Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಮಾಜಿ ಗವರ್ನರ್ ಡಾ. ಉರ್ಜಿತ್ ಪಟೇಲ್ ಅವರನ್ನು ಮೂರು ವರ್ಷಗಳ ಅವಧಿಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ. ಡಾ. ಪಟೇಲ್ ಅವರು ಸೆಪ್ಟೆಂಬರ್ 2016 ರಿಂದ ಡಿಸೆಂಬರ್ 2018 ರವರೆಗೆ RBI ನ 24 ನೇ ಗವರ್ನರ್ ಆಗಿ ಸೇವೆ ಸಲ್ಲಿಸಿದರು. ಅವರ ಗವರ್ನರ್ ಹುದ್ದೆಗೆ ಮುಂಚಿತವಾಗಿ, ಅವರು RBI ನ ಉಪ ಗವರ್ನರ್ ಆಗಿದ್ದರು ಮತ್ತು ಇತರ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. https://twitter.com/ANI/status/1961271706812911671 ಅವರು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (AIIB) ನಲ್ಲಿ ಹೂಡಿಕೆ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿದ್ದರು (ಪ್ರದೇಶ 1), ದಕ್ಷಿಣ ಏಷ್ಯಾ, ಪೆಸಿಫಿಕ್ ದ್ವೀಪಗಳು ಮತ್ತು ಆಗ್ನೇಯ ಏಷ್ಯಾದಾದ್ಯಂತ ಸಾರ್ವಭೌಮ ಮತ್ತು ಸಾರ್ವಭೌಮೇತರ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಿದರು. ಅವರು ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ಕಂಪನಿ ಲಿಮಿಟೆಡ್ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ನಿರ್ವಹಣಾ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನಿಯೋಜನೆಯನ್ನು ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಛೇರಿಗಳಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಕಛೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಜಿಲ್ಲಾ ಆಸತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನೌಕರರು ಕ್ಷೇತ್ರೀಯ ಮಟದಲ್ಲಿ ಕಾರ್ಯನಿರ್ವಹಿಸಬೇಕಾದ ಸಿಬ್ಬಂದಿಗಳಾಗಿದ್ದು, ಅವರು ಜಿಲ್ಲಾ ಮಟ್ಟ / ತಾಲ್ಲೂಕು ಮಟ್ಟದ ಕಛೇರಿ /ಆಸ್ಪತ್ರೆಗಳಲ್ಲಿ…
ಚಿಕ್ಕಬಳ್ಳಾಪುರ: ರಾಜ್ಯಕ್ಕೂ ಆಫ್ರಿಕನ್ ಹಂದಿ ಜ್ವರವು ಕಾಲಿಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಗೆ ಆಫ್ರಿಕನ್ ಹಕ್ಕಿಜ್ವರ ಕಾಲಿಟ್ಟಿದ್ದು, ಜ್ವರದ ಕೇಸ್ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಯಾರ್ಕ್ ಶೇರ್ ತಳಿಯ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದ ಬಳಿಯಲ್ಲಿರುವಂತ ಫಾರ್ಮ್ ನಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಈಗಾಗಲೇ ಆಫ್ರಿಕನ್ ಹಂದಿ ಜ್ವರದಿಂದಾಗಿ 100 ಹಂದಿಗಳು ಸಾವನ್ನಪ್ಪಿದ್ದಾವೆ. 57 ಹಂದಿ ಕೊಲ್ಲಲು ನಿರ್ಧರಿಸಲಾಗಿದೆ. ಕಳೆದ ಒಂದು ವಾರದಿಂದ ಫಾರ್ಮ್ ನಲ್ಲಿ ಹಂದಿಗಳು ಸರಣಿ ಸಾಲಿನಲ್ಲಿ ಸಾವನ್ನಪ್ಪಿದ್ದಾವೆ. ಹಂದಿಗಳ ಸರಣಿ ಸಾವಿನಿಂದಾಗಿ ಮಾದರಿಯನ್ನು ಸಂಗ್ರಹಿಸಿ ಭೂಪಾಲ್ ನ ರಾಷ್ಟ್ರೀಯ ಲ್ಯಾಬ್ ಗೆ ಕಳುಹಿಸಲಾಗಿತ್ತು. ಇಂದು ಬಂದಿರುವ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ ಎಂಬುದಾಗಿ ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ ಮಾಹಿತಿ ನೀಡಿದ್ದಾರೆ. ಅಲ್ಲದೇ ಫಾರ್ಮ್ ನಿಂದ ಹಂದಿಗಳ ಸಾಗಾಟ, ಮಾರಾಟವನ್ನು ನಿಷೇಧಿಸಲಾಗಿದೆ. ಅಂದಹಾಗೇ ಈ ಫಾರ್ಮ್ ಹೌಸ್ ನಿಂದ ಹಂದಿಗಳನ್ನು…
ಶಿವಮೊಗ್ಗ: ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹತ್ವದ ಕ್ರಮವನ್ನು ಕೈಗೊಂಡಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ದಿನಾಂಕ: 26-08-2025 ರಂದು ಪೋಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆಯಲ್ಲಿ ಈ ಕೆಳಕಂಡ ಪ್ರಮುಖ ಮತ್ತು ಅತೀ ಸೂಕ್ಷ್ಮತೆಯಿಂದ ಕೂಡಿರುವ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ನಗರ/ಪಟ್ಟಣ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮಧ್ಯ ತಯಾರಿಕೆ, ಮಾರಾಟ, ಸರಬರಾಜು ಮತ್ತು ಸಾಗಾಟಗಳನ್ನು ನಿಷೇಧಿಸಿ ಪಾನನಿರೋಧ “ಶುಷ್ಕ ದಿನ” ಗಳೆಂದು ಮತ್ತು ಎಲ್ಲಾ ವಿವಿಧ ಮಧ್ಯದ ಸನ್ನದು ಮಾರಾಟ ಮಳಿಗೆಗಳನ್ನು ಮದ್ಯ ಮಾರಾಟ ಡಿಪೋಗಳನ್ನು ಹಾಗೂ ಮಧ್ಯ ತಯಾರಿಕಾ ಘಟಕಗಳನ್ನು ಮುಚ್ಚಲು ಆದೇಶ ಹೊರಡಿಸಬೇಕಾಗಿ ಕೋರಿರುತ್ತಾರೆ. ಪೋಲಿಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ರವರ ಕೋರಿಕೆ ಮೇರೆಗೆ ಈ ಕೆಳಕಂಡಂತೆ ಸೂಚಿಸಿರುವ ದಿನಾಂಕಗಳಂದು ಮತ್ತು ಸಮಯದಲ್ಲಿ “ಶುಷ್ಕ…
ಬೆಂಗಳೂರು: ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ ಬರೆದು ಸೂಚಿಸಲಾಗಿದೆ. ಈ ಕುರಿತಂತೆ ಸಾಮಾಜಿಕ ಹೋರಾಟಗಾರರಾದಂತ ಬಿಆರ್ ಭಾಸ್ಕರ್ ಪ್ರಸಾದ್ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷಿ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿರುವಂತ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಬರೆದಿರುವಂತ ಪತ್ರದಲ್ಲಿ ಬಿ. ಆರ್ ಭಾಸ್ಕರ್ ಪುಸಾದ್, ಸಾಮಾಜಿಕ ಹೋರಾಟಗಾರರು, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇವರು ಆಯೋಗದಲ್ಲಿ ಅರ್ಜಿ ಸಲ್ಲಿಸಿರುತ್ತಾರೆ. ಅರ್ಜಿಯಲ್ಲಿ ಅರ್ಜಿದಾರರು ಖ್ಯಾತ ನಟ ದರ್ಶನ್ ರವರ ಧರ್ಮ ಪತ್ನಿಯಾದ ವಿಜಯಲಕ್ಷ್ಮೀ ದರ್ಶನ್ ಹಾಗೂ ಇವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಲ್ಲದೇ, ಸಾಮಾಜಿಕ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. • ರಾಜ್ಯದಲ್ಲಿ 28516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ…
ಮಹಾರಾಷ್ಟ್ರ: ಯಾವುದೇ ಹೋರಾಟದಲ್ಲಿ ಆರ್ ಎಸ್ ಎಸ್ ಭಾಗವಹಿಸುದಿಲ್ಲ. ಆದರೇ ರಾಮಮಂದಿರ ಹೋರಾಟದಲ್ಲಿ ನೇರವಾಗಿ ಭಾಗಿಯಾಗಿತ್ತು. ಇನ್ಮುಂದೆ ಯಾವುದೇ ಹೋರಾಟದಲ್ಲಿ ಆರ್ ಎಸ್ ಎಸ್ ಭಾಗವಹಿಸಲ್ಲ ಎಂಬುದಾಗಿ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಗ್ಬುರದಲ್ಲಿ ಮಾತನಾಡಿದಂತ ಅವರು, 75 ವರ್ಷ ಆದವರು ಯಾರು ಕೂಡ ನಿವೃತ್ತಿ ಆಗುವ ಅಗತ್ಯವಿಲ್ಲ. ನಾನು ನಿವೃತ್ತಿ ಆಗುವುದಿಲ್ಲ. ಬೇರೆಯವರಿಗೂ ನಿವೃತ್ತಿ ಆಗಲು ಹೇಳಲ್ಲ. ಎಲ್ಲಿಯವರೆಗೂ ನಾವು ಇರುತ್ತೇವೆಯೋ ಅಲ್ಲಿಯವರೆಗೆ ಕೆಲಸ ಮಾಡುತ್ತೇವೆ ಎಂದರು. ಬಿಜೆಪಿ ಅಧ್ಯಕ್ಷರ ನೇಮಕ ವಿಚಾರವಾಗಿ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಕೇವಲ ಸಲಹೆಗಳನ್ನು ಮಾತ್ರ ನೀಡುತ್ತೇವೆ ಎಂದರು. https://kannadanewsnow.com/kannada/10000-fine-even-if-not-drunk-car-owner-escalated-to-high-court-notice-to-the-government/ https://kannadanewsnow.com/kannada/cancellation-of-appointment-of-these-officials-of-the-states-health-department-state-government-issued-an-important-order/
ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಹಚ್ಚುವ ಯಂತ್ರದ ಲೋಪ ಪ್ರಶ್ನಿಸಿ ಹೈಕೋರ್ಟ್ ಗೆ ಕಾರು ಮಾಲೀಕನೊಬ್ಬ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೊತೆಗೆ ತಾನು ಕುಡಿಯದೇ ಇದ್ದರೂ ಡ್ರಿಂಕ್ ಅಂಡ್ ಡ್ರೈವ್ ಯಂತ್ರದ ಲೋಪದಿಂದ ದಂಡ ವಿಧಿಸಿದ್ದನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ಗೆ ಅಜಯ್ ಕುಮಾರ್ ಕಶ್ಯಪ್ ಎಂಬುವರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಕಾರು ಚಾಲನೆ ಮಾಡುವಾಗ ಟ್ರಾಫಿಕ್ ಪೊಲೀಸರು ತಡೆದಿದ್ದರು. ಡ್ರಿಂಕ್ ಅಂಡ್ ಡ್ರೈವ್ ಯಂತ್ರದ ಮೂಲಕ ಪತ್ತೆ ವೇಳೆಯಲ್ಲಿ ಎರಡು ಬಾರಿ ನೆಗೆಟಿವ್ ತೋರಿಸಿ, 3ನೇ ಬಾರಿ ಪಾಸಿಟಿವ್ ಬಂದಿತ್ತು ಎಂದಿದ್ದಾರೆ. ತಾನು ಮದ್ಯಪಾನ ಮಾಡದಿದ್ದರೂ ಯಂತ್ರದಲ್ಲಿ ಪಾಸಿಟಿವ್ ತೋರಿಸಿತ್ತು. ಕುಡಿದಿಲ್ಲವೆಂದರೂ ಒಪ್ಪದೇ ಪೊಲೀಸರು ಕಾರು ಸೀಜ್ ಮಾಡಿ 10,000 ದಂಡವನ್ನು ವಿಧಿಸಿದ್ದಾರೆ. ತಾವೇ ಖಾಸಗಿ ಲ್ಯಾಬ್ ನಲ್ಲಿ ಟೆಸ್ಟ್ ಮಾಡಿಸಿದಾಗಲೂ ನೆಗೆಟಿವ್ ಬಂದಿದೆ. ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಯಂತ್ರದಲ್ಲೇ ಲೋಪವಿದೆ ಎಂಬುದಾಗಿ ವಾದಿಸಿದ್ದಾರೆ. ರಾಜ್ಯ ಸರ್ಕಾರವನ್ನು ಹೈಕೋರ್ಟ್ ಏಕಸದಸ್ಯ ಪೀಠವು ಪ್ರಶ್ನಿಸಿದೆ. ಯಂತ್ರದಲ್ಲೇ…
ಮಂಡ್ಯ: ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಆಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್.25ರಿಂದ ನಾಲ್ಕು ದಿನಗಳ ಕಾಲ ಆಚರಣೆ ನಡೆಸಲಾಗುತ್ತದೆ ಎಂಬುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು ಈ ಸಂಬಂಧ ಮಂಡ್ಯದ ಜಿ.ಪಂ ಕಾವೇರಿ ಸಭಾಂಗಣದಲ್ಲಿ ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಸೆ.25 ರಿಂದ 28 ರ ವರಗೆ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ನಡೆಸಲು ನಿರ್ಧರಿಸಲಾಗಿದೆ. ಶ್ರೀರಂಗಪಟ್ಟಣ ದಸರಾವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಈ ಬಳಿಕ ಮಾತನಾಡಿದಂತ ಅವರು, ಈ ಬಾರಿಯ ಶ್ರೀರಂಗಪಟ್ಟಣ ದಸರಾ ವಿಶೇಷವಾಗಿ ಇರುತ್ತದೆ. ಸೆಪ್ಟೆಂಬರ್ 25 ರಿಂದ 28ರವರಗೆ ನಾಲ್ಕು ದಿನದ ದಸರಾ ಆಚರಣೆ ಮಾಡಲಾಗುತ್ತಿದೆ. ಉದ್ಘಾಟರ ಆಯ್ಕೆ ಎಲ್ಲರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಸೂಕ್ತ ವ್ಯಕ್ತಿಯನ್ನ ಆಯ್ಕೆ ಮಾಡ್ತೇವೆ. ಆನೆಗಳನ್ನ ಜವಾಬ್ದಾರಿ DFO ಗೆ ಕೊಟ್ಟಿದ್ದೇವೆ. ಸ್ಥಳೀಯ ಕಲಾವಿದರಿಗೆ ಆದ್ಯತೆ ಕೋಡ್ತೇವೆ.…
ಬೆಂಗಳೂರು: ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ ಮಾಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದರು. ನಗರದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ರಚನೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದರಲ್ಲದೆ ಕೆಲವು ಶಕ್ತಿಗಳ ಒತ್ತಡಕ್ಕೆ ಮಣಿದು ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಕಿಡಿಕಾರಿದರು. ಧರ್ಮಸ್ಥಳದ ವಿಚಾರದಲ್ಲಿ ಈ ಸರ್ಕಾರ ನಡೆದುಕೊಂಡಿದ್ದು ಸರಿಯಲ್ಲ, ಅದಕ್ಕೆ ಮುಂದಿನ ದಿನಗಳಲ್ಲಿ ಶ್ರೀ ಮಂಜುನಾಥ ಸ್ವಾಮಿ ಶಿಕ್ಷೆ ನೀಡುವುದು ಖಚಿತ. ಆರಂಭಿಕ ಹಂತದಿಂದ ಕೂಡ ಸರ್ಕಾರ ಸರಿಯಾಗಿ ನಡೆದುಕೊಂಡಿಲ್ಲ. ಇಲ್ಲಿ ರಾಜಕೀಯ ಅಥವಾ ಧರ್ಮವನ್ನು ತರುವುದಿಲ್ಲ. ಆದರೆ ಕ್ಷೇತ್ರದ ಬಗ್ಗೆ ಸರ್ಕಾರ ನಡೆದುಕೊಂಡ ರೀತಿ ಮಾತ್ರ ಅಪಮಾನ ಉಂಟು ಮಾಡುವ ರೀತಿಯಲ್ಲಿ ನಡೆದುಕೊಂಡಿದೆ. ಇದು ಅಕ್ಷಮ್ಯ ಎಂದು ಅವರು ಹೇಳಿದರು. ಆರಂಭದಿಂದಲೂ ತನಿಖೆಯ ನಾಟಕ ನಡೆದಿದೆ. ಸಿ.ಎಸ್. ದ್ವಾರಕಾನಾಥ್ ಎನ್ನುವ ವ್ಯಕ್ತಿ ಮೊದಲು ದೂರು ನೀಡಿರುತ್ತಾರೆ.…













