Subscribe to Updates
Get the latest creative news from FooBar about art, design and business.
Author: kannadanewsnow09
ಬಾಗಲಕೋಟೆ : ಈಗಾಗಲೇ ರಾಜ್ಯ, ದೇಶ, ಪ್ರಪಂಚದ ಬಗ್ಗೆ ಶಾಕಿಂಗ್ ಭವಿಷ್ಯ ನುಡಿದಿದ್ದಂತ ಕೋಡಿಮಠದ ಸ್ವಾಮೀಜಿ, ಇದೀಗ ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಅದೇ ಎರಡು ಮೂರು ಮಹಾನ್ ನಾಯಕರಿಗೆ ಅಪಮೃತ್ಯು ಎದುರಾಗಲಿದೆ. ದೆಹಲಿಗೂ ಆಪತ್ತು ಕಾದಿದೆ ಅಂತ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗೌರಿಶಂಕರ ಶಿಖರ ಶಿವಾ ಶಿವಾ ಎಂದೀತು. ಹಿಮಾಲಯದಲ್ಲಿ ಸುನಾಮಿ ಆದೀತು. ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂಬುದಾಗಿ ಆಘಾತ ಕಾರಿ ಭವಿಷ್ಯ ನುಡಿದಿದ್ದಾರೆ. ಇದಷ್ಟೇ ಅಲ್ಲದೇ ದೊಡ್ಡ ನಾಯಕರಿಗೂ ಸಾವು ಎದುರಾಗಲಿದೆ. ಎರಡು ಮೂರು ನಾಯಕರ ಅಪಮೃತ್ಯು ಆಗಲಿದೆ. ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದೆ ಎಂಬುದಾಗಿ ಹೇಳಿದ್ದಾರೆ. 🔥 ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ 🔥 👇 https://chat.whatsapp.com/LE44dr3kKYG7AHE6b6ksTh
ಜಮ್ಮು,: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭಾನುವಾರ ವಾಹನವೊಂದು ರಸ್ತೆಯಿಂದ ಜಾರಿ 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಹುತಾತ್ಮರರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ಟ್ರಕ್ ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಪೊಲೀಸ್, ಎಸ್ಡಿಆರ್ಎಫ್ ಮತ್ತು ಸ್ಥಳೀಯ ಸ್ವಯಂಸೇವಕರು ತಕ್ಷಣ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಮತ್ತು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಮೃತರನ್ನು ಸಿಪಾಯಿಗಳಾದ ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದ್ದು, ಅವರ ಶವಗಳನ್ನು ಕಮರಿಯಿಂದ ಹೊರತೆಗೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್ ಡಿ . ಪಿ ಯು ಕಾಲೇಜ್ ಆವರಣ, ಅಕ್ಕಿ ಆಲೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು.ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ನನಗೆ ತಿಳಿದಿಲ್ಲ. ನಿನ್ನೆ ಸಚಿವ ದಿನೇಶ್ ಗುಂಡೂರಾವ್ ಹಾಗು ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ವಿಜಯನಗರ ಜಿಲ್ಲೆಯಲ್ಲಿ…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿರುವಂತ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅದ್ಧೂರಿಯಾಗಿ ಭಗೀರಥ ಜಯಂತಿಯನ್ನು ಆಚರಣೆ ಮಾಡಲಾಯಿತು. ಸಾಗರ ಅಶೋಕ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ಸೇವಾ ಪ್ರತಿಷ್ಠಾನ ರಿ. ಹಾಗೂ ಉಪ್ಪಾರ ಸಮಾಜದ ವತಿಯಿಂದ ಇಂದು ಆಶೋಕ ರಸ್ತೆಯ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಗೀರಥ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪ್ಪಾರ ಸಮಾಜದ ಅಧ್ಯಕ್ಷರಾದ ಮಲ್ಲೇಶಪ್ಪ, ಉಪಾಧ್ಯಕ್ಷರಾದ ನಾಗರಾಜ್ ಕೆ, ಕಾರ್ಯದರ್ಶಿ ಹನುಮಂತ ಎಲ್, ಖಜಾಂಜಿ ರವಿ ಪೂಜಾರ್ ಹಾಗೂ ಸದಸ್ಯರಾದ ಮಂಜುನಾಥ್ ಆರ್, ನೀಲಪ್ಪ ವೈ, ಭಾಸ್ಕರ್ ಕೆ, ನಾಗಭೂಷಣ್ ಉಪ್ಪಾರ್, ಮಂಜುನಾಥ್ ಎನ್, ರಾಘು ಯು, ಮಂಜುನಾಥ್, ಶರತ್, ನವೀನ್ ಉಪ್ಪಾರ ಸಮಾಜದವರು ಹಾಗೂ ಸಾರ್ವಜನಿಕರು ಹಾಜರಿದ್ದರು. https://kannadanewsnow.com/kannada/shimoga-markaz-school-sagar-has-scored-100-results-in-sslc-examination-for-the-seventh-time-in-a-row/
ನವದೆಹಲಿ: ವಾರಾಣಸಿಯಲ್ಲಿ 128 ವರ್ಷದ ಯೋಗ ಗುರು ಬಾಬಾ ಶಿವಾನಂದ್ ಶನಿವಾರ ರಾತ್ರಿ 8.45ಕ್ಕೆ ನಿಧನರಾದರು. ಅವರು ಕಳೆದ ಮೂರು ದಿನಗಳಿಂದ BHUನಲ್ಲಿ ದಾಖಲಾಗಿದ್ದರು, ಅವರಿಗೆ ಉಸಿರು ಸೇರುವುದರಲ್ಲಿ ಕಷ್ಟವಾಗಿದ್ದು. ಬಾಬಾ ಶಿವಾನಂದ್ ಅವರು ತಮ್ಮ ಸಂಪೂರ್ಣ ಜೀವನವನ್ನು ಯೋಗ ಸಾಧನೆಗೆ ಅರ್ಪಿಸಿದರು. ಪ್ರಧಾನಿ ಮೋದಿ ಸಹ ಶಿವಾನಂದ್ ಬಾಬಾ ಇವರು ಯೋಗ ಸಾಧನೆಗೆ ಅಭಿಮಾನಿ ಇದ್ದವರು. ಅವರಿಗೆ 21 ಮಾರ್ಚ್, 2022 ರಂದು ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ಅವರು ಪದ್ಮಶ್ರೀ ಪ್ರಶಸ್ತಿ ಪಡೆದ ಅತ್ಯಂತ ಹಿರಿಯ ವ್ಯಕ್ತಿಯಾಗಿ ಪರಿಗಣಿಸುತ್ತಾರೆ. ಪ್ರಧಾನಮಂತ್ರಿ ನರೆಂದ್ರ ಮೋದಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಅವರು X ಮೇಲೆ ಪೋಸ್ಟ್ ಮಾಡಿದ್ದು, ಯೋಗ ಸಾಧಕ ಮತ್ತು ಕಾಶಿ ನಿವಾಸಿ ಶಿವಾನಂದ ಬಾಬಾ ಜಿಯವರ ನಿಧನವಿಂದ ಅತ್ಯಂತ ದುಖಿತರಾಗಿದ್ದೇನೆ. ಯೋಗ ಮತ್ತು ಸಾಧನೆಗೆ ಸಮರ್ಪಿತ ಅವರ ಜೀವನ ದೇಶದ ಪ್ರತಿಯೊಬ್ಬ ಪೀಳಿಗೆಗೆ ಪ್ರೇರಣಾ ನೀಡುತ್ತಿರುತ್ತದೆ. ಯೋಗದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಲು ಇವರನ್ನು ಪದ್ಮಶ್ರೀ ಗೌರವದಿಂದ ಕೂಡ…
ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಎಕ್ಸ್ ಖಾತೆಗಳನ್ನು ಭಾರತ ಭಾನುವಾರ ನಿರ್ಬಂಧಿಸಿದೆ. ಪಹಲ್ಗಾಮ್ ದಾಳಿಯ ನಂತ್ರ ಭಾರತದಲ್ಲಿ ಪಾಕಿಸ್ತಾನದ ಹಲವು ಯೂಟ್ಯೂಬ್ ಚಾಲನ್ ನಿರ್ಬಂಧಿಸಲಾಗಿತ್ತು. ಪಾಕಿಸ್ತಾನವು ಭಾರತದ ಬಂದರು ಬಳಕೆಯನ್ನು ನಿಷೇಧಿಸಿದೆ. ಇದೀಗ ಪಾಕಿಸ್ತಾನ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಎಕ್ಸ್ ಖಾತೆಗಳನ್ನು ಭಾರತ ಭಾನುವಾರ ನಿರ್ಬಂಧಿಸಿದೆ.
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಸಾಗರ ನಗರದ ಮರ್ಕಜ್ ಶಾಲೆಯು ಸತತ 7ನೇ ಬಾರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ಮಹತ್ವದ ಸಾಧನೆ ಮಾಡಿದೆ. ಸಾಗರದ ತ್ಯಾಗರ್ತಿ ಕ್ರಾಸಿನಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಮರ್ಕಜುಲ್ ಉಲೂಮ್ ಎಜ್ಯುಕೇಷನಲ್ ಅಕಾಡೆಮಿ ಸಂಸ್ಥೆಯ ಆಯಿಷಾ ಹೈದ್ರೂಸ್ ಆಂಗ್ಲ ಮಾಧ್ಯಮ ಪ್ರಾಢಶಾಲೆಯು ಸತತ 7ನೇ ಬಾರಿ ಶೇ.100 ಫಲಿತಾಂಶ ಪಡೆದಿದೆ. ಸತತವಾಗಿ 7ನೇ ಬಾರಿಗೆ 100% ಫಲಿತಾಂಶ ಪಡೆದಿರುವ ಆಯಿಷಾ ಹೈದ್ರೂಸ್ ಆಂಗ್ಲ ಮಾಧ್ಯಮ ಪ್ರಾಢಶಾಲೆಯಲ್ಲಿ ಈ ವರ್ಷ 26 ವಿದ್ಯಾರ್ಥಿಗಳು ಪರೀಕ್ಷೆ ಕುಳಿತಿದ್ದು ಎಲ್ಲಾ 26 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪೋಷಕರಿಗೆ, ಶಿಕ್ಷಣ ಸಂಸ್ಥೆಗೆ ಹಾಗೂ ತಮಗೆ ಶಿಕ್ಷಣ ನೀಡಿದ ಶಿಕ್ಷಕರಿಗೆ ಕೀರ್ತಿಯನ್ನು ತಂದಿದ್ದಾರೆ. ಈ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮಶಿತಾ 594/625 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ, ಕುಮಾರಿ ತಹಸೀನ್ ಆಯಿಷಾ…
ಬೆಂಗಳೂರು: 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2 ದಿನಾಂಕ 26-05-2025ರಿಂದ 02-06-2025ರವರೆಗೆ ನಡೆಯಲಿದೆ. ಈ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರೀಕ್ಷೆ ಪೂರ್ವದಲ್ಲಿ ಪ್ರಶ್ನೆಗಳಿಗೆ ಮಾದರಿ ಉತ್ತರ ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ದಿನಾಂಕ:24.04.2025 ರಿಂದ 29.04.2025 ರವರೆಗೆ ನಡೆದ 2025ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation) ಗಳನ್ನು ಮಂಡಲಿಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ: 02.05.2025 ರಿಂದ ದಿನಾಂಕ: 08.05.2025 ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು/ಪೋಷಕರುಗಳು ಈ ಕೆಳಗಿನ ಅಂಶಗಳಿಗೆ ಮಾತ್ರ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ ಸಲ್ಲಿಸಬಹುದಾಗಿದೆ ಎಂದಿದೆ. 1) ದ್ವಂದ್ವಾರ್ಥ ಬರುವ ಪ್ರಶ್ನೆಗಳಿಗೆ 2) ಆಪೂರ್ಣ ಪ್ರಶ್ನೆಗಳಿಗೆ 3) ಪಠ್ಯಕ್ರಮದಲ್ಲಿ ಇಲ್ಲದೇ ಇರುವುದು. 4) ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂತದ್ದು 5) ಒಂದು…
ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿನ ಕ್ರ.ಸಂ 04 ರಲ್ಲಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೆಗಳು ಇದ್ದಲ್ಲಿ ಸಲ್ಲಿಸಬಹುದು. ಕರಡು ತಾತ್ಕಾಲಿಕಾ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮೇ 8 ರೊಳಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೇರವಾಗಿ ಸಲ್ಲಿಸಬಹುದೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.
ಬೆಂಗಳೂರು: ದಕ್ಷಿಣ ಭಾರತ ಕುಸ್ತಿ ಸಂಘ [ಸೌತ್ ಇಂಡಿಯಾ ರ್ವೆಸಲ್ಲಿಂಗ್ ಅಸೋಸಿಯೇಷನ್]ಗೆ ಚುನಾವಣೆ ನಡೆದಿದ್ದು, 2025 – 29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘಕ್ಕೆ ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಪ್ರಮುಖ ಪ್ರಾತಿನಿಧ್ಯೆ ದೊರೆತಿದೆ. ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಪೋಷಕರಾಗಿ ಆರ್.ಕೆ. ಪುರುಷೋತ್ತಮ್, ಅಧ್ಯಕ್ಷರಾಗಿ ಕೇರಳದ ವಿ.ಎನ್ ಪ್ರಸೂದ್ ,ತಮಿಳುನಾಡಿನ ಎಂ. ಲೋಗನಾಥನ್ ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯದ ಜೆ. ಶ್ರೀನಿವಾಸ, ತೆಲಂಗಾಣದ ಅಹಮ್ಮದ್, ಖಜಾಂಚಿಯಾಗಿ ಪುದುಚೇರಿಯ ವಿನೋಥ್.ಕೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಮಿಳುನಾಡಿನ ಐ.ಸಿ. ಕೊಂಡೇಶ್ವರನ್, ಕೇರಳದ ಬಿ. ರಾಜಶೇಖರನ್ ನಾಯರ್ ಮತ್ತು ಆಂಧ್ರಪ್ರದೇಶದ ಭೂಷಣ್ ಆಯ್ಕೆಯಾಗಿದ್ದಾರೆ. ನೂತನ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ಪ್ರತಿಕ್ರಿಯೆ ನೀಡಿ, ನಾಲ್ಕು ವರ್ಷದ ನಂತರ ಚುನಾವಣೆ ನಡೆಸಿದ್ದು, ಕರ್ನಾಟಕ ಎಲ್ಲಾ…












