Author: kannadanewsnow09

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸರ್ಕಾರದ ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳಲ್ಲಿ ಪಿಎಂ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವಂತ ಮಸೂದೆ ಸೇರಿಯೂ ಸೇರಿದೆ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ, 2025, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದಂತ ಪಿಎಂ, ಸಿಎಂ, ಸಚಿವರ ವಿರುದ್ಧದ ಪದಚ್ಯುತಿಗೊಳಿಸುವಂತ ಮಸೂದೆಗೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಲೋಕಸಭೆಯಲ್ಲಿ ಗದ್ದಲ, ಕೋಲಾಹಲ ಕೂಡ ಉಂಟಾಯಿತು. ಹೀಗಾಗಿ ಲೋಕಸಭೆಯ ಸದನವನ್ನು ಸ್ಪೀಕರ್ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. https://twitter.com/ANI/status/1958085031559151815 https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/consideration-to-provide-special-concession-for-the-education-of-orphaned-children-minister-lakshmi-hebbalkar/

Read More

ವಿಧಾನಸಭೆ: ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ 108 ಸರ್ಕಾರಿ, 54 ಅನುದಾನಿತ ಮತ್ತು 550 ಖಾಸಗಿ ಒಟ್ಟು 712 ಮಕ್ಕಳ ಪಾಲನಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 712 ಸಂಸ್ಥೆಗಳಲ್ಲಿ ಒಟ್ಟು ಮಕ್ಕಳ ಸಾಮರ್ಥ್ಯ 38,975 ಇದ್ದು, ಈ ಪೈಕಿ 17048 (7874 ಹೆಣ್ಣು, 9175 ಗಂಡು) ಮಕ್ಕಳು ದಾಖಲಾಗಿರುತ್ತಾರೆ ಎಂದು ಮಾಹಿತಿ ನೀಡಿದರು. ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನಾಥ, ನಿರ್ಗತಿಕ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ದಾಖಲಾಗುತ್ತಿದ್ದು, ಕೆಲವು ಮಕ್ಕಳಿಗೆ ಸಂಬಂಧಿಸಿದಂತೆ ತಮ್ಮ ಕೌಟುಂಬಿಕ ಹಿನ್ನೆಲೆ…

Read More

ಶಿವಮೊಗ್ಗ: ಇತ್ತೀಚೆಗೆ ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ. ಕಳೆದ ತಿಂಗಳು ನ್ಯಾಕ್ ನಿಂದ ‘ಎ’ ಶ್ರೇಣಿ ಪಡೆದು ಹೆಮ್ಮೆ ಮೂಡಿಸಿದ್ದ ವಿವಿ, ಮತ್ತೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆ ಮಾಡಿದೆ. ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿರುವ ರ್ಯಾಂಕಿಂಗ್ ಶೈಕ್ಷಣಿಕ ಮತ್ತು ಸಂಶೋಧನಾ ಚಡುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲಭೂತ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 ಅಂಕಗಳು ಹಾಗೂ ವೈವಿಧ್ಯತೆ ಚಟುವಟಿಕೆಗಳಿಗೆ 100 ಅಂಕಗಳನ್ನು ನಿಗದಿಗೊಳಿಸಲಾಗಿದೆ. ಕುವೆಂಪು ವಿವಿ ಒಟ್ಟು 862.25 ಅಂಕಗಳೊಂದಿಗೆ 30ನೇ ಸ್ಥಾನ ಪಡೆದಿದೆ. ಉಳಿದಂತೆ ಕರ್ನಾಟಕದ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ 6ನೇ ಸ್ಥಾನ ಪಡೆದಿದ್ದರೆ, ಮೈಸೂರು ವಿವಿ 08ನೇ ಸ್ಥಾನ ಮತ್ತು ಬೆಂಗಳೂರು ವಿವಿ 24ನೇ ಸ್ಥಾನ ಮತ್ತು ಮಂಗಳೂರು…

Read More

ಶಿವಮೊಗ್ಗ: ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ, ಡಿಸಿಎಂ ಅವರ ಅನುದಾನದಡಿ ಈಗಾಗಲೇ 100 ಕೋಟಿ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದರು. ಈಗ ಮುಂದುವರೆದು ಸಾಗರ, ಹೊಸನಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಿದ್ದಾರೆ. ಸುಮಾರು 1 ಕೋಟಿಯನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಮಂಜೂರಾತಿಯನ್ನು ಪಡೆದಿದ್ದಾರೆ. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನ ಉಳಿಕೆ ಅನುದಾನದಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಕ್ರಿಯಾ ಯೋಜನೆಗೆ ಅನುಮತಿಯನ್ನು ಸರ್ಕಾರದಿಂದ ನೀಡಲಾಗಿದೆ. 1 ಕೋಟಿ ಅನುದಾನದಡಿ ಯಾವೆಲ್ಲ ಕಾಮಗಾರಿ ಕೈಗೊಳ್ಳಲಾಗುತ್ತದೆ ಗೊತ್ತಾ? ಇಲ್ಲಿದೆ ಪಟ್ಟಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನಂತೆ, ರಾಜ್ಯ ಸರ್ಕಾರವು 2025-26ನೇ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಉಳಿಕೆ ಅನುದಾನದಡಿಯಲ್ಲಿ ಈ ಕೆಳಕಂಡ ಅಭಿವೃದ್ಧಿ ಕಾಮಗಾರಿಗಳನ್ನು 1 ಕೋಟಿ ಅನುದಾನದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. 5 ಲಕ್ಷ ಅನುದಾನದಡಿ ಸಾಗರ ತಾಲ್ಲೂಕಿನ…

Read More

ಮೈಸೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುವುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ 16206/16205 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ 1 ನಿಮಿಷ ನಿಲ್ಲುತ್ತದೆ. ಈ ನಿಲುಗಡೆಗಳು 24 ಆಗಸ್ಟ್ 2025ರಿಂದ 23 ಫೆಬ್ರವರಿ 2026ರವರೆಗೆ ಆರು ತಿಂಗಳ ಕಾಲ, ಈಗಿರುವ ಸಮಯಗಳಲ್ಲೇ ಜಾರಿಯಲ್ಲಿ ಇರುತ್ತವೆ. ಈ ನಿಲುಗಡೆಯ ಮುಂದುವರಿಕೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಉತ್ತಮ ಸಂಪರ್ಕ ಹಾಗೂ ಅನುಕೂಲ ಕಲ್ಪಿಸುತ್ತದೆ.

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ರಾಜ್ಯ ಸರ್ಕಾರ ನೀಡಿದೆ. ಅದೇ ಕರಾರಸಾ ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.10 ಲಕ್ಷಗಳಿಂದ ರೂ. 20 ಲಕ್ಷಗಳಿಗೆ ಹೆಚ್ಚಳ ಮಾಡಿದೆ. ಕೆ ಎಸ್ ಆರ್ ಟಿ ಸಿ ನೌಕರರು ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸುವ ಯೋಜನೆ ಈಗಾಗಲೇ ಜಾರಿಯಲ್ಲಿರುತ್ತದೆ. * ಇದೇ ಮೊದಲ ಬಾರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರವರು ಅಪಘಾತ ಹೊರತುಪಡಿಸಿ ಇತರೆ ಕೆಳಕಂಡ ಪ್ರಕರಣಗಳಲ್ಲಿ ರೂ.6 ಲಕ್ಷ ಪರಿಹಾರ ಮೊತ್ತ‌ ನೀಡುತ್ತಿದ್ದಾರೆ. * ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅಂದರೆ ಹೃದಯಾಘಾತ, ಕ್ಯಾನ್ಸರ್, ಕಿಡ್ನಿ ಹಾಗೂ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ…

Read More

ಮಹಾರಾಷ್ಟ್ರ: ಇಲ್ಲಿನ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಬಹುದೊಡ್ಡ ಅವಾಂತರವೇ ಉಂಟಾಗಿದೆ. ಮಳೆಯಿಂದಾಗಿ ವಿದ್ಯುತ್ ಸಮಸ್ಯೆ ಉಂಟಾದ ಪರಿಣಾಮ, ತಾಂತ್ರಿಕ ಕಾರಣದಿಂದ ಮೋನೋ ರೈಲು ಕೆಟ್ಟು ನಿಂತಿದೆ. ಹೀಗಾಗಿ ಅದರಲ್ಲಿನ ಪ್ರಯಾಣಿಕರನ್ನು ಕೆಳಗಿಳಿಸಲು, ಹೊರ ಕರೆ ತರಲು ಹರಸಾಹಸವನ್ನೇ ಪಡುವಂತೆ ಆಗಿದೆ. https://twitter.com/ANI/status/1957822154365427785 ಮಂಗಳವಾರ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಹಳಿಯಿಂದ ಹಳಿ ತಪ್ಪಿದ ಮಾನೋ ರೈಲು ಗಾಳಿಯಲ್ಲಿ ನೇತಾಡುತ್ತಿತ್ತು. ಮುಂಬೈ ಅಗ್ನಿಶಾಮಕ ದಳ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. https://twitter.com/ANI/status/1957815327867175108 ಬಾಗಿಲುಗಳು ಮುಚ್ಚಿರುವುದರಿಂದ ಮತ್ತು ವಿದ್ಯುತ್ ವ್ಯತ್ಯಯದಿಂದಾಗಿ ಎಸಿ ಕೆಲಸ ಮಾಡುವುದನ್ನು ನಿಲ್ಲಿಸಿರುವುದರಿಂದ ಅನೇಕ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ, ಉಸಿರುಗಟ್ಟಿಸುತ್ತಿದ್ದಾರೆ. https://twitter.com/ANI/status/1957812000743903706

Read More

ಬೆಂಗಳೂರು: ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆ, ಬೆಂಗಳೂರಿನ ಸರ್‌ ಸಿ.ವಿ.ರಾಮನ್‌ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್‌ ಲ್ಯಾಬ್‌ ತೆರೆಯಲಾಗುವುದು. ಗೃಹ ಆರೋಗ್ಯ ಯೋಜನೆಯಡಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1957785153927037358 ಟೆಲಿ ಇ.ಸಿ.ಜಿ ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಅವಕಾಶವಿದ್ದು, ಆರಂಭದಲ್ಲೇ ಪತ್ತೆ ಹಚ್ಚುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಟೆಲಿ ಇಸಿಜಿ ಸಹಕಾರಿಯಾಗಲಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.…

Read More

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ. ವಿಧಾನ ಪರಿಷದ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು. ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಸಚಿವರು ಹೇಳಿದರು. ಬದಲಾದ…

Read More

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ವಿಧಾನಸಭೆ ಕಲಾಪದಲ್ಲಿ ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಈ ವಿಧೇಯಕವನ್ನು ಮಂಡಿಸಿದರು. ಈ ತಿದ್ದುಪಡಿ ವಿಧೇಯಕ ಕುರಿತು ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರು ವಿಸ್ಕೃತ ಚರ್ಚೆ ನಡೆಸಿದರು. ಈ ತಿದ್ದುಪಡಿ ಬೆಂಗಳೂರಿಗೆ ಮಾರಕವಾಗಿದೆ ಎಂದ ವಿರೋಧ ಪಕ್ಷದ ಶಾಸಕ ಎಸ್.ಸುರೇಶ್ ಕುಮಾರ್ ಅವರು “ಈ ತಿದ್ದುಪಡಿಯನ್ನು ಸದನ ಸಮಿತಿ ರಚನೆ ಮಾಡಿ ಅದರ ಅವಗಾಹನೆಗೆ ನೀಡಬೇಕು. ಸರ್ಕಾರ ಈ ಮನವಿಯನ್ನು ಪುರಸ್ಕರಿಸುತ್ತಿಲ್ಲ” ಎಂದು ಸಭಾತ್ಯಾಗ ಮಾಡುವುದಾಗಿ ತಿಳಿಸಿದರು. ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಈ ವಿಧೇಯಕಕ್ಕೆ ಮಂಗಳವಾರ ಅನುಮೋದನೆ ನೀಡಲಾಯಿತು. ವಿಧೇಯಕದ ಮೇಲೆ ನಡೆದ ಚರ್ಚೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. “ಕೆರೆಗಳ ಬಫರ್ ಜೋನ್ ವಿಚಾರವಾಗಿ ತಿದ್ದುಪಡಿ ತನ್ನಿ ಎಂದು ಯಾವುದೇ ಬಿಲ್ಡರ್ ಗಳು ಬಂದು ಸರ್ಕಾರದ ಬಳಿ ಮನವಿ ಮಾಡಿಲ್ಲ. ಈ ಹಿಂದೆ ಕಂಠೀರವ…

Read More