Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ನಮ್ಮ ಮೆಟ್ರೋ ದರ ಹೆಚ್ಚಾದ ಬಳಿಕ, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಿತ್ತು. ಇದರ ನಡುವೆ ದರ ಇಳಿಕೆಯ ನಿರೀಕ್ಷೆಯಲ್ಲೂ ಪ್ರಯಾಣಿಕರಿದ್ದರು. ಆದರೇ ದರ ಇಳಿಕೆ ಮಾಡೋದಲಿಲ್ಲ ಎಂಬುದಾಗಿ ದರ ನಿಗದಿ ಸಮಿತಿ ತಿಳಿಸುವ ಮೂಲಕ, ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ನಮ್ಮ ಮೆಟ್ರೋ ದರ ಇಳಿಕೆ ಮಾಡುವಂತೆ ಪ್ರಯಾಣಿಕರು, ಸಾರ್ವಜನಿಕರು ಒತ್ತಾಯಿಸಿದ್ದರು. ಜೊತೆಗೆ ಆರಂಭದಲ್ಲಿ ಪ್ರತಿಭಟನೆ ಕೂಡ ನಡೆಸಲಾಗಿತ್ತು. ಆದರೇ ದರ ನಿಗದಿ ಸಮಿತಿ ಮಾತ್ರ, ದರ ಇಳಿಕೆ ಮಾಡೋದಿಲ್ಲ ಎಂಬುದಾಗಿ ಉತ್ತರಿಸಿದೆ. ಅಂದಹಾಗೇ ಬಿಎಂಆರ್ ಸಿಎಲ್ ಮೆಟ್ರೋ ಪ್ರಯಾಣದ ದರ ಇಳಿಕೆ ಬಗ್ಗೆ ದರ ನಿಗದಿ ಸಮಿತಿಗೆ ಸಲಹೆಯನ್ನು ಕೇಳಿತ್ತು. ದರ ಇಳಿಕೆ ಬಗ್ಗೆ ಸಲಹೆ ನೀಡುವಂತೆಯೂ ಕೋರಿತ್ತು. ಆದರೇ ದರ ನಿಗದಿ ಸಮಿತಿಯು ಮಾತ್ರ ದರ ಇಳಿಕೆ ಸಾಧ್ಯವಿಲ್ಲ. ಇಳಿಕೆಯೂ ಮಾಡಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಹೀಗಾಗಿ ನಮ್ಮ ಮೆಟ್ರೋ ಟಿಕೆಟ್ ದರ ಇಳಿಕೆಯಾಗಲ್ಲ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/gunmen-open-fire-at-bondi-beach-in-sydney-australia-killing-10-people/ https://kannadanewsnow.com/kannada/dogital-arrest-man-1-crore/
ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್ನಲ್ಲಿ ಹನುಕ್ಕಾ ಆಚರಣೆಯಲ್ಲಿ ಭಾನುವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡರು. ಕಪ್ಪು ಬಟ್ಟೆ ಧರಿಸಿದ ಇಬ್ಬರು ಬಂದೂಕುಧಾರಿಗಳು ಸುಮಾರು 1,000–2,000 ಜನರ ಗುಂಪಿನ ಮೇಲೆ ಗುಂಡು ಹಾರಿಸಿದರು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಬೀಚ್ಫ್ರಂಟ್ನಲ್ಲಿ ಭೀತಿ ಭುಗಿಲೆದ್ದ ಕಾರಣ 50 ಕ್ಕೂ ಹೆಚ್ಚು ಗುಂಡು ಹಾರಿಸಲಾಯಿತು, ಜನರು ಪಲಾಯನ ಮಾಡಲು ಅಥವಾ ಒಳಾಂಗಣದಲ್ಲಿ ಆಶ್ರಯ ಪಡೆಯಲು ಒತ್ತಾಯಿಸಲಾಯಿತು. “ಬೋಂಡಿಯಲ್ಲಿನ ದೃಶ್ಯಗಳು ಆಘಾತಕಾರಿ ಮತ್ತು ದುಃಖಕರವಾಗಿವೆ. ಜೀವಗಳನ್ನು ಉಳಿಸಲು ಪೊಲೀಸರು ಮತ್ತು ತುರ್ತು ಪ್ರತಿಕ್ರಿಯೆ ನೀಡುವವರು ಕಾರ್ಯಪ್ರವೃತ್ತರಾಗಿದ್ದಾರೆ. ಬಾಧಿತರಾದ ಪ್ರತಿಯೊಬ್ಬ ವ್ಯಕ್ತಿಯ ಬಗ್ಗೆ ನನ್ನ ಆಲೋಚನೆಗಳು ಇವೆ” ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://twitter.com/AlboMP/status/2000133674583687452 ಅವರು AFP ಆಯುಕ್ತರು ಮತ್ತು NSW ಪ್ರೀಮಿಯರ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಿದರು. “ನಾವು NSW ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದೇವೆ ಮತ್ತು ಹೆಚ್ಚಿನ ಮಾಹಿತಿ…
ನವದೆಹಲಿ : “ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ. ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ. ಮತಕಳ್ಳತನ ಮಾಡಲಾಗುತ್ತಿದೆ. ಇದಕ್ಕೆ ಸಾವಿರಾರು ಉದಾಹರಣೆಗಳಿವೆ. ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಇನ್ನು ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆಗಳನ್ನು ಬಹಿರಂಗಗೊಳಿಸಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗದಿಂದ ಸರಿಯಾದ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ…
ಬೆಂಗಳೂರು; ನೀವು ಉಪ ಮುಖ್ಯಮಂತ್ರಿಯೋ ಅಥವಾ ಬೀದಿ ರೌಡಿಯೋ? ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲಾ ಜನಸಾಮಾನ್ಯರಿಗೆ ಇದೆ ಎಂಬುದಾಗಿ ಜೆಡಿಎಸ್ ಹೇಳಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, “ಕೆಲವರಿಗೆ ನಾನು ಯಾರು ಅನ್ನೋದೇ ಗೊತ್ತಿಲ್ಲ, ನನ್ನತ್ರ ಇದೆಲ್ಲಾ ಬೇಡ” ! ಡಿಕೆ ಶಿವಕುಮಾರ್ ಹೌದು.. ಮಿಸ್ಟರ್ ಧಮ್ಕಿ ಡಿಕೆಶಿ ಅವರೇ, ಆ ದಿನಗಳಲ್ಲಿ ನೀವು ಯಾರ ಜೊತೆ ಇದ್ದೀರಿ ? ನಿಮ್ಮ ಹಿನ್ನೆಲೆ ಏನು ? ಎಂಬುದು ಸಾಮಾನ್ಯ ಜನರಿಗೆ ಗೊತ್ತಿಲ್ಲ ಎಂದಿದೆ. ಉಪಮುಖ್ಯಮಂತ್ರಿಯಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬೀದಿರೌಡಿಯಂತೆ ವೇದಿಕೆಯಲ್ಲೇ ನಾಗರಿಕರಿಗೆ ಹೆದರಿಸುವುದು, ಬೆದರಿಸುವುದು ಜನಪ್ರತಿನಿಧಿಗಳಿಗೆ ಶೋಭೆ ತರುವುದಿಲ್ಲ ಎಂದಿದೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆ. ಜನಪ್ರತಿನಿಧಿಯನ್ನು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ಜನಸಾಮಾನ್ಯರಿಗೂ ಇದೆ. “ಸಂವಿಧಾನ ರಕ್ಷಿಸುತ್ತೇವೆ” ಎಂದು ಸಂವಿಧಾನ ಪುಸ್ತಕ ಹಿಡಿದರೇ ಸಾಲದು. ಈ ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ ಎಂದು ತಿಳಿಸಿದೆ. https://twitter.com/JanataDal_S/status/1999789362062795102 https://kannadanewsnow.com/kannada/mp-pankaj-chaudhary-elected-as-bjp-state-president-of-uttar-pradesh/ https://kannadanewsnow.com/kannada/dogital-arrest-man-1-crore/
ಉತ್ತರ ಪ್ರದೇಶ: ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಂಕಜ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಪಿಯೂಷ್ ಗೋಯಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮ್ಮುಖದಲ್ಲಿ ಯುಪಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಸಭೆ ನಡೆಯಿತು. ಈ ಸಭೆಯಲ್ಲಿ ಮಹಾರಾಜ್ ಗಂಜ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವಂತ ಪಂಕಜ್ ಚೌಧರಿ ಅವರನ್ನು ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಯುಪಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವಂತ ಪಂಕಜ್ ಚೌಧರಿ ಅವರು, 7 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. https://kannadanewsnow.com/kannada/it-is-ridiculous-that-bjp-members-are-bothering-about-the-congress-partys-chief-minister-minister-h-c-mahadevappa/ https://kannadanewsnow.com/kannada/dogital-arrest-man-1-crore/
ಬೆಂಗಳೂರು: ಅಸ್ಥಿರ ಸರ್ಕಾರದ ಜೊತೆಗೆ ಕೆಟ್ಟ ಆಡಳಿತವನ್ಬು ನೀಡಿ, ಜನರಿಂದ ಛೀಮಾರಿ ಹಾರಿಸಿಕೊಂಡ ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ ಬೆಳವಣಿಗೆಯಾಗಿದೆ ಎಂಬುದಾಗಿ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನಾದೇಶ ಪಡೆಯದೇ ಆಪರೇಷನ್ ಕಮಲದ ಮೂಲಕ ಸರ್ಕಾರ ರಚಿಸಿ, ಕೊನೆಗೆ ರಚಿಸಿದ ಸರ್ಕಾರದಲ್ಲಿ ನಾಲ್ಕೈದು ಮಂದಿ ಮುಖ್ಯಮಂತ್ರಿಗಳನ್ನು ಬದಲಿಸಿ, ಅಸ್ಥಿರ ಸರ್ಕಾರದ ಜೊತೆಗೆ ಕೆಟ್ಟ ಆಡಳಿತವನ್ಬು ನೀಡಿ, ಜನರಿಂದ ಛೀಮಾರಿ ಹಾರಿಸಿಕೊಂಡ ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ ಬೆಳವಣಿಗೆ ಎಂದಿದ್ದಾರೆ. ಪಕ್ಷ ಏರ್ಪಡಿಸುವ ಸಭೆ, ಸಮಾರಂಭ ಮತ್ತು ಹೋರಾಟಗಳಿಗೆ ಸ್ವಪಕ್ಷೀಯರನ್ನೇ ಕರೆಸಲು ಸಾಧ್ಯವಾಗದ ವಿಜಯೇಂದ್ರ ಹಾಗೂ ಯತ್ನಾಳ್ ಅವರು ನಿಜವಾದ ವಿಪಕ್ಷ ನಾಯಕ ನಾನು ರೀ.. ಎಂದು ಸದನದಲ್ಲೇ ಹೇಳುತ್ತಿದ್ದರೂ, ವಿಪಕ್ಷ ನಾಯಕ ನಾನು ಎಂದು ಗಟ್ಟಿಯಾಗಿ ಹೇಳಲು ದನಿಯಿಲ್ಲದ ಆರ್.ಅಶೋಕ್ ಅಂತವರು ಕಾಂಗ್ರೆಸ್ ಪಕ್ಷದ ವಿಷಯಗಳ ಬಗ್ಗೆ ಮಾತನಾಡುವುದನ್ನು ಕೇಳುತ್ತಿದ್ದರೆ…
ಬೆಂಗಳೂರು; ನಗರದ ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ಭರವಸೆಯ ಹೆಜ್ಜೆ ಯನ್ನು ಇರಿಸಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳ ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ದಪಡಿಸಲು ಟೆಂಡರ್ ಕರೆಯುವ ಮೂಲಕ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದಿದ್ದಾರೆ. ಈ ಕ್ರಮವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ನಡೆಸಿದ ಪ್ರಾಥಮಿಕ ಪರಿಶೀಲನೆಯ ನಂತರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರಸ್ತಾವಿತ ಗ್ರೀನ್ಫೀಲ್ಡ್ (ಹೊಸ) ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/coffee-thief-gang-active-in-chikkamagaluru-khadims-arrested-for-attacking-farmer/ https://kannadanewsnow.com/kannada/dogital-arrest-man-1-crore/
ಚಿಕ್ಕಮಗಳೂರು; ಜಿಲ್ಲೆಯಲ್ಲಿ ಕಾಫಿ ಕಳ್ಳರ ಗ್ಯಾಂಗ್ ಆಕ್ಟೀವ್ ಆಗಿದೆ. ಕಾಫಿ ಕದಿಯುತ್ತಿದ್ದ ವೇಳೆಯಲ್ಲಿ ಬೆದರಿಸೋದಕ್ಕೆ ತೆರಳಿದಂತ ಬೆಳೆಗಾರನ ಮೇಲೆಯೇ ಅಟ್ಯಾಕ್ ಮಾಡಿ ಕಾಫಿ ಕಳ್ಳತನ ಮಾಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರೇಹಳ್ಳಿ ಗ್ರಾಮದಲ್ಲಿ ಕಾಫಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಾಫಿ ಬೆಳೆಗಾರ ಜಗನ್ನಾಥ ಶೆಟ್ಟಿ ಮೇಲೆ ದಾಳಿಯನ್ನು ಖದೀಮರು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಅರೇಹಳ್ಳಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಆಧರಿಸಿ ಅರೇಹಳ್ಳಿ ಠಾಣೆಯ ಪೊಲೀಸರು ಶಾಹಿದ್ ಮುಬಾರಕ್, ಜಹೀರ್, ಸಾಗರ್, ಪ್ರಜ್ವಲ್ ಹಾಗೂ ಹಜೀಜ್ ಎಂಬಾತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. https://kannadanewsnow.com/kannada/a-man-who-was-harassing-a-woman-in-hubballi-was-tied-to-a-tree-and-beaten-up/ https://kannadanewsnow.com/kannada/dogital-arrest-man-1-crore/
ಹುಬ್ಬಳ್ಳಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಂತ ಕಾಮುಕನೊಬ್ಬನನ್ನು ಸ್ಥಳೀಯರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದಂತ ಘಟನೆ ನಡೆದಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳವನ್ನು ಕಾಮುಕ ನೀಡುತ್ತಿದ್ದನು ಎನ್ನಲಾಗಿದೆ. ಕಾಮುಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಲೈಂಗಿಕ ಕಿರುಕುಳವನ್ನು ನೀಡುತ್ತಿದ್ದನಂತೆ. ಇಂದು ಕೂಡ ಅದೇ ಕೆಲಸ ಮಾಡಿದ ವೇಳೆಯಲ್ಲಿ ಮಹಿಳೆಯೊಂದಿಗೆ ಸ್ಥಳೀಯರು ಸೇರಿ ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. https://kannadanewsnow.com/kannada/dk-shivakumar-why-did-you-become-an-mla-minister-dcm-you-are-just-a-human-being-jds-sarcasm/ https://kannadanewsnow.com/kannada/dogital-arrest-man-1-crore/
ಬೆಂಗಳೂರು: ಡಿಕೆ ಶಿವಕುಮಾರ್ ಅವರೇ, ನೀವು ಶಾಸಕರಾದರೇನು ? ಮಂತ್ರಿಯಾದರೇನು ? ಡಿಸಿಎಂ ಆದರೇನು ? ನೀನೊಬ್ಬ ಮನುಷ್ಯ ಅಷ್ಟೇ ಎಂಬುದಾಗಿ ಜೆಡಿಎಸ್ ಕುಟುಕಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಜನರಿಂದ ಆಯ್ಕೆಯಾದ ನೀವು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನಿಮ್ಮ ಆದ್ಯ ಕರ್ತವ್ಯ. ಅದನ್ನು ಬಿಟ್ಟು ಪ್ರಶ್ನೆ ಮಾಡಿದವರಿಗೆ ಧಮ್ಕಿ, ಬೆದರಿಕೆ ಹಾಕುವುದು ಸಂವಿಧಾನದ ಪ್ರಕಾರ ಅಪರಾಧ ಎಂದಿದೆ. ನಾವು 80ರ ದಶಕದಲ್ಲಿ ಜೀವಿಸುತ್ತಿಲ್ಲ ಡಿಕೆಶಿ ಅವರೇ, ನಿಮ್ಮ ಬಳಿ ದುಡ್ಡಿದ್ದರೆ, ಅದು ” ನಾಯಿ ಮೊಲೆ ಹಾಲಿದ್ದಂಗೆ ”. ಯಾರಿಗೂ ಪ್ರಯೋಜನವಿಲ್ಲ. ಅಧಿಕಾರದ ಮದ, ದಬ್ಬಾಳಿಕೆ ನೆತ್ತಿಗೇರಿದೆ ಕೊತ್ವಾಲ್ ಶಿಷ್ಯನ ರೌಡಿಸಂ, ಗೂಂಡಾ ಪ್ರವೃತ್ತಿಗೆ ಕಡಿವಾಣ ಹಾಕದಿರುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಇಂತಹವರು ಜನಪ್ರತಿನಿಧಿಯಾಗಿ ಮುಂದುವರಿಯಲು ನಾಲಾಯಕ್ಕು ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದೆ. ಸಂವಿಧಾನದ ರಕ್ಷಣೆ ಮಾಡುತ್ತೇವೆ ಎನ್ನುವ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿ, ಮೊದಲು ಡಿಕೆಶಿಯಂತಹ ರೌಡಿ…














