Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ಮಾರ್ಚ್.31ರ ಒಳಗಾಗಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯನ್ನು ಬದಲಾವಣೆ ಮಾಡಬೇಕು. ಒಂದು ವೇಳೆ ಬದಲಾವಣೆ ಮಾಡದೇ ಇದ್ದರೇ ಮುಂದಿನ ನಿರ್ಧಾರ ಪ್ರಕಟಿಸೋದಾಗಿ ಬಿಜೆಪಿ ಹೈಕಮಾಂಡ್ ಗೆ ದಿಂಗಾಲೇಶ್ವರ ಸ್ವಾಮೀಜಿ ಡೆಡ್ ಲೈನ್ ನೀಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹುಬ್ಬಳ್ಳಿ – ನನ್ನ ಸ್ಪರ್ಧೆಗೆ ಬಗ್ಗೆ ಮಠಾಧೀಪತಿಗಳು ಮಹತ್ವದ ಸಲಹೆ ಕೊಟ್ಟಿದ್ದಾರೆ. ನಾವು ಏಪ್ರಿಲ್ ಎರಡರ ನಂತರ ಎಲ್ಲವನ್ನು ತಿಳಿಸಲಿದ್ದೇವೆ. ಅಭ್ಯರ್ಥಿ ಬಗ್ಗೆ ನಾವಿನ್ನೂ ಯೋಚನೆ ಮಾಡಿಲ್ಲ. ನಮ್ಮ ಬೇಡಿಕೆ ಜೋಶಿ ಅವರ ಬದಲಾವಣೆ ಮಾಡಬೇಕು. ಮಾಧ್ಯಮದ ಮೂಲಕ ಹೈಕಮಾಂಡ್ ಗೆ ನಾನು ಮನವಿ ಮಾಡ್ತೀನಿ ಎಂದರು. ಜೋಶಿ ಅವರ ಬದಲಾವಣೆ ಮಾಡಬೇಕು. ಏಕಸ್ವಾಮ್ಯತೆ ಹೊಂದಿರೋ ಈ ವ್ಯಕ್ತಿಯ ಬದಲಾವಣೆ ಮಾಡಬೇಕು ಎಂಬುದಾಗಿ ಏಕವಚನದಲ್ಲಿ ಜೋಶಿ ವಿರುದ್ದ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿ ನಡೆಸಿದರು. ಇದಕ್ಕಾಗಿ ಮಾರ್ಚ್ 31ರವರೆಗೆ ಅವಕಾಶ ಕೊಡುತ್ತೇವೆ. ಅಭ್ಯರ್ಥಿ ಬದಲಾವಣೆ ಮಾಡದೆ ಇದ್ದಲ್ಲಿ ಏಪ್ರಿಲ್ 2 ಕ್ಕೆ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ…
ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಅಕ್ರಮ ಬಂಧನವನ್ನು ಖಂಡಿಸಿ ಹಾಗೂ ಸಂವಿಧಾನದ, ಪ್ರಜಾಪ್ರಭುತ್ವದ ಉಳಿವಿಗಾಗಿ ಮೋದಿ ಸರ್ಕಾರದ ದುಷ್ಕೃತ್ಯಗಳನ್ನು ವಿರೋಧಿಸಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರನ್ನು ಒಳಗೊಂಡಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಇಂದು ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮಾರ್ಚ್ 31ರಂದು ಭಾನುವಾರ ನಗರದ ಫ್ರೀಡಂ ಪಾರ್ಕ್’ನಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಎಎಪಿ ಹಾಗೂ ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಲಿದ್ದಾರೆ. ಮೋದಿ ಸರ್ಕಾರದ ಕ್ರೌರ್ಯವನ್ನು ವಿರೋಧಿಸಿ ಜನಸಾಮಾನ್ಯರೂ ಸ್ವಇಚ್ಛೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಮೋದಿ ಸರ್ಕಾರಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಲಿದ್ದೇವೆ ಎಂದು ಮೋಹನ್ ದಾಸರಿ ವಿವರಿಸಿದರು. ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮುಂತಾದ ತನಿಖಾ ಸಂಸ್ಥೆಗಳ…
ಮೈಸೂರು : ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಗೆ ಶಕ್ತಿ ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಕಾಂಗ್ರೆಸ್ ಸೇರಿದವರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದರು.ಸ್ಥಾನಮಾನಕ್ಕಾಗಿ ಅಲ್ಲದೇ ಕಾಂಗ್ರೆಸ್ ಪಕ್ಷ ಬಿಜೆಪಿ ಬಿಡಲು ಅಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ. ರಾಜಕೀಯ, ಸಾಮಾಜಿಕ ಕೇತ್ರದಲ್ಲಿ ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ರಾಜೀವ್ ಅವರು ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಒಳ್ಳೆಯ ಬೆಳವಣಿಗೆ ಹಾಗೂ ಪಕ್ಷದ ಸಿದ್ಧಾಂತ ಒಪ್ಪಿ ಬರುವುದನ್ನು ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ ಎಂದರು. ಕಾಂಗ್ರೆಸ್ ಪಕ್ಷ ಗೆಲ್ಲಿಸಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಬೇಕು ಕಾಂಗ್ರೆಸ್ ಪಕ್ಷಕ್ಕೆ ರಾಜೀವ್ ಮತ್ತು ಸೇರ್ಪಡೆಯಿಂದಾಗಿ ಶಕ್ತಿ ಬಂದಂತಾಗಿದೆ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಅವರು ಸೇರಿರುವುದರಿಂದ ಕೃಷ್ಣರಾಜ…
ಬೆಂಗಳೂರು: ಇಂದು ರಾಜ್ಯಾಧ್ಯಂತ ಎರಡನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. 8.27 ಲಕ್ಷ ವಿದ್ಯಾರ್ಥಿಗಳು ಇಂದು ನಡೆದಂತ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ 9 ವಿದ್ಯಾರ್ಥಿಗಳನ್ನು ಇಂದು ಒಂದೇ ದಿನ ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 27-03-2024ರಂದು ಸೋಷಿಯಲ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದಂತ 8,41,120 ವಿದ್ಯಾರ್ಥಿಗಳಲ್ಲಿ, 8,27,773 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು ಎಂದು ತಿಳಿಸಿದೆ. ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಕಾರಣ ಬೆಂಗಳೂರು ಉತ್ತರ ವಿಭಾಗದಲ್ಲಿ ಓರ್ವ, ಧಾರವಾಡದಲ್ಲಿ ನಾಲ್ವರು, ಯಾದಗಿರಿಯಲ್ಲಿ ಓರ್ವ ಹಾಗೂ ರಾಯಚೂರು ಜಿಲ್ಲೆಯಲ್ಲಿ ಮೂವರು ಸೇರಿದಂತೆ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ. 9 ವಿದ್ಯಾರ್ಥಿಗಳು ಡಿಬಾರ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಗಲು ಮಾಡಲು ಯತ್ನಿಸಿದ ಕಾರಣ ಬೆಂಗಳೂರು ಉತ್ತರ ವಿಭಾಗದಲ್ಲಿ ಕೆಪಿಎಸ್ ಶಾಲೆಯ ಓರ್ವ ವಿದ್ಯಾರ್ಥಿಯನ್ನು ಡಿಬಾರ್…
ನವದೆಹಲಿ: ‘ಸದ್ಗುರು’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್ ಅವರು ಮಾರ್ಚ್ 17 ರಂದು ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಂತರಿಕ ರಕ್ತಸ್ರಾವದಿಂದಾಗಿ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ಕೆಲವು ವಾರಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಅವರನ್ನು ನವದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪೊಲೊ ಆಸ್ಪತ್ರೆಗಳ ಸಮೂಹದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಸಂಗೀತಾ ರೆಡ್ಡಿ ಅವರು ಇತ್ತೀಚೆಗೆ ಆಸ್ಪತ್ರೆಯಲ್ಲಿ ಸದ್ಗುರು ಅವರನ್ನು ಭೇಟಿಯಾಗಿ, “ವೈದ್ಯರು ಸದ್ಗುರು ಅವರ ಚೇತರಿಕೆ ಮತ್ತು ಗುಣಪಡಿಸುವಿಕೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಸದ್ಗುರುಗಳು, ಅವರು ಚೇತರಿಸಿಕೊಳ್ಳುತ್ತಿದ್ದರೂ, ಅದೇ ಮನೋಭಾವವನ್ನು ಉಳಿಸಿಕೊಂಡಿದ್ದಾರೆ. ಜಾಗತಿಕ ಒಳಿತಿಗಾಗಿ ಅವರ ಬದ್ಧತೆ, ಅವರ ತೀಕ್ಷ್ಣ ಮನಸ್ಸು ಮತ್ತು ಅವರ ಹಾಸ್ಯ ಪ್ರಜ್ಞೆ ಎಲ್ಲವೂ ಹಾಗೇ ಇದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿರುವ ಲಕ್ಷಾಂತರ ಜನರಿಗೆ ಇದು ಒಳ್ಳೆಯ ಸುದ್ದಿ ಎಂದು ನಾನು ಭಾವಿಸುತ್ತೇನೆ. ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ ಮತ್ತು…
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಂತ ವಿವಿಧ ರಾಜಕೀಯ ನಾಯಕರ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರ ವಿರುದ್ಧ ಚುನಾವಣಾ ಆಯೋಗದಿಂದ ಬಿಜೆಪಿ ದೂರು ನೀಡಿದೆ. ಇಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ಸಲ್ಲಿಸಿದೆ. ದೂರಿನಲ್ಲಿ ಕರ್ನಾಟಕ ಸರ್ಕಾರದ ಕೆಲವು ಸಚಿವರುಗಳು ತಮ್ಮ ಸರ್ಕಾರಿ ಕಚೇರಿಗಳನ್ನು ಲೋಕಸಭಾ ಚುನಾವಣೆಯ ಕಾರ್ಯಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ವರ್ತಮಾನ ಬಂದಿರುತ್ತದೆ ಎಂದಿದೆ. ಈ ವಿಚಾರವನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿ, ಸದರಿಯವರುಗಳ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಮೂಲಕ ಸರ್ಕಾರಿ ನಿವಾಸದಲ್ಲಿ ಲೋಕಸಭಾ ಚುನಾವಣೆಯ ದರ್ಬಾರ್ ನಡೆಸುತ್ತಿರುವಂತ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಬಿಜೆಪಿ ಶಾಕ್ ನೀಡಿದೆ. https://kannadanewsnow.com/kannada/sslc-exam-8-27-lakh-students-appear-today-9-debarred/ https://kannadanewsnow.com/kannada/dk-shivakumar-defamation-case-against-yatnal-hc-refuses-to-transfer-plea/
ಬೆಂಗಳೂರು: ಇಂದು ರಾಜ್ಯಾಧ್ಯಂತ ಎರಡನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. 8.27 ಲಕ್ಷ ವಿದ್ಯಾರ್ಥಿಗಳು ಇಂದು ನಡೆದಂತ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 27-03-2024ರಂದು ಸೋಷಿಯಲ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದಂತ 8,41,120 ವಿದ್ಯಾರ್ಥಿಗಳಲ್ಲಿ, 8,27,773 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು ಎಂದು ತಿಳಿಸಿದೆ. ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಕಾರಣ ಬೆಂಗಳೂರು ಉತ್ತರ ವಿಭಾಗದಲ್ಲಿ ಓರ್ವ, ಧಾರವಾಡದಲ್ಲಿ ನಾಲ್ವರು, ಯಾದಗಿರಿಯಲ್ಲಿ ಓರ್ವ ಹಾಗೂ ರಾಯಚೂರು ಜಿಲ್ಲೆಯಲ್ಲಿ ಮೂವರು ಸೇರಿದಂತೆ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಇಂದಿನ ಎಸ್ ಎಸ್ ಎಲ್ ಸಿಯ ಸಮಾಜ ವಿಜ್ಞಾನ ಪರೀಕ್ಷೆಗೆ 13,347 ವಿದ್ಯಾರ್ಥಿಗಳು ಗೈರಾಗಿದ್ದಾರೆ. 98.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ಅಂಕಿ ಅಂಶವನ್ನು ನೀಡಿದೆ. https://kannadanewsnow.com/kannada/lok-sabha-elections-2024-candidates-to-file-nominations-tomorrow/ https://kannadanewsnow.com/kannada/dk-shivakumar-defamation-case-against-yatnal-hc-refuses-to-transfer-plea/
ಮಂಡ್ಯ: 2024ರ ಲೋಕಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಹೀಗಾಗಿ ನಾಳೆಯಿಂದಲೇ ಲೋಕಸಭಾ ಚುನಾವಣೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸೋದಕ್ಕೆ ಆರಂಭಗೊಳ್ಳಲಿದೆ. ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು, ಲೋಕಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏಪ್ರಿಲ್ 04 ಆಗಿದೆ. ನಾಮಪತ್ರ ಪರಿಶೀಲನೆ ನಡೆಸುವ ದಿನಾಂಕ ಏ.05 ಆಗಿರುತ್ತದೆ. ನಾಮಪತ್ರ ವಾಪಸ್ ಪಡೆಯುವ ದಿನ ಏ.08 ಆಗಿದೆ ಎಂದು ಹೇಳಿದ್ದಾರೆ. ಮತದಾನದ ದಿನಾಂಕ ಏ.26 ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಗೆ ಅವಕಾಶ ನೀಡಲಾಗಿದೆ. ಮತದಾನ ಎಣಿಕೆ ಮಾಡುವ ದಿನಾಂಕ ಜೂನ್ 04ರಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ 3 ಗಂಟೆಯ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಠಡಿ ಸಂಖ್ಯೆ 29ರಲ್ಲಿ ನಾಮಪತ್ರವನ್ನು ಸಲ್ಲಿಸಬಹುದು ಎಂದರು. ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ 100ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ. ಚುನಾವಣಾಧಿಕಾರಿಗಳ ಕಛೇರಿಗೆ ಕೇವಲ…
ಬೆಂಗಳೂರು: ನಗರದಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಆಗಿದ್ದಂತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಟ್ಟಿ ಕೊಲೆ ಮಾಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೌಡಿಶೀಟರ್, ಸುಫಾರಿ ಕಿಲ್ಲರ್ ದಿನೇಶ್ ಎಂಬಾತ ಮೇಲೆ 7 ದುಷ್ಕರ್ಮಿಗಳು ಮಚ್ಚು, ಲಾಂಗ್ ನಿಂದ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ದಿನೇಶ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರೋ ಘಟನೆ ನಡೆದಿದೆ. ರೌಡಿಶೀಟರ್, ಸುಫಾರಿ ಕಿಲ್ಲರ್ ದಿನೇಶ್ ಕೊಚ್ಚಿ ಕೊಲೆ ಮಾಡಿರುವಂತ 7 ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಬಾಣಸವಾಡಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೌಡಿ ಶೀಟರ್ ದಿನೇಶ್ ಹತ್ಯೆಯ ಹಿಂದಿನ ಕಾರಣ ಏನೆಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ https://kannadanewsnow.com/kannada/dk-shivakumar-defamation-case-against-yatnal-hc-refuses-to-transfer-plea/ https://kannadanewsnow.com/kannada/lok-sabha-elections-nominations-to-be-accepted-from-these-places-in-bengaluru-from-tomorrow/
ನವದೆಹಲಿ: ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಅನಿವಾಸಿ ಬಾಹ್ಯ ಅಥವಾ ಎನ್ಆರ್ಇ ಖಾತೆಗೆ ಸಂಬಂಧಿಸಿದ ವಹಿವಾಟುಗಳು ಮತ್ತು ವಿದೇಶಿ ಹಣ ರವಾನೆ ಮತ್ತು ಹಣ ವರ್ಗಾವಣೆಯ ಕೆಲವು ನಿದರ್ಶನಗಳ ಬಗ್ಗೆ ಮೊಯಿತ್ರಾ ಅವರನ್ನು ಪ್ರಶ್ನಿಸಲು ಏಜೆನ್ಸಿ ಬಯಸಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮೊಯಿತ್ರಾ ಅವರನ್ನು ಮಾದ್ಯಮಗಳು ಸಂಪರ್ಕಿಸಿದ್ರೂ, ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಕೃಷ್ಣನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಿಗೆ ಜಾರಿ ನಿರ್ದೇಶನಾಲಯ ನೀಡಿರುವ ಮೂರನೇ ಸಮನ್ಸ್ ಇದಾಗಿದೆ. ವೇಳಾಪಟ್ಟಿ ಸಂಘರ್ಷಗಳನ್ನು ಉಲ್ಲೇಖಿಸಿ ಅವರು ಮೊದಲ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡರು ಮತ್ತು ಏಜೆನ್ಸಿಯಿಂದ ಹೊಸ ದಿನಾಂಕವನ್ನು ಕೋರಿದರು. ಡಿಸೆಂಬರ್ ನಲ್ಲಿ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಹೊರಹಾಕಲು ಕಾರಣವಾದ ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಸಿಬಿಐ ಪ್ರಕರಣ ದಾಖಲಿಸಿದ ನಂತರ ಮತ್ತು ಅವರ ಕೋಲ್ಕತಾ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಈ…