Author: kannadanewsnow09

ಬೆಂಗಳೂರು: “ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎನ್ನುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಇದು ಕರ್ನಾಟಕ ಸರ್ಕಾರದ ತೀರ್ಮಾನ. ಇದರಿಂದ ಬಿಜೆಪಿಗೆ ಆತಂಕವೇಕೆ? ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದೆ. ಬಿಜೆಪಿ ಅವಧಿಯಲ್ಲಿ ಮಾಡಿರುವ ಕಾನೂನು ಇದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ನಾವು ತೀರ್ಮಾನಿಸಿದ್ದೇವೆ. ಈ ತೀರ್ಮಾನದಿಂದ ನಿಮಗೆ ಗಾಬರಿ ಯಾಕೆ? ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಯಾಕೆ ವರ್ತಿಸುತ್ತಿದ್ದೀರಿ. ನಾವು ಲೋಕಸಭೆ ಚುನಾವಣೆಗಳನ್ನು ಪರಿಶೀಲನೆ ಮಾಡಿದ್ದೇವೆ. ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸುವಂತೆ ಸ್ಥಳೀಯ ಸಂಸ್ಥೆ ಚುನಾವಣೆ ಮಾಡುತ್ತಿದ್ದೇವೆ. ಕೇಂದ್ರ ಚುನಾವಣಾ ಆಯೋಗ ಅವರ ತೀರ್ಮಾನದಂತೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ…

Read More

ಬೆಂಗಳೂರು : “ಇಡೀ ಪ್ರಪಂಚ‌ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರಿನ‌ ಮೂಲಕ ನೋಡುತ್ತಿದೆ. ಇದಕ್ಕೆ ಶಿಕ್ಷಕರೇ ಮೂಲ ಕಾರಣ. ಶಿಕ್ಷಣದಿಂದಲೇ ಪ್ರಗತಿ ಹೀಗಾಗಿ ನಮ್ಮ ಪ್ರಗತಿಗೆ ಶಿಕ್ಷಕರ‌ ಪಾಲು ಹೆಚ್ಚಿದೆ” ಎಂದು ಡಿಸಿಎಂ‌‌ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಶಿವಕುಮಾರ್ ಅವರು ಮಾತನಾಡಿದರು. “ನಮ್ಮ ಹಿರಿಯರು ಶಿಕ್ಷಣದ ಮೂಲಕ ನಮಗೆ ಕೊಟ್ಟಿರುವ ಕೊಡುಗೆ ಮಹತ್ವದ್ದಾಗಿದೆ. ಸಿ.ವಿ ರಾಮನ್, ಸರ್ವಪಲ್ಲಿ ರಾಧಾಕೃಷ್ಣನ್ ಅವರಂತಹ ಶ್ರೇಷ್ಠ ವ್ಯಕ್ತಿಗಳು ಕರ್ನಾಟಕದ ನೆಲದಲ್ಲಿ ಬೋಧನೆ ಮಾಡಿದ್ದಾರೆ. ಕರ್ನಾಟಕವು ಅತ್ಯಂತ ಹೆಚ್ಚು ಎಂಜಿನಿಯರ್, ವೈದ್ಯರು, ನರ್ಸ್ ಗಳನ್ನು ದೇಶಕ್ಕೆ ಕೊಡುಗೆ ನೀಡುತ್ತಿದೆ. ಜವಾಹರ್ ಲಾಲ್ ನೆಹರೂ ಅವರ ಕಾಲದಲ್ಲೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ದೊರೆಯಿತು” ಎಂದರು. ಸಿಎಸ್ ಅರ್ ಅನುದಾನದಲ್ಲಿ ಶಾಲೆಗಳ ನಿರ್ಮಾಣಕ್ಕೆ ಹೊಸ ತೀರ್ಮಾನ “ಮುಂದಿನ ಸಚಿವ ಸಂಪುಟದಲ್ಲಿ ಸಿಎಸ್‌ ಆರ್ ಅನುದಾನದಿಂದ ಶಾಲೆಗಳ ನಿರ್ಮಾಣದ ಬಗ್ಗೆ ಮಹತ್ವದ ತೀರ್ಮಾನ ಮಾಡಲಾಗುವುದು. ಯಾರು…

Read More

ಮಂಡ್ಯ : ನನಗೆ ಇಬ್ಬಿಬ್ಬರು ಮೂರು ಮೂರು ಜನ ಹೆಂಡ್ತಿರಿಲ್ಲ. ನಾನು ಯಾರ ಜೊತೆನೂ ಸಂಬಂಧ ಇಟ್ಟುಕೊಂಡು ಹೈಟೆಕ್ 5 ಸ್ಟಾರ್ ಹೋಟೆಲ್ ನಲ್ಲಿ ಕುಳಿತುಕೊಂಡಿಲ್ಲ. ನಾನು ಕ್ಷೇತ್ರದಲ್ಲೇ ಇದ್ದಿನಿ ಪ್ರತಿನಿತ್ಯ ಜನ ಸೇವೆ ಮಾಡುತ್ತಾ ಇದ್ದಿನಿ. ನಾನೇಲ್ಲೂ ಓಡಿ ಹೋಗಿಲ್ಲ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಪರೋಕ್ಷವಾಗಿ ಕಿಡಿಕಾರಿದರು. ಚಿತ್ರದುರ್ಗದ ಶಾಸಕ ವೀರೇಂದ್ರ (ಪಪ್ಪಿ) ಅವರ ಮನೆ, ಕಛೇರಿ ಮೇಲೆ ಕೆಲ ದಿನಗಳ ಹಿಂದೆ ಇಡಿ ದಾಳಿ ಮಾಡಿ ಸಾವಿರಾರು ಕೋಟಿ ಆಸ್ತಿ ಪಾಸ್ತಿ ಪತ್ತೆ ಮಾಡಿ ಪಪ್ಪಿ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ವೀರೇಂದ್ರ ಪಪ್ಪಿ ಅವರ ಮೇಲೆ ಇಡಿ ದಾಳಿ ನಡೆದಾಗಿನಿಂದ ಉದಯ್ ಕ್ಷೇತ್ರದಲ್ಲಿ ಕಾಣೆಯಾಗಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳು ಸೋಶೀಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಮದ್ದೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಉದಯ್,…

Read More

ಮಂಡ್ಯ: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಎಡಮುರಿಗೆ ತೆರಳಿದ್ದಂತ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಕಾವೇರಿ ನದಿಯ ಪ್ರವಾಸಿ ತಾಣವಾಗಿರುವ ಎಡಮುರಿ ವಾಟರ್ ಪಾಲ್ಸ್. ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ಮೃತ ದುರ್ದೈವಿಗಳಾಗಿದ್ದಾರೆ. ಮೃತ ವಿದ್ಯಾರ್ಥಿಗಳ್ನು ಶ್ಯಾಮ್(20) ವೆಂಕಟೇಶ್ (20) ಎಂದು ಗುರುತಿಸಲಾಗಿದೆ. ಕಾಲೇಜಿಗೆ ರಜೆ ಇದ್ದ ಕಾರಣಕ್ಕೆ ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ಬಂದು ದುರ್ಘಟನೆ ನಡೆದಿದೆ. ಈ ವಿಷಯ ತಿಳಿದು ಸ್ಥಳದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃಹದೇಹಗಳು ಹೊರ ತೆಗೆದಿದ್ದಾರೆ. ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/on-the-backdrop-of-the-lunar-eclipse-on-7th-the-gavigoragada-temple-in-bangalore-will-be-closed-at-11-am/ https://kannadanewsnow.com/kannada/ravikumar-resigns-from-the-post-of-president-of-the-karnataka-bovi-development-corporation/

Read More

ಬೆಂಗಳೂರು: ಭ್ರಷ್ಟಾಚಾರ ಆರೋಪದ ವೀಡಿಯೋ ವೈರಲ್ ಆಗಿದ್ದರಿಂದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ಕೊಟ್ಟು ಹೊರ ಹೋಗುವಂತೆ ಖಡಕ್ ಸೂಚಿಸಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಲಂಚ ಕೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ್ದಂತ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದರು. ಜೊತೆಗೆ ರಾಜೀನಾಮೆಗೂ ಸೂಚಿಸಿದ್ದರು. ಈ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ಅಂದಹಾಗೇ ರವಿಕುಮಾರ್ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸಿನಲ್ಲಿ ಶಿಸ್ತು, ಪಾರದರ್ಶಕತೆ ರೂಪಿಸಿದ್ದಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ನಡೆದಿದೆ. ಇದಷ್ಟೇ ಅಲ್ಲದೇ ಎಐ ಬಳಸಿ ನನ್ನ ವಿರುದ್ಧ ಪಿತೂರು ಮಾಡಲಾಗಿದೆ. ನಿಗಮದ ಕಚೇರಿಯಲ್ಲಿಯೇ ವೀಡಿಯೋ ಶೂಟ್ ಮಾಡಲಾಗಿದೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು…

Read More

ಬೆಂಗಳೂರು: ಸೆಪ್ಟಂಬರ್.7ರ ಭಾನುವಾರದಂದು ರಕ್ತ ಚಂದ್ರಗ್ರಹಣ ಸಂಭವಿಸಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಾಲಯವನ್ನು ಬೆಳಗ್ಗೆ 11 ಗಂಟೆಗೆ ಬಂದ್ ಮಾಡಲಾಗುತ್ತಿದೆ. ಈ ಬಗ್ಗೆ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಮಾಹಿತಿ ನೀಡಿದ್ದು, ಸೂರ್ಯಗ್ರಮಹಣವಾದರೇ ಗ್ರಹಣಕ್ಕೂ ಸ್ವಲ್ಪ ಹೊತ್ತಿನ ಮೊದಲು ದೇವಸ್ಥಾನ ಮುಚ್ಚಲಾಗುತ್ತದೆ. ಆದರೇ ಚಂದ್ರಗ್ರಹಣದ ವೇಳೆ ಹಾಗೆ ಮಾಡೋದಕ್ಕೆ ಬರೋದಿಲ್ಲ. ಗ್ರಹಣಕ್ಕೂ ಮೊದಲ ಸುಮಾರು 6 ಗಂಟೆ ದೇವಾಲಯವನ್ನು ಬಂದ್ ಮಾಡುವುದಾಗಿ ತಿಳಿಸಿದರು. ಸೆಪ್ಟೆಂಬರ್.7ರ ಭಾನುವಾರದಂದು ಚಂದ್ರಗ್ರಹಣದ ಕಾರಣ ಗಂಗಾಧರನಿಗೆ ಕ್ಷೀರ ನೈವೇದ್ಯ ಮಾಡಲಾಗುತ್ತದೆ. ಕ್ಷೀರ ಬಿಟ್ಟು ಬೇರೆ ಪ್ರಸಾದ ನೀಡುವುದಿಲ್ಲ. ಬೆಳಗ್ಗೆ 11 ಗಂಟೆಯವರೆಗೆ ದೇವರ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶವಿದೆ. ಆ ಬಳಿಕ ಕ್ಲೋಸ್ ಮಾಡಲಾಗುತ್ತದೆ ಎಂದರು. https://kannadanewsnow.com/kannada/corruption-allegations-ravi-kumar-resigns-from-the-position-of-chairman-of-the-karnataka-bhovia-development-corporation/

Read More

ಬೆಂಗಳೂರು: ಶೇ.60% ಕಮೀಷನ್ ಆರೋಪದ ವೀಡಿಯೋ ವೈರಲ್ ಆಗಿದ್ದರಿಂದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ಕೊಟ್ಟು ಹೊರ ಹೋಗುವಂತೆ ಖಡಕ್ ಸೂಚಿಸಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಕಮೀಷನ್  ಲಂಚ ಕೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ್ದಂತ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದರು. ಜೊತೆಗೆ ರಾಜೀನಾಮೆಗೂ ಸೂಚಿಸಿದ್ದರು. ಈ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ಅಂದಹಾಗೇ ಎಸ್.ರವಿಕುಮಾರ್ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸಿನಲ್ಲಿ ಶಿಸ್ತು, ಪಾರದರ್ಶಕತೆ ರೂಪಿಸಿದ್ದಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ನಡೆದಿದೆ. ಇದಷ್ಟೇ ಅಲ್ಲದೇ ಎಐ ಬಳಸಿ ನನ್ನ ವಿರುದ್ಧ ಪಿತೂರು ಮಾಡಲಾಗಿದೆ. ನಿಗಮದ ಕಚೇರಿಯಲ್ಲಿಯೇ ವೀಡಿಯೋ ಶೂಟ್ ಮಾಡಲಾಗಿದೆ. ಹೀಗಾಗಿ ಪಕ್ಷಕ್ಕೆ…

Read More

ಯಶಸ್ವಿ ವಿವಾಹವು ಪಾಲುದಾರರು ಪರಸ್ಪರ ಅರ್ಥಮಾಡಿಕೊಳ್ಳುವುದು ಮತ್ತು ಆನಂದಿಸುವುದರ ಮೇಲೆ ಅವಲಂಬಿತವಾಗಿದೆ. ತನ್ನ ಹೆಂಡತಿಯ ಮಾತನ್ನು ಕೇಳುವ ಪುರುಷನು ಸಂತೋಷದ ಜೀವನವನ್ನು ನಡೆಸುತ್ತಾನೆ ಎಂಬ ಕಲ್ಪನೆಯನ್ನು ಮದುವೆ, ಸಂಬಂಧಗಳು ಮತ್ತು ಕುಟುಂಬ ಜೀವನದ ಬಗ್ಗೆ ಸಂಭಾಷಣೆಗಳಲ್ಲಿ ಹೆಚ್ಚಾಗಿ ಉಲ್ಲೇಖಿಸಲಾಗಿದೆ. ಇದು ಹಾಸ್ಯಮಯ ಮಾತಿನಂತೆ ತೋರುತ್ತಿದ್ದರೂ, ಅದರ ಹಿಂದೆ ಸಾಕಷ್ಟು ಬುದ್ಧಿವಂತಿಕೆ ಇದೆ. ಯುನೈಟೆಡ್ ಸ್ಟೇಟ್ಸ್‌ನ ಗಾಟ್‌ಮನ್ ಸಂಸ್ಥೆಯ ಮುಖ್ಯ ಸಂಶೋಧಕರ ಪ್ರಕಾರ, ತಮ್ಮ ಹೆಂಡತಿಯರಿಗೆ ವಿಧೇಯರಾಗುವ ಗಂಡಂದಿರು ಯಶಸ್ವಿ ಸಂತೋಷದಾಯಕ ಜೀವನವನ್ನು ನಡೆಸುವಲ್ಲಿ ಯಶಸ್ವಿಯಾಗುವ ಸಾಧ್ಯತೆ ಹೆಚ್ಚು ಎಂದಿದೆ. ಡಾ. ಜಾನ್ ಗಾಟ್‌ಮನ್ ಯಶಸ್ವಿ ವಿವಾಹಗಳ ಬಗ್ಗೆ ಪ್ರಬಲವಾದ ಸತ್ಯವನ್ನು ಬಹಿರಂಗ ಆನ್‌ಲೈನ್‌ನಲ್ಲಿ ಅನೇಕ ಮಹಿಳೆಯರನ್ನು ರಂಜಿಸಿದ ಸಂಬಂಧ ಮತ್ತು ವಿವಾಹದ ಗುಣಲಕ್ಷಣಗಳ ಕುರಿತಾದ ಅಧ್ಯಯನವನ್ನು ವೈರಲ್ ಪೋಸ್ಟ್ ಹೈಲೈಟ್ ಮಾಡಿದೆ. ಸಂತೋಷದ ಮತ್ತು ಯಶಸ್ವಿ ವಿವಾಹಗಳ ಗುಣಲಕ್ಷಣಗಳನ್ನು ಅಧ್ಯಯನ ಮಾಡುವ ವರ್ಷಗಳನ್ನು ಕಳೆದ ನಂತರ, ಪುರುಷರು ತಮ್ಮ ಹೆಂಡತಿಯರಿಗೆ ಕಿವಿಗೊಡಬೇಕು ಮತ್ತು ವೃತ್ತಿಪರ ವೃತ್ತಿಜೀವನದಲ್ಲಿ ಅವರ ಸಕ್ರಿಯ ಪಾತ್ರಗಳನ್ನು ಬೆಂಬಲಿಸಬೇಕು…

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಕೇಸ್ ಸೇರಿದಂತೆ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸಂಪುಟ ಸಭೆಯಲ್ಲಿ ಹಿಂಪಡೆಯಲು ಒಪ್ಪಿಗೆ ಸೂಚಿಸಲಾಗಿದೆ. ಇಡಿ ಅಧಿಕಾರಿಗಳು 2019ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿದಾಗ ದಾಂಧಲೆಯನ್ನು ಅವರ ಬೆಂಬಲಿಗರು ನಡೆಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಸಾತನೂರು, ಕೋಡಿಹಳ್ಳಿ ಸೇರಿದಂತೆ ರಾಮನಗರ ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ, ರೈತ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರ ವಿರುದ್ಧದ ಮೊಕದ್ದಮ್ಮೆಗಳನ್ನು ಕೈಬಿಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Read More

ಆವನಿ ಮಾಸದ ತಿರುಓಣಂ ನಕ್ಷತ್ರದಂದು, ಭಗವಾನ್ ಪೆರುಮಾಳ್ ವಾಮನ ಅವತಾರವನ್ನು ತೆಗೆದುಕೊಂಡು ಕೇವಲ ಮೂರು ಹೆಜ್ಜೆಗಳಲ್ಲಿ ಮೂರು ಲೋಕಗಳನ್ನು ಅಳೆದರು ಎಂದು ಹೇಳಲಾಗುತ್ತದೆ. ಅಂತಹ ವಾಮನ ಅವತಾರವನ್ನು ಲೋಕಗಳ ಅಧಿಪತಿ ಎಂದೂ ಕರೆಯುತ್ತಾರೆ. ಆವನಿ ಮಾಸದ ತಿರುಓಣಂ ನಕ್ಷತ್ರವು ಶುಕ್ರವಾರದೊಂದಿಗೆ ಹೊಂದಿಕೆಯಾಗುವುದು ಇನ್ನೂ ವಿಶೇಷವೆಂದು ಪರಿಗಣಿಸಲಾಗಿದೆ. ತಿರುಓಣಂ ನಕ್ಷತ್ರವು ಭಗವಾನ್ ಪೆರುಮಾಳಿಗೆ ಶುಭವಾಗಿದ್ದರೆ, ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭವಾಗಿದೆ. ಆ ದಿನ ನಾವು ಮಾಡಬೇಕಾದ ಸರಳ ಪೂಜೆ, ಇದು ಭಗವಾನ್ ಪೆರುಮಾಳ್ ಮತ್ತು ಮಹಾಲಕ್ಷ್ಮಿ ಇಬ್ಬರಿಗೂ ಶುಭ ದಿನವಾಗಿದ್ದು, ನಮ್ಮ ಜೀವನದಲ್ಲಿ ಸಂಪತ್ತಿಗೆ ಇರುವ ಎಲ್ಲಾ ರೀತಿಯ ಅಡೆತಡೆಗಳನ್ನು ತೆಗೆದುಹಾಕುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಆ ಪೂಜೆಯ ಬಗ್ಗೆ ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು…

Read More