Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ನವದೆಹಲಿ: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನಲ್ಲಿ ಮೊದಲ ಬಾರಿ ಗೆದ್ದಿದ್ದ ತಮ್ಮ ತಂಡದ ಪ್ರಮುಖ ಆಟಗಾರರ ಪೈಕಿ ಹೆಚ್ಚಿನವರನ್ನು ಮಿನಿ ಹರಾಜಿನ ಮೊದಲು ಉಳಿಸಿಕೊಂಡಿದೆ. ಆರ್ಸಿಬಿ 17 ಆಟಗಾರರನ್ನು ಉಳಿಸಿಕೊಂಡಿದ್ದು, ನವೆಂಬರ್ 15 ರಂದು ಎಂಟು ಆಟಗಾರರನ್ನು ಉಳಿಸಿಕೊಂಡಿದೆ. 2025 ರ ಹರಾಜಿನಲ್ಲಿ 8.75 ಕೋಟಿ ರೂ.ಗೆ ಆಯ್ಕೆಯಾದ ಇಂಗ್ಲೆಂಡ್ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ್ ಮತ್ತು 1 ಕೋಟಿ ರೂ.ಗೆ ಆಯ್ಕೆಯಾದ ಲುಂಗಿ ಎನ್ಗಿಡಿ ಪ್ರಮುಖ ಆಟಗಾರರಾಗಿದ್ದಾರೆ. ಬಿಡುಗಡೆಯಾದ ಇತರ ಆಟಗಾರರು ಮಾಯಾಂಕ್ ಅಗರ್ವಾಲ್, ಸ್ವಸ್ತಿಕ್ ಚಿಕಾರ, ಟಿಮ್ ಸೀಫರ್ಟ್, ಮನೋಜ್ ಭಂಡಗೆ, ಬ್ಲೆಸ್ಸಿಂಗ್ ಮುಜರಬಾನಿ ಮತ್ತು ಮೋಹಿತ್ ರಾಥೀ. ಆರ್ಸಿಬಿ ಎಂಟು ಆಟಗಾರರನ್ನು ಬಿಡುಗಡೆ ಮಾಡಿದ್ದರೂ, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ಮುಂತಾದ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿದೆ. ಹಾಲಿ ಚಾಂಪಿಯನ್ಗಳು ಹರಾಜಿನಲ್ಲಿ 16.4 ಕೋಟಿ ರೂ.ಗಳೊಂದಿಗೆ ಭಾಗವಹಿಸುತ್ತಾರೆ. RCB ಬಿಡುಗಡೆ ಮಾಡಿದ ಆಟಗಾರರ ಪಟ್ಟಿ: ಲಿಯಾಮ್ ಲಿವಿಂಗ್ಸ್ಟೋನ್, ಲುಂಗಿ…
ಮಂಡ್ಯ: ರಾಜ್ಯದಲ್ಲಿ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಸುವಂತಿಲ್ಲ. ಬದಲಾಗಿ ಪರಿಸರ ಸ್ನೇಹಿಯಾದಂತ ವಸ್ತುಗಳನ್ನು ಬಳಕೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಆದರೇ ಸರ್ಕಾರದ ಆದೇಶಕ್ಕೆ ಅಧಿಕಾರಿಗಳು ಡೋಂಟ್ ಕೇರ್ ಎನ್ನುವಂತೆ ಮಂಡ್ಯದಲ್ಲಿ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಿರುವುದು ಕಂಡು ಬಂದಿದೆ. ಹೌದು ಮಂಡ್ಯದ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಕೆಡಿಪಿ ಸಭೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟೆಲ್ ಬಳಕೆ ಮಾಡಲಾಗಿದೆ. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆಯುತ್ತಿರುವ ಸಭೆ ಇದಾಗಿದೆ. ಮದ್ದೂರು ಶಾಸಕ ಕೆ.ಎಂ.ಉದಯ್ ಹಾಗೂ ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಅವರ ನೇತೃತ್ವದಲ್ಲಿ ನಡೆದಂತ ಕೆಡಿಪಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ಮಾಡಲಾಗಿದೆ. ಸರ್ಕಾರಿ ಸಭೆ, ಸಮಾರಂಭ ಹಾಗೂ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿರುವ ಸರ್ಕಾರ ಆದೇಶಿಸಿತ್ತು. ಇದೀಗ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ಅಧಿಕಾರಿಗಳು ಸರ್ಕಾರಿ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಳಕೆ ಮಾಡಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/congress-high-command-gives-green-signal-for-state-cabinet-reshuffle-8-to-12-ministers-out/ https://kannadanewsnow.com/kannada/114-trees-will-be-planted-at-114-places-in-honor-of-the-tree-of-the-same-name-minister-ishwar-khandre/
ಬೆಂಗಳೂರು : 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ತರುವಾಯ ಮಾತನಾಡಿದ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು. ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು. ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ ತಿಳಿಸಿದರು. https://kannadanewsnow.com/kannada/19-deer-die-in-belgaum-zoo-minister-ishwar-khandre-orders-investigation/…
ಬೆಂಗಳೂರು : ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ರೀತ್ಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. https://kannadanewsnow.com/kannada/congress-high-command-gives-green-signal-for-state-cabinet-reshuffle-8-to-12-ministers-out/…
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.16ರಂದು ಭಾನುವಾರ ಸಂಜೆ 6ಕ್ಕೆ ಮಂಡ್ಯದಲ್ಲಿ ರಾಷ್ಟ್ರೀಯ ಮಾಧ್ಯಮ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಅಂಶಿ ಪ್ರಸನ್ನಕುಮಾರ್ ಅವರು ಉಪನ್ಯಾಸ ನೀಡಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. https://kannadanewsnow.com/kannada/deepak-sagar-appointed-as-the-secretary-of-shivamogga-district-karnataka-working-journalists-association/ https://kannadanewsnow.com/kannada/minister-madhu-bangarappas-janaspandan-program-at-sagars-talaguppa-on-november-18th-solution-to-your-problem-on-the-spot/
ಬೆಂಗಳೂರು: ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆಗೆ ಚರ್ಚಿಸಿದರು. ಈ ವೇಳೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಅವರ ಜೊತೆಗೆ ಚರ್ಚಿಸಿ ಪುನಾರಚನೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗೋದು ಫಿಕ್ಸ್ ಆದಂತೆ ಆಗಿದೆ. ಜೊತೆ ಜೊತೆಗೆ 8 ರಿಂದ 12 ಸಚಿವರು ಹೊರಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ಸುದ್ದಿ ಹಬ್ಬಿತ್ತು. ಬಿಹಾರದಲ್ಲಿ ಮಹಾಘಟಬಂಧನ್ ಹೀನಾಯ ಸೋಲು ಕಂಡ ಬಳಿಕ ಇದಕ್ಕೆ ಅವಕಾಶವಿಲ್ಲ ಎಂದೇ ಹೇಳಲಾಗುತ್ತಿತ್ತು. ಆದರೇ ಇತ್ತೀಚಿನ ಮಾಹಿತಿಯಂತೆ ಸಿಎಂ ಸಿದ್ಧರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಯ ವೇಳೆಯಲ್ಲಿ ರಾಜ್ಯ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣುಗೋಪಾಲ್…
ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ಪುನಾರಚನೆಗೊಳ್ಳಲಿದೆ ಎನ್ನುವುದು ಖಚಿತಗೊಂಡಂತೆ ಆಗಿದೆ. ಹೌದು ರಾಜ್ಯ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖರ್ಗೆ ಜೊತೆಗೆ ಚರ್ಚಿಸಿ ಪುನಾರಚನೆ ಮಾಡಿ ಎಂಬುದಾಗಿ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹೇಳಿರುವುದಾಗಿ ತಿಳಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಚರ್ಚಿಸಿ ಸಂಪುಟ ಪುನಾರಚನೆ ಮಾಡಲಿದ್ದಾರೆ. ಚರ್ಚೆ ಬಳಿಕ ಯಾರಿಗೆ ಸಚಿವ ಸ್ಥಾನ ನೀಡಬೇಕು. ಯಾರನ್ನು ತೆಗೆದು ಹಾಕಬೇಕು ಎನ್ನುವ ಅಂತಿಮ ಲೀಸ್ಟ್ ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸಲ್ಲಿಸೋ ಸಾಧ್ಯತೆ ಇದೆ. ರಾಜ್ಯ ಸಂಪುಟದ ಹಾಲಿ 8 ರಿಂದ 12 ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯಾರು ಔಟ್, ಯಾರು ಇನ್ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.…
ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನ. 18 ರಂದು ಮಧ್ಯಾಹ್ನ 1.30ಕ್ಕೆ ಸಾಗರ ತಾಲೂಕು ತಾಳಗುಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಕುರಿತು ಪರಿಹಾರ ನೀಡಲು “ಜನಸ್ಪಂದನಾ “ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕಚೇರಿಯ ಯಾವುದೇ ಪ್ರತಿನಿಧಿಯನ್ನು ನಿಯೋಜಸದೆ ತಾವೇ ಖುದ್ದಾಗಿ ತಪ್ಪದೇ ಹಾಜರಿದ್ದು ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವಂತೆ ಸಾಗರ ತಾಲೂಕು ತಹಶೀಲ್ದಾರ್ರವರು ಪ್ರಕಟಣೆಯಲ್ಲಿ ತಿಳಿಸಿದೆ. ಭದ್ರಾವತಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 19 ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರ ಹುದ್ದೆಗಳನ್ನು…
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 19 ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್ಸೈಟ್ https://karnemakaone.kar.nic.in/abcd/ ಮೂಲಕ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್ಸೈಟ್ ಅಥವಾ ಭದ್ರಾವತಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು. https://kannadanewsnow.com/kannada/kset-exam-2025-provisional-results-announced-check-the-result-like-this/ https://kannadanewsnow.com/kannada/does-drinking-water-while-standing-harm-your-knees-read-what-science-says/
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹೆಚ್.ಯು ವೈದ್ಯನಾಥ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹಾಲಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಇವರಲ್ಲದೇ ಉಪಾಧ್ಯಕ್ಷರಾಗಿ ದೇಶಾದ್ರಿ ಹೊಸ್ಮನೆ, ಕಾರ್ಯದರ್ಶಿಯಾಗಿ ದೀಪಕ್ ಸಾಗರ್ ಸೇರಿದಂತೆ ನೂತನ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಘಟಕದ KUWJ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ನಮ್ಮ ನಾಡು ಸಾಪ್ತಾಹಿಕ ಪುರವಣೆಯ ಮುಖ್ಯಸ್ಥರಾದಂತ ಹೆಚ್.ಯು ವೈದ್ಯನಾಥ್ ಅವರನ್ನು ಜಿಲ್ಲಾಧ್ಯಕ್ಷರಾಗಿ, ಉಪಾಧ್ಯಕ್ಷರನ್ನಾಗಿ ಶಿಕಾರಿಪುರದ ಜನಹೋರಾಟ ಪತ್ರಿಕೆಯ ವರದಿಗಾರ ಹುಚ್ರಾಯಪ್ಪ.ಕೆ.ಎಸ್, ಶಿವಮೊಗ್ಗದ ಹೊಸದಿಗಂತ ಜಿಲ್ಲಾ ವರದಿಗಾರ ಸತ್ಯನಾರಾಯಣಪ್ಪ.ಕೆ ಹಾಗೂ ನಮ್ಮ ನಾಡು ಪತ್ರಿಕೆಯ ಸುದ್ದಿ ಸಂಪಾದಕ ದೇಶಾದ್ರಿ ಹೊಸ್ಮನೆ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕೆಯುಡಬ್ಲ್ಯೂಜೆಯ ಪ್ರಧಾನ ಕಾರ್ಯದರ್ಶಿಯಾಗಿ ಡಿಡಿ ನ್ಯೂಸ್ ವರದಿಗಾರ ಆರ್.ಎಸ್ ಹಾಲಸ್ವಾಮಿ, ಕಾರ್ಯದರ್ಶಿಯಾಗಿ ಸಾಗರದ ವಿಜಯವಾಣಿ ವರದಿಗಾರ ದೀಪಕ್ ಸಾಗರ್, ಸುವರ್ಣ ನ್ಯೂಸ್ ವರದಿಗಾರ ರಾಜೇಶ್ ಕಾಮತ್ ಹಾಗೂ ಹೊಸ ದಿಗಂತ ಪತ್ರಿಕೆಯ…














