Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: KSET-25ರ ಪರಿಷ್ಕೃತ ಕೀ ಉತ್ತರಗಳನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿವರಗಳಿಗೆ ವೆಬ್ ಸೈಟ್ http://kea.kar.nic.in ನೋಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ  ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು,  ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025 ಅನ್ನು ದಿನಾಂಕ:02.11.2025 ರಂದು ನಡೆಸಲಾಗಿದ್ದು, ಪತ್ರಿಕೆ-1 ಮತ್ತು ಪತ್ರಿಕೆ-2ರ ಒಟ್ಟು 33 ವಿಷಯಗಳಿಗೆ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ದಿನಾಂಕ:04.11.2025 ಪ್ರಕಟಿಸಿ, ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:06.11.2025ರಂದು ಸಂಜೆ 3.00 ಗಂಟೆಯೊಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು ಎಂದಿದ್ದಾರೆ. ಅದರಂತೆ, ಈ ಕೆಳಕಂಡ 07 ವಿಷಯಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಯಾವುದೇ ಆಕ್ಷೇಪಗಳು ಸ್ವೀಕೃತವಾಗಿಲ್ಲದಿರುವುದರಿಂದ ಇವುಗಳ ಯಾವುದೇ ಉತ್ತರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂಬುದಾಗಿ ಎಂಬುದಾಗಿ ತಿಳಿಸಿದ್ದಾರೆ. ಉಳಿದಂತೆ ಪತ್ರಿಕೆ-1 ಮತ್ತು 26 ವಿಷಯಗಳ ಬಗ್ಗೆ ಅಭ್ಯರ್ಥಿಗಳಿಂದ ಅಕ್ಷೇಪಣೆಗಳು ಸ್ವೀಕೃತವಾಗಿವೆ. ಸ್ವೀಕೃತವಾದ ಎಲ್ಲಾ ಆಕ್ಷೇಪಣೆಗಳನ್ನು…

Read More

ನವದೆಹಲಿ: ಗುರುವಾರ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ (CISCE) 2026 ರ 10 ಮತ್ತು 12 ನೇ ತರಗತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು cisce.org ನ ಅಧಿಕೃತ ವೆಬ್‌ಸೈಟ್‌ನಿಂದ ವಿವರವಾದ ದಿನಾಂಕ ಹಾಳೆಗಳನ್ನು ಡೌನ್‌ಲೋಡ್ ಮಾಡಬಹುದು. ಫೆಬ್ರವರಿಯಲ್ಲಿ ಪ್ರಾರಂಭವಾಗುವ ICSE, ISC 2026 ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ, ISC 12 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 12, 2026 ರಂದು ಪ್ರಾರಂಭವಾಗಿ ಏಪ್ರಿಲ್ 6, 2026 ರಂದು ಮುಕ್ತಾಯಗೊಳ್ಳಲಿವೆ, ಆದರೆ ICSE 10 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 17 ರಿಂದ ಮಾರ್ಚ್ 30, 2026 ರವರೆಗೆ ನಿಗದಿಯಾಗಿವೆ. 2025 ರಲ್ಲಿ, ICSE ಪರೀಕ್ಷೆಗಳು ಫೆಬ್ರವರಿ 18 ರಂದು ಪ್ರಾರಂಭವಾದರೆ, ISC ಪರೀಕ್ಷೆಗಳು ಫೆಬ್ರವರಿ 13 ರಂದು ಪ್ರಾರಂಭವಾದವು, ಆದ್ದರಿಂದ ಇದರರ್ಥ 2026 ರ ಅವಧಿಯು ಕೆಲವು ದಿನಗಳ ಮುಂಚಿತವಾಗಿ ಪ್ರಾರಂಭವಾಗುತ್ತದೆ. ದಿನಾಂಕ ಹಾಳೆಗಳು ಎಲ್ಲಾ ಸ್ಟ್ರೀಮ್‌ಗಳಲ್ಲಿ 120 ಕ್ಕೂ ಹೆಚ್ಚು ವಿಷಯಗಳನ್ನು ಒಳಗೊಂಡಿದೆ ICSE ವೇಳಾಪಟ್ಟಿಯು…

Read More

ಶಿವಮೊಗ್ಗ : ನವೆಂಬರ್.15ರಂದು ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಬೆಳಗ್ಗೆ 11 ಗಂಟೆಯಿಂದ ರಾತ್ರಿ 8.30ರವರೆಗೆ 2025ನೇ ಸಾಲಿನ ಅವ್ವ ಮಹಾಸಂತೆ ನಡೆಯಲಿದೆ ಎಂಬುದಾಗಿ ಜೀವನ್ಮುಖಿ ಸಂಸ್ಥೆಯ ಪ್ರತಿಭಾ ತಿಳಿಸಿದ್ದಾರೆ. ಬುಧವಾರದಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜೀವನ್ಮುಖಿ ಮತ್ತು ಚರಕ ವಿವಿಧೋದ್ದೇಶ ಮಹಿಳಾ ಸಂಸ್ಥೆಗಳ ಸಹಕಾರದೊಂದಿಗೆ 3ನೇ ಅವ್ವ ಮಹಾಸಂತೆ ನವೆಂಬರ್.15ರಂದು ಆಯೋಜಿಸಲಾಗಿದೆ. ಈ ಅವ್ವ ಮಹಾಸಂತೆಯನ್ನು ಗ್ರಾಹಕರಾಗಿ ಬನ್ನಿ ಮಹಿಳಾ ಕುಶಲಕರ್ಮಿಗಳನ್ನು ಬೆಂಬಲಿಸಿ ಘೋಷವಾಕ್ಯದಡಿ ನಡೆಸಲಾಗುತ್ತಿದೆ. ಮಹಿಳಾ ಉದ್ಯಮಿ ಸರೋಜಿನಿ ಎಸ್. ನಾಯ್ಕ್ ಅವ್ವ ಸಂತೆಯನ್ನು ಉದ್ಘಾಟಿಸಲಿದ್ದು, ಚರಕ ಸಂಸ್ಥೆಯ ಮಹಾಲಕ್ಷಿ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಪೌರಾಯುಕ್ತ ಎಚ್.ಕೆ.ನಾಗಪ್ಪ ಉಪಸ್ಥಿತರಿರುವರು ಎಂದು ಹೇಳಿದರು. 3ನೇ ಅವ್ವ ಮಹಾಸಂತೆಯನ್ನು ಅತ್ಯಂತ ವಿಶೇಷವಾಗಿ ಆಯೋಜಿಸಲಾಗಿದೆ. ರಾಜ್ಯದ ಬೇರೆಬೇರೆ ಭಾಗಗಳಿಂದ ಕುಶಲಕರ್ಮಿಗಳ ಗೃಹೋತ್ಪನ್ನಗಳು, ಕೈಮಗ್ಗ ವಸ್ತುಗಳು, ಸ್ಥಳೀಯ ಸಾಂಪ್ರದಾಯಿಕ ತಿನಿಸುಗಳು ಸಂತೆಯಲ್ಲಿ ಲಭ್ಯವಿರುತ್ತದೆ. ಚರಕ ಸಂಸ್ಥೆಯ ಕೈಮಗ್ಗ ವಸ್ತುಗಳು, ಇಕ್ರಾ ಸಂಸ್ಥೆಯ…

Read More

ಮೈಸೂರು: ನೈರುತ್ಯ ರೈಲ್ವೆ ವಾರಾಂತ್ಯಗಳಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ನಿರ್ವಹಿಸಲು ಹಾಗೂ ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂನಲ್ಲಿ ನಡೆಯಲಿರುವ ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ, ಕೆ.ಎಸ್.ಆರ್. ಬೆಂಗಳೂರು – ಅಶೋಕಪುರಂ ನಡುವೆ ಟ್ರೈವೀಕ್ಲಿ ಕಾಯ್ದಿರಿಸದ ವಿಶೇಷ ಮೆಮು ರೈಲುಗಳನ್ನು (ರೈಲು ಸಂಖ್ಯೆ 06213/06214) ಸಂಚರಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು ಶುಕ್ರವಾರ, ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಸಂಚರಿಸಲಿದ್ದು, ಒಟ್ಟು 18 ಟ್ರಿಪ್ ಸಂಚರಿಸಲಿದೆ. ಈ ಸೇವೆಗಳು 2025ರ ನವೆಂಬರ್ 14ರಿಂದ ಡಿಸೆಂಬರ್ 28ರವರೆಗೆ ಮುಂದುವರೆಯಲಿವೆ. ಆದರೆ ನವೆಂಬರ್ 21, 22 ಮತ್ತು 23, 2025 ರಂದು ಈ ರೈಲುಗಳು ಸಂಚರಿಸವುದಿಲ್ಲ. ರೈಲು ಸಂಖ್ಯೆ. 06213 ಕೆ.ಎಸ್.ಆರ್. ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 12:15 ಕ್ಕೆ ಹೊರಟು, ಮಧ್ಯಾಹ್ನ 3:40 ಕ್ಕೆ ಅಶೋಕಪುರಂ ತಲುಪಲಿದೆ. ರೈಲು ಸಂಖ್ಯೆ. 06214 ಅಶೋಕಪುರಂನಿಂದ ಸಂಜೆ 4:10 ಕ್ಕೆ ಹೊರಟು, ರಾತ್ರಿ 8:00 ಕ್ಕೆ ಕೆ.ಎಸ್.ಆರ್. ಬೆಂಗಳೂರು ತಲುಪಲಿದೆ. ಈ 8 ಕೋಚ್‌ಗಳ…

Read More

ನವದೆಹಲಿ: ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ತಿಳಿಗೊಳಿಸಬೇಕು. ಕಬ್ಬು ಬೆಳೆಗಾರರ ಸಂಕಷ್ಟ ಮತ್ತೆ ಸೃಷ್ಟಿಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುದೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು. ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ ಆ ಕ್ಷಣಕ್ಕೇನೋ ಅವರ ಮೂಗಿಗೆ ತುಪ್ಪ ಸವರಿದ ಸರಕಾರವು, ಇಡೀ ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಘೋರ ವೈಫಲ್ಯ ಕಂಡಿತು. ಅದರ ಪರಿಣಾಮವೇ ಮುಧೋಳದಲ್ಲಿ ರೈತರ ತಾಳ್ಮೆಯ ಕಟ್ಟೆಯೊಡೆಯುಂತೆ ಮಾಡಿದೆ ಎಂದು ಸಚಿವರು ದೂರಿದ್ದಾರೆ. ಅಕ್ಕಿ ಮೇಲೆ…

Read More

ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌ ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು…

Read More

ಬೆಂಗಳೂರು: ನಗರದ ಶಾಂತಿನಗರ ಕ್ರೀಡಾ ಸಂಕೀರ್ಣದಲ್ಲಿ ಶಟಲ್ ಬ್ಯಾಡ್ಮಿಂಟನ್, ಕೇರಂ, ಚೆಸ್ ಮತ್ತು ಟೇಬಲ್‌ ಟೆನ್ನಿಸ್ ಆಡುವ ಮೂಲಕ ನೌಕರರಿಗೆ ಪ್ರೋತ್ಸಾಹಿಸಿ ಕ್ರೀಡಾ ಸ್ಪರ್ಧೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಕೆಎಸ್ ಆರ್ ಟಿ ಸಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರುಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ಹಾಗೂ  ಸ್ಪರ್ಧೆಗಳಲ್ಲಿ ವಿಜೇತರಾದ ಅಧಿಕಾರಿ/ ಸಿಬ್ಬಂದಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ‌ ಅವರು, ನಿಗಮದಲ್ಲಿ ಅಧಿಕಾರಿ/ಸಿಬ್ಬಂದಿಗಳ ಉತ್ತಮ ಆರೋಗ್ಯ, ಒತ್ತಡ ನಿವಾರಣೆ ಹಾಗೂ ಕ್ರೀಡಾ ಮನೋರಂಜನೆಗಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಪ್ರತಿ ವರ್ಷವು ಘಟಕ, ವಿಭಾಗ, ಪ್ರಾದೇಶಿಕ ಕಾರ್ಯಗಾರ ಮತ್ತು ಕೇಂದ್ರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರು ಹಾಗೂ ಅವರ ಮಕ್ಕಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಕ್ರೀಡಾ ಮತ್ತು ಸಾಂಸ್ಕೃತಿಕ ನಿಧಿಯಿಂದ ವಿಭಾಗ/ಕಾರ್ಯಾಗಾರಗಳಿಗೆ ತಲಾ ರೂ. 40,000/- ರಂತೆ 17 ವಿಭಾಗಗಳಿಗೆ  ಎರಡು…

Read More

ನವದೆಹಲಿ: ಯೂಗೋವ್ ಸಹಯೋಗದೊಂದಿಗೆ ಆಶ್ಲೇ ಮ್ಯಾಡಿಸನ್ ನಡೆಸಿದ ಹೊಸ ಅಂತರರಾಷ್ಟ್ರೀಯ ಅಧ್ಯಯನವು, ಹತ್ತು ಭಾರತೀಯರಲ್ಲಿ ನಾಲ್ವರು ಸಹೋದ್ಯೋಗಿಗಳೊಂದಿಗೆ ಡೇಟಿಂಗ್ ಮಾಡಿದ್ದಾರೆ ಅಥವಾ ಪ್ರಸ್ತುತ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಬಹಿರಂಗಪಡಿಸುತ್ತದೆ. ಯುಎಸ್, ಯುಕೆ, ಕೆನಡಾ, ಮೆಕ್ಸಿಕೊ ಮತ್ತು ಜರ್ಮನಿ ಸೇರಿದಂತೆ 11 ದೇಶಗಳಲ್ಲಿ ನಡೆಸಲಾದ ಈ ಸಮೀಕ್ಷೆಯು 13,581 ವಯಸ್ಕರನ್ನು ಒಳಗೊಂಡಿತ್ತು. ಕೆಲಸದ ಸ್ಥಳದಲ್ಲಿ ಪ್ರೇಮ ಸಂಬಂಧಗಳನ್ನು ಒಪ್ಪಿಕೊಳ್ಳುವ ಜನರ ವಿಷಯದಲ್ಲಿ ಭಾರತ ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕಂಡುಹಿಡಿದಿದೆ. ಜಾಗತಿಕ ಶ್ರೇಯಾಂಕಗಳು ಮತ್ತು ಭಾರತದ ಸ್ಥಾನ ಮೆಕ್ಸಿಕೊ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಪ್ರತಿಕ್ರಿಯಿಸಿದವರಲ್ಲಿ 43% ಜನರು ಸಹೋದ್ಯೋಗಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದೇವೆ ಎಂದು ಹೇಳಿದ್ದಾರೆ, ಆದರೆ ಭಾರತವು 40% ರೊಂದಿಗೆ ನಿಕಟವಾಗಿ ಅನುಸರಿಸುತ್ತದೆ. ಹೋಲಿಸಿದರೆ, ಯುಎಸ್, ಯುಕೆ ಮತ್ತು ಕೆನಡಾದಂತಹ ದೇಶಗಳು ಸುಮಾರು 30% ರಷ್ಟು ಕಡಿಮೆ ಅಂಕಿಅಂಶಗಳನ್ನು ವರದಿ ಮಾಡಿವೆ. ವೃತ್ತಿಪರ ಗಡಿಗಳ ಬಗ್ಗೆ ಹೆಚ್ಚುತ್ತಿರುವ ಅರಿವು ಇದ್ದರೂ, ಕೆಲಸದ ಸ್ಥಳದ ಸಂಬಂಧಗಳು ಭಾರತದಲ್ಲಿ ಆಧುನಿಕ ಕಚೇರಿ ಸಂಸ್ಕೃತಿಯ ಗಮನಾರ್ಹ ಭಾಗವಾಗಿ ಉಳಿದಿವೆ…

Read More

ಬೆಂಗಳೂರು: ಯುನೆಸ್ಕೋ ಮಾಹಿತಿಯ ಪ್ರಕಾರ, ಕಳೆದ ಎರಡು ದಶಕಗಳಲ್ಲಿ ಜಾಗತಿಕವಾಗಿ 1,600 ಕ್ಕೂ ಹೆಚ್ಚು ಪತ್ರಕರ್ತರು ಹತ್ಯೆಯಾಗಿರುವುದು ನೋವಿನ ಸಂಗತಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಬೆಂಗಳೂರಿನಲ್ಲಿ ಯುನೆಸ್ಕೊ, ಪತ್ರಕರ್ತರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ‘ಸುರಕ್ಷತೆ, ಕಾನೂನು ಸಬಲೀಕರಣ ಮತ್ತು ಭಾರತದಲ್ಲಿ ಪತ್ರಕರ್ತರ ಲಿಂಗ-ಪ್ರತಿಕ್ರಿಯಾತ್ಮಕ ರಕ್ಷಣೆ ಕುರಿತ ಮೂರು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇನ್ನೂ ನೋವಿನ ಸಂಗತಿ ಅಂದರೆ, ಸುಮಾರು ಶೇ.80 ಪ್ರಕರಣಗಳಲ್ಲಿ, ಅಪರಾಧಿಗಳನ್ನು ಎಂದಿಗೂ ನ್ಯಾಯದ ಮುಂದೆ ತರಲಾಗಿಲ್ಲ ಎಂದು ಅವರು ವಿಷಾದಿಸಿದರು. ಸತ್ಯದ ನೆಲೆಯಲ್ಲಿ ಹೋರಾಟ ಮಾಡುತ್ತಿರುವ ಪ್ರಪಂಚದಾದ್ಯಂತ ಪತ್ರಕರ್ತರು ಇಂದಿಗೂ ಬೆದರಿಕೆಗಳು, ಕಿರುಕುಳ ಮತ್ತು ಜೀವಹಾನಿಯನ್ನು ಎದುರಿಸುತ್ತಲೇ ಇದ್ದಾರೆ ಎಂದರು. ಭಾರತದಲ್ಲಿಯೂ ಸಹ, ಭ್ರಷ್ಟಾಚಾರ, ಪರಿಸರ ಸಮಸ್ಯೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಯನ್ನು ವರದಿ ಮಾಡುವ ವರದಿಗಾರರು ಬೆದರಿಕೆ ಅಥವಾ ಹಿಂಸೆಯನ್ನು ಎದುರಿಸಿದ ಪ್ರಕರಣಗಳನ್ನು ನಾವು ನೋಡಿದ್ದೇವೆ. ವಾಕ್ ಸ್ವಾತಂತ್ರ್ಯದ ರಕ್ಷಣೆಯಲ್ಲಿ ಧೃಢವಾಗಿ ನಿಂತ ಗೌರಿ ಲಂಕೇಶ್‌ರಂತಹ…

Read More

ಬೆಂಗಳೂರು: ಬೆಳಗಾವಿಯ ಸೈದಾಪುರದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಕಬ್ಬು ತುಂಬಿದ್ದಂತ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯ ಬಗ್ಗೆ ತೀವ್ರ ಖೇದ ವ್ಯಕ್ತ ಪಡಿಸಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತಂತೆ ಬೆಳಗಾವಿಯ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಅವರಿಗೆ ದೂರವಾಣಿ ಕರೆ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಜೊತೆಗೆ ಅಧಿಕಾರಿಗಳೊಂದಿಗೂ ಮಾತನಾಡಿದಂತ ಅವರು, ಅವರಿಂದಲೂ ಮಾಹಿತಿಯನ್ನು ಪಡೆದರು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು, ರೈತರು ತಮ್ಮ ಟ್ರ್ಯಾಕ್ಟರ್ ಗಳನ್ನೇ ಸುಡ್ತಾರಾ? ಸರ್ಕಾರ ಏನ್ಮಾಡಬೇಕು ಎಲ್ಲ ಮಾಡಿದೆ. ಯಾರದ್ದೋ ಮನಸ್ಸಿನಲ್ಲಿ ಅಸೂಯೆ ಇರಬೇಕು ಎಂದರು. ರೈತರಾದವರು ಯಾರೂ ಕೂಡ ಈ ರೀತಿ ಮಾಡುವುದಿಲ್ಲ. ಇತಿಹಾಸದಲ್ಲೇ ಯಾವ ಸರ್ಕಾರ ಕೊಡದ ದರ ನಾವು ಕೊಟ್ಟಿದ್ದೇವೆ. ರಾಜ್ಯದಲ್ಲಿ ಇಡೀ ರೈತ ಸಂಕುಲ ತುಂಬಾ ಸಂತೋಷದಿಂದ ಇದೆ ಎಂದರು. ಜ್ವಲಿಸಿದ ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ 100ಕ್ಕೂ…

Read More