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ.…

Read More

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾಡು ಮಾಡಲಾಗಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ನಮಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು. ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂತವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದರು. ಅಕ್ರಮ ನುಸುಳುಕೋರರ ಬಗ್ಗೆ ಮೃದು ದೋರಣೆ ತೋರಲು ಏನು ಉಪಯೋಗ ಇದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಓಟ್ ಹಾಕಿಸಿಕೊಳ್ಳುವಂತ ಪರಿಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಳೆದ ವಾರ ನನ್ನನ್ನು…

Read More