Author: kannadanewsnow09

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಶನಿವಾರ ರಾತ್ರಿ ಹೇಳಿಕೆ ಕೊಟ್ಟು ಯಾವುದೇ ಕಾರಣಕ್ಕೂ ಎಸ್‍ಐಟಿ ರಚಿಸುವುದಿಲ್ಲ ಎಂದಿದ್ದರು. ಮರುದಿನವೇ ಅಂದರೆ, ಭಾನುವಾರ ಬೆಳಿಗ್ಗೆ ಎಸ್‍ಐಟಿ ರಚನೆಯ ಹೇಳಿಕೆ ಕೊಟ್ಟಿದ್ದರು. ರಾತ್ರೋರಾತ್ರಿ ಮುಖ್ಯಮಂತ್ರಿಗಳ ಅಭಿಪ್ರಾಯ ಬದಲಾಗಲು ಅವರ ಮೇಲೆ ಒತ್ತಡ ಹೇರಿದ್ದು ಯಾರು ಎಂದು ಸದನದಲ್ಲೇ ಪ್ರಶ್ನಿಸಿದ್ದೆ ಎಂದು ಗಮನಕ್ಕೆ ತಂದರು. ಒತ್ತಡ ಹೇರಿದ ಸಂಘಟನೆಗಳು ಯಾವುವು ಎಂಬ ಕುರಿತು ಸದನದ ಗಮನಕ್ಕೆ ತರಬೇಕು; ಮುಖ್ಯಮಂತ್ರಿಗಳು ಉತ್ತರಿಸಬೇಕೆಂದು ಕೋರಿದ್ದಾಗಿ ತಿಳಿಸಿದರು. ಮುಸುಕುಧಾರಿಯು ಧರ್ಮಸ್ಥಳದ ವಿಷಯದಲ್ಲಿ ಸಾಕಷ್ಟು ಪ್ರಚಾರ ತೆಗೆದುಕೊಂಡು, ರಾಜ್ಯ ಸರಕಾರ ಎಸ್‍ಐಟಿ ಸ್ಥಾಪಿಸುವ ಮಟ್ಟಕ್ಕೂ ಹೋಗಿದ್ದ. ಕಳೆದ 2-3 ವಾರಗಳಿಂದ ತನಿಖೆಯ ಜೊತೆಗೇ ಧರ್ಮಸ್ಥಳ, ಶ್ರೀ ಮಂಜುನಾಥೇಶ್ವರನ ಕ್ಷೇತ್ರದ ಕುರಿತು ಸಾಕಷ್ಟು ಅಪಪ್ರಚಾರಗಳು ನಡೆದಿದ್ದವು. ರಾಜ್ಯ-…

Read More

ಜಾಮ್‌ನಗರ : ಭಾರತದಲ್ಲಿ ಮೊದಲ ಬಾರಿಗೆ ಎಂಬಂತೆ ಉದ್ಯಮಿ ಅನಂತ್ ಅಂಬಾನಿ ಅವರು ಆರಂಭಿಸಿದ ವನ್ಯಜೀವಿ ರಕ್ಷಣಾ ಮತ್ತು ಸಂರಕ್ಷಣಾ ಉಪಕ್ರಮ ವಂತಾರ. ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವಂತಾರದ ಅತ್ಯಾಧುನಿಕ ಸೌಲಭ್ಯಗಳಲ್ಲಿ ಸೋಮವಾರದಂದು (ಆಗಸ್ಟ್ 18) ಸಂರಕ್ಷಣಾ ಔಷಧದ ಪರಿಚಯದ ಕುರಿತು ಪ್ರಮುಖ ಪಶುವೈದ್ಯಕೀಯ ತರಬೇತಿ ಕೋರ್ಸ್ ಅನ್ನು ಉದ್ಘಾಟಿಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ವಿ. ಕ್ಲೆಮೆಂಟ್ ಬೆನ್, ಐಎಫ್‌ಎಸ್; ಉತ್ತರಾಖಂಡ ಸರ್ಕಾರದ ಮಾಜಿ ಪಿಸಿಸಿಎಫ್ ಮತ್ತು ಸಿಡಬ್ಲ್ಯೂಎಲ್‌ಡಬ್ಲ್ಯೂ ದಿಗ್ವಿಜಯ್ ಸಿಂಗ್ ಖಾಟಿ; ಭಾರತ ವನ್ಯಜೀವಿ ಸಂಸ್ಥೆಯ ಮಾಜಿ ಹಿರಿಯ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಪ್ರದೀಪ್ ಕೆ. ಮಲಿಕ್; ಮತ್ತು ಜಿಜೆಡ್‌ಆರ್‌ಆರ್‌ಸಿ ನಿರ್ದೇಶಕ ಡಾ. ಬ್ರಿಜ್ ಕಿಶೋರ್ ಗುಪ್ತಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಹೀಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅತಿಥಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಮತ್ತು ವನ್ಯಜೀವಿ ಆರೋಗ್ಯ ಮತ್ತು ಸಂರಕ್ಷಣೆಯನ್ನು ಮುನ್ನಡೆಸುವಲ್ಲಿ ಈ ಮೈಲುಗಲ್ಲು ಎನಿಸಿದಂಥ ಉಪಕ್ರಮದ ಮಹತ್ವವನ್ನು ಒತ್ತಿ ಹೇಳಿದರು.…

Read More

ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಮಕ್ಸೂದ್ ಆಲಿ @ ಲಕ್ಕಿ ಆಲಿಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಬಂಧನದ ವಾರಂಟ್ ಜಾರಿಗೊಳಿಸಲಾಗಿದೆ. 2014ರಲ್ಲಿ ಸೈಯದ್ ರಿಜ್ವಾನ್ ಅವರಿಂದ ಗಾಯಕ ಲಕ್ಕಿ ಆಲಿ ವಿರುದ್ಧ ಖಾಸಗಿ ದೂರು ದಾಖಲಿಸಲಾಗಿತ್ತು. ಜಮೀನು ಮಾರುವುದಾಗಿ ಹಣ ಪಡೆದು ಹಿಂದಿರುಗಿಸದ ಆರೋಪ ಅವರ ಮೇಲಿತ್ತು. 27 ಲಕ್ಷ ರೂಪಾಯಿಯನ್ನು ಗಾಯಕ ಲಕ್ಕಿ ಆಲಿ ಹಿಂದಿರುಗಿಸಿರಲಿಲ್ಲ. ಈ ಪ್ರಕರಣದಲ್ಲಿ ಸಿವಿಲ್ ದಾವೆ ರಾಜಿ ಮಾಡಿಕೊಂಡು ಲಕ್ಕಿ ಆಲಿ ಚೆಕ್ ನೀಡಿದ್ದರು. 2002ರ ವ್ಯವಹಾರ ಸಂಬಂಧ 2013ರಲ್ಲಿ ಚೆಕ್ ನೀಡಿದ್ದರು. ಆದರೇ 92 ಲಕ್ಷದ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ಲಕ್ಕಿ ಆಲಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ 92.10 ಲಕ್ಷ ರೂಪಾಯಿ ದಂಡವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿತ್ತು. ದಂಡವನ್ನು ಪಾವತಿಸಿದೇ ಇದ್ದರೇ 6 ತಿಂಗಳ ಸೆರೆವಾಸ ಅನುಭವಿಸುವಂತೆ ಆದೇಶದಲ್ಲಿ ತಿಳಿಸಲಾಗಿತ್ತು. ಸುಪ್ರೀಂ ಕೋರ್ಟ್ ಕೂಡ ಆದೇಶ ರದ್ದುಪಡಿಸಲು ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಲಕ್ಕಿ ಆಲಿ ವಿರುದ್ಧ…

Read More

ಬೆಂಗಳೂರು : “ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಕಲಾಪದ ವೇಳೆ ನಡೆದ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, “ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್ ಪಿ ಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡರು ಹಾಗೂ ಬೇಳೂರು ಗೋಪಾಲಕೃಷ್ಣ ಅವರು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ” ಎಂದರು. ಒಂದೆರಡು ದಿನ ಸುಮ್ಮನಿರಿ “ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದು ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ. ಗೃಹಸಚಿವರು ಇದಕ್ಕೆ ಬದ್ದವಾಗಿದ್ದಾರೆ. ಈ ವಿಚಾರದಲ್ಲಿ ಒಂದೆರಡು ದಿನ ಸುಮ್ಮನಿರಿ. ನೀವೆಲ್ಲರೂ ತಾಳ್ಮೆವಹಿಸಿ” ಎಂದು ಪ್ರತಿಪಕ್ಷಗಳಿಗೆ ಆಗ್ರಹಿಸಿದರು.…

Read More

ಬೆಂಗಳೂರು: ಭೂ ಹಾಗೂ ಗುಡ್ಡ ಕುಸಿತಗಳ ದೀರ್ಘಾವಧಿ ಉಪಶಮನಕ್ಕಾಗಿ 500 ಕೋಟಿ ರೂಪಾಯಿ ಖರ್ಚಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಮಡಿಕೇರಿ ಶಾಸಕ ಮಂತರ ಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, “ರಾಜ್ಯದಲ್ಲಿ ಯಾವ ಭಾಗದಲ್ಲಿ ಹೆಚ್ಚು ಭೂ-ಗುಡ್ಡ ಕುಸಿತ ಉಂಟಾಗುತ್ತೆ ಆ ಭಾಗವನ್ನು ಗುರುತಿಸಿ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ಭೂ ಕುಸಿತ ತಡೆಗೆ ಶಾಶ್ವತ ಉಪಶಮನ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಆರು ಜಿಲ್ಲೆಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಭೂ ಕುಸಿತ ತಡೆಗೆ ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ” ಎಂದರು. “ಯಾವ ಭಾಗದಲ್ಲಿ ಹೆಚ್ಚು ಭೂ-ಗುಡ್ಡ ಕುಸಿತ ಉಂಟಾಗಲಿದೆ ಹಾಗೂ ಅಲ್ಲಿ ಯಾವ ಡಿಸೈನ್‌ನಲ್ಲಿ ತಡೆಗೋಡೆ ನಿರ್ಮಿಸಬೇಕು ಎಂಬುದನ್ನು ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಗುರುತಿಸಿ ಆ ಪಟ್ಟಿಯನ್ನು ನಮಗೆ ಕಳುಹಿಸುತ್ತದೆ. ನಾವು ಆ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇವೆ. ಜಿಲ್ಲಾಧಿಕಾರಿಗಳು ತಮ್ಮ…

Read More

ಉಜಿರೆ: ಇಲ್ಲಿನ ಧರ್ಮಸ್ಥಳ ಸಮೀಪದ ರುಡ್ ಸೆಟ್ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 01-09-2025ರಿಂದ 30-09-2025ರವರೆಗೆ 30 ದಿನಗಳ ಕಾಲ ಉಚಿತ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿಯನ್ನು ಉಚಿತ ವಸತಿ, ಊಟದ ಜೊತೆಗೆ ನೀಡಲಾಗುತ್ತದೆ. 18ರಿಂದ 45 ವರ್ಷದ ಒಳಗಿನ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿ ಸಂಪೂರ್ಣ ಉಚಿತವಾಗಿದೆ. ತರಬೇತಿಯ ವೇಳೆಯಲ್ಲಿ ಸಂಸ್ಥೆಯ ಸಮವಸ್ತ್ರ ಮತ್ತು ಉದ್ಯೋಗ ಕೈಗೊಳ್ಳಲು ಟೂಲ್ ಕಿಟ್ ಉಚಿತವಾಗಿ ಕೊಡಲಾಗುತ್ತದೆ. ಅರ್ಜಿಯನ್ನು 6364561982 ಸಂಖ್ಯೆಗೆ ವಾಟ್ಸ್ ಅಪ್ ಮಾಡಿ. ಇಲ್ಲವೇ www.rudsetujire.com ವೆಬ್ ಸೈಟ್ ಗೆ ಭೇಟಿ ನೀಡಿಯೂ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9980885900, 9380626695, 8861514706, 8296770307, 9591044014 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. https://kannadanewsnow.com/kannada/shivamogga-in-sorabs-talebail-heavy-rain-caused-a-house-to-collapse-leaving-a-family-stranded-on-the-street/ https://kannadanewsnow.com/kannada/karnatakas-shakti-scheme-joins-the-world-record-transport-minister-said-it-brings-immense-joy/

Read More

ಬೆಂಗಳೂರು: ಶಕ್ತಿ ಯೋಜನೆಯು ( Shakti Scheme ) ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿದೆ. Golden Book of World Records ನಲ್ಲಿ ದಾಖಲು ಮಾಡಿದೆ. ಇದು ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವಂತ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ( ಜೂನ್ 11, 2023 – ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು‌ ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೇಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ ಎಂದಿದ್ದಾರೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ…

Read More

ನವದೆಹಲಿ: ಸೋಮವಾರ ಏರ್‌ಟೆಲ್ ನೆಟ್‌ವರ್ಕ್ ಕಡಿತವನ್ನು ಅನುಭವಿಸುತ್ತಿದೆ ಎಂದು ದೂರಸಂಪರ್ಕ ಕಂಪನಿಯು X ನಲ್ಲಿ ಅಳಿಸಲಾದ ಪೋಸ್ಟ್‌ನಲ್ಲಿ ತಿಳಿಸಿದೆ. ಏಕೆಂದರೆ ಹಲವಾರು ಬಳಕೆದಾರರು ಕರೆಗಳನ್ನು ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೆಹಲಿ NCR ನ ಏರ್‌ಟೆಲ್ ಮೊಬೈಲ್ ನೆಟ್‌ವರ್ಕ್ ಬಳಕೆದಾರರು ಕರೆಗಳನ್ನು ಮಾಡುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳುವ X ನಲ್ಲಿ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಕಂಪನಿಯು, ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದೆ. “ನಾವು ಪ್ರಸ್ತುತ ನೆಟ್‌ವರ್ಕ್ ಕಡಿತವನ್ನು ಅನುಭವಿಸುತ್ತಿದ್ದೇವೆ, ನಮ್ಮ ತಂಡವು ಸಮಸ್ಯೆಯನ್ನು ಪರಿಹರಿಸಲು ಮತ್ತು ಸೇವೆಗಳನ್ನು ತ್ವರಿತವಾಗಿ ಪುನಃಸ್ಥಾಪಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಉಂಟಾದ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಧನ್ಯವಾದಗಳು, ತಂಡ ಏರ್‌ಟೆಲ್,” ಕಂಪನಿಯು ಪೋಸ್ಟ್‌ಗೆ ಪ್ರತ್ಯುತ್ತರವಾಗಿ X ನಲ್ಲಿ ಹೇಳಿದೆ ಆದರೆ ನಂತರ ಅದನ್ನು ಅಳಿಸಿದೆ. ಏರ್‌ಟೆಲ್ ನಂತರ ಸ್ಥಗಿತದ ಕುರಿತು ಕೆಲವು ಇತರ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿ ಪ್ರಶ್ನೆಗೆ ಡಿಎಂ ಮಾಡುವುದಾಗಿ ಹೇಳಿದೆ. https://kannadanewsnow.com/kannada/shivamogga-in-sorabs-talebail-heavy-rain-caused-a-house-to-collapse-leaving-a-family-stranded-on-the-street/ https://kannadanewsnow.com/kannada/breaking-fir-registered-against-mahesh-timarodi-arrest-possible-at-any-moment/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ ಮಳೆಯಿಂದಾಗಿ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ವಾಸದ ಮನೆಯೊಂದು ಬಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ಭಾರೀ ಮಳೆಯಿಂದಾಗಿ ಬಸಪ್ಪ ಕೋಂ ಮುತ್ತಪ್ಪ ಎಂಬುವರ ಮನೆಯ ಗೋಡೆ ಪಕ್ಕದ ಮನೆಯ ಹಾಲಮ್ಮ ಎಂಬುವರ ಮನೆಯ ಮೇಲೆ ಬಿದ್ದ ಪರಿಣಾಮ, ಒಂದು ಭಾಗದ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದೆ. ಇಂದು ಬೆಳಗ್ಗೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಮನೆ ಬಿದ್ದಂತ ಸಂದರ್ಭದಲ್ಲೇ ಹಾಲಮ್ಮ, ಮಗಳು, ಮೊಮ್ಮಕ್ಕಳು ವಾಸವಾಗಿದ್ದರು. ಆದರೇ ಮನೆಯ ಎಡಭಾಗದಲ್ಲಿ ಮಲಗಿದ್ದು. ಬಲಭಾಗದಲ್ಲಿನ ಮನೆಯ ಗೋಡೆ ಕುಸಿದು ಬಿದ್ದಿರುವ ಪರಿಣಾಮ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಗೋಡೆ ಕುಸಿತಗೊಂಡ ಪರಿಣಾಮ ಮಳೆಯ ನೀರು ಮನೆಯೊಳಗೆ ನುಗ್ಗಿದ್ದರಿಂದಾಗಿ ಮನೆಯಲ್ಲಿದ್ದಂತ ವಸ್ತುಗಳೆಲ್ಲ ಹಾನಿಗೊಂಡಿದ್ದಾವೆ. ಶೇಖರಿಸಿದ್ದಂತ ಪಾತ್ರೆ, ದವಸ-ಧಾನ್ಯಗಳು ಹಾಳಾಗಿದ್ದಾವೆ. ಹಾಲಮ್ಮ ಅವರ ಇಡೀ ಕುಟುಂಬವೇ ಬೀದಿಗೆ…

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ. ಎಫ್ಎಸ್ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶವ ಶೋಧ ಸ್ಥಗಿತಗೊಳಿಸುವ ಬಗ್ಗೆ ನಾವು ತೀರ್ಮಾನ ಕೈಗೊಂಡಿಲ್ಲ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಒಂದೊಂದು ಹೇಳಿಕೆ ನೀಡಲಾಗುತ್ತಿದೆ. ಈಗ ಅನಗತ್ಯ ಚರ್ಚೆ ಬೇಡ, ತನಿಖೆ ಬಳಿಕ ಸತ್ಯಾಂಶ ಹೊರಬರುತ್ತೆ. ತನಿಖೆ ನಡೆಯುತ್ತಿರುವಾಗ ಏನೂ ಹೇಳಲು ಆಗಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ…

Read More