Subscribe to Updates
Get the latest creative news from FooBar about art, design and business.
Author: kannadanewsnow09
ರಾಯಚೂರು: ಜಿಲ್ಲೆ ಯ 1406 ಗ್ರಾ ಮೀಣ ಜನವಸತಿಗಳಿಗೆ ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಗ್ರಾ ಮ ಕುಡಿಯುವ ನೀರು ಸರಬರಾಜು ಮಾಡುವ 2978 ಕೋಟಿ ರೂ.ಗಳ ಯೋಜನೆಗೆ ರಾಯಚೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಾರಾಯಣಪುರ ಜಲಾಶಯ ಈ ಯೋಜನೆಯ ಜಲಮೂಲವಾಗಿದ್ದು, 810 ಗ್ರಾಮಗಳಿಗೆ ಸೇರಿದ 1406 ಗ್ರಾಮೀಣ ಜನವಸತಿಗಳಿಗೆ ಈ ಯೋಜನೆಯ ಮೂಲಕ ನೀರು ಸರಬರಾಜು ಆಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ನೀರು ಸರಬರಾಜಾಗುವ 810 ಗ್ರಾಮಗಳ 3,42,534 ಮನೆಗಳು ಶುದ್ದ ಕುಡಿಯುವ ನೀರಿನ ಸೌಲಭ್ಯ ಪಡೆಯಲಿದ್ದು, ಸುಮಾರು 30 ತಿಂಗಳ ಅವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಭಾಗದ ಪ್ರತಿಯೊಬ್ಬರು ಪ್ರತಿ ನಿತ್ಯ 55 ಲೀಟರ್ (ಎಲ್.ಪಿ.ಸಿ.ಡಿ) ನೀರನ್ನು ಪಡೆಯಲಿದ್ದು ಈ ಯೋಜನೆಯಡಿ ಮಾನ್ವಿ, ಮಸ್ಕಿ, ಕವಿತಾಳ, ತುರ್ವಿಹಾಳ, ಬಾಳಗನೂರು,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಜೂನ್.30ರವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಇದು ಅಂತಿಮ ವಿಸ್ತರಣೆ ಅಂತ ತಿಳಿಸಿದೆ. ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್ಲೈನ್ https://schedulecastesurvey.karnataka.gov.in/selfdeclaration/ ಲಿಂಕ್ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು. https://twitter.com/KarnatakaVarthe/status/1937139706619417013 https://kannadanewsnow.com/kannada/does-the-chief-minister-have-the-courage-and-morality-to-accept-the-resignation-of-the-housing-minister-hdks-question/ https://kannadanewsnow.com/kannada/do-you-want-to-feast-your-eyes-on-the-scenic-splendor-of-the-mountains-dont-miss-out-on-watching-this-video-song/
ನವದೆಹಲಿ: ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ; ರಾಜ್ಯ ಕಾಂಗ್ರೆಸ್ ಸರಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಶಾಸಕರು ಅನುದಾನಕ್ಕಾಗಿ, ಸರಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ಮಂತ್ರಿಮಹೋದಯರ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂಥ ದುರ್ಗತಿ ಬಂದರೆ ಇತರೆ ಪಕ್ಷಗಳ ಶಾಸಕರ ಪರಿಸ್ಥಿತಿ ಏನು? ಎಂದು ಪ್ರಶ್ನಿಸಿದರು. ಹಿಂದೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಬರೆದಿದ್ದ ʼತಬರನ ಕಥೆʼ ಎಂಬ ಕಥೆಯನ್ನು ಗಿರೀಶ್ ಕಾಸರವಳ್ಳಿ ಅವರು ಸಿನಿಮಾ ಮಾಡಿದ್ದರು. ವಾಚ್ ಮನ್ ಒಬ್ಬ ತನ್ನ ಪಿಂಚಣಿಗಾಗಿ ಸರಕಾರಿ ಕಚೇರಿಗಳಿಗೆ ಅಲೆ ಅಲೆದು ಬಸವಳಿಯುವ ಕಥೆ ಅದು. ಅಂಥದ್ದೇ ಪರಿಸ್ಥಿತಿ ರಾಜ್ಯದ ಶಾಸಕರಿಗೂ ಬಂದಿರುವುದು ದುರದೃಷ್ಟಕರ. ಶಾಸಕರು ಯೋಜನೆಗಳಾಗಿ ಮಂತ್ರಿಗಳು, ಎಂಜಿಯರ್ ಗಳ ಕಚೇರಿಗಳ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ಇಂಥ ದುಸ್ಥಿತಿ ಹಿಂದೆಂದೂ…
ನವದೆಹಲಿ: ಲೀಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೆಎಲ್ ರಾಹುಲ್ ಸುನಿಲ್ ಗವಾಸ್ಕರ್ ಮತ್ತು ರಾಹುಲ್ ದ್ರಾವಿಡ್ ಸೇರಿದಂತೆ ಇತರ ದಿಗ್ಗಜ ಆಟಗಾರರ ದಾಖಲೆಗಳನ್ನು ಮುರಿದರು. ಲೀಡ್ಸ್ನಲ್ಲಿ ನಡೆದ 4ನೇ ದಿನದಂದು ಸವಾಲಿನ ಪರಿಸ್ಥಿತಿಯಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ರಾಹುಲ್ ಅದ್ಭುತ ಶತಕ ಬಾರಿಸಿದರು ಮತ್ತು ಪ್ರವಾಸಿ ತಂಡದ ಬ್ಯಾಟಿಂಗ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ತಮ್ಮ ಇನಿಂಗ್ಸ್ ಅವಧಿಯಲ್ಲಿ ರಾಹುಲ್ ಒಂದು ದೊಡ್ಡ ಮೈಲಿಗಲ್ಲು ಸಾಧಿಸಿದ್ದಾರೆ. ಇಂಗ್ಲೆಂಡ್ನಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಏಷ್ಯನ್ ಓಪನರ್ ಗಳಿಸಿದ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಅವರು ಮುರಿದಿದ್ದಾರೆ. ಇದು ಇಂಗ್ಲೆಂಡ್ನಲ್ಲಿ ಆರಂಭಿಕರಾಗಿ ಅವರ ಮೂರನೇ ಟೆಸ್ಟ್ ಶತಕವಾಗಿದ್ದು, ಇದು ಈಗ ದೇಶದಲ್ಲಿ ಆರಂಭಿಕರಾಗಿ ಎರಡು ಶತಕಗಳನ್ನು ಗಳಿಸಿದ ಗವಾಸ್ಕರ್, ದ್ರಾವಿಡ್, ರವಿಶಾಸ್ತ್ರಿ, ತಮೀಮ್ ಇಕ್ಬಾಲ್ ಮತ್ತು ವಿಜಯ್ ಮರ್ಚೆಂಟ್ ಅವರನ್ನು ಹಿಂದಿಕ್ಕಿದ ಅತಿ ಹೆಚ್ಚು ಶತಕವಾಗಿದೆ. ಇಂಗ್ಲೆಂಡ್ನಲ್ಲಿ ಏಷ್ಯನ್ ಓಪನರ್ಗಳಿಂದ ಅತಿ ಹೆಚ್ಚು ಶತಕಗಳು: 1 -…
ಕೆಎನ್ಎನ್ ಸಿನಿಮಾ ಡೆಸ್ಕ್: ಮಲೆನಾಡೆಂದರೇ ಅದೆಷ್ಟೋ ಜನರಿಗೆ ಎಲ್ಲಿಲ್ಲದ ಪ್ರೀತಿ. ಮಳೆಗಾಲದ ನಡುವೆ ಹಸಿರ ದೃಶ್ಯವೈಭವ ಕಣ್ ತುಂಬಿಕೊಳ್ಳೋದಕ್ಕಂತೂ ತುಂಬಾನೇ ಇಷ್ಟ ಪಡೋರೇ ಹೆಚ್ಚು. ಹೆಜ್ಜೆ ಹೆಜ್ಜೆಗೂ ಹಸಿರ ಧರೆಯಲ್ಲಿ ಕಣ್ ಮನವನ್ನು ಸೆಳೆಯುವ ಸೊಬಗಂತೂ ಎಲ್ಲರನ್ನೂ ಹಿಡಿದಿಟ್ಟುಕೊಂಡು ಬಿಡುತ್ತದೆ. ಹಾಗಾದ್ರೇ ನೀವು ಮಲೆನಾಡಿನ ದೃಶ್ಯ ವೈಭವ ಕಣ್ ತುಂಬಿಕೊಳ್ಳಬೇಕು ಅಂತ ಅಂದ್ರೇ, ಈ ಕೆಳಗಿನ ವೀಡಿಯೋ ತಪ್ಪದೇ ಮೊದಲು ನೋಡಿ.. https://www.youtube.com/watch?v=tpJqimIUwgk ನೋಡಿದ್ರಲ್ವ? ಮಲೆನಾಡಿನ ದೃಶ್ಯ ವೈಭವ ನಿಮ್ಮನ್ನು ಸೆಳೆದಿರಬೇಕು ಅಲ್ವ? ಈ ಮಲ್ನಾಡ್ ಯಾನ ( Malnad Yana ) ಎನ್ನುವಂತದ್ದು ಸಂತೋಷ್ ಸದ್ಗುರು ( Santhosh Sadguru ) ಎಂಬುವರ ಮೊದಲ ವೀಡಿಯೋ ಆಲ್ಪಂ ಸಾಂಗ್. ಬರೋಬ್ಬರಿ 2500 ಮಿ.ಮೀ ಮಳೆಯ ನಡುವೆಯೂ ಮಲೆನಾಡಿನ ರಮಣೀಯ ಪ್ರಕೃತಿಯ ಸೊಬಗನ್ನು ನೋಡುಗರಿಗೆ ಕಣ್ ಮನ ತಣಿಯುವಂತೆ ಸೆರೆ ಹಿಡಿದು ಕೊಟ್ಟಿದ್ದಾರೆ. ಮಲ್ನಾಡ್ ಯಾನ ವೀಡಿಯೋ ಆಲ್ಬಂ ಸಾಂಗ್ ( MALNAD YANA Official Video Song ) ಅನ್ನು ಶಿವಮೊಗ್ಗ…
ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ) ಅಡಿಯಲ್ಲಿ ಭಾರತ ಇಸ್ಲಾಮಾಬಾದ್ಗೆ ನ್ಯಾಯಯುತವಾದ ನೀರಿನ ಪಾಲನ್ನು ನಿರಾಕರಿಸಿದರೆ ತಮ್ಮ ದೇಶ ಯುದ್ಧಕ್ಕೆ ಇಳಿಯಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಸೋಮವಾರ ಹೇಳಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ 1960 ರ ಒಪ್ಪಂದವನ್ನು ಸ್ಥಗಿತಗೊಳಿಸಿತು. ಕಳೆದ ವಾರ ಗೃಹ ಸಚಿವ ಅಮಿತ್ ಶಾ ಐತಿಹಾಸಿಕ ಒಪ್ಪಂದವನ್ನು ಎಂದಿಗೂ ಪುನಃಸ್ಥಾಪಿಸುವುದಿಲ್ಲ ಎಂದು ಘೋಷಿಸಿದರು. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಂತರರಾಷ್ಟ್ರೀಯ ಒಪ್ಪಂದಗಳಿಗೆ ಶಾ ಅವರ “ಲಜ್ಜೆಗೆಟ್ಟ ನಿರ್ಲಕ್ಷ್ಯ” ವನ್ನು ಟೀಕಿಸಿದ ಎರಡು ದಿನಗಳ ನಂತರ ಬಿಲಾವಲ್ ಅವರ ಹೇಳಿಕೆಗಳು ಬಂದವು. ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಬಿಲಾವಲ್, ಒಪ್ಪಂದವನ್ನು ಅಮಾನತುಗೊಳಿಸುವ ಭಾರತದ ನಿರ್ಧಾರವನ್ನು ತಿರಸ್ಕರಿಸಿದರು ಮತ್ತು ಪಾಕಿಸ್ತಾನದ ನೀರಿನ ಪಾಲನ್ನು ಪಡೆಯುವುದಾಗಿ ಬೆದರಿಕೆ ಹಾಕಿದರು. ಭಾರತಕ್ಕೆ ಎರಡು ಆಯ್ಕೆಗಳಿವೆ. ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ, ಇಲ್ಲದಿದ್ದರೆ ನಾವು ಎಲ್ಲಾ ಆರು ನದಿಗಳಿಂದ ನೀರನ್ನು ನಮಗೆ ತಲುಪಿಸುತ್ತೇವೆ…
ರಾಜನಿಗೆ ಕಿರೀಟ ಹೇಗೆ ಮುಖ್ಯವೋ ಹಾಗೆಯೇ, ನಮ್ಮ ತಲೆಯ ಮೇಲಿನ ಕೂದಲು ನಮ್ಮಲ್ಲಿ ಪ್ರತಿಯೊಬ್ಬರಿಗೂ ಬಹಳ ಮುಖ್ಯ. ಕೂದಲು ಉದುರುವ ಬಗ್ಗೆ ಚಿಂತಿತರಾಗಿರುವ ಅನೇಕ ಜನರಿದ್ದಾರೆ. ಈ ಬ್ಯೂಟಿ ಟಿಪ್ಸ್ ವಿಭಾಗದಲ್ಲಿ, ಕೂದಲು ಉದುರುವಿಕೆಯಿಂದ ವಿವಿಧ ಮುಜುಗರಗಳನ್ನು ಎದುರಿಸುವ ಜನರು ಆ ಮುಜುಗರದಿಂದ ಹೊರಬರಲು ಮತ್ತು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುವ ಪೌಡರ್ ಅನ್ನು ನಾವು ನೋಡಲಿದ್ದೇವೆ. ಕೂದಲು ವೇಗವಾಗಿ ಬೆಳೆಯುತ್ತದೆ ಕೂದಲು ಉದುರುವುದು ತುಂಬಾ ಸಾಮಾನ್ಯ ಪ್ರಕ್ರಿಯೆ. ಒಂದು ದಿನದಲ್ಲಿ ನಿರ್ದಿಷ್ಟ ಪ್ರಮಾಣದ ಕೂದಲು ಉದುರುವುದು ಅನಿವಾರ್ಯ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ…
ಬೆಂಗಳೂರು: ರಾಜ್ಯದಲ್ಲಿ ವ್ಯಾಪಾರಕ್ಕೆ ಕುಳಿತ ಕಾಂಗ್ರೆಸ್ ಸರಕಾರದ ಸಂತೆ ನಡೆಯುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ; ಇದು ವ್ಯಾಪಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಎಂದು ಟೀಕಿಸಿದರು. ಚುನಾವಣೆ ವೇಳೆ ಪೇ ಸಿ.ಎಂ., ಶೇ 40 ಪರ್ಸೆಂಟ್ ಸರಕಾರ ಎಂದು ನಮ್ಮ ಮೇಲೆ ಆರೋಪ ಮಾಡಿದ್ದರು ಎಂದು ವಿವರಿಸಿದರು. ಈಗ ನಿಮ್ಮ ಮೇಲೆ ಜನರು ಛೀ ಥೂ ಎಂಬಂತೆ ಆರೋಪ ಮಾಡುತ್ತಿದ್ದಾರೆ. ಸಚಿವರ ಬದಲಾಗಿ ಈ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ತೊಲಗಿದರೆ ಬಹುಶಃ ಸ್ವಲ್ಪ ಮಟ್ಟಿನ ಬದಲಾವಣೆಗಳನ್ನು ಕಾಣಬಹುದು ಎಂದು ನುಡಿದರು. ಬಿಹಾರ ಚುನಾವಣೆ ಬೇರೆ ಬರುತ್ತಿದೆ; ಇವರು ಲೂಟಿಗೆ ನಿಂತಿದ್ದಾರೆ ಎಂದು ವಿಶ್ಲೇಷಿಸಿದರು. ಇದೊಂದು ಭ್ರಷ್ಟ ವ್ಯವಸ್ಥೆ ಎಂದು ಟೀಕಿಸಿದರು. ಪ್ರತಿಯೊಬ್ಬರೂ ಭ್ರಷ್ಟಾಚಾರದಲ್ಲೇ ಮುಳುಗಿದ್ದಾರೆ ಎಂದು ದೂರಿದರು. ಸಿದ್ದರಾಮಯ್ಯನವರೇ, ನೀವು…
ಬೆಂಗಳೂರು: ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನ ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. https://twitter.com/KarnatakaVarthe/status/1937130255870783891 ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಆಯುಷ್ ಇಲಾಖೆಯಿಂದ ಇಂದು ಯಶಸ್ವಿಯಾಗಿ 11 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ರಾಜ್ಯದ 10 ಸಾವಿರ…
ಬೆಂಗಳೂರು: ರಾಜ್ಯ ಸರ್ಕಾರವು ಜಾತಿಗಣಿತಿಯ ಮರು ಸಮೀಕ್ಷೆಗೆ ಆದೇಶಿಸಿದೆ. ಈ ಮರುಗಣತಿಗೆ ಶಿಕ್ಷಕರನ್ನು ನಿಯೋಜಿಸುವುದಿಲ್ಲ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ – ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1937087705290297853 https://kannadanewsnow.com/kannada/e-attendance-is-mandatory-in-the-states-schools-government-orders-implementation-from-the-prasada-educational-loan/ https://kannadanewsnow.com/kannada/breaking-a-riot-that-started-over-making-sambar-in-bangalore-ended-in-one-persons-death/














