Author: kannadanewsnow09

ಶಿವಮೊಗ್ಗ : ನ್ಯಾಯಾಂಗ ಸೇವೆಗೆ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಕಾನೂನು ಸೇವೆಯನ್ನು ಕೇವಲ ಉದ್ಯೋಗವಾಗಿ ನೋಡಬೇಡಿ. ಪ್ರಾಮಾಣಿಕತೆ, ಸಹನೆ ಮತ್ತು ಕಠಿಣ ಪರಿಶ್ರಮ ಈ ವೃತ್ತಿಯ ಮೂಲಭೂತ ಅಸ್ತ್ರ ಅಧ್ಯಯನಕ್ಕೆ ಆದ್ಯತೆ ನೀಡಿ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜೆ.ಎಂ.ಖಾಜಿ ಹೇಳಿದರು. ಇಂದು ಶಿವಮೊಗ್ಗದ ಸಾಗರದ ವಕೀಲರ ಭವನದಲ್ಲಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದಂತ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದಂತ ಅವರು, ನ್ಯಾಯಾಂಗ ಸೇವೆ ಎಂದರೆ ಕೇವಲ ತೀರ್ಪುಗಳನ್ನು ನೀಡುವುದಲ್ಲ. ನ್ಯಾಯಾಂಗ ಸೇವೆ ನ್ಯಾಯಕ್ಕಾಗಿ ಬಾಗಿಲು ತಟ್ಟುವ ಪ್ರತಿಯೊಬ್ಬ ನಾಗರೀಕನ ಬದುಕನ್ನು ಸ್ಪರ್ಶಿಸುವ ಹೊಣೆಯಾಗಿರುತ್ತದೆ. ಶಿವಮೊಗ್ಗ, ಸಾಗರದ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಕಾನೂನು ಸೇವೆಯನ್ನು ಆಳವಾಗಿ ಅಧ್ಯಯನ ಮಾಡಲು ಅವಕಾಶ ಕಲ್ಪಿಸಿತು. ಸಾಗರ ನ್ಯಾಯಾಂಗ ಸೇವೆಗೆ ಮಾತ್ರವಲ್ಲದೇ ಸಾಹಿತ್ಯ ಮತ್ತು ನಿಸರ್ಗ ಪ್ರೇಮಕ್ಕೂ ಸಾಕ್ಷಿಯಾಗಿದೆ ಎಂದರು. ನ್ಯಾಯಾಂಗ ಮತ್ತು ವಕೀಲ ವೃತ್ತಿ ಸಮಾಜದ ಎರಡು ಪ್ರಮುಖ ಸ್ತಂಭಗಳು. ವಕೀಲರು ತಮ್ಮ ವಾದಗಳ ಮೂಲಕ ಸತ್ಯವನ್ನು ಬೆಳಗಿಸುತ್ತಾರೆ. ನ್ಯಾಯಾಧೀಶರು ತೀರ್ಪುಗಳ ಮೂಲಕ ಅದಕ್ಕೆ…

Read More

ಮೈಸೂರು: ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರಕಾರವು ಜಾತಿ ಜನಗಣತಿ ಮಾಡುತ್ತಿದ್ದು, ದಿನೇದಿನೇ ಇದರಿಂದ ಗೊಂದಲಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಇದು ಗೊತ್ತಾಗುತ್ತದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ. ಎಲ್ಲ ಸಮಾಜಗಳಲ್ಲೂ ಗೊಂದಲ ಸೃಷ್ಟಿಯಾಗಿದೆ. ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರಕಾರ ಈ ನಿರ್ಣಯ ಮಾಡಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ನುಡಿದರು. ವಿಕಲಚೇತನರನ್ನೂ ಇದಕ್ಕೆ ಜೋಡಿಸಿದ್ದಾರೆ. ಇದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಯಾಕೆ ಎಂದು ಕೇಳಿದರು. ನವೆಂಬರ್ ಕ್ರಾಂತಿ- ಅಕ್ಟೋಬರ್ ಕ್ರಾಂತಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ, ಈ ಜಾತಿ ಜನಗಣತಿಗೂ ಎಲ್ಲೋ ಒಂದು ಕಡೆ ಸಂಬಂಧ ಇದೆಯೇ ಎಂಬುದೂ ರಾಜ್ಯದಲ್ಲಿ ಚರ್ಚೆ…

Read More

ಹಾಸನ : ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದು ಎಲ್ಲರ ಹೃದಯಗಳನ್ನೂ ಗೆಲ್ಲುವ ಶಕ್ತಿ ಇರುವ ಗೋಪಾಲಸ್ವಾಮಿ ಅವರು ಹಾಸನ‌ ಜಿಲ್ಲಾ ರಾಜಕಾರಣದ ಘನತೆಯನ್ನು ಮರುಸ್ಥಾಪಿಸುವ ಕೆಲಸವನ್ನೂ ಮಾಡಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರ 55ನೇ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಒಬ್ಬ ಕ್ರೀಡಾ ಪಟುವಿಗೆ ಇರಬೇಕಾದ ಕ್ರೀಡಾ ಮನೋಭಾವ ಮತ್ತು ಬದ್ಧತೆ ಎರಡೂ ಗೋಪಾಲಸ್ವಾಮಿ ಅವರಿಗಿದೆ. ಪ್ರತಿಯೊಬ್ಬರನ್ನೂ ಅತ್ಯಂತ ಆತ್ಮೀಯವಾಗಿ ನಡೆಸಿಕೊಳ್ಳುವ ಸಜ್ಜನಿಕೆಯೇ ಗೋಪಾಲಸ್ವಾಮಿ ಅವರ ವ್ಯಕ್ತಿತ್ವದ ಶಕ್ತಿ ಎಂದರು. ತಾವು ಪ್ರತಿನಿಧಿಸುವ ಕ್ಷೇತ್ರದ ಜನರ ಮತ್ತು ಸಮಾಜದ ಘನತೆಯನ್ನು ಹೆಚ್ಚಿಸುವುದು ಉತ್ತಮ ರಾಜಕಾರಣಿಯ ಲಕ್ಷಣ. ಈ ಲಕ್ಷಣಗಳು ಗೋಪಾಲಸ್ವಾಮಿ ಅವರಲ್ಲಿವೆ. ಹೀಗಾಗಿ ಹಾಸನ ಜಿಲ್ಲಾ ರಾಜಕಾರಣದ ಘನತೆಯನ್ನು ಮರು ಸ್ಥಾಪಿಸುವುದು ಹಾಗೂ ಹಾಸನ ಜಿಲ್ಲೆಯ ರಾಜಕಾರಣದ ಇತಿಹಾಸ ಮತ್ತು ವರ್ತಮಾನಕ್ಕೆ ಅಂಟಿರುವ ಕಳಂಕವನ್ನು ಅಳಿಸಿ ಹಾಸನದ ಜನತೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯುವ…

Read More

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದ ಹೋರಾಟಕ್ಕೆ ನನ್ನ ಬೆಂಬಲವಿದೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಪರಿಸರ ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮ ಆದ್ಯತೆಯಾಗಬೇಕು ಹಸಿರು ಹೊದಿಕೆಯ ಗರ್ಭ ಬಗೆದು ಮುನ್ನಡೆಸುವ ಯೋಜನೆ ಸಲ್ಲದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತ ಸಂಘದ ವತಿಯಿಂದ ನಡೆಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದದ ಹೋರಾಟದಲ್ಲಿ ಭಾನುವಾರ ಪಾಲ್ಗೊಂಡು ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ದ ಪಕ್ಷಾತೀತ ಹೋರಾಟ ನಡೆಯುತ್ತಿರುವುದು ಸ್ವಾಗತಾರ್ಹ ಸಂಗತಿ. ಕೇಂದ್ರದಲ್ಲಿ ನಮ್ಮದೆ ಸರ್ಕಾರ ಇದ್ದರೂ ಶರಾವತಿ ಪಂಪ್ಡ್ ಸ್ಟೋರೇಜ್ ಆಗುತ್ತಿರುವುದು ನನ್ನ ಗಮನಕ್ಕೆ ಬಂದಿಲ್ಲ. ಕೇಂದ್ರಕ್ಕೆ ಪ್ರಸ್ತಾವನೆ ಕಳಿಸುವುದು ಸಹಜ ಎಂದರು. ಕೇಂದ್ರ ಸರ್ಕಾರ ಬೇರೆಬೇರೆ ವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡುತ್ತಾ ಬರುತ್ತಿದ್ದರೂ ಶರಾವತಿ ಪಂಪ್ಡ್ ಸ್ಟೋರೇಜ್‌ನಿಂದ ಆ ಭಾಗದ ಪರಿಸರ, ಸಿಂಗಳೀಕ ಬಾಲದ ಮಂಗಗಳು, ಜೀವವೈವಿಧ್ಯಕ್ಕೆ ಹಾನಿಯಾಗುತ್ತಿರುವುದರ ಬಗ್ಗೆ ಕೇಂದ್ರದ ಸಂಬoಧಪಟ್ಟ ಸಚಿವರು, ಇಲಾಖೆ ಜೊತೆ ಮಾತನಾಡುತ್ತೇನೆ. ನಾನು ಮತ್ತು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಮಾರಣಾಂತಿಕ ಹಲ್ಲೆ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಈ ಘಟನೆ ಹಸಿಯಾಗಿರೋ ಮುನ್ನವೇ, ಇಂದು ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರಿಗೆ ಚಾಕುವಿನಿಂದ ಇರಿದಿರುವಂತ ಆಘಾತಕಾರಿ ಘಟನೆ ನಡೆದಿದೆ. ಶಿವಮೊಗ್ಗದ ತುಂಬಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಊರಗಡೂರಿನಲ್ಲಿ ಇಬ್ಬರ ಮೇಲೆ ಹಾಡ ಹಗಲೇ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಶಬ್ಬೀರ್ ಹಾಗೂ ಶಬಾಜ್ ಎಂಬುವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಭಾವನನ್ನೇ ಗಂಭೀರವಾಗಿ ಗಾಯಗೊಳಿಸಲಾಗಿದೆ. ಫದ್ರೀನ್ ಹಾಗೂ ಆತನ ಸಹೋದರರು, ಸ್ನೇಹಿತರೊಂದಿಗೆ ಸೇರಿ ಶಬ್ಬೀರ್ ಹಾಗೂ ಶಬಾಜ್ ಗೆ ಚಾಕುವಿನಿಂದ ಇರಿಯಲಾಗಿದೆ. ಈ ವಿಷಯ ತಿಳಿದು ಸ್ಥಳದ್ದೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ಎಎಸ್ಪಿ ಕಾರಿಯಪ್ಪ, ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗುರುರಾಜ್ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಶಿವಮೊಗ್ಗ: ಅರಣ್ಯ ಭೂಮಿ ಒತ್ತುವರಿ ತೆರವು ಅಂದ್ರೆ ಒತ್ತುವರಿಗೊಂಡಿರುವಂತ ಭೂಮಿಯನ್ನು ಮೂಲ ಅರಣ್ಯ ರೂಪಕ್ಕೆ ತರುವ ನಿಟ್ಟಿನಲ್ಲಿ ನೆಡೆಸಬೇಕಾದ ಕಾರ್ಯಾಚರಣೆಯಾಗಿದೆ. ಇದನ್ನೇ ಕರ್ನಾಟಕ ಅರಣ್ಯ ಭೂಮಿ ಅಧಿನಿಯಮಗಳಲ್ಲೂ ತಿಳಿಸಲಾಗಿದೆ. ಇದೇ ರೀತಿಯಲ್ಲೇ ಒತ್ತುವರಿ ತೆರವು ಕೂಡ ಮಾಡಬೇಕು. ಆದರೇ ಈ ಯಾವುದನ್ನು ಮಾಡದಂತ ಸಾಗರದ ಆರಣ್ಯ ಇಲಾಖೆಯ ಅಧಿಕಾರಿಗಳು, ಇಂದು ಬಂದ ಪುಟ್ಟ, ಬೋರ್ಡ್ ನೆಟ್ಟು ಹೋದ ಪುಟ್ಟ ಎನ್ನುವಂತೆ ಅರಣ್ಯ ಭೂಮಿ ಒತ್ತುವರಿ ಕಾರ್ಯಾಚರಣೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಭೂಮಿ ಒತ್ತುವರಿ ಸಾಗರ ವಿಭಾಗದ ಆನಂದಪುರಂ ಹೋಬಳಿಯ ಮಲಂದೂರು ಗ್ರಾಮದ ಸರ್ವೆ ನಂಬರ್.157ರಲ್ಲಿ ಆರ್.ಎಂ ಷಣ್ಣುಖ ಬಿನ್ ಮಂಜಪ್ಪ ಗೌಡ ಎಂಬುವರು ಮಲಂದೂರು ಮೀಸಲು ಅರಣ್ಯ ಪ್ರದೇಶ ಒತ್ತುವರಿ ಮಾಡಿರುವ ದೂರು ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಂತ ಅರಣ್ಯ ಇಲಾಖೆಯ ಅಧಿಕಾರಿಗಳು ಅದು ಮಲಂದೂರು ಮೀಸಲು ಅರಣ್ಯ ಪ್ರದೇಶದ ಅರಣ್ಯ ಭೂಮಿ ಎಂಬುದನ್ನು ದಾಖಲೆಗಳ ಮೂಲಕ ಖಚಿತ ಪಡಿಸಿಕೊಂಡಿದ್ದಾರೆ. ಅದರಂತೆ ತೆರವು…

Read More

ಪಿಶಾಚಿಗಳ ಕಿರು ಪರಿಚಯ* ಭೂಲೋಕದ ಅತ್ಯಂತ ಹೇಯ ಜನ್ಮ ಅದು ಪಿಶಾಚಿ ಜನ್ಮ ಆ ಜನ್ಮ ಹೇಗೆ ಬರುತ್ತದೆ? ಅನೇಕ ಕಾರಣಗಳಿವೆ, ಪ್ರಸ್ತುತದಲ್ಲಿ ೧. ಸಂಧ್ಯಾವಂದನೆಯನ್ನು ಶ್ರದ್ಧೆಯಿಂದ ಮಾಡದೆ ಇದ್ರೆ ( ಅಸದಿತ್ಯುಚ್ಯತೇ ಪಾರ್ಥ ನಚ ತತ್ಪ್ರೇತ್ಯನೋ ಇಹ – ಗೀತಾ ವಾಕ್ಯ ಸಂವಾದ) ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ…

Read More

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಆದೇಶಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಈ ಪಡೆಗೆ 48 ಸಿಬ್ಬಂದಿ ನಿಯೋಜನೆಗೆ ಅನುಮೋದನೆ ನೀಡಿದ್ದಾರೆ. ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿ ಇರಲಿದ್ದಾರೆ. ಈ ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ ಮತ್ತು ಆನೆಗಳ ಚಲನವಲನದ ಬಗ್ಗೆ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ ಆ ಮೂಲಕ ಸಾರ್ವಜನಿಕರಿಗೆ ಮುನ್ನಚ್ಚರಿಕೆ ಸಂದೇಶ…

Read More

ನವದೆಹಲಿ: ಪಾಕಿಸ್ತಾನ ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಮಹಿಳಾ ಏಕದಿನ ವಿಶ್ವಕಪ್ 2025 ಪಂದ್ಯವನ್ನು ಮೊದಲ ಇನ್ನಿಂಗ್ಸ್ ಮಧ್ಯದಲ್ಲಿ ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಲಾಯಿತು. ಆರ್ ಪ್ರೇಮದಾಸ ಕ್ರೀಡಾಂಗಣದ ಕ್ರೀಸ್‌ನಲ್ಲಿ ಹಲವಾರು ಪತಂಗಗಳು ಮತ್ತು ನೊಣಗಳು ಇದ್ದ ಕಾರಣ ಎರಡೂ ತಂಡಗಳ ನಡುವಿನ ಹೈ-ಆಕ್ಟೇನ್ ಘರ್ಷಣೆಯನ್ನು ಮೊದಲ ಇನ್ನಿಂಗ್ಸ್‌ನಲ್ಲಿ ನಿಲ್ಲಿಸಲಾಯಿತು. ನೊಣಗಳು ಆಟಗಾರರನ್ನು ಸ್ವಲ್ಪ ಸಮಯದವರೆಗೆ ತೊಂದರೆಗೊಳಿಸಿದವು, ಆದರೆ ಅವರು ಆಟವಾಡಬೇಕಾಯಿತು, ಆದರೆ ಅವರ ಬಳಿ ಯಾವುದೇ ಪರಿಹಾರವಿಲ್ಲ. ಏತನ್ಮಧ್ಯೆ, 34 ನೇ ಓವರ್ ನಂತರ ಗ್ರೌಂಡ್‌ಸ್ಟಾಫ್ ಸದಸ್ಯರು ನೊಣಗಳನ್ನು ತೊಡೆದುಹಾಕಲು ಬಗ್ ಸ್ಪ್ರೇ ಅನ್ನು ತಂದರು. ಆಟವು ಸುಮಾರು 15 ನಿಮಿಷಗಳ ಕಾಲ ಸ್ಥಗಿತಗೊಂಡಿದ್ದರಿಂದ ಆಟಗಾರರು ಮೈದಾನದಿಂದ ಹೊರನಡೆದರು. ಇದಕ್ಕೂ ಮೊದಲು, ಪಾಕಿಸ್ತಾನ ತಂಡದ ಸದಸ್ಯರೊಬ್ಬರು ಫ್ಲೈ ಸ್ಪ್ರೇ ಅನ್ನು ಹೊರತಂದರು, ಮತ್ತು ಆಟಗಾರರು ಅದನ್ನು ಮೇಲೆ ಸಿಂಪಡಿಸಿದರು, ಆದರೆ ಅವರಿಂದ ಯಾವುದೇ ವಿರಾಮ ಸಿಗಲಿಲ್ಲ. ವಿರಾಮದ ಸಮಯದಲ್ಲಿ, ಭಾರತೀಯ ಮಹಿಳೆಯರು 154/4 ರೊಂದಿಗೆ ಸಂಕಷ್ಟದ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಹೋಬಳಿಯಲ್ಲಿ ಆರ್.ಎಂ ಷಣ್ಮುಖ ಎಂಬುವರು ಒತ್ತುವರಿ ಮಾಡಿಕೊಂಡಿದ್ದಂತ 6 ಎಕರೆ 24 ಗುಂಟೆ ಅರಣ್ಯ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆಯುವಲ್ಲಿ ಸಾಗರದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸಾಗರದ ಅರಣ್ಯಾಧಿಕಾರಿಗಳ ತಂಡವು ಭರ್ಜರಿ ಕಾರ್ಯಾಚರಣೆ ನಡೆಸಿ 6 ಎಕರೆ 24 ಗುಂಟೆ ಅರಣ್ಯ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ, ಮರಳಿ ಇಲಾಖೆಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ವಿಭಾಗ ವ್ಯಾಪ್ತಿಗೆ ಬರುವ ಸಾಗರ ತಾಲ್ಲೂಕು ಆನಂದಪುರಂ ಹೋಬಳಿ ಮಲಂದೂರು ಗ್ರಾಮದ ಸ.ನಂ 157 ರಲ್ಲಿ ಆರ್.ಎಂ ಷಣ್ಮುಖ ಬಿನ್ ಮಂಜಪ್ಪ ಗೌಡ ಇವರು ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ 6-24 ಎ/ಗುಂ ಪ್ರದೇಶವನ್ನು ಅನಧಿಕೃತವಾಗಿ ಒತ್ತುವರಿ ಮಾಡಿರುತ್ತಾರೆ. ಸದರಿಯವರು ಶರಾವತಿ ಮುಳುಗಡೆ ಸಂತ್ರಸ್ತರ ಯೋಜನೆಯಡಿ ಹಾಗೂ ಅರಣ್ಯ ಹಕ್ಕು ಕಾಯ್ದೆಯಡಿ ಇವರು ಜಮೀನುಗಳನ್ನು ಮಂಜೂರಾತಿ ಪಡೆದಿದ್ದು, ಇದರೊಂದಿಗೆ ಹಿಡುವಳಿ ಜಮೀನುಗಳನ್ನು…

Read More