Author: kannadanewsnow09

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂಬುದಾಗಿ ಯೂಟ್ಯೂಬರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಡಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ವಿರುದ್ಧ ಇಡಿಗೆ ಹಿಂದೂ ಮುಖಂಡ ತೇಜಸ್ ಗೌಡ ಎಂಬುವರು ದೂರು ನೀಡಿದ್ದಾರೆ. ಮುಸ್ಲೀಂ ಯೂಟ್ಯೂಬರ್ ಮತ್ತು ಅಸೋಸಿಯೇಟ್ಸ್ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿದ್ದಾನೆ. ಧರ್ಮಸ್ಥಳ ಮಂದಿರದ ಹೆಸರು ಕೆಡಿಸಲು ಪ್ರಯತ್ನ ನಡೆಯುತ್ತಿದೆ ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕಾಗಿ ಇವರಿಗೆಲ್ಲ ಹೊರದೇಶದಿಂದ ಹಣ ಬರುತ್ತಿದೆ. ಹೀಗಾಗಿ ಈ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಹಿಂದೆ ದೊಡ್ಡ ಗುಂಪಿದೆ. ಅವರ ಕೈವಾಡದಿಂದ ಅಪಪ್ರಚಾರ ಸೇರಿದಂತೆ ಎಲ್ಲವೂ ನಡೆಯುತ್ತಿದೆ ಎಂಬುದಾಗಿ ಹೇಳಲಾಗಿದೆ. https://kannadanewsnow.com/kannada/6-reservation-for-left-handers-6-for-the-right-community-and-5-for-the-touchable-community-cm-siddaramaiahs-announcement/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/good-news-for-the-people-of-the-state-applications-invited-for-various-schemes-including-ganga-kalyana-swavalambi-sarathi/

Read More

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ ಎಡಗೈ ಸಮುದಾಯಕ್ಕೆ ಶೇ.6ರಷ್ಟು, ಬಲ ಸಮುದಾಯಕ್ಕೆ ಶೇ.6ರಷಅಟು ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಒಳ ಮೀಸಲಾತಿ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲೇ ಘೋಷಿಸಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಮಾತನಾಡಿದರು. 1.​ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled…

Read More

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತನಾಡಿದರು. ಅವರ ಮಾತಿನ ಪ್ರಮುಖ ಹೈಲೈಟ್ಸ್ ಮುಂದೆ ಓದಿ. 1.​ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled Castes.” ಎಂದು ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು…

Read More

ಬೆಂಗಳೂರು: ಒಳ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವಂತ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವಿಪಕ್ಷಗಳ ನಾಯಕರ ಪ್ರಶ್ನೆಗೆ ಉತ್ತರಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಏನಾದರೂ ಬದಲಾವಣೆ ಮಾಡಬೇಕಾದ್ರೆ ಮುಂದಿನ ಹಂತದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಇದಕ್ಕೆ ಮೇಜು ತಟ್ಟಿ ಆಡಳಿತ ಪಕ್ಷದ ಸದಸ್ಯರು ಸ್ವಾಗತಿಸಿದರು. ನಿಮ್ಮ ಕೈಯಲ್ಲಿ ಮಾಡಲು ಆಗಲಿಲ್ಲ ಅಂತಾನೇ ನಾವು ಮಾಡಿದ್ದೇವೆ. ನಿಮ್ಮನ್ನು ಕಂಡರೆ ಭಯ ಇಲ್ಲ ಎಂಬುದಾಗಿ ಹೇಳುವ ಮೂಲಕ ಬಿಜೆಪಿಯವರಿಗೆ ಸಿಎಂ ಸಿದ್ಧರಾಮಯ್ಯ ಕೌಂಟರ್ ನೀಡಿದರು. https://kannadanewsnow.com/kannada/approval-of-the-karnataka-state-civil-services-amendment-bill-in-the-legislative-council/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/

Read More

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಆರೋಗ್ಯ ಇಲಾಖೆಯ ವೈದ್ಯರು, ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಂಡಂತೆ ಆಗಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಂತ ವೈದ್ಯರು, ನರ್ಸ್ ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಇದರ ಸಂಬಂಧ ವಿಧಾನಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ನರ್ಸ್ ಗಳು, ಡಿ ಗ್ರೂಪ್ ಸಿಬ್ಬಂದಿಗಳು ದೀರ್ಘಕಾಲದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೆಲಸದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಇವರನ್ನು ವರ್ಗಾವಣೆ ಮಾಡಿದರೇ…

Read More

ಶಿವಮೊಗ್ಗ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬAಧ ಈ ಕೆಳಕಂಡAತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ…

Read More

ನವದೆಹಲಿ: ತ್ರಿಶೂರ್ ಜಿಲ್ಲೆಯ ಪಲಿಯೆಕ್ಕರ ಪ್ಲಾಜಾದಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸುವ ಕೇರಳ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ಅಪೂರ್ಣ, ಹೊಂಡಗಳಿಂದ ಕೂಡಿದ ಅಥವಾ ಸಂಚಾರ ದಟ್ಟಣೆಯಿಂದ ಸಂಚಾರಕ್ಕೆ ಯೋಗ್ಯವಲ್ಲದ ಹೆದ್ದಾರಿಗಳಲ್ಲಿ ಪ್ರಯಾಣಿಕರನ್ನು ಟೋಲ್ ಪಾವತಿಸಲು ಒತ್ತಾಯಿಸಲಾಗುವುದಿಲ್ಲ ಎಂದು ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ಆರ್ ಗವಾಯಿ ನೇತೃತ್ವದ ನ್ಯಾಯಮೂರ್ತಿಗಳಾದ ಕೆ ವಿನೋದ್ ಚಂದ್ರನ್ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಅಮಾನತುಗೊಂಡ ಟೋಲ್ ಸಂಗ್ರಹದಿಂದ ಉಂಟಾಗುವ ಆರ್ಥಿಕ ನಷ್ಟಕ್ಕಿಂತ ನಾಗರಿಕರ ಕಲ್ಯಾಣಕ್ಕೆ ಆದ್ಯತೆ ನೀಡಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮತ್ತು ರಿಯಾಯಿತಿದಾರರು ಸಲ್ಲಿಸಿದ ಮೇಲ್ಮನವಿಗಳನ್ನು ವಜಾಗೊಳಿಸಿತು. “ಈ ಮಧ್ಯೆ, ನಾಗರಿಕರು ಈಗಾಗಲೇ ತೆರಿಗೆ ಪಾವತಿಸಿರುವ ರಸ್ತೆಗಳಲ್ಲಿ ಚಲಿಸಲು ಮುಕ್ತರಾಗಿರಲಿ, ಇದು ಅಸಮರ್ಥತೆಯ ಸಂಕೇತವಾಗಿದೆ” ಎಂದು ಪೀಠವು ಆಗಸ್ಟ್ 6 ರ ಹೈಕೋರ್ಟ್‌ನ ಆದೇಶವನ್ನು ಅನುಮೋದಿಸಿತು. ಕೇರಳ ಹೈಕೋರ್ಟ್, NHAI ಅಥವಾ ಅದರ ಏಜೆಂಟರು ಅಡೆತಡೆಯಿಲ್ಲದ, ಸುರಕ್ಷಿತ ಮತ್ತು ನಿಯಂತ್ರಿತ ರಸ್ತೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವಲ್ಲಿ…

Read More

ಬೆಂಗಳೂರು: “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. “ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. ನೀವು ಇದರ ಬಗ್ಗೆ ಜನರಿಗೆ ನೆನಪಿಸುತ್ತಿರಬೇಕು. ನಾವು ಈ ಯೋಜನೆ ಜಾರಿ ಮಾಡಿ ನಿಮ್ಮ ಕೈಗೆ ಅಸ್ತ್ರ ನೀಡಿದ್ದೇವೆ. ನೀವು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ರೈತರ ಉಚಿತ ವಿದ್ಯುತ್ ಗೆ 20 ಸಾವಿರ ಕೋಟಿ, ವಿವಿಧ ಪಿಂಚಣಿ ಯೋಜನೆಗೆ 10 ಸಾವಿರ ಕೋಟಿ, ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ, ಸಮಾಜ ಕಲ್ಯಾಣ ಯೋಜನೆಗಳಿಗೆ ಸೇರಿ 1 ಲಕ್ಷ ಕೋಟಿಯಷ್ಟು ಹಣವನ್ನು…

Read More

ಬೆಂಗಳೂರು: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು. https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/on-the-21st-there-will-be-a-power-outage-in-this-area-of-bangalore/ https://kannadanewsnow.com/kannada/good-news-for-the-people-of-the-state-applications-invited-for-various-schemes-including-ganga-kalyana-swavalambi-sarathi/

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಆಸ್ಟಿನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿಕ್ಟೋರಿಯ ಲೇಔಟ್, ಪಾಮ್ ಗ್ರೂವು ರೋಡ್, ಬಾಲಾಜಿ ಥಿಯೆಟರ್, ಅಗ್ರಂ ವಿವೆಕನಗರ,ಸಣ್ಣೆಣಹಳ್ಳಿ, ವೊನ್ನರ್ ಪೇಟೆ, ಆಂಜನೆಯ ಟೆಂಪಲ್ ಸ್ಟ್ರೀಟ್, ಕೆಎಸ್ಆರ್ಪಿ ಕ್ವಾಟ್ರಸ್, ಲಿಂಡನ್ ಸ್ಟ್ರೀಟ್, ಪಾಮ್ ಗ್ರೂವು ರೋಡ್, ಕ್ಷೇವಿಯರ್ ಲೇಔಟ್, ಯಲಗುಂಟೆ ಪಾಳ್ಯಮ್, ಏರ್ ಫೋರ್ಸ್, ಲೈಫ್ ಸ್ಟೈಲ್ ಕ್ಯಾಂಬ್ಲ್ ರೋಡ್ ಜಂಕ್ಷನ್, ರಿಚ್ಮಂಡ್ ರೋಡ್, ರುದ್ರಪ್ಪ ಗಾರ್ಡನ್, ಎಮ್ ಜಿ ಗಾರ್ಡನ್, ಆಸ್ಟಿನ್ಟೌನ್ ನೀಲಸಂದ್ರ, ಬಜಾರ್ಸ್ಟ್ರೀಟ್, ಆರ್ ಕೆ ಗಾರ್ಡನ್, ಬೆಂಗಳೂರು ಫರ್ನಿಚರ್ ,ರೋಸ್ ಗಾರ್ಡನ್, ಒ.ಆರ್.ಸಿ ರಸ್ತೆ, ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಕರೆಂಟ್ ಇರೋದಿಲ್ಲ. 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ…

Read More